Girl in a jacket

Daily Archives: May 10, 2021

ಮಕ್ಕಳ ರಕ್ಷಣಾ ಕಾರ್ಯ ನಿರ್ವಹಿಸಲು ಸ್ವಯಂ ಸೇವಕರಿಗೆ ಆಹ್ವಾನ

ಪತ್ರಿಕಾ ಪ್ರಕಟಣೆ ಮಕ್ಕಳ ರಕ್ಷಣಾ ಕಾರ್ಯ ನಿರ್ವಹಿಸಲು ಸ್ವಯಂ ಸೇವಕರಿಗೆ ಆಹ್ವಾನ ಬೆಂಗಳೂರು, 10: ಕೋವಿಡ್-19 2ನೇ ಅಲೆ ಹಿನ್ನೆಲೆಯಲ್ಲಿ ಸೋಂಕು ಹರಡುವುದು ಹೆಚ್ಚಾಗುತ್ತಿದ್ದು, ಈ ಸಂಧರ್ಭದಲ್ಲಿ ಮಕ್ಕಳ ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದ್ದು, ಈ ಕಾರ್ಯ ನಿರ್ವಹಿಸಲು ಆಸಕ್ತ ಸ್ವಯಂ ಸೇವಕರನ್ನು ಅಹ್ವಾನಿಸಲಾಗಿದೆ. ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಡಿಯಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ವ್ಯಕ್ತಿಗಳು(Individuals) ನೋಂದಾಯಿಸಿಕೊಳ್ಳಲು ನಿರ್ದೇಶನಾಲಯದ ವೆಬ್‍ಸೈಟ್ www.icps.karnataka.gov.in ನಲ್ಲಿ ಅರ್ಜಿ ಭರ್ತಿ ಮಾಡಿ ಸಲ್ಲಿಸುವಂತೆ ನಿರ್ದೇಶಕರು ಕೋರಿದ್ದಾರೆ.

ಐಟಿಐ ಆಸ್ಪತ್ರೆಗೆ ಸಚಿವ ಬಸವರಾಜ್ ದಿಡೀರ್ ಭೇಟಿ

ಇನ್ನೊಂದು ವಾರದಲ್ಲಿ ಲಿಕ್ವಿಡ್ ಆಕ್ಸಿಜನ್ ಮತ್ತು 300 ಬೆಡ್ ಗಳ ವ್ಯವಸ್ಥೆ- ಸುತ್ತೂರು ಶ್ರೀಗಳು ಮೈಸೂರು,10: ಮೈಸೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ತಡೆಗಾಗಿ ಹಲವು ಕ್ರಮಗಳನ್ನ ಕೈಗೊಳ್ಳಲಾಗುತ್ತಿದ್ದು, ಬೆಡ್ ಮತ್ತು ಆಕ್ಸಿಜನ್ ಕೊರತೆ ಕುರಿತು ಇಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ‌ನ ನೇತೃತ್ವದಲ್ಲಿ ಸುತ್ತೂರು ಶಾಖಾ ಮಠದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಸೇರಿ ಹಲವರು ಸಭೆಯಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಕೊರೋನಾ ನಿರ್ವಹಣೆಗೆ ಸಚಿವ…

ಮೈಸೂರಿನಲ್ಲಿ ಕೈ ತಪ್ಪಿದ‌ ಕೊರೋನ‌ : ದೇವರ ಮೊರೆ ಹೋದ ಎಸ್.ಟಿ ಸೋಮಶೇಖರ್

ಮೈಸೂರು,10: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಪ್ರಮಾಣ ತಗ್ಗಿಸಲು ಇಂದಿನಿಂದ ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಮಧ್ಯೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 2ನೇ ಅಲೆ ಕೈತಪ್ಪಿರುವ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ದೇವರ ಮೊರೆ ಹೋಗಿದ್ದಾರೆ. ಹೌದು ಅರಮನೆ‌ ಬಳಿ ಇರುವ ಐತಿಹಾಸಿಕ ಕೋಟೆ ಮಾರಮ್ಮ ದೇವಾಲಯದಲ್ಲಿ ಸಚಿವ ಎಸ್.ಟಿ ಸೋಮಶೇಖರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚಾಮುಂಡೇಶ್ವರಿ ಪ್ರಧಾನ ಅರ್ಚಕ‌ ಶಶಿಶೇಖರ ದಿಕ್ಷೀತ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ…

ಕೊರೊನಾ ತಡೆಗೆ ರಾಜ್ಯದ ಜನರಲ್ಲಿ ಸಿಎಂ ಮನವಿ

ಬೆಂಗಳೂರು,10: ಕೊರೋನ ತಡೆಗಾಗಿ ರಾಜ್ಯದಲ್ಲಿ ನಾವು 14 ದಿನಗಳ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸೋಣ. ಮಾರ್ಗಸೂಚಿಗಳನ್ನು ಎಲ್ಲರೂ ತಪ್ಪದೇ ಅನುಸರಿಸಿ, ಎಲ್ಲರೂ ಒಟ್ಟಾಗಿ ಕೊರೋನಾ ವಿರುದ್ಧ ಹೋರಾಡೋಣ ಎಂದು ರಾಜ್ಯದ ಜನರಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಎಲ್ಲರ ಸಕ್ರಿಯ ಸಹಕಾರವಿಲ್ಲದೆ ಇದು ಯಶಸ್ವಿಯಾಗುವುದಿಲ್ಲ. ಈ ನಿಟ್ಟಿನಲ್ಲಿ ಏನೇ ಅಡೆತಡೆ, ಸಮಸ್ಯೆಗಳಿದ್ದರೆ, ದಯವಿಟ್ಟು ಅದನ್ನು ಜಿಲ್ಲಾಧಿಕಾರಿಗಳ, ಜಿಲ್ಲಾ ಉಸ್ತುವಾರಿ ಸಚಿವರ ಅಥವಾ ನೇರವಾಗಿ ನನ್ನ ಗಮನಕ್ಕೆ ತನ್ನಿ.…

ಏಕಕಾಲದಲ್ಲಿ ಎರಡು ತಂಡಗಳು ಕಣಕ್ಕಿಳಿಯಲಿವೆ; ಗಂಗೋಲಿ

ನವದೆಹಲಿ,10: ಟೀಂ ಇಂಡಿಯಾ ಜುಲೈ ತಿಂಗಳಿನಲ್ಲಿ ಇಂಗ್ಲೆಂಡ್ ಹಾಗೂ ಶ್ರೀಲಂಕಾ ವಿರುದ್ದ ಸರಣಿ ಆಡಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಈ ಮೂಲಕ ಇಂಗ್ಲೆಂಡ್‌ ಹಾಗೂ ಶ್ರೀಲಂಕಾಕ್ಕೆ ಪ್ರತ್ಯೇಕ ತಂಡಗಳು ತೆರಳಲಿವೆ ಎನ್ನುವ ಸುಳಿವನ್ನು ಗಂಗೂಲಿ ನೀಡಿದ್ದಾರೆ. ಟೀಂ ಇಂಡಿಯಾ ಜೂನ್‌ನಲ್ಲಿ ಇಂಗ್ಲೆಂಡ್‌ಗೆ ತೆರಳಲಿದ್ದು ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾಗೂ ಇಂಗ್ಲೆಂಡ್‌ ವಿರುದ್ಧ 5 ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲಿದೆ. ಇದೇ ವೇಳೆ ಜುಲೈನಲ್ಲಿ ಭಾರತ ತಂಡ ಶ್ರೀಲಂಕಾಕ್ಕೆ ತೆರಳಲಿದ್ದು, 3…

ರಾಮು ನಿಧನದ ನಂತರ ಮೊದಲಬಾರಿ ಪ್ರತಿಕ್ರಿಯಿಸಿದ ಮಾಲಾಶ್ರೀ

ಬೆಂಗಳೂರು 10: ಪತಿ ನಿಧನದ ನೋವಿನಲ್ಲಿರುವ ನಟಿ ಮಾಲಾಶ್ರೀ ಭಾವುಕಪತ್ರವೊಂದನ್ನು ಬರೆದು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ನಿರ್ಮಾಪಕ ಕೋಟಿ ರಾಮು ನಿಧನದ ಸಂದರ್ಭದಲ್ಲಿ ನೆರವಾದವರಿಗೆ ಮಾಲಾಶ್ರೀ ಧನ್ಯವಾದ ಹೇಳಿದ್ದಾರೆ. ಕಳೆದ ಹದಿನೈದು ದಿನಗಳು ನೋವಿನ ದಿನಗಳಾಗಿದ್ದವು. ಏನು ಮಾಡಬೇಕೆಂದು ಗೊತ್ತಾಗದಂತಾಗಿತ್ತು. ರಾಮು ನಿಧನದಿಂದ ನಮ್ಮ ಹೃದಯ ಚೂರು ಚೂರಾಗಿತ್ತು ಎಂದು ಮಾಲಾಶ್ರೀ ಬರೆದುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ನೀಡಿದ ಸಹಕಾರವನ್ನು ಮರೆಯಲು ಸಾಧ್ಯವಿಲ್ಲ. ಮಾಧ್ಯಮದವರು, ತಂತ್ರಜ್ಞರು, ಕಲಾವಿದರು, ಸ್ನೇಹಿತರು, ಅಭಿಮಾನಿಗಳು, ಹಿತೈಷಿಗಳು ಕಷ್ಟದ ಸಮಯದಲ್ಲಿ ಜೊತೆಗೆ ನಿಂತಿದ್ದರು.…

ಟಫ್ ಲಾಕ್ಡೌನ್ : ಹೊರಬಂದವರಿಗೆ ಲಾಠಿ ರುಚಿ, ವಾಹನ ಸೀಜ್ !

ಬೆಂಗಳೂರು, 10: ಇಂದಿನಿಂದ ಮೇ 24ರವರೆಗೆ ರಾಜ್ಯದಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ಮೊದಲ ದಿನವಾದ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಕುಂಟುನೆಪಗಳನ್ನು ಹೇಳಿ ಓಡಾಟ ನಡೆಸುವವರ ಮೇಲೆ ಪೊಲೀಸರು ಹಲವೆಡೆ ಲಾಠಿ ಏಟು ಬೀಸಿದ್ದಾರೆ. ಜತೆಗೆ ವಾಹನಗಳನ್ನು ವಶಪಡಿಸಿಕೊಂಡು ಸೀಜ್ ಮಾಡಿದ್ದಾರೆ. ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಟ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅನಗತ್ಯ ಸಂಚಾರ ನಡೆಸಿದವರ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಗದಗ, ಬಾಗಲಕೋಟೆ, ಕೋಲಾರ,…

ಭಾರತದಲ್ಲಿ ಒಂದೇ ದಿನ 3,66,161 ಮಂದಿಗೆ ಕೊರೊನಾ

ನವದೆಹಲಿ ,10: ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು , ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,66,161 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ . ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,66,161 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ . ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 2,26,62,575 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಲ್ಲಿ 3,754 ಕೊರೊನಾ…

ಕೆ.ಬಿ. ಶಾಣಪ್ಪ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು,10:ಮಾಜಿ ಸಚಿವ ಕೆ.ಬಿ. ಶಾಣಪ್ಪ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ‘ಜನಪರ ಹೋರಾಟಗಾರ, ಮಾಜಿ ಸಂಸದರು, ಮಾಜಿ ಸಚಿವರಾಗಿದ್ದ ಕೆ.ಬಿ ಶಾಣಪ್ಪ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಅವರು ಹಿರಿಯ ನಾಯಕರು, ಹೈದರಾಬಾದ್ ಕರ್ನಾಟಕ ಭಾಗದ ಜನರ ಧ್ವನಿಯಾಗಿ ಕೆಲಸ ಮಾಡಿದವರು. ಆ ಭಾಗದ ನಾನಾ ಅಭಿವೃದ್ಧಿ ಕಾರ್ಯಗಳ ಹಿಂದೆ ಶಾಣಪ್ಪನವರ ಹೋರಾಟದ ಪರಿಶ್ರಮವಿದೆ. ಕಾರ್ಮಿಕರು ಹಾಗೂ ಶೋಷಿತ ವರ್ಗದ ಹಿತಕ್ಕಾಗಿ ಅವಿರತ ಶ್ರಮಿಸಿದ ನಾಯಕರು ಎಂದು…

ಐಪಿಎಲ್ ಮುಂದೂಡಿಕೆ,ಅರ್ ಸಿಬಿಗೆ ಲಾಭ

ಬೆಂಗಳೂರು,10;ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಸಕ್ತ ಐಪಿಎಲ್ ಸೀಸನ್​ನಲ್ಲಿ ಆಡಿರುವ 7 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿ 3ನೇ ಸ್ಥಾನದಲ್ಲಿದೆ. ಆರಂಭದಿಂದಲೇ ಭರ್ಜರಿ ಪ್ರದರ್ಶನದೊಂದಿಗೆ ಗಮನ ಸೆಳೆದಿದ್ದ ಆರ್​ಸಿಬಿ ಈ ಬಾರಿ ಕಪ್ ಗೆಲ್ಲುವ ಫೇವರೇಟ್ ತಂಡಗಳಲ್ಲಿ ಗುರುತಿಸಿಕೊಂಡಿತ್ತು. ಆದರೀಗ ಐಪಿಎಲ್ ಮುಂದೂಡಲಾಗಿದೆ. ಇದಾಗ್ಯೂ ಟೂರ್ನಿಯನ್ನು ಪೂರ್ಣಗೊಳಿಸುವುದಾಗಿ ಬಿಸಿಸಿಐ ಘೋಷಿಸಿದೆ. ಆದರೆ ಈ ಮುಂದೂಡಿಕೆಯಿಂದ ಆರ್​ಸಿಬಿ ಅತ್ಯುತ್ತಮ ಲಾಭ ಪಡೆದುಕೊಳ್ಳಲಿದೆ. ಹೌದು, ಐಪಿಎಲ್ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದ್ದು, ಇದರಿಂದ ಆರ್​ಸಿಬಿ ತನ್ನ ತಂಡವನ್ನು ಪೂರ್ಣ ಪ್ರಮಾಣದಲ್ಲಿ ರಚಿಸಿಕೊಳ್ಳಬಹುದು. ಏಕೆಂದರೆ…

ಕರ್ಮಚಾರಿಗಳಿಗೆ ಏಜೆನ್ಸಿಗಳು ಆದಷ್ಟು ಬೇಗ ಸಂಬಳ ಪಾವತಿಸಲಿ:ಬಿ.ಸಿ.ಪಾಟೀಲ್ ತಾಕೀತು

ಹಾವೇರಿ,ಮೇ.10:ಟ್ಟಿಹಳ್ಳಿ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಕರ್ಮಚಾರಿಗಳಿಗೆ ಬಾಕಿ ಉಳಿದಿರುವ ಸಂಬಳವನ್ನು ಆದಷ್ಟು ಬೇಗ ಏಜೆನ್ಸಿಗಳು ಪಾವತಿ ಮಾಡುವಂತೆ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ತಾಕೀತು ಮಾಡಿದರು. ಸೋಮವಾರ ಬೆಳ್ಳಂಬೆಳಿಗ್ಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ ಬಗ್ಗೆ ಸಚಿವರು ಪರಿಶೀಲನೆ ನಡೆಸಿದರು.ಈ ವೇಳೆ ಅಲ್ಲಲ್ಲಿ ಕೆಲವು ಕಡೆ ಅಸ್ವಚ್ಛತೆ ಇರುವುದನ್ನು ಗಮನಿಸಿ ಆಸ್ಪತ್ರೆಗಳು ರೋಗ ಕಾಯಿಲೆಗಳಿಂದ ವಿಮುಕ್ತಿ ಗೊಳಿಸುವ…

ಎರಡು ದಿನಗಳ ನಂತರ ಮತ್ತೆ ಪೆಟ್ರೋಲ್‌-ಡೀಸೆಲ್‌ ದರದಲ್ಲಿ ಏರಿಕೆ

ಮುಂಬೈ,10: ಇಂಧನ ಬೆಲೆ ಏರಿಕೆಗೆ ಎರಡು ದಿನಗಳ ಬ್ರೇಕ್​ ಕೊಟ್ಟಿದ್ದ ತೈಲ ಮಾರುಕಟ್ಟೆ ಕಂಪನಿಗಳು ಇದೀಗ ಮತ್ತೆ ಇಂದು ಲೀಟರ್‌ ಪೆಟ್ರೋಲ್​ಗೆ 26 ಪೈಸೆ ಹಾಗೂ ಡೀಸೆಲ್​ಗೆ 34 ಪೈಸೆ ಹೆಚ್ಚಳ ಮಾಡಿವೆ. ಹೀಗಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್​​ ಪೆಟ್ರೋಲ್​ ಬೆಲೆ 91.53 ರೂ. ಹಾಗೂ ಡೀಸೆಲ್​ ಬೆಲೆ 82.06 ರೂ.ಗೆ ಏರಿಕೆಯಾಗಿದೆ. ಇದೇ ನಿಯಮ ದೇಶದ ಎಲ್ಲಾ ಮೆಟ್ರೋ ನಗರಗಳಿಗೂ ಅನ್ವಯವಾಗುತ್ತದೆ. ಬೆಂಗಳೂರು, ಕೋಲ್ಕತ್ತಾ, ಮುಂಬೈ ಹಾಗೂ ಚೆನ್ನೈ ನಗರಗಳಲ್ಲಿನ ಇಂಧನ ಬೆಲೆ…

ಕೋವಿಡ್‌ ಹಳ್ಳಿಗಳೂ ಅವಲಂಬಿತವಾಗಿವೆ –ರಾಹುಲ್ ಗಾಂಧಿ

ನವದೆಹಲಿ10; ಕರೋನಾ ಎರಡನೇ ಅಲೆಯ ಹಟ್ಟಹಾಸ ನಗರಗಳಲ್ಲಷ್ಟೇ ಅಲ್ಲದೆ ಗ್ರಾಮೀಣ ಪ್ರದೇಶದಲ್ಲಿಯೂ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ಆ ದೇವರ ಕರುಣೆಯಿಂದಲೇ ಇಂದು ನಗರ ಮತ್ತು ಹಳ್ಳಿಗಳು ಉಳಿದಿವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಚಾಟಿಬೀಸಿದಂತಿದೆ. ಭಾರತದ ಹಳ್ಳಿಗಳಲ್ಲಿಯೂ COVID-19 ಪ್ರಕರಣಗಳು ಶೀಘ್ರವಾಗಿ ಹಬ್ಬುತ್ತಿರುವುದರ ಬಗ್ಗೆ ಟ್ವಿಟರ್‌ನಲ್ಲಿ ಮಾಧ್ಯಮಯೊಂದರ ವರದಿಯನ್ನು ಉಲ್ಲೇಖಿಸಿದ ಅವರು ನಗರಗಳ ನಂತರ ಈಗ ದೇಶದ ಹಳ್ಳಿಗಳೂ ದೇವರ ಮೇಲೆ ಅವಲಂಬಿತವಾಗಿವೆ (ಪರಮಾತ್ಮ ನಿರ್ಭರ್) ಎಂದು ರಾಹುಲ್ ಗಾಂಧಿ ಟ್ವೀಟ್…

Girl in a jacket