ನವದೆಹಲಿ,ಜು,೨೪-ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಆ ಸ್ಥಾನಕ್ಕೆ ಯಾರು ಎನ್ನುವ ಕುತೂಹಲಗಳು ಇವೆ ಈ ಮಧ್ಯೆ ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ.
ಹೌದು.. ಹರಿವಂಶ್ ನಾರಾಯಣ್ ಸಿಂಗ್ ಅವರು ರಾಷ್ಟ್ರಪತಿ ದ್ರೌಪತಿ ಮುರ್ಮ ಅವರನ್ನು ಭೇಟಿ ಮಾಡಿ ಬಂದಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದ್ದು ಬಹುತೇಕ ಇವರನ್ನು ಉಪರಾಷ್ಟ್ರಪತಿಯನ್ನಾಗಿ ನೇಮಕ ಮಾಡುವ ಸಾದ್ಯತೆಳು ಹೆಚ್ಚಾಗಿವೆ ಎನ್ನುತ್ತವೆ ಮೂಲಗಳು
ಬಿಹಾರ ಮೂಲದ ಹರಿವಂಶ್ಗೆ ಅಪಾರ ರಾಜಕೀಯ ಅನುಭವವಿದೆ. ಇವರು ೨೦೧೪ರಲ್ಲಿ ರಾಜ್ಯಸಭೆಗೆ ಮೊದಲ ಬಾರಿಗೆ ಪ್ರವೇಶ ಮಾಡಿದರು. ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾರೆ. ರಾಜಕೀಯ ಪ್ರವೇಶಿಸುವ ಮೊದಲು ಹಲವು ವರ್ಷಗಳ ಕಾಲ ಪತ್ರಕರ್ತರಾಗಿ ಕೆಲಸ ಮಾಡಿದ್ದಾರೆ. ಮಾಜಿ ಪ್ರಧಾನಿ ಚಂದ್ರಶೇಖರ್??ಗೆ ಸಲಹೆಗಾರರಾಗಿಯೂ ಕೆಲಸ ಮಾಡಿದ್ದಾರೆ. ಅಂದಿನ ಸರ್ಕಾರ ಪತನದ ಬಳಿಕ ಪತ್ರಿಕೋದ್ಯಮಕ್ಕೆ ಮರಳಿದ್ದರು.
ನಿತೀಶ್ ಕುಮಾರ್ ನೇತೃತ್ವದ ಜೆಡಿಯುನಿಂದ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದರು. ೨೦೨೦ ರಿಂದ ರಾಜ್ಯಸಭೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆ ಶೀಘ್ರದಲ್ಲೇ ಬರಲಿದ್ದು, ಎನ್ಡಿಎ ಸರ್ಕಾರ ಹರಿವಂಶ್ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಬಹುದು ಎಂದು ಹೇಳಲಾಗುತ್ತಿದೆ.
ಸಂವಿಧಾನದ ಪ್ರಕಾರ.. ಉಪಾಧ್ಯಕ್ಷರ ಹುದ್ದೆ ಖಾಲಿಯಾದ ೬೦ ದಿನದಲ್ಲಿ ಹೊಸ ಉಪರಾಷ್ಟ್ರತಿಗಳ ಚುನಾವಣೆ ಕಡ್ಡಾಯ. ಅಂದರೆ ಇದರ ಪ್ರಕ್ರಿಯೆ ಸೆಪ್ಟೆಂಬರ್ ೧೯ ರೊಳಗೆ ಪೂರ್ಣಗೊಳ್ಳಬೇಕು. ಹೀಗಾಗಿ ಉಪಾಧ್ಯಕ್ಷರ ಚುನಾವಣೆಗೆ ಶೀಘ್ರದಲ್ಲೇ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಲಿದೆ. ಸಂವಿಧಾನದ ೬೮ (೨) ನೇ ವಿಧಿಯ ಅಡಿಯಲ್ಲಿ ಚುನಾವಣೆ ನಡೆಯಲಿದೆ. ಉಪಾಧ್ಯಕ್ಷರಾಗಿ ಆಯ್ಕೆಯಾದ ವ್ಯಕ್ತಿ ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಐದು ವರ್ಷಗಳ ಅವಧಿಗೆ ಉಪಾಧ್ಯಕ್ಷರಾಗಿ ಮುಂದುವರಿಯುತ್ತಾರೆ.
ಉಪರಾಷ್ಟ್ರಪತಿ ರೇಸ್ನಲ್ಲಿರುವ ಪ್ರಮುಖ ಹೆಸರು ಹರಿವಂಶ್ ನಾರಾಯಣ್
Share