Girl in a jacket

Daily Archives: June 20, 2021

ಬಳ್ಳಾರಿಯಲ್ಲಿ ಮತ್ತೆ ಅಕ್ರಮ ಅದಿರು ಸಾಗಾಟ;೨೦ ಲಾರಿಗಳ ವಶ

ಬಳ್ಳಾರಿ,ಜೂ,೨೦: ಮತ್ತೇ ಗಣಿನಾಡಿನಲ್ಲಿ ಅಕ್ರಮ ಗಣಿಗಾರಿಕೆ ಶುರುವಾಗಿದೆ. ಈ ಸಂಬಂಧ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಅಕ್ರಮ ಅದಿರು ಸಾಗಾಟದ ೨೦ಕ್ಕೂ ಹೆಚ್ಚು ಲಾರಿಗಳನ್ನು ಬಳ್ಳಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಗಣಿನಾಡು ಬಳ್ಳಾರಿ ಅಂದರೆ ಅಕ್ರಮ ಗಣಿಗಾರಿಕೆ, ಅಕ್ರಮ ಗಣಿ ಸಾಗಾಟ ಎನ್ನುವುದು ಇಡೀ ದೇಶಕ್ಕೇ ಸಾರಿತು. ಮಾಜಿ ಸಚಿವ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಲುಕಿಕೊಂಡು ಸಿಬಿಐ ತನಿಖೆ ಆರಂಭಿಸಿದ ಬಳಿಕ ಸುಪ್ರೀಂ ಕೋರ್ಟ್ ಗಣಿ ರಪ್ತಿಗೆ ನಿಷೇಧ ಹೇರಿತ್ತು. ಪ್ಲಾಂಟ್ ಇದ್ದವರಿಗೆ ಗಣಿಗಾರಿಕೆ ಮಾತ್ರ…

ಕ್ಲೋಜರ್ ಕಾಮಗಾರಿ ಟೆಂಡರ್ ರದ್ದುಗೊಳಿಸದಿದ್ದರೆ ಧರಣಿ;ಎಚ್ಚರಿಕೆ

ಆಲಮಟ್ಟಿ,ಜೂ,20: ಲಾಲಬಹದ್ದೂರಶಾಸ್ತ್ರಿ ಜಲಾಶಯ ವ್ಯಾಪ್ತಿಯ ಕಾಲುವೆಗಳಿಗೆ ಕರೆಯಲಾದ ಕ್ಲೋಜರ್ ಮತ್ತು ವಿಶೇಷ ದುರಸ್ತ ಕಾಮಗಾರಿಗಳ ಟೆಂಡರ್ ರದ್ದುಗೊಳಿಸಬೇಕು. ಇಲ್ಲದಿದ್ದರೆ ಕೊವಿಡ್-೧೯ನಿಯಮ ಸಡಿಲಿಕೆಯಾದ ನಂತರ ಅನಿರ್ಧಿಷ್ಟ ಧರಣಿ ಉಪವಾಸ ಸತ್ಯಾಗ್ರಹ ನಡೆಸಲಾಗುವದು ಎಂದು ಅಖಂಡ ಕರ್ನಾಟಕ ರೈತಸಂಘದ ಜಿಲ್ಲಾ ಪ್ರಧಾನಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು. ಆಲಮಟ್ಟಿಯಲ್ಲಿರುವ ಕೆಬಿಜೆನ್ನೆಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಅಖಂಡಕರ್ನಾಟಕ ರೈತಸಂಘದ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಿ ಮಾತನಾಡಿದ ಅವರು ಕ್ಲೋಜರ್ ಹಾಗೂ ವಿಶೇಷ ದುರಸ್ತಿ ಕಾಮಗಾರಿಗಳನ್ನು ಬೇಸಿಗೆಯಲ್ಲಿ ಟೆಂಡರ್ ಕರೆದು ಮಳೆಗಾಲಕ್ಕೂ ಮುಂಚೆ ಕಾಮಗಾರಿಗಳನ್ನು ಮುಗಿಸಿ…

ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಆಲಮಟ್ಟಿ,ಜೂ,20:ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಮುಂದುವರೆದಿದೆ. ಗರಿಷ್ಠ ೫೧೯.೬೦ ಮೀಟರ್ ಎತ್ತರದಲ್ಲಿ ೧೨೩.೦೮೧ ಟಿಎಂಸಿ ಆಲಮಟ್ಟಿ ಜಲಾಶಯದಲ್ಲಿ ಭಾನುವಾರ ಬೆಳಗ್ಗೆ ೫೧೩.೫೬ ಮೀಟರ್ ಎತ್ತರದಲ್ಲಿ ೫೧.೪೦೭ ಟಿಎಂಸಿ ನೀರು ಸಂಗ್ರಹವಾಗಿದ್ದರೆ ಒಳಹರಿವಿನ ಪ್ರಮಾಣ ೧೫೦೭೫೦ ಕ್ಯೂಸೆಕ್ ಇತ್ತು. ಸಂಜೆ ೬ಕ್ಕೆ ೫೧೪.೧೯ ಮೀಟರ್ ಎತ್ತರದಲ್ಲಿ ೫೬.೧೮೮ ಟಿಎಂಸಿ ನೀರು ಸಂಗ್ರಹವಾಗಿತ್ತು ಆಗ ಒಳಹರಿವಿನ ಪ್ರಮಾಣ ೧೩೧೯೪೪ ಕ್ಯೂಸೆಕ್‌ನಷ್ಟಿತ್ತು. ಮಹಾರಾಷ್ಟ್ರದ ಮಹಾಬಳೇಶ್ವರದಲ್ಲಿ ೬೪ ಎಂಎಂ, ಕೊಯ್ನಾದಲ್ಲಿ ೪೫ ಎಂಎಂ, ನಾವಜಾದಲ್ಲಿ ೬೩…

ಶೈಲಜಾ ಟೀಚರ್ ಗೆ ಯುರೋಪಿಯನ್ ಓಪನ್ ಸೊಸೈಟಿ ಪ್ರಶಸ್ತಿ

ತಿರುವನಂತಪುರಂ,ಜೂ,29: ಕೇರಳ ಸರ್ಕಾರದ ಮಾಜಿ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಅವರು ಸಮುದಾಯ ಆರೋಗ್ಯ ಸೇವೆಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಪ್ರತಿಷ್ಟಿತ ಸೆಂಟ್ರಲ್ ಯುರೋಪಿಯನ್ ಯೂನಿವರ್ಸಿಟಿಯ ‘ಓಪನ್ ಸೊಸೈಟಿ‘ ಪ್ರಶಸ್ತಿ ದೊರಕಿದೆ. ಇತ್ತೀಚೆಗೆ ವರ್ಚುವಲ್ ಮೂಲಕ ನಡೆದ ಯೂನಿವರ್ಸಿಟಿಯ 30 ನೇ ಪದವಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ. 1994 ರಲ್ಲಿ ತತ್ವಶಾಸ್ತ್ರಜ್ಞ ಸರ್ ಕಾರ್ಲ್ ಪಾಪರ್ ಅವರಿಗೆ ‘ಓಪನ್ ಸೊಸೈಟಿ‘ಯ ಮೊದಲ ಪ್ರಶಸ್ತಿ ಸಂದಿತ್ತು. ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ವಿವಿಯ ಅಧ್ಯಕ್ಷ ಮಿಚೆಲ್…

ಕನ್ನಡಕ್ಕಾಗಿರುವ ಅನ್ಯಾಯವನ್ನು ತಾಕತ್ತಿದ್ದರೆ ಬಿಜೆಪಿ ಸಂಸದರು ಸರಿಪಡಿಸಲು ಎಚ್ ಡಿಕೆ ಸವಾಲು

ಬೆಂಗಳೂರು, ಜೂ.20: ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿಯಾಗಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ಬಿಜೆಪಿ ತಾಕತ್ತಿದ್ದರೆ ಸರಿಪಡಿಸಲಿ ಎಂದು ಸವಾಲು ಹಾಕಿದ್ದಾರೆ. ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು…

ಚುನಾವಣೆಗೂ ಮುನ್ನವೆ ಕಾಂಗ್ರಸ್ ನಲ್ಲಿ ಸಿಎಂ ಸ್ಥಾನಕ್ಕೆ ಕಿತ್ತಾಟ;ಈಶ್ವರಪ್ಪ ಲೇವಡಿ

ಶಿವಮೊಗ್ಗ,ಜೂ,20:ಕಾಂಗ್ರೆಸ್ ನಲ್ಲಿ ಈಗಲೇ ಸಿಎಂ ಸ್ಥಾನಕ್ಕಾಗಿ ಕಿತ್ತಾಟ ಶುರುವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಗುಂಪಿನ ನಡುವೆ ಕಿತ್ತಾಟ ನಡೆಯುತ್ತಿದೆ. ಮೊದಲು ಚುನಾವಣೆಯಲ್ಲಿ ಗೆದ್ಧು ಶಾಸಕರಾಗಿ ಬರಲಿ. ನಂತರ ಸಿಎಂ ಸ್ಥಾನದ ಬಗ್ಗೆ ಕಾಂಗ್ರೆಸ್ ನವರು ಕಿತ್ತಾಡಲಿ ಎಂದು ಟಾಂಗ್ ನೀಡಿದರು. ಸಿದ್ಧರಾಮಯ್ಯ ಕ್ಷೇತ್ರ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎಸ್…

ಅಪ್ಪಂದಿರ ದಿನವನ್ನು ವಿಶೇಷವಾಗಿ ಸಂಭ್ರಿಸಿದ ಗೂಗಲ್

ಇಂದು ಅಪ್ಪಂದಿರ ದಿನಾಚರಣೆ ಈ ಸಂದರ್ಭದಲ್ಲಿ ಗೂಬಲ್ ಇದನ್ನು ವಿಶೇಷವಾಗಿ ಸಂಭ್ರಮಿಸಿದೆ. ಬಣ್ಣ ಬಣ್ಣದ ಅಲಂಕಾರದ ಜತೆ ಡೂಡಲ್ ಮೂಲಕ ಅಪ್ಪಂದಿರ ದಿನದ ಶುಭಾಶಯ ತಿಳಿಸಿದೆ. ಡೂಡಲ್‌ನೊಂದಿಗೆ ವಿಶೇಷವಾಗಿ ‘ಅಪ್ಪಂದಿರ ದಿನದ ಶುಭಾಶಯಗಳು’! ಎಂದು ಸಂದೇಶ ಸಾರುವ ಮೂಲಕ ಗೂಗಲ್ ಶುಭಕೋರಿದೆ. ಅನಿಮೇಟೆಡ್? ಡೂಡಲ್ ರಚಿಸುವ ಮೂಲಕ ಗೂಗಲ್ ಶುಭಾಶಯ ತಿಳಿಸಿದೆ ಕೊರೊನಾ ವೈರಸ್ ಹಾವಳಿಯಿಂದಾಗಿ ಕಳೆದ ವರ್ಷದಂತೆಯೇ ಈ ವರ್ಷವೂ ಕೂಡಾ ಹೆಚ್ಚು ವಿಜೃಂಭಣೆಯಿಂದ ಅಪ್ಪಂದಿರ ದಿನವನ್ನು ಆಚರಿಸಲಾಗುತ್ತಿಲ್ಲ. ಹೆಚ್ಚಿನ ಜನರು ಗ್ರೀಟಿಂಗ್ ಕೊಡುವ ಮೂಲಕ…

ಅತ್ಯಾಚಾರ ಆರೋಪ;ತಮಿಳುನಾಡು ಮಾಜಿ ಸಚಿವ ಮಣಿಕಂದನ್ ಬಂಧನ

ಬೆಂಗಳೂರು,ಜೂ.೨೦: ಎಐಡಿಎಂಕೆ ಪಕ್ಷದ ಮಾಜಿ ಸಚಿವ ಮಣಿಕಂದನ್ ಅವರನ್ನು ಅತ್ಯಾಚಾರ ಆರೋಪದ ಮೇಲೆ ಇಂದು ಬೆಂಗಳೂರಿನಲ್ಲಿ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಆರೋಪ ಹೊತ್ತಿರುವ ಮಾಜಿ ಸಚಿವ ಮಣಿಕಂದನ್ ತಲೆಮರೆಸಿಕೊಂಡಿದ್ದರು ಎನ್ನಲಾಗಿದ್ದು ತಮಿಳುನಾಡು ಪೊಲಿಸರು ಅವರ ಬಂಧನಕ್ಕೆ ಬಲೆ ಬೀಸಿದ್ದರು ಇಂದು ಬೆಂಗಳೂರಿನಲ್ಲಿ ಇರುವುದು ಖಾತ್ರಿಯಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿದ್ದಾರೆ ಆರೋಪಿ ಮಣಿಕಂದನ್ ಮಲೇಷ್ಯಾ ಮೂಲದ ನಟಿ ಮೇಲೆ ಅತ್ಯಾಚಾರ ಎಸಗಿದ್ದರು ಎಂಬ ಆರೋಪ ಕೇಳಿ ಬಂದಿದೆ. ೨೦೧೭ರಲ್ಲಿ ಮಣಿಕಂದನ್ ಐಟಿ ಸಚಿವರಾಗಿದ್ದಾಗ ನಟಿಯ ಪರಿಚಯವಾಗಿತ್ತು. ಮಲೇಷಿಯಾದಲ್ಲಿ…

‘ವಿಕ್ರಾಂತ್ ರೋಣ’ ಶೀಘ್ರ ಬಿಡುಗಡೆಗೆ ಸಜ್ಜು

ಸುದೀಪ್ ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ ಇನ್ನೊಂದು ಹಾಡಿನ ಚಿತ್ರೀಕರಣ ಬಾಕಿಯಿದ್ದು ಕೊರೊನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಾಕಿಯಿರಿರುವ ಡಬ್ಬಿಂಗ್ ಮುಂದುವರೆಸಲು ಚಿತ್ರತಂಡ ಮುಂದಾಗಿದೆ. ಚಿತ್ರದಲ್ಲಿನ ಹಲವು ಕಲಾವಿದರು ಈಗಾಗಲೇ ಡಬ್ಬಿಂಗ್ ನಲ್ಲಿ ನಿರತರಾಗಿದ್ದು ಇದೀಗ ನಾಯಕ ಕಿಚ್ಚ ಸುದೀಪ್ ಮುಂದಿನ ವಾರದಿಂದ ಡಬ್ಬಿಂಗ್ ಆರಂಭಿಸಲಿದ್ದಾರೆ ಎಂದು ತಿಳಿದುಬಂದಿದೆ. ಆಕ್ಷನ್-ಸಾಹಸ ಪ್ರಧಾನ ಚಿತ್ರವಾಗಿರುವ ವಿಕ್ರಾಂತ್ ರೋಣ ಶಾಲಿನಿ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿದ್ದು ಮಂಜುನಾಥ್ ಗೌಡ ಬಂಡವಾಳ ಹೂಡಿದ್ದಾರೆ. ರಂಗಿತರಂಗ ಖ್ಯಾತಿಯ ಅನೂಪ್ ಭಂಡಾರಿ ಅವರ ನಿರ್ದೇಶನ.…

೭ನೇ ಅಂತರಾಷ್ಟ್ರೀಯ ಯೋಗದಿನ ನಾಳೆ-ಮೋದಿ ಭಾಷಣ

ನವದೆಹಲಿ,ಜೂ,೨೦: ಅಂತರಾಷ್ಟ್ರೀಯ ಯೋಗ ದಿನದ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಳಿಗ್ಗೆ ನಡೆಯುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಏಳನೇ ಅಂತರಾಷ್ಟ್ರೀಯ ಯೋಗದಿನವಾಗಿದ್ದು ಕೋವಿಡ್-೧೯ ಹಿನ್ನೆಯಲ್ಲಿಯಲ್ಲಿ ಯೋಗದಿನದ ಪ್ರಧಾನ ಸಮಾರಂಭ ಬೆಳಿಗ್ಗೆ ೬.೧೫ಕ್ಕೆ ಆರಂಭವಾಗಲಿದ್ದು ಈ ಸಮಾರಂಭದಲ್ಲಿ ಮೋದಿ ಭಾಷಣ ಮಾಡಲಿದ್ದು ಇದರ ನೇರಪ್ರಸಾರವನ್ನು ದೂರದರ್ಶನ ತನ್ನ ಎಲ್ಲಾ ವಾಹಿನಿಗಳಲ್ಲಿ ಪ್ರಸಾರ ಮಾಡಲಿದೆ ಕೇಂದ್ರ ಆಯುಷ್ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಸಹ ಭಾಷಣ ಮಾಡಲಿದ್ದಾರೆ. ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯಲ್ಲಿ ನಡೆಯಲಿರುವ…

ಪ್ರಾಮಾಣಿಕತೆ ಮತ್ತು ಬದುಕಿನ ಹಾದಿ…

ಪ್ರಾಮಾಣಿಕತೆ ಮತ್ತು ಬದುಕಿನ ಹಾದಿ… ಅದು 1996ರ ಏಪ್ರಿಲ್ ಮಾಸ. ಜೆ. ಸಿ. ರಸ್ತೆಯಲ್ಲಿರುವ ಕೆನರಾಬ್ಯಾಂಕ್ ಪ್ರಧಾನಕಚೇರಿಯವರು ಗ್ರಾಮೀಣ ಭಾಗಗಳಲ್ಲಿ ತಾಂತ್ರಿಕ ಅಭಿವೃದ್ದಿಯನ್ನ ಹೇಗೆ ಕಾರ್ಯಗತಗೊಳಿಸಬಹುದು ಎನ್ನುವುದರ ಕುರಿತು ಮೂರು ದಿನಗಳ ಒಂದು ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದರು. ಬೆಂಗಳೂರು ಮೂಲದ ಎಲ್ಲಾ ದೊಡ್ಡ ಕಂಪನಿಗಳ ಪ್ರತಿನಿಧಿಗಳನ್ನೂ ಕಾರ್ಯಾಗಾರಕ್ಕೆ ಆಹ್ವಾನಿಸಿದ್ದರು. ನಾನು ಮತ್ತು ನನ್ನ ಹಿರಿಯ ಸಹೋದ್ಯೋಗಿ ಜೈನ್ ಈ ಕಾರ್ಯಾಗಾರದಲ್ಲಿ ನಮ್ಮ ಕಂಪನಿಯ ಪ್ರತಿನಿಧಿಗಳು ಎಂದು ನಾಮಕರಣ ಮಾಡಲ್ಪಟ್ಟಿದ್ದೆವು. ಕಂಪನಿಯವತಿಯಿಂದ ಕಾರ್ಯಾಗಾರಕ್ಕೆ ಬಂದ ಎಲ್ಲಾ ಪ್ರತಿನಿಧಿಗಳಿಗೆ ಸಣ್ಣ…

ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿರಾಟ್ ನ ಮತ್ತೊಂದು ಪರ್ವ

ಸೌತಾಂಪ್ಟನ್,ಜೂ,20: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಬಿರಿಸಿನ ಆಟದಿಂದ ಟೆಸ್ಟ್ ಕ್ರಿಕೆಟ್ ನಲ್ಲಿ ಮತ್ತೊಂದು ಪರ್ವ ಸೃಷ್ಟಿಸಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ 7500+ ರನ್ ದಾಖಲೆ ಪಟ್ಟಿಗೆ ಕೊಹ್ಲಿ ಸೇರ್ಪಡೆಯಾಗಿದ್ದಾರೆ. ಶನಿವಾರ ನಡೆದ ಭಾರತ-ನ್ಯೂಜಿಲೆಂಡ್ ನಡುವಿನ ಐಸಿಸಿ ವರ್ಲ್ಡ್ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. ಸೌತಾಂಪ್ಟನ್‌ನ ಏಜಸ್ ಬೌಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವರ್ಲ್ಡ್ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ 40+ ರನ್ ಬಾರಿಸುವುದರೊಂದಿಗೆ ಟೆಸ್ಟ್‌ ಕ್ರಿಕೆಟ್‌ನಲ್ಲಿ 7500+ ರನ್…

ಆಕಳು ಕಪ್ಪಾದರೆ ಹಾಲು ಕಪ್ಪೇ?

ಶ್ರೀ ಡಾ.ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಆಕಳು ಕಪ್ಪಾದರೆ ಹಾಲು ಕಪ್ಪೇ? ವೈವಿಧ್ಯದಲ್ಲೂ ಏಕ ಸಮಾನತೆ ತೋರಿ ಸಾರುವ ಮಾತಿದು. ವಿಭಿನ್ನ ಆಕಳ ಬಣ್ಣ ಬಗೆ ಬಗೆ, ಹಾಲು ಎಲ್ಲ ಬಿಳಿ ಬಿಳಿ, ಸತ್ತ್ವವೆಲ್ಲ ಒಂದೇ. ಕಬ್ಬು ಡೊಂಕು, ಸಿಹಿ ಒಂದು. ಮೈ ಬಣ್ಣ ಕಪ್ಪು ಬಿಳಿ ಕೆಂಪು ಮತ್ತೊಂದು, ಎಲ್ಲರ ರಕ್ತ ಕೆಂಪೇ ಕೆಂಪು! ಗಂಡು ಹೆಣ್ಣು ಮುಸ್ಲಿಂ ಹಿಂದು ಕ್ರೈಸ್ತ ಹೀಗೆ ಮನುಷ್ಯ ಬೇರೆ, ಒಳಗಿನ ಮನುಷ್ಯತ್ವ ಒಂದೇ ಒಂದು! ಜಾತಿ ಜಾತಿಗರ ಜ್ಯೋತಿ…

Girl in a jacket