ಗುವಾಹಟಿ,ಜು,೨೭: ಅಸ್ಸಾಂ ಮತ್ತು ಮಿಜೋರಾಂ ನಡುವೆ ಮತ್ತೇ ಗಡಿ ಸಂಘರ್ಷ ಆರಂಭವಾಗಿದೆ.ಈ ಸಂಘರ್ಷಕ್ಕೆ ಐವರು ಪೊಲೀಸರು ಮೃತಪಟ್ಟಿದ್ದು ಐವತ್ತಕ್ಕೂ ಹೆಚ್ಚು ಜನರ ಗಾಯಗೊಂಡಿದ್ದಾರೆ.
ಅಸ್ಸಾಂನ ವೈರೆಂಟ್ಗೆ ಪಟ್ಟಣದಲ್ಲಿ ಸೋಮವಾರ ಹಿಂಸಾಚಾರ ತಲೆದೋರಿದೆ. ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಗೃಹ ಸಚಿವ ಅಮಿತ್ ಶಾ ಅವರು ಸಭೆ ನಡೆಸಿದ ಎರಡೇ ದಿನಕ್ಕೆ ಈ ಸಂಘರ್ಷ ನಡೆದಿದೆ. ಲೈಲಾಪುರದಲ್ಲಿ ಮೀಸಲು ಅರಣ್ಯ ಪ್ರದೇಶವನ್ನು ನಾಶಪಡಿಸಿ ರಸ್ತೆ ನಿರ್ಮಿಸಲಾಗುತ್ತಿದೆ ಮತ್ತು ಸೇನಾ ಶಿಬಿರವೊಂದನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಮಿಜೋರಾಂ ವಿರುದ್ಧ ಅಸ್ಸಾಂ ಆರೋಪಿಸಿದೆ.
ದುಷ್ಕರ್ಮಿಗಳು ತನ್ನ ಪೊಲೀಸರ ಮೇಲೆ ದಾಳಿ ನಡೆಸಿದ್ದು, ಬಳಿಕ ಪರಿಸ್ಥಿತಿ ನಿಯಂತ್ರಿಸಲು ಹೋದ ಮಿಜೋರಾಂ ಪೊಲೀಸರ ಮೇಲೆಯೂ ದಾಳಿ ನಡೆದಿದೆ ಎಂದು ಅದು ಹೇಳಿದೆ.
ಅಸ್ಸಾಂ ಪೊಲೀಸರು ಗಡಿ ದಾಟಿ ಒಳಬಂದ ಬಳಿಕ ಹಿಂಸಾಚಾರ ಆರಂಭವಾಗಿದೆ. ಅಸ್ಸಾಂ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿನ ವಾಹನಗಳಿಗೆ ಹಾನಿ ಮಾಡಿದ್ದಲ್ಲದೆ, ತನ್ನ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಮಿಜೋರಾಂ ಆರೋಪಿಸಿದೆ.
ನಿನ್ನೆಬೆಳಿಗ್ಗೆ ೧೧.೩೦ರ ವೇಳೆಗೆ ಸುಮಾರು ೨೦೦ ಅಸ್ಸಾಂ ಪೊಲೀಸರು ವೈರೆಂಟ್ಗೆ ಪಟ್ಟಣದ ಆಟೋ ರಿಕ್ಷಾ ನಿಲ್ದಾಣಕ್ಕೆ ಬಂದಿದ್ದರು. ಸಮೀಪದಲ್ಲಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆಯ ನೆಲೆಯನ್ನು ಬಲವಂತವಾಗಿ ಮುಚ್ಚಿಸಿದರು. ಬಳಿಕ ಹೆದ್ದಾರಿಯಲ್ಲಿ ವಾಹನಗಳಿಗೆ ಹಾನಿ ಮಾಡಿದರು. ಅದನ್ನು ತಡೆಯಲು ಪ್ರಯತ್ನಿಸಿದ ನಮ್ಮ ಅಧಿಕಾರಿಗಳ ಮಾತನ್ನು ಅವರು ಕೇಳಲಿಲ್ಲ. ಅಶ್ರುವಾಯು, ಗ್ರೆನೇಡ್ಗಳನ್ನು ಎಸೆದರು. ಸಂಜೆ ೪.೩೦ರ ವೇಳೆಗೆ ಗುಂಡುಗಳನ್ನು ಕೂಡ ಹಾರಿಸಿದರು ಎಂದು ಮಿಜೋರಾಂ ಮುಖ್ಯಮಂತ್ರಿ ಜೊರಂತಗಾ ಆರೋಪಿಸಿದ್ದಾರೆ. ಈ ಎರಡೂ ರಾಜ್ಯಗಳ ಸಿಎಂಗಳು ಟ್ವಿಟ್ಟರ್ನಲ್ಲಿ ಕಿತ್ತಾಡಿಕೊಂಡಿದ್ದಾರೆ.
ಅಸ್ಸಾಂ,ಮಿಜೋರಾಂ ನಡುವೆ ಮತ್ತೆ ಬುಗಿಲೆದ್ದ ಗಡಿ ಸಂಘರ್ಷ
Share