ಕಲಬುರ್ಗಿ ,ಜೂ,14- ವಿಶ್ವ ಪರಿಸರ ದಿನಾಚರಣೆ ಸಂಬಂಧ ದೇಶಾದ್ಯಾಂತ ಆಯೋಜಿಸಿರುವ ‘ಲಕ್ಷ ವೃಕ್ಷ’ ಅಭಿಯಾನದ ಅಂಗವಾಗಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಮಾಳವಿಕಾ ಅವಿನಾಶ್, ಶಾಸಕರಾದ ಬಸವರಾಜ್ ಮತ್ತಿಮೂಡ, ಡಾ. ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ, ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ್, ಮಾಜಿ ಶಾಸಕ ಅಪ್ಪು ಪಾಟೀಲ್, ಜಿಲ್ಲಾಧ್ಯಕ್ಷ ಚಂದುಪಾಟೀಲ್ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.