ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನವಗ್ರಹ ದೇವಾಲಯ ಲೋಕಾರ್ಪಣೆನೆರವೇರಿಸಿದ ಥಾವರ್ ಚಂದ್ ಗೆಹ್ಲೋಟ್ 

Share

ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನವಗ್ರಹ ದೇವಾಲಯ ಲೋಕಾರ್ಪಣೆನೆರವೇರಿಸಿದ ಥಾವರ್ ಚಂದ್ ಗೆಹ್ಲೋಟ್ 

by-ಕೆಂಧೂಳಿ

ತುಮಕೂರು (ಕುಣಿಗಲ್) ,ಫೆ,23-ಇಂದು ಪ್ರಪಂಚದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದ ಕಡೆಗೆ ನೋಡುತ್ತಿವೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಇದಕ್ಕೆ ಜೀವಂತ ಉದಾಹರಣೆಯಾಗಿದೆ ಎಂದು  ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

ಅವರು ಇಂದು ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಬಿದನಗೆರೆ ಶ್ರೀ ಬಸವೇಶ್ವರ ಮಠದ ನೂತನವಾಗಿ ನಿರ್ಮಿಸಿರುವ ನವಗ್ರಹ ದಂಪತಿ ದೇವಾಲಯ ಹಾಗೂ ನೂತನ ಗೋಪುರ ಉದ್ಘಾಟನೆ ನೆರವೇರಿಸಿ ಮಾತನಾಡಿ ದರು.
ಭಾಷಣದ ಆರಂಭದಲ್ಲಿ ಕನ್ನಡ ದಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದ ರಾಜ್ಯ ಪಾಲರು, ಮಠದ ಸಂತರು, ಋಷಿಮುನಿಗಳು, ಆಚಾರ್ಯರು ಮತ್ತು ಶ್ರೇಷ್ಠ ಸಂಪ್ರದಾಯಗಳು ಮತ್ತು ಪ್ರಯತ್ನಗಳಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ. ಸಮಾರಂಭಕ್ಕೆ ಆಗಮಿಸುವ ಮೂಲಕ ನಿಮ್ಮೆಲ್ಲರ ಒಡನಾಟದಲ್ಲಿರುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ. ಇದಕ್ಕಾಗಿ ನಾನು ನಿಮಗೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ತುಮಕೂರು ಜಿಲ್ಲೆ, ಕಲ್ಪತರು ನಾಡಿನ ಕುಣಿಗಲ್ ತಾಲೂಕಿನಲ್ಲಿರುವ “ಬಿದನ ಗೆರೆ ಬಸವೇಶ್ವರ ಮಠ” ಧಾರ್ಮಿಕ ಸ್ಥಳವಲ್ಲದೆ, ಭಕ್ತರಿಗೆ ಆಧ್ಯಾತ್ಮಿಕ ಶಾಂತಿ ಮತ್ತು ಸ್ಫೂರ್ತಿಯ ಮೂಲವಾಗಿದೆ ಮತ್ತು ಸಮುದಾಯಕ್ಕೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಸ್ಫೂರ್ತಿಯ ಕೇಂದ್ರವಾಗಿದೆ ಎಂದರು.

ಬಸವೇಶ್ವರರ ಬೋಧನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಸಮಾಜ ಸುಧಾರಣೆಗೆ ಸಹಕಾರಿಯಾಗಿದೆ. ಇಲ್ಲಿಗೆ ಬರುವ ಜನರು ಬಸವೇಶ್ವರರ ಬೋಧನೆಗಳನ್ನು ಆಸ್ವಾಧಿಸುವ ಜೊತೆಗೆ ಜೀವನದಲ್ಲಿ ನೈತಿಕತೆ, ಸಮಾನತೆ ಮತ್ತು ಭಕ್ತಿಯನ್ನು ಅನುಸರಿಸಲು ಸ್ಫೂರ್ತಿ ಪಡೆಯುತ್ತಾರೆಂದರು.
ನಮ್ಮ ಋಷಿಮುನಿಗಳು, ಮತ್ತು ಗುರುಗಳು ಅನಾದಿ ಕಾಲದಿಂದಲೂ ನಿರಂತರವಾಗಿ ರಕ್ಷಿಸುತ್ತಾ ಬಂದಿರುವ ನಮ್ಮ ಸಂಸ್ಕೃತಿಯು ಶಾಶ್ವತವಾಗಿದೆ. ನಮ್ಮ ಸಂಸ್ಕೃತಿ ಯಾವಾಗಲೂ ವಿಶ್ವ ಭ್ರಾತೃತ್ವ, ವಿಶ್ವ ಶಾಂತಿ ಮತ್ತು ವಿಶ್ವ ಕಲ್ಯಾಣ ಮತ್ತು ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ.ಸಾಧುಗಳು, ಸಂತರು, ಆಚಾರ್ಯರು ಮತ್ತು ಋಷಿಮುನಿಗಳು ವಿಶ್ವ ವೇದಿಕೆಯಲ್ಲಿ ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಧ್ವಜವನ್ನು ಹಾರಿಸಿದ್ದಾರೆಂದರು.
ಈ ಪವಿತ್ರ ಸ್ಥಳದಲ್ಲಿ ವಿಶ್ವವಿಖ್ಯಾತ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಶ್ರೀ ಶನೇಶ್ವರ ಸ್ವಾಮಿ ಮತ್ತು ನವಗ್ರಹಗಳ ದರ್ಶನಕ್ಕಾಗಿ ದೇಶ ವಿದೇಶಗಳಿಂದ ಭಕ್ತರು ಇಲ್ಲಿಗೆ ಬರುತ್ತಾರೆ. ಈ ಪ್ರದೇಶವನ್ನು “ಕರ್ನಾಟಕದ ಶನಿ ಸಿಂಗನಾಪುರ” ಎಂದೂ ಕರೆಯುತ್ತಾರೆ.ಶ್ರೀ ಮಠದ ಪೀಠಾಧೀಶ್ವರರಾದ ಶ್ರೀ ಧನಂಜಯ ಗುರೂಜಿಯವರು ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ರಕ್ಷಕರ ಜೊತೆಗೆ ಚಿಂತನಶೀಲರು ಮತ್ತು ಸಂವೇದನಾಶೀಲರು ಎಂದು ಬಣ್ಣಿಸಿದರು.
ಬಹು ಆಯಾಮದ ಸಂಸ್ಥೆಯಾಗಿರುವ ಈ ಮಠವು ಸಾಮಾಜಿಕ ಪ್ರಗತಿಯಲ್ಲಿ ಮಹತ್ವದ ಕೊಡುಗೆಯನ್ನು ಹೊಂದಿದೆ. ಇಲ್ಲಿ ಪ್ರತಿದಿನ ಸಾವಿರಾರು ಭಕ್ತರಿಗೆ ದಾಸೋಹ ಅಂದರೆ ಅನ್ನದಾನವನ್ನು ನೀಡಲಾಗುತ್ತದೆ.ಸಮಾಜದಲ್ಲಿ ಪ್ರಚಲಿತದಲ್ಲಿರುವ ಹಲವಾರು ಸಮಸ್ಯೆಗಳನ್ನು ನಿವಾರಿಸಲು ನಿಮ್ಮಿಂದ ಅನೇಕ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಶ್ಲಾಘಿಸಿದರು.

 

Girl in a jacket
error: Content is protected !!