Girl in a jacket

Daily Archives: June 19, 2021

ಮನೆಯಲ್ಲೇ ಯೋಗ ದಿನ ಆಚರಿಸಿ:ಕೆ.ಸುಧಾಕರ್

ಬೆಂಗಳೂರು, ಜೂ, 19:ಜೂನ್ 21 ರಂದು ಜಗತ್ತಿನಾದ್ಯಂತ ಯೋಗ ದಿನ ಆಚರಿಸುತ್ತಿದ್ದು, ಈ ಬಾರಿ ಎಲ್ಲರೂ ಮನೆಯಲ್ಲೇ ಇದ್ದು ಆಚರಣೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜೂನ್ 21 ರಂದು ಯೋಗ ದಿನವನ್ನು ಆನ್ ಲೈನ್ ನಲ್ಲೇ ಆಚರಿಸಲಾಗುತ್ತಿದೆ. ಬಿ ವಿತ್ ಯೋಗ ಬಿ ಅಟ್ ಹೋಮ್ ಮತ್ತು ಯೋಗ ಫಾರ್ ವೆಲ್ ನೆಸ್ ಎಂಬ ಘೋಷವಾಕ್ಯದಡಿ ಯೋಗ ದಿನ ಆಚರಿಸಲಾಗುತ್ತಿದೆ.…

ಸೋಮವಾರದಿಂದ ಮತ್ತಷ್ಟು ಜಿಲ್ಲೆಗಳಲ್ಲಿ ಅನ್ ಲಾಕ್

ಬೆಂಗಳೂರು, ಜೂನ್ 19: ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ದರವಿರುವ ಜಿಲ್ಲೆಗಳಲ್ಲಿ ಅನ್‌ಲಾಕ್ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿದ್ದಾರೆ. ಲಾಕ್‌ಡೌನ್‌ ಸಡಿಲಿಕೆ ಮಾಡುವ ಸಂಬಂಧ ಶನಿವಾರ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿದ ನಂತರ  ಈ ವಿಷಯ ತಿಳಿದ್ದಾರೆ. ಶೇ.5% ಕ್ಕಿಂತ ಕಡಿಮೆ ಪಾಸಿಟಿವಿಟಿ ದರವಿರುವ ಹದಿನಾರು ಜಿಲ್ಲೆಗಳಲ್ಲಿ ಅನ್‌ಲಾಕ್ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಬಸ್‌ಗಳ ಓಡಾಟಕ್ಕೂ ಸೋಮವಾರದಿಂದ ಅವಕಾಶ…

ಚೇರಂಬಾಣೆ ಸಿದ್ಧಾಶ್ರಮದ ಬೇಬಿತಾಯಿ ಬ್ರಹ್ಮೈಕ್ಯ.

ಬೆಂಗಳೂರು,ಜೂ,19:ಕೊಡಗು ಜಿಲ್ಲೆಯ ಚೇರಂಬಾಣೆಯ ಶ್ರೀ ಸಿದ್ಧಾರೂಢಾಶ್ರಮದ ಶ್ರೀಮಾತೆ ಬೇಬಿತಾಯಿಯವರು (84) ಇಂದು ಬೆಳಿಗ್ಗೆ ಬ್ರಾಹ್ಮೀಮುಹೂರ್ತದಲ್ಲಿ (5.15) ಬ್ರಹ್ಮೈಕ್ಯರಾದರು. ಮಧ್ಯಾಹ್ನಆಶ್ರಮದಲ್ಲಿ ಸಂಪ್ರದಾಯದಂತೆ ಅವರ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಇತ್ತೀಚೆಗೆ ಅವರು ವಯಸ್ಸಹಜ ಕಾಯಿಲೆಯಿಂದ ಬಳಲುತ್ತಿದ್ದರೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಲು ನಿರಾಕರಿಸಿದ್ದರು. 20.11.1936 ರಲ್ಲಿ ಚೇರಂಬಾಣೆ ಬಳಿಯ ಕೊಟ್ಟೂರು ಗ್ರಾಮದ ಶ್ರೀ ಅಚ್ಚಯ್ಯ ಶ್ರೀಮತಿ ಬಿಳ್ಳವ್ವ ದಂಪತಿಗಳಿಗೆ ಜನಿಸಿದ ಇವರು ಬಾಲಬ್ರಹ್ಮಚಾರಿಣಿಯಾಗಿದ್ದರು. ಮೂರು ಜನ ಸಹೋದರ ಐದು ಜನ ಸಹೋದರಿಯರನ್ನು ಹೊಂದಿದ್ದ ಇವರು ತಮ್ಮ ನಲವತ್ತೆರಡನೇ ವಯಸ್ಸಿನಲ್ಲಿ ಚೇರಂಬಾಣೆಯ ಸಿದ್ಧಾರೂಢಾಶ್ರಮಕ್ಕೆ ಸೇರಿಕೊಂಡರು.…

ನಾಯಕತ್ವ ಬದಲಾವಣೆ; ಸಿಎಂಗೆ ದೆಹಲಿಗೆ ಬುಲಾವ್

ಬೆಂಗಳೂರು,ಜೂ.19:ಬಿಎಸ್ ವೈ ನಾಯಕತ್ವ ಗೊಂದಲ ಕುರಿತಂತೆ ದಿನಕ್ಕೊಂದು ರೂಪ ಪಡೆಯುತಗತ್ತಿದ್ದು,ಈಗ ಅದು ದೆಹಲಿ ಹೈಕಮಾಂಡ್ ನ ಅಂಗಳಕ್ಕೆ ತಲುಪಿದೆ. ಹೌದು,ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿನ ಲ್ಲಿ  ಇಲ್ಲಿನ ನಾಯಕರ‌ಜೊತೆ ನಡೆಸಿದ ಸಭೆಯಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಹೈಕಮಾಂಡ್ ತಲುಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ದೆಹಲಿಗೆ ಬರುಂತೆ ದೂರವಾಣಿ ಕರೆ ಮಾಡಿ ತಿಳಿದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಮೂರು ವಿಷಯಗಳ ಬಗ್ಗೆ ಅರುಣ್ ಸಿಂಗ್ ವಿಶೇಷ ಗಮನಹರಿಸಿದ್ದು, ಆ ಪೈಕಿ ಮೊದಲನೆಯದು ಯಡಿಯೂರಪ್ಪ…

ಮೇಕೆದಾಟು ಯೋಜನೆ ಶೀಘ್ರ ಜಾರಿಗೊಳಿಸಿ-ಎಚ್‌ಡಿಕೆ

ಬೆಂಗಳೂರು, ಜೂ.೧೯:ಮೇಕೆ ದಾಟು ಯೋಜನೆಜಾರಿಗೊಳಿಸುವ ಕುರಿಂತೆ ಶೀಘ್ರ ಕೇಂದ್ರ ಸರ್ಕಾರದ ಗಮನಹರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕೇಂದ್ರವೂ ಪರಿಸರ ಅನುಮತಿಯನ್ನು ಶೀಘ್ರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮೇಕೆದಾಟು ಯೋಜನೆ ವಿಚಾರವಾಗಿ ಎನ್‌ಜಿಟಿ ದಕ್ಷಿಣ ಪೀಠ ಆರಂಭಿಸಿದ್ದ ಸ್ವಯಂ ಪ್ರೇರಿತ ವಿಚಾರಣೆಯನ್ನು ಪ್ರಧಾನ ಪೀಠ ಇತ್ಯರ್ಥಪಡಿಸಿದೆ. ಯೋಜನೆಗಿದ್ದ ಅಡ್ಡಿಯೊಂದು ನಿವಾರಣೆಯಾಗಿದೆ. ಈಗ ಕೇಂದ್ರದಿಂದ ಶೀಘ್ರವೇ ಅನುಮತಿ ಪಡೆದು ಯೋಜನೆ ಜಾರಿಗೊಳಿಸುವುದರತ್ತ ರಾಜ್ಯ ಸರ್ಕಾರ ಗಮನಹರಿಸಬೇಕು ಎಂದು ಅವರು…

ನಾಗರಹೊಳೆಯಲ್ಲಿ ಹುಲಿಗಣತಿ ಕಾರ್ಯ ಆರಂಭ

ಮೈಸೂರು,ಜೂ,೧೯: ರಾಜ್ಯದ ಪ್ರತಿಷ್ಠಿತ ಅರಣ್ಯಪ್ರದೇಶವಾದ ನೊಗರಹೊಳೆಯಲ್ಲಿ ಎರಡನೇ ಹಂತದ ಹುಲಿ ಗಣತಿ ಆರಂಭವಾಗಿದೆ. ನಾಗರ ಹೊಳೆ ಅರಣ್ಯದಲ್ಲಿ ಕ್ಯಾಮರಾವನ್ನು ಹಳವಡಿಸಲಾಗಿದ್ದು ಹುಲಿಯ ವಯಸ್ಸು ಮತ್ತು ಲಿಂಗ ಪತ್ತೆಯನ್ನು ಮಾಡಲಾಗುತ್ತದೆ ಎಂದು ವಲಯಾಧಿಕಾರಿ ತಿಳಿಸಿದ್ದಾರೆ. ಕೊರೊನಾ ಹಾವಳಿ ಇರುವುದರಿಂದಾಗಿ ಸ್ವಯಂ ಸೇವಕರಿಗೆ ಅವಕಾಶ ಕಲ್ಪಿಸಲಾಗಿಲ್ಲ. ಒಟ್ಟು ೮೪೦ ಚದರ ಕಿ.ಮೀ ವ್ಯಾಪ್ತಿ ಇರುವ ನಾಗರ ಹೊಳೆ ಅರಣ್ಯ ಗಣತಿ ನಡೆಲಾಗುತ್ತಿದೆ. ಈಗಾಗಲೇ ಹುಲಿ ಗಣತಿ ಕಾರ್ಯಾರಂಭಗೊಂಡಿದೆ. ಪ್ರಥಮ ಹಂತದ ಗಣತಿ ಕಳೆದ ಮೇ ತಿಂಗಳಿನಲ್ಲಿ ಆರಂಭವಾಗಿ ಮುಕ್ತಾಯವಾಗಿತ್ತು. ಇದೀಗ…

ಡಿಸೆಂಬರ್‌ವರೆಗೂ ಜಿಪಂ,ತಾಪಂ ಚುನಾವಣೆ ಇಲ್ಲ-ಈಶ್ವರಪ್ಪ

ದಾವಣಗೆರೆ,ಜೂ,೧೯: ಕೊನಾನಾ ಆತಂಕದ ಹಿನ್ನೆಲಯಲ್ಲಿ ಡಿಸೆಂಬರ್ ವರೆಗೂ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯನ್ನು ನಡೆಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತಂತೆ ಸೋಮವಾರ ನಡೆಯಲಿರುವ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು ಟೆಂಡರ್ ಆರೋಪ ಮುಗಿದು ಹೋಗಿರೋದು. ಇಲಾಖೆಯ ಕಾರ್ಯದರ್ಶಿಗಳು, ಮುಖ್ಯಮಂತ್ರಿ ಸ್ಪಷ್ಟನೆ ನೀಡಿಯಾಗಿದೆ. ಮತ್ತೆ ಕೇಳಬೇಡಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. .ಎಲ್ಲ ಬಡವರಿಗೆ ಉಚಿತ ಪಡಿತರ, ಎಲ್ಲರಿಗೂ ಉಚಿತ ಲಸಿಕೆ ನೀಡುವ ಪ್ರಧಾನಿ…

ವಿಶ್ವ್‌ಟೆಸ್ಟ್ ಚಾಂಪಿಯನ್‌ಶಿಪ್-ಮಳೆಯಿಂದ ರದ್ದು

ಸೌಥ್ಯಾಂಪ್ಟನ್,ಜೂ,೧೯:ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮೊದಲದಿನದಾಟ ಮಳೆಯಿಂದಾಗಿ ರದ್ದಾಗಿದೆ. ಎಡಬಿಡದೆ ಮಳೆ ಸುರಿಯುತ್ತಿರುವ ಕಾರಣ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದ ಮೊದಲ ದಿನದಾಟ ರದ್ದಾಗಿದ್ದು, ಬಿಟ್ಟು ಬಿಟ್ಟು ಆಗಮಿಸುತ್ತಿದ್ದ ಮಳೆಯಿಂದಾಗಿ ಪಂದ್ಯವನ್ನು ಆರಂಭಿಸುವ ಯಾವ ಅವಕಾಶಗಳು ಕೂಡ ಆಯೋಜಕರಿಗೆ ದೊರೆಯಲಿಲ್ಲ. ಟಾಸ್ ಅನ್ನು ಕೂಡ ಪದೇ ಪದೇ ಮುಂದೂಡಲಾಗಿತ್ತು. ನಂತರ ಭಾರತೀಯ ಕಾಲಮಾನ ೭:೨೦ರ ವೇಳೆಗೆ ವಾತಾವರಣವನ್ನು ಪರಿಶೀಲಿಸಿದ ಅಂಪೈರ್ ಗಳು ನಂತರ ಮೊದಲ ದಿನದಾಟವನ್ನು ಅಧಿಕೃತವಾಗಿ ಮುಂದೂಡಿದರು. ನಿಗದಿಯಂತೆ ಭಾರತೀಯ ಕಾಲಮಾನ ಮಧ್ಯಾಹ್ನ ೩ ಗಂಟೆಗೆ…

ನಾಯಕತ್ವ ಬದಲಾವಣೆ ಪ್ರಸ್ತಾಪ ; ಪರೋಕ್ಷ ಒಪ್ಪಿಕೊಂಡ ಈಶ್ವರಪ್ಪ

ದಾವಣಗೆರೆ, ಜೂ, 19:ಬಿಎಸ್ ವೈ ಬದಲಾವಣೆ ಕುರಿತಂತೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜೊತೆ ಮಾತನಾಡಿದ್ದಾರೆ,ಎಂದು ಹೇಳುವ ಮೂಲಕ ಸಿಎಂ ಯಡಿಯೂರಪ್ಪ ವಿರುದ್ಧ ದೂರು ನೀಡಿರುವುದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಪರೋಕ್ಷವಾಗಿ ಒಪ್ಪಿಕೊಂಡರು. ದಾವಣಗೆರೆಯಲ್ಲಿ ಮಾತನಾಡಿದ ಅವರು, “ನಾಯಕತ್ವ ಬದಲಾವಣೆ ವಿಚಾರ ಮುಗಿದ ಅಧ್ಯಾಯ. ರಾಜಕೀಯ ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆ ಇದ್ದೇ ಇರುತ್ತದೆ. ಸಣ್ಣಪುಟ್ಟ ಸಮಸ್ಯೆಗಳ ಬಗ್ಗೆ ಕೂತು ಚರ್ಚಿಸಿದ್ದಾರೆ. ಕುಟುಂಬದ ರೂಪದಲ್ಲಿ ಶಾಸಕರು, ಮಂತ್ರಿಗಳು ಮಾತನಾಡಿದ್ದಾರೆ. ಕೊರೊನಾ ನಿಯಂತ್ರಣ ಬಗ್ಗೆ…

ಹಕ್ಕು ಪತ್ರಕ್ಕಾಗಿ ನಿಲ್ಲದ ಹೋರಾಟ

ರಾಮನಗರ ಜೂ 19: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಈರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಅನ್ ಲಾಕ್ ನಂತರ  ಧರಣಿ ಮತ್ತೆ ಮುಂದುವರೆದಿದೆ. 2006 ರ ಅರಣ್ಯ ಹಕ್ಕು ಕಾಯ್ದೆ ಪ್ರಕಾರ ಸುಮಾರು ಎಂಟು ವರ್ಷಗಳಿಂದ ಅರಣ್ಯ ಭೂಮಿ ಹಕ್ಕುಪತ್ರಕ್ಕಾಗಿ ಹೋರಾಟ ನಡೆಸುತ್ತಾ ಬಂದಿರುವ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಈರುಳಿಗ ಸಮಾಜದ 24 ಕುಟುಂಬಗಳಿಗೆ ಹಂದಿಗೊಂದಿ ಅರಣ್ಯ ಪ್ರದೇಶದಲ್ಲಿ ಒಕ್ಕಲೆಬ್ಬಿಸಿದ ಜಮೀನು ನೀಡದೆ ಅರಣ್ಯ ಇಲಾಖೆ ಕಾನೂನು ಗಾಳಿಗೆ ತೂರಿ…

ಸಿದ್ದಲಿಂಗಯ್ಯ ಸಮಾಜದ ಏಳಿಗೆಗೆ ಶ್ರಮಿಸಿದ ಮಹಾನ್ ವ್ಯಕ್ತಿ: ಕೆ. ಶೇಷಾದ್ರಿ.

ರಾಮನಗರ ಜೂ 19: ಸಮಾಜದ ಎಲ್ಲ ವರ್ಗಗಳ ಏಳಿಗೆಗೆ ಶ್ರಮಿಸಿದ ಹಾಗೂ ತಮ್ಮ ಕವಿತೆಗಳಿಂದ ಜನರಿಗೆ ಸರಿಯಾದ ಮಾರ್ಗ ತೋರಿಸುವ ಮೂಲಕ ಜನಮಾನಸದಲಿ ಶಾಶ್ವತವಾಗಿ ಉಳಿದ ಅದರ್ಶ ವ್ಯಕ್ತಿ ಡಾ.ಸಿದ್ದಲಿಂಗಯ್ಯ ಎಂದು ಮಾಜಿ ನಿಗಮ ಮಂಡಳಿ ಅಧ್ಯಕ್ಷ ಹಾಗೂ ಹಾಲಿ ನಗರಸಭಾ ಅಧ್ಯಕ್ಷ ಕೆ ಶೇಷಾದ್ರಿ ಹೇಳಿದರು. ನಗರದ ಐಜೂರು ವೃತ್ತದಲ್ಲಿ ಸಿದ್ದಲಿಂಗಯ್ಯರವರಿಗೆ ಏರ್ಪಡಿಸಿದ್ದ ನುಡಿ ನಮನ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಸಿದ್ದಲಿಂಗಯ್ಯರವರು ಬಹಳ ಸರಳವಾಗಿ ತಮ್ಮ ಬದುಕನ್ನು ಕಟ್ಟಿಕೊಂಡ ಜೀವನ ನಡೆಸುತ್ತಿದ್ದರು…

ಕ್ಷಮಿಸು ಭುವನೇಶ್ವರಿ..

ಎನ್.ಸಿ. ಶಿವಪ್ರಕಾಶ್,ಮಸ್ಕತ್,ಒಮಾನ್ ಕ್ಷಮಿಸು ಭುವನೇಶ್ವರಿ.. ಊಳಿಡುತಿಹಳು ಭೂರಮೆ ಕಳಚಿ ಕೇಳು ನಿನ್ನ ಗರಿಮೆ ಹೆತ್ತ ತಾಯ ಕರುಳ ಸಂಕಟ ಅರಿಯದಾದೆ ನೀ ಮಾನವಮರ್ಕಟ ಜಗದದಾಹ ಹಿಂಗಿಸಲು ಭಗೀರಥಿಗೆ ಒಡಲಾದೆ ಹಸಿವಭರಿಸೆ ನೀ ಹೊತ್ತೆ ಬವಣೆಗಳ ಬೀಡೆ ಋತುಗಳ ರಂಗೋಲಿಗೆ ಜೀವರಂಗು ತುಂಬಿದೆ ಮೇಲೊಂದು ಮಳೆಯಬಿಲ್ಲನಿಡೆ ನಾಕವದು ಧರೆಯಲಿ ಅವತರಿಸಿದೆ ಸಾಗರ ಬ್ರಹ್ಮಾಂಡದಚ್ಚರಿ ಗೌರಿಶಂಕರ ಔನತ್ಯದ ಪರಧಿ ಕೆಳಗೆ ಹಸಿರು, ಮೇಲೆ ನೀಲಿ ಅನನ್ಯ ಸೊಬಗಿಗೆ ಕುಂದಣ ಹಕ್ಕಿಪಿಕ್ಕಿ ಚಿಲಿಪಿಲಿ ಉಸಿರನಿಟ್ಟೆ, ಜೀವವೈವಿಧ್ಯ ಸೃಜಿಸಿದೆ ಒಲವನಿಟ್ಟೆ, ಸರ್ವಸಾಂಗತ್ಯ ಬಯಸಿದೆ…

ಮೇಕೆದಾಟು ಯೋಜನೆಗೆ ರಾಜ್ಯಕ್ಕೆ ಮುನ್ನಡೆ

ಬೆಂಗಳೂರು, ಜೂ,19:ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರೀಯ ಹಸಿರು ಪೀಠ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಮುನ್ನಡೆಯಾಗಿದ್ದಯ ಶೀಘ್ರ ಕಾಮಗಾರಿ ಸಲ್ಲಿಸಲು ಸರ್ಕಾರ ಯೋಜನೆ ರೂಪಿಸಲು ತಯಾರಿ ನಡೆಸಿದೆ. ರಾಜ್ಯ ಸರ್ಕಾರ ಅರಣ್ಯ ಇಲಾಖೆಯ ನಿರಾಕ್ಷೇಪಣಾ ಪತ್ರ ಪಡೆಯದೆ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಮುಂದಾಗಿದೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಿದ ರಾಷ್ಟ್ರೀಯ ಹಸಿರು ಪ್ರಾಧಿಕಾರ ಈ ಸಂಬಂಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಪ್ರಕರಣವನ್ನು ಇತ್ಯರ್ಥಗೊಳಿಸಿದೆ. “ಜಲಾಶಯ ನಿರ್ಮಾಣ ವಿವಾದ ಸುಪ್ರೀಂಕೋರ್ಟ್…

Girl in a jacket