Girl in a jacket

Daily Archives: July 26, 2021

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಸದಾಶಿವ ಶೆಣೈ ಅಧಿಕಾರ ಸ್ವೀಕಾರ

ಬೆಂಗಳೂರು,ಜು,26:ಸರ್ಕಾರ ನೇಮಕ ಮಾಡಿರುವ ಕರ್ನಾಟಕ ಮಾಧ್ಯಮ ಅಕಾಡಮಿಗೆ ಅಧ್ಯಕ್ಷ ಸದಾಶಿವ ಶೆಣೈ ಅವರು ಅಧಿಕಾರ ಸ್ವೀಕರಿಸಿದರು. ಈ ವೇಳೆ ಸದಸ್ಯರಾದ ಕೆ.ಕೆ.ಮೂರ್ತಿ,ಕೆಯುಡಬ್ಲೂಜೆ ಅಧ್ಯಕ್ಷ ಶಿವಾನಂದ ತಗಡೂರು,ಶಿವಕುಮಾರ್ ಬೆಳ್ಳಿ ತಟ್ಟೆ ಹಾಜರಿದ್ದರು. ಇದೇ ವೇಳೆ ಹಾಜರಿದ್ದ ಅಕಾಡೆಮಿ ಮಾಜಿ ಅಧ್ಯಕ್ಷ ಪೊನ್ನಪ್ಪ ಅವರು, ಮುಂದಿನ ಸವಾಲುಗಳು ಹಾಗೂ ಮಾಡಬೇಕಾದ ಕಾರ್ಯಗಳ ಕುರಿತು ಸಲಹೆ ನೀಡಿದರು.

ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಬಿಎಸ್ವೈ ಘೋಷಣೆ

ಬೆಂಗಳೂರು, ಜು,26:ನಿರೀಕ್ಷೆಯಂತೆ ಯಡಿಯೂರಪ್ಪ ಅವರು ಹೈಕಮಾಂಡ್ ಗೆ ಕೊಟ್ಟ ಮಾತಿನಂತೆ ಇಂದು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ 2 ವವರ್ಷದ ಬಿಜೆಪಿ ಸಾಧಾನ ಸಮಾವೇಶದಲ್ಲೇ ಮುಖ್ಯಮಂತ್ರಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕಾರ್ಯಕ್ರಮದ ಮುಕ್ತಾಯದ ಬಳಿಕ, ಊಟದ ನಂತ್ರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಪಕ್ಷದ ಕಾರ್ಯಕ್ರಮದಲ್ಲೇ ಘೋಷಣೆ ಮಾಡಿದರು. ಶಿಕಾರಿಪುರದಲ್ಲಿ ಸಂಘದ ಕಾರ್ಯಕರ್ತನಾಗಿ ಜೀವನ ಆರಂಭಿಸಿದೆ. ಆರ್ ಎಸ್ ಎಸ್ ಪ್ರಚಾರಕನಾಗಿ ಕಾರ್ಯ ಆರಂಭವಾಯಿತು. ಕ್ರಮೇಣ ಶಿಕಾರಿಪುರಸಭೆಗೆ ನಿಂತು, ಗೆದ್ದಿದ್ದೇನೆ.…

ಇನ್ನೂ ಬದುಕಿನಿಂದ ಮಿಸ್ ಆದ ಜಯಂತಿ

ಬೆಂಗಳೂರು, ಜು,26: ಕನ್ನಡ ಚಿತ್ರರಂಗದ ಖ್ಯಾತ ನಟಿ ಅಭಿನವ ಶಾರದೆ ಜಯಂತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 76 ವರ್ಷವಾಗಿತ್ತು. ಬಳ್ಳಾರಿ ಯಲ್ಲಿ ಜನಸಿದ್ದ ಅವರು ಜಗದೇಕ ವೀರ ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿದ ಅವರು ಜೇನುಗೂಡು ಚಿತ್ರದಲ್ಲಿ ನಾಯಕಿ ಪಾತ್ರಮಾಡುವ ಮೂಲಕ ಅದ್ಬುತ ನಟನೆಗೆ ಹಲವಾರು ಜನ ಮನಸೋತಿದ್ದರು.500 ಚಿತ್ರಗಳಲ್ಲಿ ನಟಿಸಿದ ಅವರು ಬಹುಭಾಷೆ ನಟಿ ಕೂಡ. ಜಯಂತಿ ಅವರು ಇಡೀ ದಕ್ಷಿಣ ಭಾರತದಲ್ಲೇ ಮೇರುನಟಿ ಎನಿಸಿಕೊಂಡಾಕೆ. ಜಯಂತಿ ಎಂದ ಕೂಡಲೇ…

ಎಡಬಿಡದೆ ಮಳೆಯಿಂದ ಡ್ಯಾಂಗಳಿಂದ ಹರಿಬಿಟ್ಟ ನೀರು,ಪ್ರವಾಹದ ಭೀತಿಯಲ್ಲಿ ಜನ

ಬೆಂಗಳೂರು,ಜು,26:ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಕಾರಣ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳು ಪ್ರವಾಹ ಮಟ್ಟದಲ್ಲಿ ಹರಿಯುತ್ತಿದ್ದು, ಜನರಿಗೆ ಆತಂಕ ಮೂಡಿಸಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಇದರಿಂದ ನದಿಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ. ಹಲವೆಡೆ ಮನೆಗಳು ಕುಸಿದಿವೆ. ಇನ್ನೂ ಕೆಲವೆಡೆ ಸೇತುವೆಗಳು ಮುಳುಗಡೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಬೆಳೆಗಳು ನಾಶವಾಗಿವೆ. ಭಾರೀ…

ಎಲ್ಲ ಬರಿ ಗೊಣಗಾಟ

‌‌‌‌                     ಸಿದ್ಧಸೂಕ್ತಿ : ಎಲ್ಲ ಬರಿ ಗೊಣಗಾಟ. ಬಾಳು ದುಸ್ತರ ಕಠಿಣ. ಹೊರಗೆ ಝಗ ಝಗ, ಒಳಗೆ ಚಿಂತೆಯ ತಳಮಳ! ಆನೆಯ ಭಾರ ಆನೆಗೆ. ಇರುವೆಯ ಭಾರ ಇರುವೆಗೆ! ಎಂತಾದರೂ ಚಿಂತೆ ಬಿಡದು. ನಿಶ್ಚಿಂತರಾದವರ ನಾನೊಬ್ಬರನು ಕಾಣೆ. ಜೀವನದುದ್ದಕ್ಕೂ ಅದಿಲ್ಲ, ಇದಿಲ್ಲವೆಂಬ ಗೊಣಗಾಟ! ಅದನ್ನು ಮಾಡಬೇಕು ಆಗುತ್ತಿಲ್ಲ, ಇದನ್ನು ಮಾಡಬೇಕು ಆಗುತ್ತಿಲ್ಲ, ಮಗ ಐಎಎಸ್ ಅಧಿಕಾರಿ ಆಗಬೇಕೆಂಬಾಶೆ, ಮಗನಿಗೆ ಒಲವಿಲ್ಲ! ಮಗಳನ್ನು ಡಾಕ್ಟರ್…

Girl in a jacket