ಇಸ್ಲಾಮಾಬಾದ್,ಮೇ,೧೮-ಮೋಸ್ಟ್ ವಾಂಟೆಂಡ್ ಭಯೋತ್ಪಾದಕ ಭಾರತದ ಮೂರು ಪ್ರಮುಖ ದಾಳಿಯ ಸಂಚುಕೋರ ಲಷ್ಕರ್-ಎ-ತೈಬಾ ಸಂಘಟನೆಯ ಉಗ್ರನನ್ನು ಭಾನುವಾರ ಹತ್ಯೆ ಮಾಡಲಾಗಿದೆ.
ಸಿಂದ್ ಪ್ರಾಂತ್ಯದಲ್ಲಿ ಬಾದಿನ್ ಜಿಲ್ಲೆಯ ಮಟ್ಲಿ ತಾಲೂಕಿನಲ್ಲಿ ಅಪರಿಚಿತ ಗುಂಪೊಂದು ಹತ್ಯೆ ಮಾಡಿದೆ ಎಂದು ವರದಿಯಾಗಿದೆ.ಸೈಫುಲ್ಲಾ ಅಲಿಯಾಸ್ ವಿನೋದ್ ಕುಮಾರ್ ಅಲಿಯಾಸ್ ಮೊಹಮ್ಮದ್ ಸಲೀಮ್ ಅಲಿಯಾಸ್ ಖಾಲಿದ್ ಅಲಿಯಾಸ್ ವನಿಯಾಲ್ ಅಲಿಯಾಸ್ ವಾಜಿದ್ ಅಲಿಯಾಸ್ ಸಲೀಂ ಭಾಯ್ ಹೆಸರುಗಳಿಂದ ಮೋಸ್ಟ್ ವಾಂಟೆಡ್ ಆಗಿದ್ದ ಈ ಉಗ್ರನನ್ನು ದಾಳಿಯಲ್ಲಿ ಹತ್ಯೆ ಮಾಡಲಾಗಿದೆ.
೨೦೦೧ ರಲ್ಲಿ ರಾಂಪುರದಲ್ಲಿ ನಡೆದ ಸಿಆರ್ಪಿಎಫ್ ಶಿಬಿರದ ಮೇಲಿನ ದಾಳಿ, ೨೦೦೫ ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (IISಛಿ) ನಡೆದಿದ್ದ ಗುಂಡಿನ ದಾಳಿ ಹಾಗೂ ೨೦೦೬ ರಲ್ಲಿ ನಾಗ್ಪುರದ ಆರ್ಎಸ್ಎಸ್ ಪ್ರಧಾನ ಕಚೇರಿ ಮೇಲೆ ನಡೆದಿದ್ದ ದಾಳಿಗಳಿಗೆ ಖಾಲಿದ್ ಪ್ರಮುಖ ಸಂಚುಕೋರನಾಗಿದ್ದ.
೫ ವರ್ಷಗಳ ಅವಧಿಯಲ್ಲಿ ನಡೆದಿದ್ದ ಈ ಮೂರು ದಾಳಿಗಳು ಹಲವಾರು ಜೀವಗಳನ್ನು ಬಲಿ ಪಡೆದಿದ್ದವು. ಇದಾದ ಬಳಿಕ ‘ವಿನೋದ್ ಕುಮಾರ್ ಹೆಸರಿನಲ್ಲಿ ಖಾಲಿದ್ ಹಲವು ವರ್ಷಗಳ ಕಾಲ ನೇಪಾಳದಲ್ಲಿ ತಲೆ ಮರೆಸಿಕೊಂಡಿದ್ದ. ಅಲ್ಲಿಯೇ ನಗ್ಮಾ ಬಾನು ಎಂಬ ಮಹಿಳೆಯನ್ನ ವಿವಾಹವಾಗಿದ್ದ. ನಕಲಿ ಗುರುತು ಹೊಂದಿದ್ದ ಖಾಲಿದ್ ಆಗಾಗ್ಗೆ ಭಾರತಕ್ಕೆ ಬಂದು ಲಷ್ಕರ್ ಸಂಘಟನೆಯ ಉಗ್ರ ಚಟುವಟಿಕೆಗಳನ್ನು ಸಂಘಟಿಸುತ್ತಿದ್ದ ನೇಮಕಾತಿ ಮತ್ತು ಲಾಜಿಸ್ಟಿಕ್ಸ್ನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಎಂದು ವರದಿಗಳಿಂದ ತಿಳಿದುಬಂದಿದೆ.
ಇತ್ತೀಚೆಗೆ ಖಾಲಿದ್ ನೇಪಾಳ ಬಿಟ್ಟು ಸಿಂಧ್ ಪ್ರಾಂತ್ಯದ ಬಾದಿನ್ ಜಿಲ್ಲೆಯ ಮತ್ಲಿಗೆ ಗ್ರಾಮದಲ್ಲಿ ನೆಲೆಸಿದ್ದ. ಅಲ್ಲಿ ನಿಷೇಧಿತ ಜಮಾತ್-ಉದ್-ದವಾ ಉಗ್ರ ಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದ. ಭಯೋತ್ಪಾದಕ ಚಟುವಟಿಕೆಗೆ ಯುವಕರನ್ನ ನೇಮಿಸಿಕೊಳ್ಳುವುದು ಮತ್ತು ನಿಧಿ ಸಂಗ್ರಹಿಸುವ ಕೆಲಸದಲ್ಲಿ ತೊಡಗಿದ್ದ ಎನ್ನಲಾಗಿದೆ.