Girl in a jacket

Daily Archives: August 13, 2021

ಮಹಿಳಾ ಹಾಕಿ ಕೋಚ್ ಅಂಕಿತಾಗೆ ಸಿಎಂ ಬೊಮ್ಮಾಯಿ ಸನ್ಮಾನ

ಬೆಂಗಳೂರು,ಆ,13:ಭಾರತೀಯ ಮಹಿಳಾ ಹಾಕಿ ತಂಡದ ತರಬೇತುದಾರರಲ್ಲಿ ಒಬ್ಬರಾದ ಕೋಚ್ ಅಂಕಿತಾ ಅವರನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಸನ್ಮಾನಿಸಿ ಗೌರವಿಸಿದರು. ಟೋಕಿಯೋ ಒಲಂಪಿಕ್ ಟೂರ್ನಿಯಲ್ಲಿ ಭಾರತ ಮಹಿಳಾ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ತೋರಿದೆ. ಪದಕ‌ ಗೆಲ್ಲಲು ಸಾಧ್ಯವಾಗದಿದ್ದರೂ ಭಾರತೀಯರ ಮನಸ್ಸನ್ನು ಆ ಮಹಿಳಾ ತಂಡ ಗೆದ್ದಿದೆ. ಆ ತಂಡದ ತರಬೇತಿದಾರರಾದ ನಿಮಗೆ ತುಂಬು ಹೃದಯದ ಶುಭಾಶಯ ಕೋರುತ್ತೇನೆ. ಕನ್ನಡದ ಯುವತಿ ಭಾರತ ತಂಡದ ಕೋಚ್ ಆಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಸಿಎಂ‌…

ಸವಾಲುಗಳ ಮಣಿಸಿ ಗೆದ್ದು ನಕ್ಕ ರೇಖಾ

  ಸವಾಲುಗಳ ಮಣಿಸಿ ಗೆದ್ದು ನಕ್ಕ ರೇಖಾ    ” ನಾನು ಯಶಸ್ಸಿನ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಅದು ನನಗೆ ಅನ್ಯ ಪದ”ಎನ್ನುವ ಅಭಿನೇತ್ರಿ ರೇಖಾ ಹುಟ್ಟಿದ್ದು ಚನೈನಲ್ಲಿ. ತಂದೆ ತಮಿಳ,ತಾಯಿ ತೆಲುಗು,ರೇಖಾ ಎಂಬ ನಟಿ ಕನ್ನಡದ ಮೂಲಕ ನಾಯಕಿಯಾಗಿ ಪ್ರವೇಶಿಸಿ ನೆಲೆಗೊಂಡದ್ದು ಹಿಂದಿ ಚಿತ್ರರಂಗದಲ್ಲಿ. ಏಕರೂಪೀ ಪಾತ್ರಗಳಿಗೆ ಅಂಟಿಕೊಳ್ಳದೇ ಸದಾ ಹೊಸ ಪ್ರಯೋಗಗಳ ಮೂಲಕ ತನ್ನ ಚರಿಷ್ಮಾವನ್ನ ಚಲನಶೀಲಗೊಳಿಸಿಕೊಂಡಾಕೆ.ಹಾಗೆ ನೋಡಿದರೆ ರೇಖಾ ಸಿನಿಮಾಕ್ಕೆ ಬಂದಿದ್ದೇ ಆಕಸ್ಮಿಕ.ಮನೆಯ ಆರ್ಥಿಕ ತೊಂದರೆ ನಿವಾರಿಸಲಿಕ್ಕಾಗಿ ಅಮ್ಮ ಈಕೆಗೆ ಬಣ್ಣ ಹಚ್ಚಿಸಿದಳು.ಮುಂದೆ ಬಾಲಿವುಡ್…

ಈ ಬಾರಿ ಮಾಣಿಕ್ ಷಾ ಪೆರೇಡ್ ಗೆ ಸಾರ್ವಜನಿಕರ ಪ್ರವೇಶವಿಲ್ಲ

ಬೆಂಗಳೂರು,ಆ.13- ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಜಿಲ್ಲಾಧಿಕಾರಿ ಮಂಜುನಾಥ್, ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಮುಂತಾದವರು ಭದ್ರತೆಯ ಸಿದ್ದತೆ ಬಗ್ಗೆ ಪರಿಶೀಲನೆ ನಡೆಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ…

ಸಿನಿಮಾ ಮಂದಿಯ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಬಲಿ?

Writing- ಪರಶಿವ ಧನಗೂರು ಕನ್ನಡ ಸಿನಿಮಾ ಮಂದಿಗೆ ಬುದ್ಧಿ ಬರುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಸರ್ಕಾರ ಮದ್ಯೆ ಪ್ರವೇಶಿಸಿ ಚಿತ್ರೀಕರಣದ ವೇಳೆಯಲ್ಲಿ ಕಲಾವಿದರ ರಕ್ಷಣೆಗೆ ಸರಿಯಾದ ನೀತಿ ನಿಯಮ ಜಾರಿಮಾಡಿ ಎಚ್ಚರಿಸದಿದ್ದರೇ ಇನ್ನೆಷ್ಟು ಜೀವಗಳನ್ನು ಬಲಿಪಡೆಯುತ್ತಾರೋ ಈ ಬಣ್ಣದಜನ ಎನ್ನುತ್ತಿದ್ದಾರೆ ಕರ್ನಾಟಕದ ಜನ. ಕೆದಕುತ್ತಾ ಹೋದರೆ ಕನ್ನಡ ಸಿನಿಮಾ ರಂಗದಲ್ಲಿ ಶೂಟಿಂಗ್ ದುರಂತಗಳ ಕತೆ ಸಾಲು ಸಾಲೇ ಇವೆ! ಮೊದಲಿಗೆ 25 ವರ್ಷಗಳ ಹಿಂದೆ ಸದ್ದು ಮಾಡಿದ್ದು ಲಾಕಪ್ ಡೆತ್ ಸಿನಿಮಾದ ಬೈಕ್ ಜಂಪ್ ದುರಂತ. ಅಂದಿನ…

ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ

ಮಂಗಳೂರು, ಆ,೧೨; ಜಿಲ್ಲೆಯಲ್ಲಿ ಕೊರೊನಾ ಬಗ್ಗೆ ನಿರ್ಲಕ್ಷ್ಯ ವಹಿಸಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ವಿರುದ್ಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳ ಸಭೆ ನಡೆಸುವ ವೇಳೆ ಕೊರೊನಾ ನಿರ್ಲಕ್ಷ್ಯದ ಮಾತು ಹೊರಬಂದಾಗ ಸಿಎಂ ಈ ಆಕ್ರೋಶ ವ್ಯಕ್ತಪಡಿಸಿದರು. ನನ್ನ ಪ್ರಗತಿ ಪರಿಶೀಲನೆ ಸ್ಟೈಲ್ ಸ್ವಲ್ಪ ಬೇರೆ…

ಅಫ್ಗಾನಿಸ್ತಾನ;ಕಂದಹಾರ್ ವಶಪಡಿಸಿಕೊಂಡ ತಾಲಿಬಾನ್

ಕಾಬೂಲ್,ಆ,13: ಅಫ್ಗಾನಿಸ್ತಾನದ ಎರಡನೇ ಅತಿದೊಡ್ಡ ನಗರ ಕಂದಹಾರ್‌ ವಶಪಡಿಸಿಕೊಂಡಿರುವುದಾಗಿ ತಾಲಿಬಾನ್ ಉಗ್ರರು ಹೇಳಿಕೊಂಡಿದ್ದಾರೆ. ಸದ್ಯ ರಾಜಧಾನಿ ಮತ್ತು ಇತರ ಕೆಲವೇ ಭೂಭಾಗಗಳು ಸರ್ಕಾರದ ನಿಯಂತ್ರಣದಲ್ಲಿವೆ. ಉಳಿದಂತೆ ಹೆಚ್ಚಿನ ಭೂಭಾಗ ತಾಲಿಬಾನ್ ಉಗ್ರರ ವಶವಾಗಿವೆ. ‘ಕಂದಹಾರ್‌ ಅನ್ನು ಸಂಪೂರ್ಣವಾಗಿ ವಶಕ್ಕೆ ತೆಗೆದುಕೊಂಡಿದ್ದೇವೆ. ಮುಜಾಹಿದೀನ್, ನಗರದ ಹುತಾತ್ಮರ ಚೌಕ ತಲುಪಿದೆ’ ಎಂದು ತಾಲಿಬಾನ್ ವಕ್ತಾರರು ಘೋಷಿಸಿದ್ದಾರೆ. ಸರ್ಕಾರದ ಸೇನಾ ಪಡೆಗಳು ನಗರದ ಹೊರವಲದ ನೆಲೆಗಳಿಗೆ ಸಂಪೂರ್ಣವಾಗಿ ಹಿಂದೆ ಸರಿದಿವೆ ಎಂದು ಮೂಲಗಳು ಹೇಳಿವೆ. ಇತ್ತೀಚೆಗಷ್ಟೇ ಈಶಾನ್ಯ ಭಾಗದ ಬದಖ್‌ಷಾನ್‌ ಮತ್ತು…

ತನ್ನ‌ಬಿಟ್ಟು ದೇವರಿಲ್ಲ, ಮಣ್ಣ ಬಿಟ್ಟು ಮಡಿಕೆ ಇಲ್ಲ

ಸಿದ್ಧಸೂಕ್ತಿ : ತನ್ನ‌ಬಿಟ್ಟು ದೇವರಿಲ್ಲ, ಮಣ್ಣ ಬಿಟ್ಟು ಮಡಿಕೆ ಇಲ್ಲ. ದೇವರ ರೂಪ ತಿಳಿಪ ಸುಂದರ ಗಾದೆ. ತನ್ನ ಬಿಟ್ಟು, ತನ್ನ ಹೊರತು ದೇವರಿಲ್ಲ. ತಾನು ದೇವರು! ಮಡಿಕೆ ಮಣ್ಣಿನ ಪಾತ್ರೆ. ಮಣ್ಣೇ ಮಡಿಕೆರೂಪಾಯಿತು. ಮಣ್ಣ ಬಿಟ್ಟು, ಮಣ್ಣಿನ ಹೊರತು, ಮಣ್ಣು ಬೇರ್ಪಡಿಸಿದರೆ ಮಡಿಕೆ ಇಲ್ಲ. ಮಡಿಕೆ ಮಣ್ಣು! ತನಗೆ ಮೂಲ ದೇವರು. ದೇವರೇ ತಾನಾಗಿ ರೂಪಾಯಿತು. ತನ್ನಿಂದ ದೇವರನ್ನು ಬೇರ್ಪಡಿಸಿದರೆ ತಾನಿಲ್ಲ! ದೇವರು ದಿವ್ಯ ಅಗೋಚರ ಶಕ್ತಿ! ಎಲ್ಲೆಲ್ಲೂ ಹುದುಗಿದೆ! ಅಕ್ಕಿಯಲಿ ಹುಳು ಹುಟ್ಟುವುದು! ಶಕ್ತವೆಲ್ಲ…

Girl in a jacket