ಸಲ್ಯೂಟ್ ವಾರಿಯರ್ಸ್‌ ಆಲ್ಬಂ ಸಾಂಗ್‌ಗೆ ಎಸ್‌ಪಿ, ಸಿಇಒ ಚಾಲನೆ

Share

ಚಿತ್ರದುರ್ಗ,ಜೂ,28: ಸರ್ಕಾರ ಕೋರೋನಾ ಲಾಕ್‌ಡೌನ್ ಸಡಿಲಿಕೆ ಮಾಡಿರಬಹುದು ಆದರೂ ಜನರು ಮೂರನೇ ಅಲೆಯ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ ಚಿತ್ರದುರ್ಗವನ್ನು ಕೊರೋನಾ ಮುಕ್ತ ಮಾಡಲು ಸನ್ನದ್ಧವಾಗಿದೆ ಈ ಹಿನ್ನೆಲೆಯಲ್ಲಿ ಸಲ್ಯೂಟ್ ವಾರಿಯರ್ಸ್‌ ಸಾಂಗ್ ಅದ್ಬುತವಾಗಿ ಮೂಡಿಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಹೇಳಿದರು.

ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಕೊರೋನಾ ಕುರಿತ ಜಾಗೃತಿ ಗೀತೆ ಸಲ್ಯೂಟ್ ವಾರಿಯರ್ಸ್‌ ಕನ್ನಡ ಆಲ್ಬಂ ಸಾಂಗ್ ಶೂಟಿಂಗ್‌ಗಾಗಿ ಹಮ್ಮಿಕೊಂಡಿದ್ದ ಮೂಹೂರ್ತ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ವಿವಿಧ ರೀತಿಯಲ್ಲಿ ಜನಜಾಗೃತಿ ಕಾರ್ಯ ಮಾಡುತ್ತಿದ್ದು ಅದನ್ನು ಅರಿತ ಮಾತರಂ ಲ್ಯಾಪ್ ಕ್ರಿಯೇಷನ್ ತಂಡವು ಒಂದು ಅರ್ಥಪೂರ್ಣ ಹಾಡು ರಚಿಸಿ ಒಳ್ಳೆಯ ಮ್ಯೂಸಿಕ್ ನೀಡಿ ಸಿನಿಮಾ ಗಾಯಕರಿಂದ ಹಾಡಿಸಿದ್ದು ಅದ್ಬುತವಾಗಿ ಹೊರಬಂದಿದೆ. ಇವರ ಹೊಸ ಹೆಜ್ಜೆಗೆ ಶುಭವಾಗಲಿ. ಇವರಿಂದ ಇನ್ನೂ ಹೆಚ್ಚು ಕ್ರಿಯಾಶೀಲ ಕಾರ್ಯಗಳು ಬರಲಿ ಎಂದರು.

ಮೂಹೂರ್ತ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ನಂದಿನಿದೇವಿ ಮಾತನಾಡಿ, ನಮ್ಮ ಜಿಲ್ಲೆಯನ್ನು ಹೋಲಿಕೆ ಮಾಡಿ ನೋಡಿದಾಗ ಕೊರೋನಾ ಕಡಿಮೆ ಬಂದಿದೆ. ಎಲ್ಲರೂ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ, ಮುಂದೆ ಮೂರನೆ ಅಲೆಯನ್ನು ತಡೆಯಲೂ ಎಲ್ಲರೂ ಸಿದ್ಧರಾಗೋಣ ಮತ್ತು ಎಚ್ಚರದಿಂದ ಇರೋಣ ಎಂದರು.

ಸಲ್ಯೂಟ್ ವಾರಿಯರ್ಸ್‌ ಸಾಂಗ್ ಕ್ರಿಯೇಟಿವ್ ಹೆಡ್ ಮತ್ತು ನಿರ್ದೇಶಕ ಮಾಲತೇಶ್ ಅರಸ್ ಹರ್ತಿಕೋಟೆ ಮಾತನಾಡಿ, ನಿಜವಾದ ವಾರಿಯರ್ಸ್‌ ಗಳು ಇಲ್ಲಿ ನಾಯಕರಾಗಿ ನಾಯಕಿಯರಾಗಿ ಕಾಣಿಸಿಕೊಳ್ಳಲಿದ್ದಾರೆ. ನಮ್ಮ ಈ ಹಾಡಿನಲ್ಲಿ ಎಸ್‌ಪಿ. ಡಿಸಿ, ಸಿಇಒ ಪ್ರಮುಖವಾಗಿದ್ದು ಜಿಲ್ಲೆಯ ಎಲ್ಲಾ ಪೊಲೀಸರು, ವೈದ್ಯರು, ನರ್ಸಗಳು, ಆಸ್ಪತ್ರೆ ಬ್ರದರ್ಸ್, ನಗರಸಭೆ ಪೌರ ಕಾರ್ಮಿಕರು, ಪತ್ರಕರ್ತರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಬೆಸ್ಕಾಂ ಸಿಬ್ಬಂದಿ, ಹೋಮ್ ಗಾಡ್ಸ್, ಪಿಡಿಒ, ಗ್ರಾಪಂ ಸಿಬ್ಬಂದಿ, ಡಿಸಿ ಕಚೇರಿ, ಜಿಪಂ ಕಚೇರಿ ಸಿಬ್ಬಂದಿಗಳನ್ನು ಚಿತ್ರಿಕರಣ ಮಾಡಲಾಗುವುದು ಎಂದರು.

ಸಲ್ಯೂಟ್ ವಾರಿಯರ್ಸ್‌
ಆಲ್ಬಂಗೆ ಸಾಹಿತ್ಯ ನೀಡಿ ಪ್ರಧಾನ ನಿರ್ದೇಶನ ಮಾಡುತ್ತಿರುವ ದೇವರತ್ನ ಮಂಜು ಮಾತನಾಡಿ, ಇದೊಂದು ವಿಭಿನ್ನವಾದ ವಿಶೇಷವಾಗಿ, ಕೊರೋನಾ ಜಾಗೃತಿ ಗೀತೆಯಾಗಿದ್ದು ಇದರಲ್ಲಿ ವಾರಿಯರ್ಸ್‌ ಗಳನ್ನು ಸಾರ್ವಜನಿಕರು ಅಭಿನಂದಿಸುವ ಉದ್ದೇಶವೂ ಇದೆ. ಚಿತ್ರದುರ್ಗದ ವಾರಿಯರ್ಸ್‌ ಗಳೇ ಇದರಲ್ಲಿ ಇರುತ್ತಾರೆ ಚಿತ್ರದುರ್ಗದ ಪ್ರಮುಖ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ ಐದು ದಿನಗಳ ಕಾಲದ ಶೂಟಿಂಗ್ ನ ನಂತರ ಎಲ್ಲರನ್ನು ಒಂದೆಡೆ ಸೇರಿಸಿ ಕ್ಲೈಮ್ಯಾಕ್ಸ್ ಮಾದರಿಯಲ್ಲಿ ಶೂಟಿಂಗ್ ನಡೆಯಲಿದೆ ಎಂದರು.

ಮುಹೂರ್ತ ಸಮಾರಂಭದಲ್ಲಿ ಅಡಿಷನಲ್ ಎಸ್.ಪಿ ನಂದಗಾವಿ ಮತ್ತು ಜಿಲ್ಲೆಯ ಎಲ್ಲಾ ಡಿವೈಎಸ್‌ಪಿ, ಎಲ್ಲಾ ವೃತ್ತ ನಿರೀಕ್ಷಕರು, ಸಬ್ ಇನ್ಸ್ ಪೆಕ್ಟರ್ ಹಾಗೂ ಸಲ್ಯೂಟ್ ವಾರಿಯರ್ಸ್‌ ಸಾಂಗ್ ಸಂಗೀತ ನಿರ್ದೇಶಕರಾದ ಮುನ್ನಾ, ನಿವೃತ್ತ ಪೊಲೀಸ್ ಅಧಿಕಾರಿ ದೇವೇಂದ್ರಪ್ಪ ತಂಡದ ಅಶೋಕ್, ರಾಘವೇಂದ್ರ, ಚಂದನ್, ಶಶಿಡ್ರೋಣ್, ಕಿಶೋರ್‌ಚಿನ್ನು, ಪಾಟೀಲ್, ಚೇತನ್, ತೇಜು, ಮದನ್ ರಾಹುಲ್ ಮತ್ತು ಚಿತ್ರತಂಡ ಭಾಗವಹಿಸಿದ್ದರು.

Girl in a jacket
error: Content is protected !!