Girl in a jacket

Daily Archives: August 27, 2021

ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ ಇ-ಶ್ರಮ ಯೋಜನೆಗೆ ಚಾಲನೆ

ಬೆಂಗಳೂರು, ಆ,27:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯದಲ್ಲಿ ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ ಇ-ಶ್ರಮ ಯೋಜನೆಗೆ ಚಾಲನೆ ನೀಡಿದರು. ಸ್ವಾತಂತ್ರ್ಯ ಬಂದ ನಂತರ ಅಸಂಘಟಿತ ಕಾರ್ಮಿಕರ ನೋಂದಣಿ ಮೊದಲ ಬಾರಿ ನಡೆಯುತ್ತಿದೆ. ಅವರನ್ನು ಗುರುತಿಸಲಾಗುತ್ತಿದೆ. ಅಸಂಘಟಿತ ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಜೀವನದ ಭದ್ರತೆ, ಆರೋಗ್ಯ, ಶಿಕ್ಷಣ ಮೊದಲಾದ ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ಅವರಿಗೆ ಜೀವನ ಭದ್ರತೆಯೊಂದಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ದೊರೆಯುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಆಶಿಸಿದರು. ಕೂಲಿ ಕಾರ್ಮಿಕ ಇರಲಿ, ರೈತ ಕಾರ್ಮಿಕ ಇರಲಿ,…

ಪತ್ರಕರ್ತ, ಸಂಘಟನಾಕಾರ ಗುಡಿಹಳ್ಳಿ ಸ್ಮರಣೆ

ಬೆಂಗಳೂರು,ಆ,27: ಬಹುಮುಖ ಪ್ರತಿಭೆಯ ಗುಡಿಹಳ್ಳಿ ನಾಗರಾಜ ಅವರು ಪತ್ರಕರ್ತರಾಗಿ, ಬಂಡಾಯ ಸಾಹಿತ್ಯ ಸಂಘಟನೆ ಸಂಚಾಲಕರಾಗಿ, ರಂಗಕರ್ಮಿಯಾಗಿ, ಪತ್ರಕರ್ತರ ಸಂಘಟನೆಗೂ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಹೇಳಿದರು. ಬೆಂಗಳೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತಾಡಿದರು. ಗುಡಿಹಳ್ಳಿ ಅವರು ಪತ್ರಕರ್ತರಾಗಿ ರಂಗಭೂಮಿ ಬಗ್ಗೆ ಆಸಕ್ತಿ ಹೊಂದಿ ಅನೇಕ ಕಲಾವಿದರನ್ನು ಬೆಳಕಿಗೆ ತಂದರು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ತಮ್ಮ…

ರಸ್ತೆ ಸಂಪರ್ಕದಲ್ಲಿ ಕರ್ನಾಟಕ ಮಾದರಿ: ಬಿಹಾರ ಸಚಿವರ ಪ್ರಶಂಸೆ

ಬೆಂಗಳೂರು, ಆ,27:ಕರ್ನಾಟಕವು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಅಭಿವೃದ್ಧಿಗೆ ಇಲ್ಲಿಯ ಸುಸಜ್ಜಿತ ಹೆದ್ದಾರಿಗಳು ಮತ್ತು ಹೆಚ್ಚಿನ ಮೂಲಸೌಲಭ್ಯಗಳು ಕಾರಣ ಎಂದು ಬಿಹಾರದ ರಸ್ತೆ ನಿರ್ಮಾಣ ಇಲಾಖೆಯ ಸಚಿವರಾದ  ನಿತಿನ್ ನಬಿನ್ ಅವರು ಪ್ರಶಂಸಿಸಿದರು. ವಿಕಾಸಸೌಧದಲ್ಲಿ ಇಂದು ಲೋಕೋಪಯೋಗಿ ಸಚಿವರಾದ ಸಿ.ಸಿ. ಪಾಟೀಲ ಅವರನ್ನು ಭೇಟಿಯಾಗಿ ಕರ್ನಾಟಕದಲ್ಲಿ ಕೈಗೊಳ್ಳುತ್ತಿರುವ ಹೆದ್ದಾರಿ ಮತ್ತು ರಸ್ತೆ ನಿರ್ಮಾಣಗಳ ಯೋಜನೆಗಳ ಬಗ್ಗೆ ಮಾಹಿತಿಗಳನ್ನು ಪಡೆದುಕೊಂಡ ಬಳಿಕ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡರು. ಕರ್ನಾಟಕದಲ್ಲಿ ಮೂಲೆಮೂಲೆಗಳಿಗೂ ಅಳವಡಿಸಿರುವ ರಸ್ತೆ ಸಂಪರ್ಕವು ಇಡೀ ದೇಶದಲ್ಲೇ ಮಾದರಿಯಾಗಿದೆ. ಕರ್ನಾಟಕದ…

ರಾಜ್ಯದಲ್ಲಿ ಅತ್ಯಾಧುನಿಕ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಬೆಂಬಲ; ಬೊಮ್ಮಾಯಿ

ಬೆಂಗಳೂರು, ಆ, 27: ಉದ್ಯೋಗ ಸೃಜಿಸುವ ಆಭರಣ ಉದ್ದಿಮೆ ಕೌಶಲ್ಯವಿರುವ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೀಗಾಗಿ ಆಧುನಿಕ‌ ತಂತ್ರಜ್ಞಾನದಿಂದ ಆಭರಣ ಉತ್ಪಾದನೆಗೆ ಅನುಕೂಲವಾಗುವಂಥ ಅತ್ಯಾಧುನಿಕ ಜುವೆಲರಿ ಪಾರ್ಕ್ ನಿರ್ಮಾಣಕ್ಕೆ ಅಗತ್ಯ ಇರುವ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಜುವೆಲ್ಲರಿ ಸಂಸ್ಥೆಗೆ ಸಲಹೆ ನೀಡಿದರು.‌ ಇಂದು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಸೌತ್ ಜ್ಯುವೆಲ್ಲರಿ ಷೋ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಬ್ಯುಲಿಯನ್ ವಿನಿಮಯ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಭಾರತದ ಆಭರಣ ವ್ಯಾಪಾರ ಅಂತರರಾಷ್ಟ್ರೀಯ ಮಟ್ಟದಲ್ಲಿ ಪೈಪೋಟಿ ಮಾಡಬೇಕಾದ ಸಂದರ್ಭವಿದೆ.…

ಯಡಿಯೂರಪ್ಪ ಪ್ರವಾಸ:ಬಿಜೆಪಿಯಲ್ಲಿ ಅಪಸ್ವರ ‘ರಾಜ್ಯಪಾಲರಾಗಲಿ’ಎಂಬ ಒತ್ತಡ ಸಾಧ್ಯತೆ

‌‌‌‌     ‌‌                  ಸಿ.ರುದ್ರಪ್ಪ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರದ ಬೆಳವಣಿಗೆಗಳು ರಾಜ್ಯ ರಾಜಕಾರಣದಲ್ಲಿ ಹಲವು ಮಜಲುಗಳನ್ನು ಪಡೆಯುತ್ತಿದೆ,ಇದೇ ವೇಳೆ ಅವರು ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದ್ದು ಪಕ್ಷದಲ್ಲಿ ಅಸಮಾಧಾನ ಉಂಟಾಗಿದೆ ಈ ಕುರಿತು ಆಂತರಿಕ ಒಳಸುಳಿಯನ್ನು ಹಿರಿಯ ಪತ್ರಕರ್ತರಾದ   ಸಿ.ರುದ್ರಪ್ಪ ವಿಶ್ಲೇಷಣೆ ಇಲ್ಲಿದೆ.. ಯಡಿಯೂರಪ್ಪ ಪ್ರವಾಸ:ಬಿಜೆಪಿಯಲ್ಲಿ ಅಪಸ್ವರ ‘ರಾಜ್ಯಪಾಲರಾಗಲಿ’ಎಂಬ ಒತ್ತಡ ಸಾಧ್ಯತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ರಾಜ್ಯ ಪ್ರವಾಸಕ್ಕೆ…

“ಕುಸ್ತಿ” ಗೆ “ಯೋಗಿ” ಬಲ..!

Reported By : H.D. Savita ಹೊಸದಿಲ್ಲಿ: ಭಾರತದಲ್ಲಿ ಕುಸ್ತಿ ಕ್ರೀಡೆಯನ್ನು ಮತ್ತಷ್ಟು ಪ್ರೋತ್ಸಾಹಿಸಲು ಉತ್ತರಪ್ರದೇಶ ಸರ್ಕಾರ 2032ರ ಒಲಂಪಿಕ್ಸ್ ವರೆಗೆ ಭಾರತೀಯ ಕುಸ್ತಿಯನ್ನು ದತ್ತು ಪಡೆಯಲು ನಿರ್ಧರಿಸಿದೆ. ಈ‌ ನಿಟ್ಟಿನಲ್ಲಿ ಭಾರತೀಯ ಕುಸ್ತಿ ಒಕ್ಕೂಟ ಉತ್ತರಪ್ರದೇಶ ಸರ್ಕಾರಕ್ಕೆ ಮನವಿ ಮಾಡಿದ್ದು, ಇದಕ್ಕೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸಮ್ಮತಿಸಿದ್ದಾರೆ. ಕುಸ್ತಿ ಪಟುಗಳಿಗೆ ಮೂಲಭೂತ ಸೌಕರ್ಯ ಸೇರಿದಂತೆ ಸಂಪೂರ್ಣ ಬೆಂಬಲ ನೀಡುವುದಾಗಿ ಯುಪಿ ಸರ್ಕಾರವು ಸುಮಾರು 170ಕೋಟಿ ರೂ.‌ಬಂಡವಾಳ ಹೂಡಿಕೆ ಮಾಡುವ‌ ನೀರಿಕ್ಷೆ ಇದೆ ಎಂದು…

ಸಡಿಲುವವು ಬಾಳ್ ಮಾಗೆ ಮಂಕುತಿಮ್ಮ

              ಸಿದ್ಧಸೂಕ್ತಿ :           ಸಡಿಲುವವು ಬಾಳ್ ಮಾಗೆ ಮಂಕುತಿಮ್ಮ. ಬಾಳು ಮಾಗಿದಂತೆ ಸಂಬಂಧ ಶಿಥಿಲ. ಹೊಸತರಲ್ಲಿ ಅದು ಎಳೆ ಸೂಕ್ಷ್ಮ. ಬಲಿತಂತೆ ಗಟ್ಟಿ. ಮಾಗಿದಂತೆ ಸಡಿಲು! ಹೂ ಮಿಡಿ ಕಾಯಿ ಹಣ್ಣು ಮುಟ್ಟಿ ಕಿತ್ತಿ ನೋಡಿ! ಪಕ್ವ ಹಣ್ಣು ತಂತಾನೇ ಭೂಮಿಗೊರಗುವುದು! ಇಷ್ಟಪಟ್ಟ ಪುಸ್ತಕ ಓದುತ್ತ ಮಲಗಿದಾತನ ಕೈ ಮಲಗುವುದು! ಪುಸ್ತಕ ಕಳಚುವುದು! ಕಾಲ ಪಕ್ವವಾಗುತ್ತಲೇ ಸ್ತ್ರೀ ಪುರುಷ ಕುಟುಂಬ…

ಕೃಷ್ಣಾ ಮೇಲ್ದಂಡೆ ವಿವಾದ ಸುಪ್ರೀಂಗೆ ಅರ್ಜಿಗೆ ನಿರ್ಧಾರ: ಬೊಮ್ಮಾಯಿ

ನವದೆಹಲಿ,ಆ,27: ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಾವೇರಿ ನದಿ ಕಣಿವೆಯಲ್ಲಿ ತಮಿಳುನಾಡು ಸರ್ಕಾರ ಕೈಗೊಂಡಿರುವ ಯೋಜನೆಗಳ ಬಗ್ಗೆಯೂ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. ತಮಿಳುನಾಡು ಸರ್ಕಾರವು ನದಿ ಜೋಡಣೆಗೆ ಮುಂದಾಗಿದೆ. ಆದರೆ, ಅದು ಕಾನೂನುಬಾಹಿರ. ಈ ಬಗ್ಗೆ ವಕೀಲರ ತಂಡದ ಜತೆಗೆ ಚರ್ಚಿಸಲಾಗಿದೆ. ಹಾಗೆಯೇ, ರಾಜ್ಯದ ಜಲವಿವಾದ ಪ್ರಕರಣಗಳ ಸಂಬಂಧ ಕಾನೂನು ಮತ್ತು ತಾಂತ್ರಿಕ ತಜ್ಞರೊಂದಿಗೆ ಸುದೀರ್ಘ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.…

Girl in a jacket