ಪವಿತ್ರಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

Share

ನವದೆಹಲಿ, ನ,08- ಚಿತ್ರದುರ್ಗ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿ ಪವಿತ್ರಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಪ್ರಕರಣ ಸಂಬಂಧ ಆರೋಪಿಗಳಿಗೆ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ಆಗಸ್ಟ್ ನಲ್ಲಿ ರದ್ದುಗೊಳಿಸಿತ್ತು. ಈ ಆದೇಶವನ್ನ ಮರುಪರಿಶೀಲಿಸುವಂತೆ ಕೋರಿ ಪವಿತ್ರಾಗೌಡ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಇದೀಗ ಪವಿತ್ರಾಗೌಡ ಜಾಮೀನು ಅರ್ಜಿ ಮತ್ತೆ ವಜಾಗೊಂಡಿದೆ. ತೀರ್ಪು ದಾಖಲೆಗಳನ್ನ ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದ್ದೇವೆ. ಮತ್ತೊಮ್ಮೆ ಪರಿಶೀಲನೆ ಮಾಡುವ ಅಗತ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.

Girl in a jacket
error: Content is protected !!