ಬೆಂಗಳೂರು,ಜೂ,11-ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಿಕೆ ಮಾಡಿಕೊಂಡು ಲೋಕಸಭಾ ಚುನಾಣೆಗೆ ಹಣ ಬಳಸಿಕೊಳ್ಳಲಾಗಿದೆ ಎನ್ನುವ ಆರೋಪದ ಮೇಲೆ ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಸಂಸದರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡರಸಿದ್ದಾರೆ.
ಇಂದು ಬೆಳ್ಳಂಬೆಳಿಗ್ಗೆ ಬಳ್ಳಾರಿ ಜಿಲ್ಲೆಯ ಮೂರು ಕಡೆ ಹದಿನೈದು ಅಧಿಕಾರಿಗಳು ದಾಳಿ ನಡೆಸುತ್ತಿದ್ದು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳಾದ ಈ.ತುಕರಾಂ,ಗಣೇಶ್,ನಾರಾ ಭರತ್ ರೆಡ್ಡಿ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ ಪಿಎ ಗೋವರ್ಧನ ಮನೆ ಮೇಲೆ ದಾಳಿ ನಡೆಸಲಾಗಿದೆ.
ಅಲ್ಲದೆ ಮಾಜಿ ಸಚಿವ ನಾಗೇಂದ್ರ ಅವರ ಬೆಂಗಳೂರು ನಿವಾಸದಲ್ಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಬೇರೆ ಬೇರೆ ಬ್ಯಾಂಕುಗಳ ಖಾತೆಗೆ ಜಮಾ ಮಾಡಿಕೊಂಡ ದಾಖಲೆಗಳು ಅದರಿಂದ ಹಣವನ್ನು ಲೋಕಸಭಾ ಚುನಾಣೆಗೆ ಬಳಕೆ ಮಾಡಿಕೊಂಡಿದ್ದರು ಎನ್ನುವ ಆರೋಪ ಎದುರಿಸುತ್ತಿದ್ದರು,ಇದರ ಆಧಾರದ ಮೇಲೆ ಇಡಿ ಅಧಿಕಾರಿಗಳು ಈ ದಾಳಿ ನಡೆಸುತ್ತಿದ್ದಾರೆ ಎನ್ನಲಾಗಿದೆ.