ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ 14.33 ಕೋಟಿ ರೂಪಾಯಿ
ಬೆಂಗಳೂರು,ಜು,12:ಒಟ್ಟು 14. 33 ಕೋಟಿ ರೂಪಾಯಿ ವೆಚ್ಚದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಕ್ರಿಯಾ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. . ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷರಾದ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಅನುಮೋದನೆ ನೀಡಲಾಯಿತು. 2021- 22 ನೇ ಸಾಲಿಗೆ ಅನ್ವಯವಾಗುವಂತೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಕಾಗಿನೆಲೆಯಲ್ಲಿ ಪ್ರಕೃತಿ ಚಿಕಿತ್ಸಾ ಕೇಂದ್ರ, ವಸ್ತುಸಂಗ್ರಹಾಲಯದ ಮುಂದುವರಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದು, ಬಾಡ ಗ್ರಾಮದಲ್ಲಿ ಸಂಗೀತ ಕಾರಂಜಿ ಹಾಗೂ ಕನಕದಾಸರ ಅರಮನೆಯ ದರ್ಬಾರ್ ಹಾಲ್…