Girl in a jacket

Daily Archives: August 1, 2021

‘ಮುತ್ತಿನ ಹುಡುಗಿ’ಗೆ ಕಂಚು..! ನೂತನ ದಾಖಲೆ ಬರೆದ ಸಿಂಧು

Posted by H.D.savitha ಟೋಕಿಯೋ,ಆ,01: ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಿಭಿಸಿದೆ.  ಭಾರತದ ಭರವಸೆಯ ಬಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಕಂಚಿನ ಪದಕ ವಿಜೇತರಾಗಿದ್ದಾರೆ. ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಚೀನಾದ ಹೀ ಬಿಂಗ್ ಜಿಯವೋ ರನ್ನು  ಮಣಿಸಿದ್ರು.  ಸಿಂಧು 2 ಗೇಮ್ ನಲ್ಲಿ ಪ್ರಾಬಲ್ಯ ಮೆರೆದು 21-13, 21-15 ರ ಮೂಲಕ ಕಂಚಿನ ಪದಕಕ್ಕೆ ಮುತ್ತಿಟ್ಟರು. ಇದರೊಂದಿಗೆ ಒಲಿಪಿಕ್ಸ್ ನಲ್ಲಿ ಬಾಡ್ಮಿಂಟನ್ ನಲ್ಲಿ ಭಾರತಕ್ಕಾಗಿ 2ಪದಕ ಗೆದ್ದುಕೊಟ್ಟು ದಾಖಲೆಯನ್ನು ಸಿಂಧು ಬರೆದರು.…

ಸಾಧಕರಿಗೆ ಸನ್ಮಾನ

ಬೆಂಗಳೂರು,ಆ,01:ಸಿನಿಮಾಪತ್ರಿಕಾಛಾಯಾಗ್ರಾಹಕರು ಕರೋನಾ ವಾರಿಯರ‍್ಸ್ ಕಳೆದ ಹದಿನೆಂಟು ತಿಂಗಳುಗಳಿಂದ ವಿಶ್ವಕ್ಕೆ ವ್ಯಾಪಿಸಿರುವ ಕರೋನ ಎಂಬಮಹಾಮಾರಿಯಿಂದ ಜನರುಹೈರಣಾಗಿದ್ದಾರೆ.ಸರ್ಕಾರವುಲಾಕ್‌ಡೌನ್‌ಏರಿದಕಾರಣ ಚಟುವಟಿಕೆಗಳುಸ್ತಬ್ದಗೊಂಡಿದ್ದವು.ಈ ಸಂದರ್ಭದಲ್ಲಿಜೀವದ ಹಂಗನ್ನುತೊರೆದುಸಾಮಾಜಿಕ ಸೇವೆಯಲ್ಲಿತೊಡಗಿಕೊಂಡಿದ್ದ ವಿವಿಧ ಕ್ಷೇತ್ರಗಳ ಸಾಧಕರನ್ನು ಎಸ್.ಎಸ್.ಕಲಾ ಸಂಗಮವು ಗುರುತಿಸಿ ಅವರನ್ನುಗೌರವಿಸುವ ಕಾರ್ಯಕ್ರಮನ್ನುಏರ್ಪಡಿಸಿತ್ತು. ಈ ಪೈಕಿ ಕಳೆದಮೂರು ದಶಕಗಳಿಂದ ಸಿನಿಮಾ ಪತ್ರಿಕೆಗಳಿಗೆ ಫೋಟೋಗಳನ್ನು ಒದಗಿಸುತ್ತಿರುವ ಹಿರಿಯಛಾಯಾಗ್ರಾಹಕರುಗಳಾದಕೆ.ಎನ್.ನಾಗೇಶ್‌ಕುಮಾರ್, ಮನೋಹರ್‌ಅಲಿಯಾಸ್ ಮನು ಮತ್ತು ಕೆ.ಎಸ್.ಮೋಕ್ಷೇಂದ್ರ ಇವರುಗಳನ್ನು ಸಂಸ್ಥೆಯು ಹಾರ, ಶಾಲು, ಪೇಟ ಮತ್ತುಪ್ರಮಾಣಪತ್ರ ವಿತರಿಸಿ ಸನ್ಮಾನಿಸಲಾಯಿತು. ನಜ್ಮಾ ಫಾರುಖ್, ಅಸಿಸ್ಟೆಂಟ್ ಕಮಿಷನರ್‌ಆಫ್ ಪೋಲೀಸ್, ಖ್ಯಾತಗಾಯಕ ಶಶಿಧರ್‌ಕೋಟೆ, ಸಮಾಜ ಸೇವಕ ಮಂಜುನಾಥ್‌ಬನಶಂಕರಿ, ನಿವೃತ್ತ…

ದೇವೇಗೌಡರನ್ನು ಭೇಟಿಮಾಡಿ ಆರ್ಶೀವಾದ ಪಡೆದ ಸಿಎಂ ಬೊಮ್ಮಾಯಿ

ಬೆಂಗಳೂರು,ಆ,01:ಮಾಜಿ ಪ್ರಧಾನಿ ರಾಜ್ಯದ ಹಿರಿಯ ರಾಜಕಾರಣಿ ಎಚ್.ಡಿ.ದೇವೇಗೌಡ ಅವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಅವರ ನಿವಾಸಕ್ಕೆ ತೆರಳಿ ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಮಾಜಿ ಸಚಿವರುಗಳಾದ ಸೋವಣ್ಣ, ರೇವಣ್ಣ ಅವರು ಮುಖ್ಯಮಂತ್ರಿ ಜೊತೆಗಿದ್ದರು.ಭೇಟಿ ಬಳಿಕ ಮಾತನಾಡಿದ ಸಿಎಂ, ನನ್ನ ತಂದೆ ಎಸ್.ಆರ್.ಬೊಮ್ಮಾಯಿ ಜೊತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಒಡನಾಟ ಹೊಂದಿದ್ದರು. ನಾನು ಅವರಿಂದ ಇಂದು ಆಶೀರ್ವಾದ, ಮಾರ್ಗದರ್ಶನ ಪಡೆದಿದ್ದೇನೆ. ದೇವೇಗೌಡರು ಅನೇಕ ಸಂಗತಿಗಳನ್ನು ಮೆಲುಕು ಹಾಕಿದ್ದಾರೆ ಎಂದು ತಿಳಿಸಿದರು. ದೇವೇಗೌಡರು ಸಾಕಷ್ಟು…

ಮಠಾಧೀಶರ ಬೆದರಿಕೆಗೆ ಬಿಜೆಪಿ ಬಗ್ಗೊಲ್ಲ; ಈಶ್ವರಪ್ಪ

ಬೆಂಗಳೂರು, ಆ,01: ಬಿಜೆಪಿ ಪಕ್ಷ ಯಾವುದೇ ಕಾರಣಕ್ಕೂ ಮಠಾಧೀಶರ ಬೆದರಿಕೆಗೆ ಬೆದರುವುದಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ಎಚ್ಚರಿಸಿದ್ದಾರೆ. ವಿಜಯಪುರದಲ್ಲಿ ಭಾನುವಾರ ಮಾತನಾಡಿದ‌ ಅವರು, ತಮ್ಮ‌ ತಮ್ಮ ಸಮಾಜದ ಶಾಸಕರನ್ನು ಮಂತ್ರಿ ಮಾಡಿ ಎಂದು ಮಠಾಧೀಶರು ಹೇಳುವುದು ತಪ್ಪಲ್ಲ. ಆದರೆ ಶಾಸಕರು ಹೇಳುವುದು ತಪ್ಪು. ಇನ್ನೊಂದೆಡೆ ನಮ್ಮ‌ ಸಮಾಜದ ವ್ಯಕ್ತಿಗೆ‌ ಮಂತ್ರಿ‌ ಮಾಡದಿದ್ದರೆ ಬಿಜೆಪಿ ಸರ್ವನಾಶ ಅಂತಾ ಹೇಳುವುದು‌ ತಪ್ಪು ಎಂದು ಮಠಾಧೀಶರಿಗೆ ಸಲಹೆ ಮಾಡಿದರು. ಧರ್ಮ ವಿಚಾರದಲ್ಲಿ ನಾವೂ ಇದ್ದೇವೆ. ಆದರೆ ಮಠಾಧೀಶರು ಶಾಪ ಹಾಕುವ…

‘ಏಳು’ ಪದಕಗಳ ಒಡತಿ: ವಿಶ್ವ ದಾಖಲೆ ನಿರ್ಮಿಸಿದ ಆಸ್ಟ್ರೇಲಿಯಾ ಎಮ್ಮಾ ಮೇಕಿಯನ್

ಟೋಕಿಯೋ: ಟೋಕಿಯೋ ಒಲಂಪಿಕ್ಸ್ ನಲ್ಲಿ ಒಂದಲ್ಲ ಎರಡಲ್ಲ ಬರೊಬ್ಬರಿ 7 ಪದಕಗಳನ್ನು ಪಡೆದು ವಿಶ್ವ ದಾಖಲೆ ಬರೆದಿದದ್ದಾಳೆ ಆಸ್ಟ್ರೇಲಿಯಾದ ಈಜುಗಾರ್ತಿ ಎಮ್ಮಾ ಮೆಕಿಯನ್. ಅಷ್ಟೇ ಅಲ್ಲ ಒಲಂಪಿಕ್ಸ್ ಕೂಟದಲ್ಲೂ  ಅತೀ ಹೆಚ್ಚು ಪದಕಗಳನ್ನು ಪಡೆದ ಹೆಗ್ಗಳಿಕೆ ಕೂಡಾ ಇವಳದ್ದು. ಭಾನುವಾರ ನಡೆದ 4*100 ಫ್ರೀ ಸ್ಟೈಲ್ ರೀಲೆಯಲ್ಲಿ ಚಿನ್ನದ ಪದಕ ತನ್ನದಾಗಿಸಿಕೊಳ್ಳುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾಳೆ. 1952ರಲ್ಲಿ ಸೋವಿಯತ್ ಒಕ್ಕೂಟದ ಜಿಮ್ನಾಸ್ಟಿಕ್ ಪಟು ಮರಿಯಾ ಗೊರೋವೋವಿಸ್ಕ 7ಪದಕ ಜಯಿಸಿದ್ದರು. ಇದಾದ ಬಳಿಕ ಈಗ ಎಮ್ಮಾ ಮೇಕಿಯನ್…

ನೆರೆ ಸಂತ್ರಸ್ತರಿಗೆ ಬಿಎಸ್ ವೈ ಸರ್ಕಾರ ಮಾದರಿಯಲ್ಲೇ ಪರಿಹಾರ; ಬೊಮ್ಮಾಯಿ

ಬೆಂಗಳೂರು,ಆ,01:ನೆರೆ ಸಂತ್ರಸ್ತರಾದವರಿಗೆ ಯಡಿಯೂರಪ್ಪ ನೇತೃತ್ವದ ಸರ್ಕಾರದ ಅವಧಿಯಲ್ಲಿ ನೀಡುತ್ತಿದ್ದ ಮಾದರಿಯಲ್ಲಿಯೇ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ‘ನೆರೆ ಹಾನಿ ಸಮೀಕ್ಷೆಗೆ ರಾಜ್ಯಕ್ಕೆ ಕೇಂದ್ರ ತಂಡವನ್ನು ಕಳುಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದೇನೆ’ ಎಂದು ಹೇಳಿದರು. ‌ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಅಧಿಕಾರಿ…

ಖಾಸಗಿ ಶಾಲೆಗಳ ಆರಂಭ ಸದ್ಯಕ್ಕಿಲ್ಲ; ಸಿಎಂ

ಬೆಂಗಳೂರು ,ಆ,೦೧: ರಾಜ್ಯದಲ್ಲಿ ಖಾಸಗಿ ಶಾಲೆಗಳ ಆರಂಭ ಕುರಿತು ಎಲ್ಲ ಆಯಾಮದಲ್ಲಿಯೂ ಚರ್ಚಿಸಿ ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟದ ಜೊತೆಯಲ್ಲಿ ಸೌಹಾರ್ದಯುತವಾಗಿ ಚರ್ಚಿಸಿ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಶಾಲೆಗಳ ಆರಂಭಕ್ಕೆ ಮುಂದಾಗಿದ್ದ ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟಕ್ಕೆ ಸೂಚನೆ ನೀಡಿ, ಸದ್ಯಕ್ಕೆ ಶಾಲೆ ಆರಂಭ ಬೇಡ ಎಂದು ತಿಳಿಸಲಾಗಿದೆ. ಈ ಸಂಬಂಧ ಮುಂದುವರೆದು ಖಾಸಗಿ ಶಾಲೆಗಳ ಅಸೋಸಿಯೇಷನ್ ಜೊತೆ ಮಾತುಕತೆ…

ಬೆರಗು ಗೊಳಿಸಿದ ಡಕಾಯಿತನ ನಡೆ..!

ಬೆರಗು ಗೊಳಿಸಿದ ಡಕಾಯಿತನ ನಡೆ…! ನಾನು ಪ್ರಯಾಣಿಸುತ್ತಿದ್ದ ಲಕ್ಷುರಿ ಬಸ್ ಇಂದೋರ್ ನ ಹೊರವಲಯವನ್ನು ಪ್ರವೇಶಿಸಿದ ಸುಳಿವನ್ನು ಮುಚ್ಚಿದ ಕಿಟಿಕಿಯ ಪರದೆಗಳನ್ನೂ ಸೀಳಿ ಒಳತೂರುತ್ತಿದ್ದ ಹೆದ್ದಾರಿಯ ದಾರಿ ದೀಪಗಳ ಬೆಳಕಿನಿಂದ ಊಹಿಸಿದೆ. ಉರಿಯುವ ಕಣ್ಣುಗಳನ್ನು ಕಷ್ಟಪಟ್ಟು ತೆರೆದು ಕೈ ಗಡಿಯಾರವನ್ನು ನೋಡಿಕೊಂಡವನಿಗೆ ಸಮಯ ಮುಂಜಾನೆಯ ನಾಲ್ಕೂವರೆ ಎಂದು ಗೊತ್ತಾಯಿತು. ರಾತ್ರಿ ಹತ್ತರ ಸುಮಾರಿಗೆ ಅಹಮದಾಬಾದ್ ನ ಪಾಲಡಿಯ ಪವನ್ ಟ್ರಾವೆಲ್ಸ್ ಬಸ್ ನಲ್ಲಿ ಆಫೀಸ್ ನ ಕೆಲಸದ ನಿಮಿತ್ತ ಮಧ್ಯಪ್ರದೇಶದ ಇಂದೋರ್ ನಗರಕ್ಕೆ ಹೊರಟಿದ್ದ ನನಗೆ ರಾತ್ರಿಯಿಡೀ…

ಬುಧವಾರ ಸಚಿವ ಸಂಪುಟ ವಿಸ್ತರಣೆ; ನಾಳೆ ಸಿಎಂ ದೆಹಲಿಗೆ?

ಬೆಂಗಳೂರು, ಆ. 01: ಸಚಿವ ಸಂಪುಟ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್‌ ಕೊಟ್ಟಿರುವ ಕಾರಣ ನಾಳೆ ಪಟ್ಟಿಯೊಂದಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ತೆರಳಲಿದ್ದಾರೆ . ಈ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ತೆರಳಿ ಸಚಿವ ಸಂಪುಟ ಕುರಿತಂತೆ ಚರ್ಚಿಸಿದ್ದು ಯಾರೆಲ್ಲ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎನ್ನುವ ಬಗ್ಗೆ ಸಮಾಲೋಚನೆ ನಡೆಸಿದರು. ಒಂದೆಡೆ ರಾಜ್ಯದಲ್ಲಿ ಪ್ರವಾಹ ಪರಿಹಾರ ಕಾರ್ಯಗಳು ಆಗಬೇಕಾಗಿದೆ. ಮತ್ತೊಂದೆಡೆ ಕೊರೊನಾ ಮೂರನೇ ಅಲೆ ಅಪ್ಪಳಿಸುವ ಆತಂಕ ಕೂಡ ಎದುರಾಗಿದೆ. ಹೀಗಾಗಿ…

ತಬ್ಬಿಕೊಳೊ ವಿಶ್ವವನೆ ಮಂಕುತಿಮ್ಮ

ಸಿದ್ಧಸೂಕ್ತಿ : ತಬ್ಬಿಕೊಳೊ ವಿಶ್ವವನೆ ಮಂಕುತಿಮ್ಮ. ಜಂಜಾಟ ಬೇಡೆಂದು ಒಂಟಿತನ ಬಯಸುವರು. ಸಂನ್ಯಾಸ ಬದುಕಿಗೆ ಇದು ಆಗಬಹುದು. ಸಂಸಾರ ಜೀವನಕ್ಕೆ ಇದು ಎಂದಿಗೂ ಹೊಂದದು. ಒಂದೇ ತಾ ಸುಖಿಸಲಾರೆ ಎಂದಿತಂತೆ ಅದ್ವಿತೀಯ ಪರಬ್ರಹ್ಮ! ಸಂಗಾತಿಯನ್ನು ಬಯಸಿತಂತೆ! ಇದ್ದ ತಾನೊಂದೇ ಗಂಡ ಹೆಂಡತಿಯಾಯಿತಂತೆ! ಏಕಾಕೀ ನ ರಮತೇ. ಸ ದ್ವಿತೀಯಮೈಚ್ಛತ್. ಪತಿಶ್ಚ ಪತ್ನೀಶ್ಚಾಭವತ್ – ಎನ್ನುವುದು ಬೃಹದಾರಣ್ಯಕ ಉಪನಿಷತ್. ಬಹುಸ್ಯಾಂ ಪ್ರಜಾಯೇಯೇತಿ ಎನ್ನುವುದು ತೈತ್ತಿರೀಯ ಉಪನಿಷತ್. ಜಾಮೂನ್ ಮಿಕ್ಸ್ಗೆ ಸಕ್ಕರೆ, ಚಪಾತಿಗೆ ಪಲ್ಯ, ಅನ್ನಕ್ಕೆ ಸಾಂಬಾರು……

Girl in a jacket