ಬೆಂಗಳೂರು,ಮೇ,೨೯: ಕನ್ನಡದ ಖ್ಯಾತ ನಟ ದಿ.ರೆಬಲ್ಸ್ಟಾರ್ ಅಂಬರೀಶ್ ಅವರ ೬೯ನೇ ಜನ್ಮದಿನ ಇಂದು.ಈ ಸಂದರ್ಭದಲ್ಲಿ ಅವರ ಪತ್ನಿ ಸುಮಲತಾ ಅಂಬರೀಶ್ ಮತ್ತು ಪುತ್ರ ಅಭಿಶೇಕ್ ಅಂಬರೀಶ್ ಸಮಾಧಿಗೆ ತೆರಳಿ ನಮನ ಸಲ್ಲಿಸಿ ಭಾವುಕರಾದರು.
ಅಂಬಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಂಸದೆ ಸುಮಲತಾ ಅಂಬರೀಶ್ ಮಾಧ್ಯಮದವರೊಂದಿಗೆ ಮಾತನಾಡಿ, ಅಂಬರೀಶ್ ಅವರಿದ್ದಾಗ ಪ್ರತಿ ವರ್ಷ ಅಭಿಮಾನಿಗಳು ರಾಜ್ಯದ ಮೂಲೆ ಮೂಲೆಗಳಿಂದ ಬಂದು ಸಂಭ್ರಮದಿಂದ ಆಚರಿಸುತ್ತಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ನಾವೇ ಮಂಡ್ಯಕ್ಕೆ ತೆರಳಿ ಅಲ್ಲಿ ಆಚರಿಸುತ್ತಿದ್ದೇವೆ. ಆದರೆ ಈ ವರ್ಷ ಕೊರೊನಾ ಕಾರಣದಿಂದ ಸಂಭ್ರಮದ ಆಚರಣೆ ಇಲ್ಲ ಎಂದಿದ್ದಾರೆ.
ಮನೆಯಲ್ಲೇ ಇದ್ದು ಎಲ್ಲರೂ ಆಚರಿಸಿ. ಅವರ ಜೀವನದಿಂದ ಸ್ಫೂರ್ತಿ ಪಡೆದು ಕೆಲಸ ಮಾಡುತ್ತಿದ್ದೇನೆ. ಇಲ್ಲಿಂದ ಈಗ ಮಂಡ್ಯಕ್ಕೆ ತೆರಳಲಿದ್ದೇನೆ. ಅಲ್ಲಿ ಐಸಿಯು ಆನ್ ವೀಲ್ಸ್ ಉದ್ಘಾಟನೆ ಹಾಗೂ ಇತರೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಚಿತ್ರರಂಗಕ್ಕೆ ನೆರವು ಸಂಬಂಧ ಸಿಎಂ ಭೇಟಿ ಮಾಡಿ ಬಂದಿದ್ದೇನೆ, ರಾಜ್ಯ ಸರ್ಕಾರ ಚಿತ್ರರಂಗದ ಸಮಸ್ಯೆಗೆ ಸ್ಪಂದಿಸಬೇಕು ಅನ್ನೋದೆ ನನ್ನ ಮನವಿ ಎಂದರು.