Girl in a jacket

Daily Archives: May 28, 2021

ಕೊರೊನಾ ಸೋಂಕಿಗೆ ಹೆತ್ತವರ ಕಳೆದುಕೊಂಡ ಅನಾಥ ಮಕ್ಕಳಿಗೆ ತಕ್ಷಣ ಪರಿಹಾರ ನೀಡಲು ಸುಪ್ರೀಂ ಸೂಚನೆ

ನವದೆಹಲಿ,ಮೇ,28:ಕೊರೊನಾ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ಅನಾಥವಾಗಿರುವ ಮಕ್ಕಳಿಗೆ ತಕ್ಷಣವೇ ಪರಿಹಾರ ನೀಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಎಲ್‌.ಎನ್. ರಾವ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ರಜಾ ಪೀಠವು, ಸಾಂಕ್ರಾಮಿಕ ರೋಗದಿಂದ ಹೆತ್ತವರನ್ನು ಕಳೆದುಕೊಂಡ ಅನಾಥ ಮಕ್ಕಳನ್ನು ಗುರುತಿಸಿ, ಅವರ ಬಗೆಗಿನ ಸಮಗ್ರ ಮಾಹಿತಿಯನ್ನು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್) ‘ಬಾಲ್ ಸ್ವರಾಜ್’ ವೆಬ್‌ಸೈಟ್‌ಗೆ ಶನಿವಾರ ಸಂಜೆಯೊಳಗೆ ಅಪ್‌ಲೋಡ್ ಮಾಡಬೇಕು ಎಂದು ಆಯಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದೆ. ‘ಮಹಾರಾಷ್ಟ್ರದಲ್ಲಿ ಕೋವಿಡ್‌ನಿಂದಾಗಿ 2,900ಕ್ಕೂ…

ಒಲಂಪಿಕ್‌ನಲ್ಲಿ ಆಡುವ ಅವಕಾಶ ಕಳೆದುಕೊಂಡ ಸೈನಾ

ನವದೆಹಲಿ,ಮೇ,೨೮: ಒಲಂಪಿಕ್ ನಲ್ಲಿ ಆಡುವ ಕನಸು ಹೊತ್ತಿದ್ದ ಕದಂಬಿ ಶ್ರೀಕಾಂತ್ ಕೊರೊನಾ ಹಿನ್ನಲೆಯಲ್ಲಿ ರ‍್ಯಾಂಕಿಂಗ್‌ನಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಇಂದು ವಿಶ್ವಬ್ಯಾಡ್ಮಿಂಟನ್‌ಫೆಡರೇಷನ್ ರ‍್ಯಾಂಕಿಂಗ್‌ನಲ್ಲಿ ಯಾವುದೆ ಬದಲಾವಣೆ ಇಲ್ಲ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಈ ಇಬ್ಬರು ಈಗ ಒಲಂಪಿಕ್‌ನಲ್ಲಿ ಆಡುವ ಅವಕಾಶವನ್ನು ಕಳೆದುಕೊಂಡಿದ್ದಾರೆ. ಕಿದಂಬಿ ಶ್ರೀಕಾಂತ್ ಮತ್ತು ಸೈನಾ ನೆಹ್ವಾಲ್ ನಿರೀಕ್ಷೆಯಿಂದ ಕಾಯುತ್ತಿದ್ದರು.ಟೋಕಿಯೊ ಒಲಿಂಪಿಕ್ಸ್‌ನ ಅರ್ಹತಾ ಅವಧಿ ಜೂನ್ ೧೫ರಂದು ಮುಕ್ತಾಯಗೊಳ್ಳಲಿದೆ. ಆದರೆ ಅದಕ್ಕೂ ಮುನ್ನ ಯಾವುದೇ ಟೂರ್ನಿಯನ್ನು ಆಯೋಜಿಸಲಾಗುವುದಿಲ್ಲ. ರ‍್ಯಾಂಕಿಂಗ್‌ನಲ್ಲಿ ಬದಲಾವಣೆಯೂ…

ಬಿಎಸ್‌ವೈ ಸ್ಥಾನಕ್ಕೆ ಬಿಜೆಪಿಯಲ್ಲಿ ಮತ್ತೊಬ್ಬ ಸಮರ್ಥನಾಯಕರೇ ಇಲ್ಲ-ಸಿದ್ದು

ಹುಬ್ಬಳ್ಳಿ,ಮೇ,೨೬: ರಾಜ್ಯದಲ್ಲಿ ಕೊರೊನಾ ನಿರ್ವಹಣೆಯಲ್ಲಿ ಸಂಪೂರ್ಣವಿಫಲರಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಳಗಿಳಿಸಲು ಬಿಜೆಪಿ ಹೈಕಮಾಂಡ್ ಪ್ರಯತ್ನಪಡುತ್ತಿದೆ ಆದರೆ ಅವರ ಸ್ಥಾನಕ್ಕೆ ಮತ್ತೊಬ್ಬ ಸಮರ್ಥನಾಯಕ ಆ ಪಕ್ಷದಲ್ಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಬೀದಿ ಕಾಳಗ ನಡೆಯುತ್ತಿದೆ. ಅವರ ಪಕ್ಷದ ಶಾಸಕರೇ ಯಡಿಯೂರಪ್ಪ ವಿರುದ್ಧವಾಗಿ ಮಾತನಾಡಿದ್ದಾರೆ.ನಾಯಕತ್ವ ಬದಲಾವಣೆಯಾದ ತಕ್ಷಣ ಸರ್ಕಾರ ಹೋಗುತ್ತದೆ ಎಂದು ಅಂದುಕೊಳ್ಳುವುದಿಲ್ಲ, ಅಲ್ಲಿ ಸಮರ್ಥ ಬದಲಿ…

ಓಟಿಟಿಯಲ್ಲಿ ಹೆಚ್/೩೪ ಪಲ್ಲವಿ ಟಾಕೀಸ್ ಚಿತ್ರ ಬಿಡುಗಡೆ

ನಿಧಾನವಾಗಿ ಕನ್ನಡ ಚಿತ್ರೋದ್ಯಮವು ಓಟಿಟಿ ಕಡೆಯೇ ಹೆಚ್ಚು ಗಮನಹರಿಸುತ್ತಿವೆ ಏಕೆಂದರೆ ಕೊರೊನಾ ಅಟ್ಟಹಾಸದಿಂದ ಆಗಿರುವ ತೊಂದರೆಗಳಿಗೆ ಈಗ ಚಿತ್ರದ್ಯೋದ್ಯಮ ಓಟಿಟಿ ವೇದಿಕೆ ಮೂಲಕ ಜನರಿಗೆ ಮನೋರಂಜನೆ ನೀಡಲು ಸಿದ್ದವಾಗಿವೆ. ಹೌದು ಕನ್ನಡದ ಹಲವಾರು ಚಿತ್ರಗಳು ಈಗಾಗಲೇ ಓಟಿಟಿ ವೇದಿಕೆಗೆ ತೆರಳಿವೆ ಕೆಲವು ಅತ್ತ ಮುಖಮಾಡಿವೆ ಈಗ ಹೆಚ್/೩೪ ಪಲ್ಲವಿ ಟಾಕೀಸ್ ಕೂಡ ಓಟಿಟಿ ವೇದಿಕೆ ಮೂಲಕವೇ ಬಿಡುಗಡೆಯಾಗಲಿದೆ. ಕನ್ನಡದ ಖ್ಯಾತ ನಟರಾದ ತಿಲಕ್ ಮತ್ತು ಯಜ್ಞಾ ಶೆಟ್ಟಿ ಜೊತೆಯಾಗಿ ನಟಿಸಿರುವ ಈ ಚಿತ್ರ ಸದ್ಯದಲ್ಲೇ ಓಟಿಟಿಯಲಿ ಈ…

ಮಕ್ಕಳಲ್ಲೂ ಕೊರೊನಾ ಸೋಂಕು ದೃಡ

ಬೆಂಗಳೂರು,ಮೇ,೨೮: ಕೊರೊನಾ ಸೋಂಕು ಈಗ ಮಕ್ಕಳಲ್ಲೂ ತಗಲುತ್ತಿರುವ ಅಘಾತಕಾರಿ ಸುದ್ದಿ ಹೊರಬಿದ್ದಿದೆ ,ರಾಜ್ಯಾದ್ಯಂತ ಹಲವು ಕಡೆ ಈಗ ಮಕ್ಕಳಿಗೂ ಈ ಸೋಂಕು ಹರಡುವ ಬಗ್ಗೆ ಕೆಲವುಕಡೆ ಈಗಾಗಲೇ ದೃಡಪಟ್ಟಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದು ದೃಡಪಟ್ಟಿದ್ದು ಇಲ್ಲಿಯವರೆಗೂ ೧೩೫೦ ಮಕ್ಕಳಿಗೆ ಕೊರೊನಾ ಸೋಮಕು ತಗುಲಿರುವುದು ಪರೀಕ್ಷೆಯಿಂದ ಸಾಭೀತಾಗಿದೆ ಈ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶ್ರೀನಿವಾಸ್ ಅಧಿಕೃತ ಮಾಹಿತಿ ನೀಡಿದ್ದಾರೆ. ಸದ್ಯ ಜಿಲ್ಲೆಯಲ್ಲಿ ೨೫೦ ಮಕ್ಕಳಿಗೆ ಸೋಂಕು ಸಕ್ರಿಯವಾಗಿದ್ದು, ಕೊವಿಡ್ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಅಪಾಯವೆಂದು…

ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆಯೇ ವೇಶ್ಯಾವಾಟಿಕೆ ದಂಧೆ ಕಿಂಗ್ ಪಿನ್?

ಬೆಂಗಳೂರು,ಮೇ,೨೮: ರಾಮಮೂರ್ತಿ ನಗರದಲ್ಲಿ ನಡೆದ ಯುವತಿಯ ಮೇಲಿನ ಸಾಮೂಹಿಕ ಹತ್ಯಾಚಾರದ ಸಂತ್ರಸ್ತೆ ವೇಶ್ಯಾವಾಟಿಕೆ ದಂಧೆಯೇ ಕಿಂಗ್ ಪಿನ್ ಎನ್ನುವ ಸಂಶಯ ಪೊಲೀಸರಲ್ಲಿ ಕಾಡಿದ್ದು ಆ ನಿಟ್ಟಿನಲ್ಲಿ ಈಗ ತನಿಖೆ ಚುರುಕುಗೊಳಿಸಿದ್ದಾರೆ. ಏಕೆಂದರೆ ಆ ಯುವತಿಯ ಮೇಲೆ ನಡೆದ ಸಾಮೂಹಿಕ ಹತ್ಯಾಚಾರದ ಎರಡು ವೀಡಿಯೋಗಳು ಕೂಡ ವಿಭಿನ್ನವಾಗಿದ್ದು ಇನ್ನೊಬ್ಬ ಮಹಿಳೆಯ ವಿಕೃತಿ ಮೆರೆಯುತ್ತಿದ್ದ ದೃಶ್ಯಗಳು ಒಂದು ರೀತಿ ಮನಕುಲುಕವಂತಿದೆ ಆದರೆ ಇವೆರಲ್ಲರೂ ಕೂಡ ವೇಶ್ಯಾವಾಟಿಕೆಗೆ ಬೆಂಗಳೂರಿಗೆ ಬಂದಿದ್ದು ಎನ್ನುವ ಮಹತ್ತರ ಅಂಶ ಈಗ ಬಯಲಾಗುತ್ತಿದೆ ಸಂತ್ರಸ್ತೆ ಹಾಗೂ ಯುವತಿ…

ಸಿಡಿ ಪ್ರಕರಣದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ-ಬೊಮ್ಮಾಯಿ

ಬೆಂಗಳೂರು, ಮೇ ೨೮: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂದಿಸಿದಂತೆ ಎಸ್‌ಐಟಿ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಿಲ್ಲ ಅಲ್ಲದೆ ಎಸ್‌ಐಟಿ ಮುಖ್ಯಸ್ಥ ಸೋಮೇಂದರ್ ಮುಖರ್ಜಿ ರಜೆ ಮೇಲೆ ತೆರಳಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ ಆರೋಪಿತ ಮಾಜಿ ಸಚಿವರ ಪರವಾಗಿ ಗೃಹ ಸಚಿವರಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದಲ್ಲಿ ಅವರು ಇಷ್ಟು ದಿನ ಬಿಟ್ಟು ಈಗಾ ಮಾತನಾಡಲು ಕಾರಣ ಇದೆ. ಹೈ ಕೋರ್ಟ್ ನಲ್ಲಿ ರಿಟ್…

ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ತುಮಕೂರು, ಮೇ೨೮: ಜಿಲ್ಲೆಯಯಲ್ಲಿ ಎರಡನೇ ಹಂತದ ಕೊರೊನಾ ವೈರಸ್ ಸೋಂಕು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಬೇಕು ಅಧಿಕಾರಿಗಳು ಬೇಜವಾಬ್ದಾರಿಯಾಗಿ ವರ್ತಿಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ಸಭೆ ನಡೆಸಿ,ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು ನಂಚರ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಖಡಕ್ ಎಚ್ಚರಿಕೆ…

ಲಾಸ್ ಎಂಜಲೀಸ್ ಸನ್ ಫಿಲ್ಮ್ ಪೆಸ್ಟ್ ಪ್ರಶಸ್ತಿ ಪಡೆದ ‘ಅಮೃತಮತಿ

ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದ ‘ಅಮೃತಮತಿ ಚಿತ್ರ್ರ ಅಂತರಾಷ್ಟ್ರೀಯಮಟ್ಟದಲ್ಲಿ ಪ್ರದರ್ಶನಗೊಂಡ ಹೆಗ್ಗಳಿಕೆಗೆ ಪಾತ್ರವಾಗಿದ್ದು ಈಗ ಲಾಸ್ ಏಂಜಲೀಸ್ ಸನ್ ಫೀಲ್ಮ್ ಫೆಸ್ಟ್‌ನಲ್ಲಿ ಈ ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಪತ್ರವಾಗಿದೆ. ನಟಿ ಹರಿಪ್ರಿಯ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಚಿತ್ರವು ಸಾಕಷ್ಟು ಅಂತರಾಷಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಅನೇಕ ಪ್ರಶಸ್ತಿಗಳನ್ನು ಗಳಿಸಿಕೊಂಡಿದೆ. ಈ ಚಿತ್ರಕ್ಕೆ ಅಟ್ಲಾಂಟಾ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರಶಸ್ತಿ ಲಭಿಸಿತ್ತು, ಈ ಬಾರಿ ಲಾಸ್ ಏಂಜಲೀಸ್ ಚಿತ್ರೋತ್ಸವದಲ್ಲಿ ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ಚಿತ್ರಕಥೆ…

ಭಾರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ

ನವದೆಹಲಿ,ಮೇ,೨೮: ಕಳೆದ ೨೪ ಗಂಟೆಯಲ್ಲಿ ಭಾರತದಲ್ಲಿ ೧,೮೬,೩೬೪ ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದು ೩,೮೪೭ ಜನ ಸಾವನ್ನಪ್ಪಿದ್ದಾರೆ ಇದರೊಂದಿಗೆ ಕಳೆದ ಎರಡು ದಿನಗಳಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಇಳಿಮುಖ ಕಂಡಿದೆ ಒಂದೇ ದಿನ ೧,೮೬,೩೬೪ ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ೨,೭೫,೫೫,೪೫೭ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೨೩,೪೩,೧೫೨ಕ್ಕೆ ಏರಿಕೆಯಾಗಿದೆ. ಇನ್ನು ಇದೇ ಅವಧಿಯಲ್ಲಿ ೩,೮೪೭ ಮಂದಿ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ ೩,೧೮,೮೯೫ಕ್ಕೆ…

ಕದ್ದುಮುಚ್ಚಿ ಮಾಡುವುದು ಬಿಜೆಪಿ ಸಂಸ್ಕೃತಿ-ಎಚ್‌ಡಿ ಕೆ ವ್ಯಂಗ್ಯ

ಬೆಂಗಳೂರು, ಮೇ ೨೮: ಜಿಂದಾಲ್‌ಗೆ ಕೊಟ್ಟಿದ್ದ ಭೂಮಿಯನ್ನು ವಾಪಾಸ್ ಪಡೆದ ರಾಜ್ಯ ಸರ್ಕಾರದ ಧೋರಣೆಯನ್ನು ವ್ಯಂಗ್ಯಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಿದ ಪಾಪದ ಫಲವನ್ನು ಬಿಜೆಪಿ ಅನುಭವಿಸುತ್ತಿದೆ ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು.ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಮಾಜಿ ಸಿಎಂ ಎಚ್‌ಡಿಕೆ, “”ಜಿಂದಾಲ್ ಕಂಪನಿಗೆ ೩೬೬೭ ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ” ಎಂದಿದ್ದಾರೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು…

ಸಿಡಿ ಪ್ರಕರಣ ಹಳ್ಳ ಹಿಡಿಸಲು ಸಜ್ಜು-ಎಸ್‌ಐಟಿ ಮುಖ್ಯಸ್ಥರ ರಜೆ ಮೇಲೆ ಕಳಿಸಿದ ಸರ್ಕಾರ?

ಬೆಂಗಳೂರು, ಮೇ. ೨೭: ಇನ್ನೇನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ತಾರ್ಕಿಕ ಹಂತಕ್ಕೆ ಬಂದು ತಲುಪಿದ ಸಂದರ್ಭಲ್ಲೇ ಎಸ್‌ಐಟಿ ತನಿಖಾ ತಂಡದ ಮುಖ್ಯಸ್ಥ ಸೌಮೇಂದು ಮುಖರ್ಜಿ ರಜೆ ಮೇಲೆ ತೆರಳಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ನಾನವನಲ್ಲ ನಾನವನಲ್ಲ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ಈಗ ನಾನವನೇ ಎಂದು ಹೇಳುವ ಮೂಲಕ ಈಗ ಈ ಪ್ರಕರಣ ತಾರ್ಕಿಕ ಹಂತಕ್ಕೆ ಬಂದು ನಿಲ್ಲುತ್ತಿದೆ ಎನ್ನುವ ಹೊತ್ತಿಗೆ ಸಮೇಂದು ಮುಖರ್ಜಿಯ ಅವರು ರಜೆ ಮೇಲೆ ಹೋಗಿರುವುದು ಈಗ…

ಸಾಮೂಹಿಕ ಅತ್ಯಾಚಾರ;ನಾಲ್ವರ ಬಂಧನ

ಬೆಂಗಳೂರುಮೇ,28: ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮೂರ್ತಿ ನಗರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದೋಯ್ ಬಾಬು ಮತ್ತು ಹಕೀಲ್ ಎಂದು ಗುರ್ತಿಸಲಾಗಿದೆ. ಘಟನೆ ಬಳಿಕ ಜೀವ ಭಯದಿಂದ ಯುವತಿ ಅಜ್ಞಾತವಾಗಿದ್ದಾಳೆಂದು ತಿಳಿದುಬಂದಿದೆ. ಬಂಧಿತ ಆರೋಪಿಗಳು ಬಾಂಗ್ಲಾದೇಶ ಮೂಲದವರಾಗಿದ್ದು, ಹಲವು ವರ್ಷಗಳಿಂದ ಅಕ್ರಮವಾಗಿ ರಾಮಮೂರ್ತಿ ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಅಲ್ಲದೆ, ಆರೋಪಿಗಳು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದು, ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆ ಹಣವನ್ನು ಕಳ್ಳತನ ಮಾಡಿ ನಾಪತ್ತೆಯಾಗಿದ್ದಾಳೆ.…

ಭಾರತ ರತ್ನ ಸಿ.ಎನ್.ಆರ್.ರಾವ್ ಗೆ ಇನಿ ಅಂತರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು,ಮೇ,28:ಭಾರತ ರತ್ನ ಖ್ಯಾತ ವಿಜ್ಞಾನಿ ಸಿ.ಎನ್.ಆರ್,ರಾವ್ ಅವರಿಗೆ ‘ಇನಿ’ ಅಂತರಾಷ್ಟ್ರೀಯ ಪ್ರಶಸ್ತಿ ದೊರಕಿದೆ. ನವೀಕರಿಸಬಹುದಾದ ಇಂಧನ ಮೂಲಗಳು ಮತ್ತು ಇಂಧನ ಶೇಖರಣೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ನ ಮಹತ್ವದ ಸಾಧನೆಗೆ ಈ ಪ್ರಶಸ್ತಿ ಗೆ ಪಾತ್ರರಾಗಿದ್ದಾರೆ ಎಂದು ಜವಾ ಹರ್ ಲಾಲ್ ನೆಹರೂ ವೈಜ್ಞಾನಿಕ ಸಂಶೋ ಧನಾ ಕೇಂದ್ರದ ಪ್ರಕಟಣೆ ತಿಳಿಸಿದೆ. ಈ ಪ್ರಶಸ್ತಿ ಇಂಧನ ಕೇಂದ್ರದ ಮುಂಚೂಣಿ ಮತ್ತು ಅತ್ಯುನ್ನತ ಪ್ರಶಸ್ತಿಯಾಗಿದ್ದು, ಇಂಧನ ಸಂಶೋ ಧನೆಯ ನೋಬೆಲ್‌ ಪ್ರಶಸ್ತಿ ಎಂದೇ ಪರಿಗಣಿಸಲಾಗುತ್ತದೆ. ಪ್ರೊ.ರಾವ್‌ ಅವರು ಜಲಜನಕ ಆಧಾರಿತ…

ಮನೆ ಗೆದ್ದು ಮಾರು ಗೆಲ್ಲು

ಡಾ ಆರೂಢಭಾರತೀ ಸ್ವಾಮೀಜಿ.ಅಧ್ಯಕ್ಷರು, ಶ್ರೀ ಸಿದ್ಧಾರೂಢ ಮಿಷನ್ ಆಶ್ರಮ, ರಾಮೋಹಳ್ಳಿ. ಸಿದ್ಧಸೂಕ್ತಿ : ಮನೆ ಗೆದ್ದು ಮಾರು ಗೆಲ್ಲು. ಮನೆ ಕುಟುಂಬದ ನೆಲೆ,ಮಾರು ಸಮಾಜ. ನೆಲೆ ಇಲ್ಲದಿರೆ ಬೆಲೆ ಇಲ್ಲ. ಮನುಷ್ಯ ಸಂಬಂಧ-ಸಂಸ್ಕಾರ-ಶಿಕ್ಷಣ ಶುರುವಾಗುವುದು ಮನೆಯಿಂದ. ತಾಯಿಯ ಹಾಲು-ಅನ್ನವನುಂಡು, ನುಡಿ ನಡೆ ಕಲಿಯುವುದು ಇಲ್ಲಿ. ಹಿರಿ ಕಿರಿಯರ ಅನುಭವದ ಪಾಠ ರಸಪಾಕ ಲಬಿಸುವುದು ಇಲ್ಲಿ.ಬೆಚ್ಚನೆಯ ಮನೆಯಿರಲು, ವೆಚ್ಚಕ್ಕೆ ಹೊನ್ನಿರಲು, ಇಚ್ಛೆಯನರಿವ ಸತಿ ಇರಲು ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ. ಮನೆ ಮಾರ ತೊರೆದು ವನವಾಸ ಬೇಡ ಎಂದರು…

Girl in a jacket