Girl in a jacket

Daily Archives: June 15, 2021

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತಷ್ಟು ಇಳಿಮುಖ

ಬೆಂಗಳೂರು,ಜೂ,೧೫:ಲಾಕ್‌ಡೌನ್ ಎಫೆಕ್ಟ್ ಮತ್ತು ಕೊರೊನಾ ನಿಯಂತ್ರಣಕ್ಕೆ ತಗೆದುಕೊಂಡಿರುವ ಕೆಲ ನಿರ್ಧಾರಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಇಳಿಮುಖ ಕಾಣುತ್ತಿದೆ. ಇದರ ಪರಿಣಾಮವಾಗಿ ಮಂಗಳವಾರ ೫,೦೪೧ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ ೨೭,೭೭,೦೧೦ಕ್ಕೆ ಏರಿಕೆಯಾಗಿದೆ. ಕಳೆದ ೨೪ ಗಂಟೆಯಲ್ಲಿ ಮಹಾಮಾರಿಗೆ ೧೧೫ ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ೩೩,೧೪೮ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ೯೮೫ ಮಂದಿಗೆ ಸೋಂಕು ದೃಢಪಟ್ಟಿದ್ದು,…

ಖಾಸಗಿ ಶಾಲೆಗಳ ಶುಲ್ಕವನ್ನುಸರ್ಕಾರ ನಿರ್ಧರಿಸಬೇಕು-ಸಿಎಂಗೆ ಸಿದ್ದು ಪತ್ರ

ಬೆಂಗಳೂರು, ಜೂ.೧೫:ಶೈಕ್ಷಣಿಕ ವರ್ಷ ಆರಂಭವಾಗಿರುವ ಈ ಸಂದರ್ಭದಲ್ಲಿ ಖಾಸಗಿ ಶಾಲೆಗಳ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಪೋಷಕರು ಪಾವತಿಸಬೇಕಾದ ರಿಯಾಯ್ತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಿನ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್ಗಳಿಗೆ ಪಾವತಿಸಬೇಕಾದ…

ಭೂತಾಯಿ ಮಡಿಲು ಸೇರಿದ ಸಂಚಾರಿ ವಿಜಯ್

ಚಿಕ್ಕಮಗಳೂರು,ಜೂ,೧೫: ಬೈಕ್‌ನಲ್ಲಿ ಬಿದ್ದು ಅಫಘಾತಕ್ಕೀಡಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ನಟ ಸಂಚಾರಿ ವಿಜಯ್ ಅವರ ಅಂತ್ಯ ಕ್ರಿಯೇ ಇಂದು ಅವರ ಸ್ವಗ್ರಾಮದಲ್ಲಿ ನೆರವೇರಿತು. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿರುವ ವಿಜಯ್ ಬಾಲ್ಯದ ಸ್ನೇಹಿತ ರಘು ಅವರ ತೋಟದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಿತು. ಕಪ್ಪೂರು ಶ್ರೀಗಳ ನೇತೃತ್ವದಲ್ಲಿ ವಿಜಯ್ ಸಹೋದರನಿಂದ ಅಂತಿಮ ವಿಧಿ-ವಿಧಾನಗಳನ್ನು ನಡೆಸಲಾಯಿತು. ಅಂತ್ಯಕ್ರಿಯೆ ಮೊದಲು ಪೊಲೀಸರು ಮೂರು ಸುತ್ತು ಕುಶಾಲು ತೋಪು ಸಿಡಿಸಿ ಸರ್ಕಾರಿ ಗೌರವ ಸಲ್ಲಿಸಲಾಯಿತು. ಫಿಲಂ ಚೇಂಬರ್ ಬೆಂಗಳೂರಿನಲ್ಲೇ…

ಪಿಜಿಗಳಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಬಿಬಿಎಂಪಿ ಸೂಚನೆ

ಬೆಂಗಳೂರು, ಜೂ, ೧೫:ನಗರದಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಕೆ ಮಾಡುತ್ತಿರುವ ಸರ್ಕಾರ ಈ ವೇಳೆ ಪಿಜಿಯಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಬಿಬಿಎಂಪಿ ಸೂಚಿಸಿದೆ. ಯಾವುದೇ ಕಾರಣಕ್ಕೂ ಪಿಜಿಯಲ್ಲಿ ಇರುವ ಅವಕಾಶ ನೀಡಬಾರದು ಎಲ್ಲರನ್ನೂ ಅವರವರ ಊರುಗಳಿಗೆ ಕಳಿಸಿಕೊಡಿ ಎಂದು ಪಿಜಿ ಮಾಲೀಕರಿಗೆ ಬಿಬಿಎಂಪಿ ನೊಟೀಸ್ ಜಾರಿಮಾಡಿದೆ. ಒಂದು ವೇಳೆ ಅನಿವಾರ್ಯ ಕಾರಣಗಳಿಗಿಂದಾಗಿ ವಿದ್ಯಾರ್ಥಿಗಳನ್ನು ಪಿಜಿಯಲ್ಲಿ ಉಳಿಸಿಕೊಂಡಲ್ಲಿ ಪಿಜಿಯಲ್ಲಿ ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆಯ ಜವಾಬ್ದಾರಿ ಅವರದ್ದೇ ಆಗಿರುತ್ತದೆ. ೧೧೦ ಚದುರ ಅಡಿಯ ಕೊಠಡಿಯಲ್ಲಿ ಇಬ್ಬರಿಗಿಂತ ಹೆಚ್ಚು ಜನರಿಗೆ…

ಶೀಘ್ರ ಕೇಂದ್ರ ಸಚಿವ ಸಂಪುಟ ವಿಸ್ತರಣೆ?

ನವದೆಹಲಿ,ಜೂ,೧೫: ಕೇಂದ್ರ ಸಚಿವ ಸಂಪುಟ ಸದ್ಯದಲ್ಲೇ ವಿಸ್ತರಣೆಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ .ಹೀಗಾಗಿಯೇ ಮೋದಿ ನಿರಂತರ ಸಭೆಗಳನ್ನು ಮಾಡುತ್ತಿದ್ದಾರೆ ಇದೇ ವೇಳೆ ರಾಜ್ಯ ಬಿಜೆಪಿ ಸಂಸದರು ಕೂಡ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಲಿದ್ದಾರೆ. ಕೇಂದ್ರ ಸಚಿವ ಸಂಪುಟದಲ್ಲಿ ಖಾಲಿ ಇರುವ ಮತ್ತು ಕೆಲವರ ಖಾತೆಗಳನ್ನು ಬದಲಾವನೆ ಮಾಡಲಾಗುತ್ತಿದೆ ಹೀಗಾಗಿ ಯಾರಿಗೆ ಯಾವ ಖಾತೆ ದೊರೆಯುತ್ತದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ. ಕೇಂದ್ರದ ಕೆಲವು ಸಚಿವರು ರಾಜೀನಾಮೆ, ನಿಧನದಿಂದ ಕೇಂದ್ರದ ಸಚಿವ ಸ್ಥಾನಗಳು ತೆರವಾಗಿವೆ. ರಾಮ್ ವಿಲಾಸ್ ಪಾಸ್ವಾನ್,…

ಜಗವಿದು ಪರಮಾತ್ಮನ ಸೃಷ್ಟಿ!

ಜಗವಿದು ಪರಮಾತ್ಮನ ಸೃಷ್ಟಿ! ಒಮ್ಮೆ ಸಿದ್ಧನು ಕೆಲವು ಹಡಗರೊಂದಿಗೆ ಒಂದು ತೋಟಕ್ಕೆ ಹೋದನು. ಅಲ್ಲಿ ನೇರಳೆ ಹಣ್ಣಿನ ಗಿಡದ ಕೆಳಗೆ ಬಿದ್ದಿರುವ ಹಣ್ಣಗಳನ್ನು ಕಾಣುತ್ತಲೇ ಹುಡುಗರು ಎಲ್ಲ ಮರೆತು ಹಣ್ಣು ಆಯ್ದು ತಿನ್ನಲಾರಂಭಿಸಿದರು. ಸಿದ್ಧ ನಿಂತು ನೋಡಿ ಆಲೋಚಿಸಿದ. ಈ ಹುಡುಗರಿಗೆ ಬುದ್ಧಿ ಕಲಿಸಬೇಕೆಂದು ಒಂದು ನೇರಳೆ ಹಣ್ಣನ್ನು ಚೆಲ್ಲಿದನು.ಅಲ್ಲಿ ನೇರಳೆ ಹಣ್ಣಿನ ರಾಶಿಯೇ ಉಂಟಾಯಿತು! ಹುಡುಗರು ಆ ರಾಶಿಯನ್ನು ಕಂಡು ಧಾವಿಸಿದರು, ಆಶ್ಚರ್ಯಪಟ್ಟರು. ಆಗ ಸಿದ್ಧನು ಹೀಗೆ ಹೇಳಿದನು: ಪರಮಾತ್ಮನ ಲೀಲೆ ಅತಿ ವಿಚಿತ್ರ. ಒಂದೇ…

Girl in a jacket