ಬೆಂಗಳೂರು,ಆ.೩೧: ತಡರಾತ್ರಿ ನಗರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ;
ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇವರು ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಈ ಅವಘಡ ಸಂಭಿಸಿದೆ.ಕೋರಮಂಗಲ ೮೦ ಅಡಿ ರಸ್ತೆಯ ಮಂಗಳ ಕಲ್ಯಾಣ ಮಂಟಪದ ಬಳಿ ಈ ದುರ್ಘಟನೆ ಸಂಭವಿಸಿದೆ.
ಅಪಘಾತಕ್ಕೀಡಾದ ಕಾರು ಆಡಿ ಕ್ಯೂ ಎನ್ನಲಾಗಿದ್ದು, ವೇಗವಾಗಿ ಬಂದಿದ್ದೇ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ತಡರಾತ್ರಿ ಬಹಳ ವೇಗವಾಗಿ ಬಂದ ಕಾರು ಫುಟ್ಪಾತ್ಗೆ ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದ ೭ ಮಂದಿಯಲ್ಲಿ ೬ ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾರಿನ ಮುಂಬದಿ ಸೀಟಿನಲ್ಲಿ ಮೂವರು, ಹಿಂದೆ ನಾಲ್ವರು ಕುಳಿತಿದ್ದರು. ಮೃತರೆಲ್ಲರೂ ೨೫-೩೦ರ ವಯೋಮಾನದವರು ಮತ್ತು ಸ್ನೇಹಿತರು. ಮೃತರಲ್ಲಿ ದಂಪತಿ ಸಹ ಇದ್ದರು. ಕರುಣಾಸಾಗರ , ಬಿಂದು (೨೮) – ದಂಪತಿ, ಇಶಿತಾ (೨೧), ಡಾ.ಧನುಶಾ (೨೧), ಅಕ್ಷಯ್ ಗೋಯಲ್, ಉತ್ಸವ್, ರೋಹಿತ್ (೨೩) ಮೃತರು ಎಂದು ತಿಳಿದು ಬಂದಿದೆ. ಮೃತ ದೇಹಗಳನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಕ್ಷಯ್ ಗೋಯಲ್ ಕೇರಳಾ ಮೂಲದವನು, ಉತ್ಸವ್ – ಹರ್ಯಾಣ, ರೋಹಿತ್ – ಹುಬ್ಬಳ್ಳಿ, ಕರುಣಾ ಸಾಗರ್- ಹೊಸೂರು ಮೂಲದವನು. ಉಳಿದವರು ಕೋರಮಂಗಲದ ಜೋಲೋ ಸ್ಟೇ ಪಿ.ಜಿಯಲ್ಲಿ ವಾಸವಿದ್ದರು ಎನ್ನಲಾಗಿದೆ.
ಕಾರಿನಲ್ಲಿ ಒಟ್ಟು ೭ ಜನ ಪ್ರಯಾಣಿಸುತ್ತಿದ್ದು, ೩ ಜನ ಯುವರಿಯರು ಹಾಗೂ ೪ ಜನ ಹುಡುಗರು ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಘಟನೆ ಮಧ್ಯರಾತ್ರಿ ಸುಮಾರು ೧.೩೦ಕ್ಕೆ ನಡೆದಿದ್ದು, ಸ್ಥಳಕ್ಕೆ ಆಡುಗೋಡಿ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.