Girl in a jacket

Daily Archives: July 13, 2021

ಮೇಕೆದಾಟು ಯೋಜನೆ,ಸರ್ವಪಕ್ಷ ಸಭೆ ಅನಿವಾರ್ಯ-ಎಂ.ಬಿ.ಪಾಟೀಲ್

ವಿಜಯಪುರ,ಜು,೧೩: ಮೇಕೆ ದಾಟು ಯೋಜನೆಗೆ ತಮಿಳು ಸರ್ಕಾರದ ಅಗತ್ಯವಿಲ್ಲ ಎಂದಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್ ರಾಜ್ಯ ಸರ್ಕಾರ ಕೂಡಲೇ ಸರ್ವಪಕ್ಷಸಭೆ ಕರೆದು ಚರ್ಚಿಸಿ ಕೇಂದ್ರದ ಮೇಲೆ ಒತ್ತಡ ತರುವ ಅನಿವಾರ್ಯತೆ ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕದಾಟು ಕಾನೂನು ಬದ್ಧವಾದ ಯೋಜನೆ, ಇದು ನಮ್ಮ ರಾಜ್ಯದ ಹಕ್ಕು. ಇದಕ್ಕೆ ತಮಿಳುನಾಡಿನ ಅನುಮತಿ ಅಗತ್ಯವಿಲ್ಲ ಎಂದು ಹೇಳಿದರು. ತಮಿಳುನಾಡಿನ ಆಕ್ಷೇಪದ ಬಗ್ಗೆ ರಾಜ್ಯ ಸರ್ಕಾರ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ತಿಳಿಸಿದರು.…

 ಪ್ರಶಾಂತ್ ಕಿಶೋರ್, ರಾಹುಲ್ ಗಾಂಧಿ ಭೇಟಿ-ರಾಷ್ಟ್ರ ರಾಜಕಾರಣದಲ್ಲಿ ಸಂಚಲನ

ನವದೆಹಲಿ,ಜು,೧೩:ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಮಂಗಳವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ದೆಹಲಿಯ ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿದ ಪ್ರಶಾಂತ್ ಕಿಶೋರ್ ಗಂಟೆಗಳ ಕಾಲ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಹಾಜರಿದ್ದರು. ಜೂನ್ ೨೧ರಂದು ಪ್ರಶಾಂತ್ ಕಿಶೋರ್ ಹಾಗೂ ಶರದ್ ಪವಾರ್ ಚರ್ಚೆ ನಡೆಸಿದ್ದು ದೇಶದಲ್ಲಿ ಹೊಸ ರಾಜಕೀಯ ಸಾಧ್ಯತೆಗಳ ಕುರಿತು ಚರ್ಚೆ ಆರಂಭವಾಗಿತ್ತು. ೨…

ಮೇಕೆದಾಟು ಯೋಜನೆಗೆ ಕೇಂದ್ರ ಗ್ರೀನ್ ಸಿಗ್ನಲ್?

ಬೆಂಗಳೂರು, ಜು. ೧೩: ಮೇಕೆ ದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಯಾವುದೇ ನಿರ್ಧಾರ ತಗೆದುಕೊಂಡಿದ್ದರೂ ಕೇಂದ್ರ ಸರ್ಕಾರ ತಮ್ಮದೆ ನಿರ್ಧಾರವನ್ನು ತಗೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಮೇಕೆದಾಟು ಯೋಜನೆಗೆ ಗ್ರೀನ್ ಸಿಗ್ನಲ್ ನೀಡುವ ದಾಟಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಹತ್ವದ ಜಲ ಜೀವನ್ ಮಿಷನ್ ಯೋಜನೆ ಕುರಿತು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆದಿದೆ. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ…

ಮಾಸ್ಟರ್ ಚೆಫ್ ತಮಿಳು ಆವೃತ್ತಿಯಲ್ಲಿ ಆಗಸ್ಟ್ ರಿಂದ ದೂರದರ್ಶನಕ್ಕೆ ಲಗ್ಗೆ

ರಾಮನಗರ ಜು 13: ಆಹಾರ ಪ್ರಿಯರನ್ನು ಒಗ್ಗೂಡಿಸುವ ಉದ್ದೇಶದೊಂದಿಗೆ ಇನ್ನೋವೇಟಿವ್ ಫಿಲ್ಮ್ ಅಕಾಡೆಮಿ (ಐಎಫ್‍ಎ) ಇಂದು ಬಹು ನಿರೀಕ್ಷಿತ ಪಾಕಶಾಲೆಯ ಪ್ರದರ್ಶನ – ಮಾಸ್ಟರ್ ಚೆಫ್ ತಮಿಳು ಆವೃತ್ತಿ ಬಿಡುಗಡೆ ದಿನಾಂಕವನ್ನು ರಾಮನಗರದ ಬಿಡದಿಯಲ್ಲಿರುವ ಇನ್ನೋವೇಟಿವ್ ಫಿಲ್ಮ್‍ಸಿಟಿಯಲ್ಲಿ ನಡೆದ ಸಮಾರಂಭದಲ್ಲಿ ಘೋಷಿಸಿದೆ. ಪ್ರಾದೇಶಿಕ ಸ್ವರೂಪದಲ್ಲಿ ಅಂತರರಾಷ್ಟ್ರೀಯ ಗೌರವಾನ್ವಿತ ಪ್ರದರ್ಶನವನ್ನು ದೂರದರ್ಶನ ಪರದೆಗಳಿಗೆ ತರುವ ಮೂಲಕ, ಐಎಫ್‍ಎ ಎಂಡೆಮೋಲ್ ಶೈನ್ ಸಹಯೋಗದೊಂದಿಗೆ ಆಗಸ್ಟ್, 2021 ರಿಂದ ಪ್ರಾರಂಭವಾಗುವ ಮನೆ ಅಡುಗೆ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲು ಸಜ್ಜಾಗಿದೆ. ಕಾರ್ಯಕ್ರಮದ ಬಿಡುಗಡೆಯ ಭಾಗವಾಗಿ…

ರಸ್ತೆಗೆ ಟೊಮೊಟೊ ಸುರಿದು ಪ್ರತಿಭಟನೆ

ರಾಮನಗರ ಜು 13: ಬೆಲೆ ಕುಸಿತದಿಂದ ಕಂಗೆಟ್ಟ ರೈತರು ರಾಮನಗರದ ಎಂಪಿಎಂಸಿ ಬಳಿಯ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೊಮೊಟೊ ಸುರಿದು ಸೋಮವಾರ ರೈತರು ಪ್ರತಿಭಟನೆ ನಡೆಸಿದರು. ನಗರದ ಎಪಿಎಂಸಿ ಎದುರು ಬೆಂಗಳೂರು ಮೈಸೂರು ರಾಷ್ಟ್ರೀಯ ತಡೆದ ರೈತರು ತಾವು ಬೆಳೆದ ಟೊಮೊಟೊವನ್ನು ರಸ್ತೆ ಸುರಿದ ಕೇಂದ್ರ ಹಾಗೂ ರಾಜ್ಯ ಸರಕಾಗಳ ವಿರುದ್ಧ ಧಿಕ್ಕಾರ ಕೂಗಿದರು. ಬೆಳೆ ಇಳಿಕೆಯನ್ನು ತಡೆಯಬೇಕು ಎಂದು ಆಗ್ರಹಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಚನ್ನಪಟ್ಟಣದ ರೈತ ಸುಜೀವನ್ ಕುಮಾರ್ ಮಾತನಾಡಿ,…

ಜುಲೈ ೪ ರಿಂದಲೇ ಆರಂಭವಾಗಿದೆಯಂತೆ ಕೋವಿಡ್ ಮೂರನೇ ಅಲೆ!

ಹೈದರಾಬಾದ್,ಜು,೧೩: ಕೋವಿಡ್-೧೯ ಮೂರನೇ ಅಲೆ ಬರುತ್ತದೆ ಎನ್ನುವ ದಾವಂತದಲ್ಲಿರುವಾಗಲೇ ಹೈದರಾಬಾದ್‌ನಲ್ಲಿ ವಿಜ್ಞಾನಿಯೊಬ್ಬರು ಕಳೆದ ಜುಲೈ ೪ ರಿಂದಲೇ ಆರಂಭವಾಗಿದೆ ಎಂಬ ಅಘತಾಕಾರಿ ಮಾಹಿತಿಯನ್ನು ನೀಡಿದ್ದಾರೆ ಹೈದರಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ ಹಿರಿಯ ಭೌತವಿಜ್ಞಾನಿ ಡಾ.ವಿಪಿನ್ ಶ್ರೀವಾಸ್ತವ ಅವರು, ಭಾರತದಲ್ಲಿ ಕೋವಿಡ್-೧೯ ಸೋಂಕಿನ ಹರಡುವಿಕೆಯನ್ನು ವಿವರವಾಗಿ ವಿಶ್ಲೇಷಿಸಿದ್ದು, ಜುಲೈ ೪ ರಿಂದಲೇ ಮೂರನೇ ಅಲೆ ಪ್ರಾರಂಭವಾಗಿರಬಹುದು ಎಂದು ಹೇಳಿದ್ದಾರೆ. ಕಳೆದ ೪೬೩ ದಿನಗಳಲ್ಲಿ ದೇಶದಲ್ಲಿ ಸೋಂಕು ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯನ್ನು ಅಧ್ಯಯನ ಮಾಡಲು ವಿಶೇಷ ವಿಧಾನವನ್ನು…

ಡಾ ಆರೂಢಭಾರತೀ ಸ್ವಾಮೀಜಿಗಳಿಂದ ಡಾ ವೀರೇಂದ್ರ ಹೆಗ್ಗಡೆ ಭೇಟಿ.

ಧರ್ಮಸ್ಥಳ, ಜು,13:ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಇಂದು ಬೆಳಿಗ್ಗೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಅಂತಾರಾಷ್ಟ್ರೀಯ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ ಮತ್ತು ಸಂಸ್ಕೃತ ಗುರುಕುಲದ ಬಗ್ಗೆ ಹಾಗೂ ಚೇರಂಬಾಣೆಯ ಶ್ರೀ ಸಿದ್ಧಾರೂಢಾಶ್ರಮದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ಸಿದ್ಧಸೂಕ್ತಿಯ ಮೊದಲ ಭಾಗವನ್ನು ಅರ್ಪಿಸಲಾಯಿತು. ಡಾ ವೀರೇಂದ್ರ ಹೆಗ್ಗಡೆ ಅವರು ಡಾ ಆರೂಢಭಾರತೀ ಸ್ವಾಮೀಜಿಯವರ ಕಾರ್ಯಚಟುವಟಿಕೆಗಳ ಬಗ್ಗೆ…

ಜೀವನ ವಿಧಾನ

ಶ್ರೀ. ಡಾ.ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಜೀವನವಿಧಾನ. ಹಿರಿಯರು ಹೇಳಿದ್ದು :ನೂರು ವರ್ಷದ ಆಯುಷ್ಯವನ್ನು ನಾಲ್ಕು ಸಮಭಾಗ ಮಾಡಿ. ಮೊದಲ ಭಾಗ ಶಿಕ್ಷಣ – ಸಂಸ್ಕಾರ ಕಲಿಕೆಗಿರಲಿ. ಎರಡನೆಯ ಭಾಗ ಸಂಸಾರಹೊಣೆ ಸಂಪಾದನೆಗಿರಲಿ. ಮೂರನೆಯ ಭಾಗ ಧ್ಯಾನ ಜಪ ತಪ ಸೇವೆ ಧರ್ಮ ಅಧ್ಯಾತ್ಮಕ್ಕಿರಲಿ. ನಾಲ್ಕನೆಯ ಭಾಗ ತ್ಯಾಗ – ಆನಂದಮಯ! ಹೀಗಿಲ್ಲದಿರೆ ಬಾಳು ಚಿಂತೆ ದುಃಖದ ಸಾಗರ! ಪ್ರಥಮೇ ವಯಸಿ ನಾಧೀತಂ. ದ್ವಿತೀಯೇ ನಾರ್ಜಿತಂ ಧನಂ. ತೃತೀಯೇ ನ ತಪಸ್ತಪ್ತಂ. ಚತುರ್ಥೇ ಕಿಂ ಕರಿಷ್ಯತಿ?. ಬ್ರಹ್ಮಚರ್ಯ…

Girl in a jacket