Girl in a jacket

Daily Archives: September 15, 2021

ರಾಜ್ಯದ ಪ್ರಮುಖ ಜಿಲ್ಲಾ ಕೇಂದ್ರಗಳಲ್ಲಿ ವಿಮಾನನಿಲ್ದಾಣ ಹಾಗೂ ಹ್ಯಾಲಿಪ್ಯಾಡ್ ನಿರ್ಮಾಣ

ಬೆಂಗಳೂರು, ಸೆ, 15-:ಸುಲಲಿತ ವ್ಯಾಪಾರೋದ್ಯಮಕ್ಕೆ ನೆರವಾಗುವಂತೆ ರಾಜ್ಯದ ಆಯ್ದ ಜಿಲ್ಲಾ ಕೇಂದ್ರಗಳಲ್ಲಿ ವಿಮಾನ ನಿಲ್ದಾಣಗಳನ್ನು ಪ್ರಾರಂಭಿಸುವ ಚಿಂತನೆ ಮಾಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮುರುಗೇಶ್ ನಿರಾಣಿ ತಿಳಿಸಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‍ಕೆಸಿಸಿಐ) ಆಯೋಜಿಸಿದ್ದ ಸಮಾರಂಭದಲ್ಲಿ ನಾನಾ ಪ್ರತಿಷ್ಠಿತ ಉದ್ಯಮದಾರರಿಗೆ `ರಫ್ತು ಶ್ರೇಷ್ಠತಾ ಪ್ರಶಸ್ತಿ’ ಪ್ರದಾನ ಮಾಡಿ ಮಂಗಳವಾರ ಅವರು ಮಾತನಾಡಿದರು. ವಿಮಾನ ನಿಲ್ದಾಣಗಳನ್ನು ಸ್ಥಾಪಿಸುವ ಸಂಬಂಧ ಕೇಂದ್ರ ಸರಕಾರದೊಂದಿಗೆ ಮಾತುಕತೆ ನಡೆಸಿ, ಇದಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲೇ ನಡೆಸಲು…

ಆಲಮಟ್ಟಿ: ಎಲ್ಲಾ ೨೬ ಗೇಟ್ ಗಳ ಮೂಲಕ ನೀರು ಹೊರಕ್ಕೆ

ಆಲಮಟ್ಟಿ,ಸೆ,15:ಆಲಮಟ್ಟಿ ಜಲಾಶಯದ ಹರಿದು ಬರುವ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಮುಂಜಾಗ್ರತೆಯ ಕ್ರಮವಾಗಿ ಜಲಾಶಯದ ಎಲ್ಲಾ ೨೬ ಗೇಟ್ ಗಳ ಮೂಲಕ ನೀರನ್ನು ನದಿ ತಳಪಾತ್ರಕ್ಕೆ ಹರಿಸಲಾಗುತ್ತಿದೆ. ಗೇಟ್ ಗಳ ಮೂಲಕ ೮೦,೦೦೦ ಕ್ಯುಸೆಕ್ ಹಾಗೂ ಕೆಪಿಸಿಎಲ್ ಮೂಲಕ ೪೦,೦೦೦ ಕ್ಯುಸೆಕ್ ಸೇರಿ ಒಟ್ಟಾರೇ ೧,೨೦,೦೦೦ ಕ್ಯುಸೆಕ್ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ. ಏಕಾಏಕಿ ಈ ಪ್ರವಾಹ ಉಂಟಾಗಿದ್ದು, ತಾತ್ಕಾಲಿಕವಾಗಿ ಒಂದೆರಡು ದಿನಗಳಲ್ಲಿ ಕಡಿಮೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿವೆ. ಸದ್ಯ ಜಲಾಶಯದ ಒಳಹರಿವು ೮೯,೦೦೦ ಕ್ಯುಸೆಕ್ ಇದ್ದು, ಜಲಾಶಯದ ಮಟ್ಟ…

ಅಡುಗೆ ಅನಿಲ ಸ್ಪೋಟ; ಸುಟ್ಟು ಕರಕಲಾದ ಸಾಮಗ್ರಿಗಳು

ಆಲಮಟ್ಟಿ,ಸೆ,15: ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕ್ ಬೇನಾಳ NH ಗ್ರಾಮದಲ್ಲಿ ಅಡುಗೆ ಅನಿಲ ಸ್ಪೋಟಗೊಂಡು ಎರಡು ಲಕ್ಷ ರೂ ಮೌಲ್ಯದ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಇಂದು ಬೆಳಗ್ಗೆ ಬುಡ್ಡಸಾಬ್ ಮಲ್ಲಿಕಸಾಬ್ ಗಂಜಿಹಾಳ್ ಅವರ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು  ಸ್ಪೋಟಕ್ಕೆ ಮನೆಗೆ ಬೆಂಕಿ ತಗುಲಿದ್ದು ಮನೆ ಹತ್ತಿಉರಿದಿದೆ. ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಬಂದು ಬೆಂಕಿ ನಂದಿಸಿ ಆಗುವ ಮತ್ತಷ್ಟು ಅನಾಹುತವನ್ನು ತಡೆದಿದೆ.15 ಚೀಲ ಜೋಳ ಗೋಧಿ ಮತ್ತಿತರ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ತಸಿಲ್ದಾರ್ ಸತೀಶ್…

ಎನ್.ಇ.ಪಿ ಬಗ್ಗೆ ಮುಕ್ತ ಚರ್ಚೆಗೆ ಸರ್ಕಾರ ಸಿದ್ಧ- ಬಸವರಾಜ ಬೊಮ್ಮಾಯಿ

ಬೆಂಗಳೂರು, ಸೆ,15: ಎನ್.ಇ.ಪಿ ( ನ್ಯೂ ಎಜುಕೇಶನ್ ಪಾಲಿಸಿ) ಬಗ್ಗೆ ಮುಕ್ತವಾಗಿ ಚರ್ಚಿಸಲು ಸರ್ಕಾರ ಸಿದ್ಧವಿದ್ದು, ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬಿ.ಬಿ.ಎಂ.ಪಿ ಆಯೋಜಿಸಿದ್ದ ಭಾರತದ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ 161 ನೇ ಜಯಂತಿ ಅಂಗವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಇಂದಿನ ಕಾಲಕ್ಕೆ ತಕ್ಕ ಹಾಗೆ ಪ್ರಸ್ತುತವಾಗುವಂತೆ, ಯುವಕರಿಗೆ ಉತ್ತಮ ಭವಿಷ್ಯ ನೀಡುವಂತೆ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಸದುದ್ದೇಶವಿದೆ.…

ಆಡಳಿತಕ್ಕೆ ಮೇಜರ್ ಸರ್ಜರಿ:ತೀವ್ರ ಒತ್ತಡದಲ್ಲಿ ಸಿಎಂ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಆಡಳಿತಕ್ಕೆ ಮತ್ತಷ್ಟು ಚುರುಕು ತರು ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಕಾರ್ಯಗಳ ತೀವ್ರತೆ ತರಲು ಹೇಗೆ ಎನ್ನುವ ಕುರಿತು ಹಿರಿಯ ಪತ್ರಕರ್ತರಾದ ಸಿ.ರುದ್ರಪ್ಪ ಇಲ್ಲಿ ವಿಶ್ಲೇಷಿಸಿದ್ದಾರೆ. ಸಿ.ರುದ್ರಪ್ಪ,ಹಿರಿಯ ಪತ್ರಕರ್ತರು ಆಡಳಿತಕ್ಕೆ ಮೇಜರ್ ಸರ್ಜರಿ:ತೀವ್ರ ಒತ್ತಡದಲ್ಲಿ ಸಿಎಂ  ಆಡಳಿತಕ್ಕೆ ಮೇಜರ್ ಸರ್ಜರಿ ಸಂಬಂಧಿಸಿದಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಒತ್ತಡದಲ್ಲಿ ಸಿಲುಕಿದ್ದಾರೆ. ಯಾವುದೇ ನೂತನ ಮುಖ್ಯಮಂತ್ರಿ ತಮ್ಮ ವೇಗ ಮತ್ತು ದೃಷ್ಟಿಕೋನಕ್ಕೆ ತಕ್ಕಂತೆ ಕೆಲಸ ಮಾಡುವ ಅಧಿಕಾರಿಗಳನ್ನು ಪ್ರಮುಖ…

ಆರ್ ಎಸ್ ನೋಡಿದರೆ ಸರ್ ಎಂ.ವಿ  ಮರೆಯದ ಹೆಸರು

ಜಿ.ಕೆ.ಹೆಬ್ಬಾರ್, ಶಿಕಾರಿಪುರ ಆರ್ ಎಸ್ ನೋಡಿದರೆ ಸರ್ ಎಂ.ವಿ  ಮರೆಯದ ಹೆಸರು ಇತ್ತೀಚಿನ ದಿನಗಳಲ್ಲಿ  ಸೇತುವೆ ನಿಮಿಸಿದವರು ಅವರು ಬದುಕಿದ್ದಾಗಲೇ ಕಟ್ಟಿದ ಸೇತುವೆಗಳು ಬಿದ್ದು ಹೋಗುತ್ತಿವೆ ಆದರೆ ಹಿಂದಿನ ಡ್ಯಾಂ ಸೇತುವೆಗಳು ಕಟ್ಟಿದ ವ್ಯಕ್ತಿ ನಿಧನ ರಾದರು ಅವರು ಕಟ್ಟಿದ ಸೇತುವೆಗಳು ಅಮಾರವಾಗಿವೆ ಅದಕ್ಕೆ ಸ ರ್ ಎಂ ವಿ.ನಿರ್ಮಿಸಿದ  ಕೆ ಆರ್ ಎಸ್ ಸಾಕ್ಷಿಯಾಗಿದೆ.  ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ…

ನಾ ನಿನಗಾದರೆ,ನೀ ನನಗೆ

ಸಿದ್ಧಸೂಕ್ತಿ :                   ನಾ ನಿನಗಾದರೆ, ನೀ ನನಗೆ. ನೀ=ನೀ, ಪರ, ಸಮಾಜ. ಪರಸ್ಪರ ಸಹಕಾರ ಜಗದ ಅಗತ್ಯ.ಕಿವಿ ಕೇಳುವುದು, ಕಣ್ಣು ನೋಡುವುದು, ಬಾಯಿ ಮಾತನಾಡುವುದು, ಕಾಲು ಹೋಗುವುದು,ಕೈ ತೆಗೆದುಕೊಳ್ಳುವುದು. ಪರಸ್ಪರ ಸಹಕಾರ ಇಲ್ಲದಿರೆ ಇವು ನಡೆಯವು. ಕಿವಿ ಅಹಂಕಾರಿಯಾದರೆ, ಕಣ್ಣೆತ್ತಿ ನೋಡದು, ಕಾಲು ಹೊರಡದು! ಬೆರಳುಗಳು ಹೇಳುತ್ತವೆ “ಹಿರಿ ಕಿರಿದಾದರೂ ಹೊಂದಿ ಒಂದಾದರೆ, ಅದ್ಭುತದ ಸಾಧನೆ”. ನನಗಿರುವುದು ನಿನಗಿಲ್ಲ, ನಿನಗಿರುವುದು ನನಗಿಲ್ಲ. ನಿನ್ನದು ನನಗೆ…

Girl in a jacket