Girl in a jacket

Daily Archives: September 6, 2021

ರಾಜ್ಯದಲ್ಲಿ ಮಹಿಳಾ‌ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ;ಸಿದ್ದರಾಮಯ್ಯ ಕಳವಳ

ಬೆಂಗಳೂರು,ಸೆ,06:ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದರೂ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ನೆರವು ನೀಡುವ ಸಾಂತ್ವನ ಕೇಂದ್ರಗಳನ್ನು ಆರ್ಥಿಕ ಕೊರತೆಯ ನೆಪವೊಡ್ಡಿ ಸ್ಥಗಿತಗೊಳಿಸಲು ಹೊರಟಿರುವುದು ರಾಜ್ಯ ಸರ್ಕಾರದ ಮಹಿಳಾ ವಿರೋಧಿ ಕ್ರಮವಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಲು ಕೈಗೊಂಡಿರುವ ತೀರ್ಮಾನ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ. ನೊಂದ…

ಕುರಿಗಾಹಿಗಳ ಜತೆ ಊಟಸವಿದ ಪುನಿತ್ ರಾಜ್ ಕುಮಾರ್

ನಟ ಪುನಿತ್ ರಾಜ್ ಕುಮಾರ್ ಕುರಿಗಾಹಿಗಳ ಜೊತೆ ಕಾಲಕಳೆದು ಅವರೊಂದಿಗೆ ಬೋಜನ ಸ್ವೀಕರಿಸುವ ಮೂಲಕ ಎಲ್ಲರ ಗಮನ ಸೆಳದಿದ್ದಾರೆ ಗಂಗಾವತಿಯ ಅಂಜನಾದ್ರಿ ಬೆಟ್ಟದಲ್ಲಿಪವರ್ ಸ್ಟಾರ್ ಪುನೀತ್ ರಾಜಕುಮಾರ್ ಭಾನುವಾರ ಕೊಪ್ಪಳದ ಗಂಗಾವತಿ ಸನಿಹದಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ದೇವರ ದರ್ಶನಕ್ಕೆ ತೆರಳಿದ್ದರು. ಕೊರೋನಾ ನಿಯಮಗಳ ಕಾರಣಕ್ಕೆ ಪುನೀತ್ ರಾಜಕುಮಾರ್ ಗೆ ಪ್ರವೇಶಾವಕಾಶ ಸಿಗಲಿಲ್ಲ. ಇದರಿಂದ ಬೇಸರಗೊಳ್ಳದೇ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಓಡಾಟ ನಡೆಸಿದ ಪುನೀತ್ ರಾಜಕುಮಾರ್, ಗಂಗಾವತಿ ಸಮೀಪದ ಹಳ್ಳಿಗಳಿಗೆ ಭೇಟಿ ನೀಡಿದರು. ಕುರಿಗಾಹಿಗಳ ಬಳಿ ತೆರಳಿದ ಪುನೀತ್ ಅವರ…

೫ದಿನಗಳ ಕಾಲ ಗಣೇಶೋತ್ಸವಕ್ಕೆ ಷರತ್ತುಬದ್ದ ಅನುಮತಿ

ಬೆಂಗಳೂರು: ಹಲವು ಒತ್ತಡಗಳ ನಡುವೆಯೇ ರಾಜ್ಯದಲ್ಲಿ ೫ ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.…

ಸೆ.೮ಕ್ಕೆ ಕೊಟ್ಟಿಗೆಹಾರದಲ್ಲಿ ತೇಜಸ್ವಿ ಸಾಹಿತ್ಯ ವಿಚಾರ ಮಂಥನ

ಚಿಕ್ಕಮಗಳೂರು. ಸೆ, ೫: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಚಿಕ್ಕಮಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಹಿತಿ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ ೮ ರಂದು ತೇಜಸ್ವಿ ಸಾಹಿತ್ಯ ವಿಚಾರ ಮಂಥನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಬೆಳಗ್ಗೆ ೧೧;೩೦ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ”ವರ್ತಮಾನದಲ್ಲಿ ತೇಜಸ್ವಿ ವಿಚಾರಧಾರೆ” ವಿಷಯದ ಕುರಿತು ಚಿಕ್ಕಮಗಳೂರಿನ ನಿವೃತ್ತ ಉಪನ್ಯಾಸಕರಾದ ಬಿ ತಿಪ್ಪೆರುದ್ರಪ್ಪ ಅವರು ಉಪನ್ಯಾಸ ನೀಡಲಿದ್ದಾರೆ. ಹಾಸನದ ಅಬಚೂರಿನ ಮಿತ್ರವೃಂದ ಪ್ರಕಾಶನದ ತೇಜಸ್ವಿಯವರ ನೆನಪಿನ ಕಥಾಸ್ಪರ್ಧೆ…

ತತ್ತ್ವವೊಂದರ ಹಿಡಿತಕ್ಕೊಗ್ಗದಿಹ ಬಾಳೇನು?

   ಸಿದ್ಧಸೂಕ್ತಿ :        ತತ್ತ್ವವೊಂದರ ಹಿಡಿತಕ್ಕೊಗ್ಗದಿಹ ಬಾಳೇನು? ಪ್ರತಿ ಜೀವಿ ವಸ್ತುವಿಗೆ ನಿರ್ದಿಷ್ಟ ತತ್ತ್ವಾದರ್ಶವಿದೆ, ಇರಬೇಕು! ಸೂರ್ಯ ಬೆಂಕಿ ಸುಡುತಿರಬೇಕು. ಚಂದ್ರ ನೀರು ತಂಪಿರಬೇಕು. ಹುಳಿ ಉಪ್ಪು ಕಹಿ ಖಾರ ಸಿಹಿ ವಗರು ತಮ್ಮ ತಮ್ಮಯ ರುಚಿಯನ್ನು ಕೊಡುತಿರಲುಬೇಕು! ಅದರವರ ಗುಣಧರ್ಮ ಕರ್ತವ್ಯ ಅದು ಅವರು ಪಾಲಿಸಲೇಬೇಕು. ಇಲ್ಲದಿರೆ ಬೆಲೆ ಬಾಳು ಅದಕವರಿಗಿಲ್ಲ! ಮದುವೆಯಾದರೆ ಗಂಡು ಗಂಡನಂತಿರಬೇಕು,ಹೆಣ್ಣು ಹೆಂಡತಿಯಂತಿರಬೇಕು. ಸತಿ ಪತಿ ಒಂದಾಗಿ ಬಾಳದಿರೆ ಆ ದಾಂಪತ್ಯವೇಕೆ? ತಂದೆ ತಾಯಿ ಅತ್ತೆ…

ಇಂದಿನಿಂದ6ರಿಂದ8ನೇತರಗತಿ ಶಾಲೆಗಳು ಆರಂಭ

ಬೆಂಗಳೂರು,ಸೆ,06:  ಇಂದಿನಿಂದ 6ರಿಂದ8ನೇತರಗತಿ ವರೆಗೆ ಶಾಲೆಗಳು ಆರಂಭವಾಗಲಿವೆ. ಕೋವಿಡ್‌ ಮುನ್ನೆಚ್ಚರಿಕೆ ಕ್ರಮ ವಹಿಸಿಕೊಂಡು, ಎಸ್‌ಒಪಿ  ಪಾಲಿಸಿ ತರಗತಿಗಳನ್ನು ಆರಂಭಿಸುವಂತೆ ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಪ್ರತಿಕ್ರಿಯಿಸಿ, ‘ಶಾಲೆ ಆರಂಭಿಸುವ ಬಗ್ಗೆ ಪೋಷಕರ ಸಭೆ ನಡೆಸಿದ್ದೇವೆ. ಆದರೆ, ಹೆಚ್ಚಿನ ಪೋಷಕರು ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಮುಂದುವರಿಸುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ’ ಎಂದರು. ಶಾಲೆಗಳಲ್ಲಿ ಭೌತಿಕ ತರಗತಿಗಳು ಆರಂಭವಾಗುತ್ತಿರುವ ಕಾರಣ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್…

Girl in a jacket