ನವದೆಹಲಿ, ಸೆ,24: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುವ ವೇಳೆ ದುಷ್ಕರ್ಮಿಗಳು ನ್ಯಾಯಾಲಯದ ಒಳಗಡೆಯೇ ಗುಂಡಿನ ದಾಳಿ ನಡೆದಿದ್ದು ಪೈರಿಂಗ್ ನಲ್ಲಿ ನಾಲ್ವರ ಸಾವನ್ನಪ್ಪಿದ್ದಸರೆ.
ದೆಹಲಿ ಕೋರ್ಟ ಆವರಣದಲ್ಲಿ ನಡೆದ ಈ ಘಟನೆಯಿಂದ ನ್ಯಾಯಾಲಯದಲ್ಲಿ ಆತಂಕದ ವಾತಾವರಣ ಸೃಷ್ಟಿಯಸಗಿತ್ತು.
ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ. ಗ್ಯಾಂಗ್ ಸ್ಟರ್ ಜಿತೇಂದ್ರ ಯೋಗಿ ಎಂಬಾತನನ್ನು ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು.
ರೂಂ ನಂಬರ್ 207ರಲ್ಲಿ ನ್ಯಾಯಾಧೀಶರ ಮುಂದೆ ವಿಚಾರಣೆ ನಡೆಯುತ್ತಿತ್ತು. ಈ ವೇಳೆ ವಕೀಲರ ವೇಷದಲ್ಲಿ ಬಂದ ಹಂತಕರು ಜಿತೇಂದ್ರ ಯೋಗಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಈ ವೇಳೆ ಪೊಲೀಸರು ಇಬ್ಬರು ಹಂತಕರ ಮೇಲೆ ಫೈರಿಂಗ್ ಮಾಡಿ ಇಬ್ಬರನ್ನು ಹೊಡೆದುರುಳಿಸಿದ್ದಾರೆ. ಕೋರ್ಟ್ ಆವರಣದಲ್ಲಿಯೇ ನಡೆದ ಈ ಗುಂಡಿನ ದಾಳಿಯಲ್ಲಿ ಗ್ಯಾಂಗ್ ಸ್ಟರ್ ಜಿತೇಂದ್ರ ಯೋಗಿ ಸೇರಿ ನಾಲ್ವರು ಸಾವನ್ನಪ್ಪಿದ್ದು, 6 ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.