ನವದೆಹಲಿ,ಮೇ,೨೮: ಒಲಂಪಿಕ್ ನಲ್ಲಿ ಆಡುವ ಕನಸು ಹೊತ್ತಿದ್ದ ಕದಂಬಿ ಶ್ರೀಕಾಂತ್
ಕೊರೊನಾ ಹಿನ್ನಲೆಯಲ್ಲಿ ರ್ಯಾಂಕಿಂಗ್ನಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಇಂದು ವಿಶ್ವಬ್ಯಾಡ್ಮಿಂಟನ್ಫೆಡರೇಷನ್ ರ್ಯಾಂಕಿಂಗ್ನಲ್ಲಿ ಯಾವುದೆ ಬದಲಾವಣೆ ಇಲ್ಲ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಈ ಇಬ್ಬರು ಈಗ ಒಲಂಪಿಕ್ನಲ್ಲಿ ಆಡುವ ಅವಕಾಶವನ್ನು ಕಳೆದುಕೊಂಡಿದ್ದಾರೆ.
ಕಿದಂಬಿ ಶ್ರೀಕಾಂತ್ ಮತ್ತು ಸೈನಾ ನೆಹ್ವಾಲ್ ನಿರೀಕ್ಷೆಯಿಂದ ಕಾಯುತ್ತಿದ್ದರು.ಟೋಕಿಯೊ ಒಲಿಂಪಿಕ್ಸ್ನ ಅರ್ಹತಾ ಅವಧಿ ಜೂನ್ ೧೫ರಂದು ಮುಕ್ತಾಯಗೊಳ್ಳಲಿದೆ. ಆದರೆ ಅದಕ್ಕೂ ಮುನ್ನ ಯಾವುದೇ ಟೂರ್ನಿಯನ್ನು ಆಯೋಜಿಸಲಾಗುವುದಿಲ್ಲ. ರ್ಯಾಂಕಿಂಗ್ನಲ್ಲಿ ಬದಲಾವಣೆಯೂ ಇಲ್ಲ.ಆದ್ದರಿಂದ ಒಲಿಂಪಿಕ್ಸ್ಗೆ ಈಗಿನ ರ್ಯಾಂಕಿಂಗ್ ಪ್ರಕಾರವೇ ಆಟಗಾರರನ್ನು ಆಯ್ಕೆ ಮಾಡಬೇಕು ಎಂದು ಬಿಡಬ್ಲ್ಯುಎಫ್ ಹೇಳಿದೆಇಂಡಿಯಾ ಓಪನ್, ಮಲೇಷ್ಯಾ ಓಪನ್ ಮತ್ತು ಸಿಂಗಪುರ ಓಪನ್ ಟೂರ್ನಿಗಳನ್ನು ರದ್ದುಮಾಡಿದ್ದ ಬಿಡಬ್ಲ್ಯುಎಫ್ ಅರ್ಹತಾ ಅವಧಿಯನ್ನು ಮೂರು ತಿಂಗಳು ಮುಂದೂಡಿತ್ತು. ಮುಂದಿನ ತಿಂಗಳ ೧೫ರ ವರೆಗೆ ಅರ್ಹತಾ ಅವಧಿ ಇದ್ದರೂ ತಾಂತ್ರಿಕವಾಗಿ ಒಲಿಂಪಿಕ್ಸ್ಗೆ ಟಿಕೆಟ್ ಗಳಿಸುವ ಅವಕಾಶ ಈಗಲೇ ಮುಗಿದಿದೆ ಎಂದು ಬಿಡಬ್ಲ್ಯುಎಫ್ ಪ್ರಧಾನ ಕಾರ್ಯದರ್ಶಿ ಥಾಮಸ್ ಲೂಂಡ್ ಹೇಳಿದ್ದಾರೆ.ಭಾರತದ ಪಿ.ವಿ.ಸಿಂಧು, ಬಿ.ಸಾಯಿ ಪ್ರಣೀತ್, ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಅವರು ಈಗಾಗಲೇ ಒಲಿಂಪಿಕ್ಸ್ಗೆ ಅರ್ಹತೆ ಗಳಿಸಿದ್ದಾರೆ
ಒಲಂಪಿಕ್ನಲ್ಲಿ ಆಡುವ ಅವಕಾಶ ಕಳೆದುಕೊಂಡ ಸೈನಾ
Share