ಆರ್ ಸಿಬಿ ಸಂಭ್ರಮಾಚರಣೆ ದುರಂತದ ಹೊಣೆ ಸಿಎಂ, ಡಿಸಿಎಂ, ಗೃಹ ಸಚಿವರು ಹೊರಲು ಎಚ್ ಡಿಕೆ ಆಗ್ರಹ

Share

ಬೆಂಗಳೂರು,ಜೂ,07- ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿ ಕಡೆಯವರು ವಿಜಯೋತ್ಸವ ಮಾಡುತ್ತೇವೆ ಎಂದು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಗೆಲ್ಲುತ್ತೇವೆ ಎಂದು ಆರ್ ಸಿಬಿ ತಂಡಕ್ಕೆ ಕನಸು ಬಿದ್ದಿತ್ತಾ ಎಂದು ಪ್ರಶ್ನಿಸಿದ್ದಾರೆ.

ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಮಾಧ್ಯಮಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಅಹಮದಾಬಾದ್ ನಲ್ಲಿ ಫೈನಲ್ಸ್ ಪಂದ್ಯ ಆರಂಭವಾಗಿದ್ದು ಏಳೂವರೆ ಗಂಟೆಗೆ. ಇಲ್ಲಿ ನೋಡಿದರೆ ಆರು ಗಂಟೆಗೆಲ್ಲ ವಿಜಯೋತ್ಸವ ಮಾಡುತ್ತೇವೆ, ನಮಗೆ ಅನುಮತಿ ಕೊಡಿ ಪೊಲೀಸರಿಗೆ ಆರ್ ಸಿಬಿ ಅವರು ಅರ್ಜಿ ಕೊಡುತ್ತಾರೆ! ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದು ಅರ್ಜಿ ಹಾಕಿದ್ದಾರೆ. ಇದು ಹೇಗೆ ಸಾಧ್ಯ? ಪದ್ಯ ಆರಂಭಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿಗೆ ತಮ್ಮ ತಂಡ ಗೆಲುತ್ತದೆ ಎಂದು ಹೇಗೆ ಗೊತ್ತು? ಎಂದು ಪ್ರಶೈಸಿದರು.

ನಾವು ಗೆಲ್ಲುತ್ತೇವೆ ಎಂದು ಇವರಿಗೇನು ಕನಸು ಬಿದ್ದಿತ್ತಾ? ಫೈನಲ್ ಗೆಲ್ತೀವಿ ಅಂತ ಮೊದಲೇ ಗೊತ್ತಿತ್ತಾ? ಇನ್ನು ಫೈನಲ್ ಮ್ಯಾಚ್ ಶುರುನೇ ಆಗದೇ ಇವರು ಅರ್ಜಿ ಕೊಡುತ್ತಾರೆ. ಇನ್ನೊಂದು ಅರ್ಜಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPR) ಗೆ ಕೊಟ್ಟು ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮ ಮಾಡೋಕೆ ಅವಕಾಶ ಕೊಡಿ ಎಂದು ಕೇಳುತ್ತಾರೆ? ಇದು ಹೇಗೆ ಸಾಧ್ಯ ಎಂದು ಅವರು ಕೇಳಿದರು.

*ಅಸೂಕ್ಷ್ಮ ಸರ್ಕಾರಕ್ಕೆ ಕೊನೆಗೂ ಜ್ಞಾನೋದಯವಾಗಿದೆ:*

ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದ ರಾಜು ಅವರನ್ನು ಕಿತ್ತು ಹಾಕಿರುವುದು ಒಳ್ಳೆಯ ಕ್ರಮ ಎಂದು ಹೇಳಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಈ ಅಸೂಕ್ಷ್ಮ ಸರ್ಕಾರಕ್ಕೆ ಜ್ಞಾನೋದಯವಾಗಿರೋದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ, ಐವರು ಪೊಲೀಸ್ ಅಧಿಕಾರಿಗಳು ಅಮಾನತು ಮಾಡಿದ್ದು ಸರಿಯಲ್ಲ. ಈ ಅಮಾನತು ಅವಶ್ಯಕತೆ ಇರಲಿಲ್ಲ. ಈ ರೀತಿ ಸರ್ಕಾರ ನಡೆದುಕೊಂಡರೆ ಅಧಿಕಾರಿಗಳು ಕೆಲಸ ಮಾಡುವುದಕ್ಕೆ ಸಾಧ್ಯವಿಲ್ಲ. ಅವರ ತಪ್ಪುಗಳನ್ನು ಮುಚ್ಚಿಕೊಳ್ಳೋಕೆ ಅಧಿಕಾರಿಗಳ ತಲೆದಂಡ ಮಾಡಿರುವುದು ಸರಿಯಲ್ಲ. ಸರ್ಕಾರ ಸೂಕ್ಷ್ಮವಾಗಿ ಯೋಚನೆ ಮಾಡಬೇಕಿತ್ತು. ಈ ಘಟನೆಯ ಮೂಲ ಕಾರಣಗಳೇ ಬೇರೆ. ಆ ಕಾರಣಗಳನ್ನು ಸರ್ಕಾರ ಮರೆಮಾಚುತ್ತದೆ ಎಂದು ಅವರು ಕಟುವಾಗಿ ಟೀಕಿಸಿದರು.

*ಸಿಎಂ, ಡಿಸಿಎಂ, ಗೃಹ ಸಚಿವರೇ ಹೊಣೆ ಹೊರಬೇಕು:

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣದ ಸಂಪೂರ್ಣ ಹೊಣೆಯನ್ನು ಸಿಎಂ, ಡಿಸಿಎಂ, ಗೃಹ ಸಚಿವರೇ ತೆಗೆದುಕೊಳ್ಳಬೇಕು. ಈ ಮೂವರದು ಕೂಡ ತಪ್ಪಿದೆ. ಪಂದ್ಯ ಗೆದ್ದ 24 ಗಂಟೆ ಒಳಗೆ ಆತುರಾತುರವಾಗಿ ಸನ್ಮಾನ ಮಾಡೋದು ಏನಿತ್ತು? ಹೋಗಲಿ, ಸನ್ಮಾನವನ್ನಾದರೂ ಸರಿಯಾಗಿ ‌ಮಾಡಿದ್ರಾ? ಕಾಟಾಚಾರಕ್ಕೆ ಮಾಡಿದರು. ಆಟಗಾರರನ್ನು ಕೂಡ ಸರಿಯಾಗಿ ನಡೆಸಿಕೊಳ್ಳಲಿಲ್ಲ. ಇವರು ಕೊಟ್ಟ ಶಾಲು, ಟೋಪಿ ಎಲ್ಲವನ್ನು ಅವರು ತಗೊಂಡು ಹೋದರೋ ಬಿಡಾಡಿ ಹೋದರೋ ಗೊತ್ತಿಲ್ಲ. ಈ ಪುರುಷಾರ್ಥಕ್ಕೆ ತರಾತುರಿಯಲ್ಲಿ ಕಾರ್ಯಕ್ರಮ ಬೇಕಿತ್ತಾ? ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.

ನೈತಿಕತೆ ಇದ್ದರೆ ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಬೇಕು. ಈಗಿನ ಕಾಲದಲ್ಲಿ ನಾವು ರಾಜಕಾರಣಿಗಳು ಭಂಡರು ಅಂತ ತೋರಿಸಿಕೊಂಡಿದ್ದೇವೆ. ಅವರಿಂದ ರಾಜೀನಾಮೆ ನಿರೀಕ್ಷೆ ಮಾಡೋಕೆ ಆಗುವುದಿಲ್ಲ. ವಿರೋಧ ಪಕ್ಷವಾಗಿ ನಾವು ಒತ್ತಾಯ ಮಾಡಿದ್ದೇವೆ. ಹೆಣದ ಮೇಲೆ ರಾಜಕೀಯ ಮಾಡೋ ದುರ್ಗತಿ ನಮಗೆ ಬಂದಿಲ್ಲ. ಅದು ಬರೋದು ಇಲ್ಲ ಎಂದು ಸಚಿವರು ಆಕ್ರೋಶ ವ್ಯಕ್ತಪಡಿ

ವರನಟ ಡಾ. ರಾಜ್ ಕುಮಾರ್ ಅವರ ನಿಧನದ ಸಂದರ್ಭದಲ್ಲಿ ಏನೇನು ನಡೆಯಿತೋ ಎನ್ನುವುದು ಈಗಾಗಲೇ ಹೇಳಿದ್ದೇನೆ. ಈ ಸರ್ಕಾರ ಅಣ್ಣಾವ್ರ ನಿಧನದ ವಿಷಯ ಇಟ್ಟುಕೊಂಡು ಕಾಲ್ತುಳಿತ ಪ್ರಕರಣದಲ್ಲಿ ರಕ್ಷಣೆ ಪಡೆಯೋದು ಬೇಡ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

 

Girl in a jacket
error: Content is protected !!