Girl in a jacket

Daily Archives: September 24, 2021

ಅಕ್ಟೋಬರ್ 1 ರಿಂದ ಚಿತ್ರಮಂದಿರ ಶೇ. 100 ಭರ್ತಿಗೆ ಅವಕಾಶ:ಸಿಎಂ ಬೊಮ್ಮಾಯಿ

ಬೆಂಗಳೂರು, ಸೆ, 24:ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ ದರ ಶೇ. 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಚಿತ್ರಮಂದಿರಗಳಲ್ಲಿ ಶೇ. 100 ಸೀಟು ಭರ್ತಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ಕುರಿತಂತೆ ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು.. ರಾಜ್ಯದಲ್ಲಿ ಪ್ರಸ್ತುತ ಸರಾಸರಿ ಪಾಸಿಟಿವಿಟಿ ದರ 0.66 % ಇದೆ. ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ…

ಬಿಎಸ್ ವೈ ಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಬೆಂಗಳೂರು,ಸೆ,24: ಲೋಕಸಭಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದ ವಿಧಾನಮಂಡಲ ಅಧಿವೇಶನದಲ್ಲೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಯಿತು. ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಯಡಿಯೂರಪ್ಪರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಿದರು. ರಾಜ್ಯ ವಿಧಾನಸಭೆಯಲ್ಲಿ ಅತ್ಯುನ್ನತ ಗೌರವಕ್ಕೆ ಭಾಜನರಾದ ಮಾಜಿ‌ ಮುಖ್ಯಮಂತ್ರಿಗಳು ಹಾಗೂ ಜನಸೇವೆಯನ್ನೇ ಮೂಲಮಂತ್ರವನ್ನಾಗಿಸಿಕೊಂಡ ನಾಯಕರಾದ ಯಡಿಯೂರಪ್ಪ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಸ್ಪೀಕರ್ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ, ಐತಿಹಾಸಿಕ ಜಂಟಿ…

ಜನಪರ ಕೆಲಸಗಳಿಗೆ ಸ್ಪಂದಿಸಲು; ಶಾಸಕರಿಗೆ ಕರೆ

ಬೆಂಗಳೂರು,ಸೆ,24: ಜನಪರ ಸಮಸ್ಯೆಗಳಿಗೆ ಸ್ಪಂದಿಸಿದಾಗ ಮಾತ್ರ ಜನಪ್ರತಿನಿಧಿಗಳಿಗೆ ಗೌರವ ದೊರಕುತ್ತದೆ. ಇಡಿ ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಜನರು ನಂಬಿಕೆ ಕಳೆದುಕೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದು ಲೋಕಸಭೆ ಸ್ಪೀಕರ್ ಓಂಬಿರ್ಲಾ ಅವರು ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಶಾಸಕರಿಗೆ ಕಿವಿಮಾತು ಹೇಳಿದರು. ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಲೋಕಸಭೆ ಸ್ಪೀಕರ್​​ ಓಂ ಬಿರ್ಲಾ ಅವರು, ವಿಧಾನಸೌಧ ನಿರ್ಮಿಸಿದ ಕೆಂಗಲ್ ಹನುಮಂತಯ್ಯರಿಗೆ ಧನ್ಯವಾದ ಹೇಳುತ್ತೇನೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರನ್ನ ಸ್ಮರಿಸುತ್ತೇನೆ. ಜತೆಗೆ ಯಡಿಯೂರಪ್ಪರನ್ನ ಗೌರವಿಸಿದ್ದು ಹೆಮ್ಮೆಯ ವಿಷಯ. ವಿಧಾನಸಭೆ,…

ಸಭಾಧ್ಯಕ್ಷರು ಒಂದು ಪಕ್ಷದ ಪರ ವರ್ತಿಸಿದ್ದು ಸರಿ ಅಲ್ಲ;ಸಿದ್ದು

ಬೆಂಗಳೂರು,ಸೆ,24 : ಸಭಾಧ್ಯಕ್ಷರ ಹುದ್ದೆ ರಾಜಕಿಯ ಮತ್ತು ಪಕ್ಷಗಳನ್ನು ಮೀರಿದ ಹುದ್ದೆ. ಅವರ ನಿರ್ಣಯಗಳು ಯಾವಾಗಲೂ ಪಕ್ಷಾತೀತವಾಗಿರಬೇಕು. ಸಭಾಧ್ಯಕ್ಷರು ಒಂದು ರಾಜಕೀಯ ಪಕ್ಷದ ಸದಸ್ಯನಂತೆ ವರ್ತಿಸುವುದಾದರೆ ಆ ಹುದ್ದೆಗೆ ಮಹತ್ವವೇನಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಜಾಪ್ರಭುತ್ವದಲ್ಲಿ, ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟಿದ್ದಾರೆ ಎಂಬ ನನ್ನ ನಂಬಿಕೆ ಹುಸಿಯಾಗಿದೆ. ಮುಖ್ಯಮಂತ್ರಿಯಾದಿಯಾಗಿ ಇಡೀ ಸರ್ಕಾರ ಆರ್.ಎಸ್.ಎಸ್ ನವರ ನಿರ್ದೇಶನದಲ್ಲಿ ಮುಖವಾಡ ಧರಿಸಿ, ಅವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.…

ದಕ್ಷಿಣ ಕರ್ನಾಟಕದ ಅಪರೂಪದ ಪ್ರಾಚೀನ ಬೌದ್ಧ ಕೇಂದ್ರ ರಾಜಘಟ್ಟ

ದಕ್ಷಿಣ ಕರ್ನಾಟಕದ ಅಪರೂಪದ ಪ್ರಾಚೀನ ಬೌದ್ಧ ಕೇಂದ್ರ ರಾಜಘಟ್ಟ ೨೦೦೭ನೆಯ ಇಸವಿ. ಕ್ಷೇತ್ರಕಾರ್ಯಕ್ಕೆಂದು ಹೊರಟ ಸಂದರ್ಭ. ಕರ್ನಾಟಕದ ಪ್ರಮುಖ ಪ್ರಾಚೀನ ಸಾಂಸ್ಕೃತಿಕ ನೆಲೆಗಳನ್ನು ನೋಡುವ ತವಕದಿಂದ ಮೈಸೂರು, ಸೋಮನಾಥಪುರ, ತಲಕಾಡು, ಶ್ರೀರಂಗಪಟ್ಟಣ ಮೊದಲಾದ ಚಾರಿತ್ರಿಕ ಸ್ಥಳಗಳನ್ನು ಅಧ್ಯಯನದ ದೃಷ್ಟಿಯಿಂದ ನೋಡಿ ದಾಖಲಿಸಿಕೊಳ್ಳಲು ಪಯಣಿಸಿದ್ದೆನು. ಇವೆಲ್ಲವನ್ನೂ ನೋಡಿ ಬೆಂಗಳೂರಿಗೆ ಬಂದಾಗ ನನಗೆ ನೋಡಬೇಕೆಂಬ ಕುತೂಹಲ ಹುಟ್ಟಿಸಿದ ಪ್ರಾಚೀನ ನೆಲೆ ರಾಜಘಟ್ಟ. ಈ ಸ್ಥಳವು ಅಷ್ಟೊತ್ತಿಗಾಗಲೇ ಉತ್ಖನನದ ಮೂಲಕ ಜಗತ್ತಿಗೆ ಚಿರಪರಿಚಿತವಾಗಿತ್ತು. ಅದು ಸಾಕಾವಾದದ್ದು ೨೦೦೧ ಮತ್ತು ೨೦೦೪…

ದೆಹಲಿ ಕೋರ್ಟ ಆವರಣದಲ್ಲಿ ಗ್ಯಾಂಗ್ ವಾರ್; ಫೈರಿಂಗ್ ನಲ್ಲಿ ನಾಲ್ವರು ಸಾವು

ನವದೆಹಲಿ, ಸೆ,24: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುವ ವೇಳೆ ದುಷ್ಕರ್ಮಿಗಳು ನ್ಯಾಯಾಲಯದ ಒಳಗಡೆಯೇ ಗುಂಡಿನ ದಾಳಿ ನಡೆದಿದ್ದು ಪೈರಿಂಗ್ ನಲ್ಲಿ ನಾಲ್ವರ ಸಾವನ್ನಪ್ಪಿದ್ದಸರೆ. ದೆಹಲಿ ಕೋರ್ಟ ಆವರಣದಲ್ಲಿ ನಡೆದ ಈ ಘಟನೆಯಿಂದ ನ್ಯಾಯಾಲಯದಲ್ಲಿ ಆತಂಕದ ವಾತಾವರಣ ಸೃಷ್ಟಿಯಸಗಿತ್ತು. ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ. ಗ್ಯಾಂಗ್ ಸ್ಟರ್ ಜಿತೇಂದ್ರ ಯೋಗಿ ಎಂಬಾತನನ್ನು ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ರೂಂ ನಂಬರ್ 207ರಲ್ಲಿ ನ್ಯಾಯಾಧೀಶರ ಮುಂದೆ ವಿಚಾರಣೆ ನಡೆಯುತ್ತಿತ್ತು. ಈ ವೇಳೆ ವಕೀಲರ ವೇಷದಲ್ಲಿ…

ಐಎಸ್ ಐ ಗೂಢಾಚಾರಿಗಳ ಕಣ್ಣು ಈಗ ಕರ್ನಾಟಕ ದತ್ತ..!

ಐಎಸ್ ಐ ಗೂಢಾಚಾರಿಗಳ ಕಣ್ಣು ಈಗ ಕರ್ನಾಟಕ ದತ್ತ..! Writing;ಪರಶಿವನ ಧನಗೂರು ದಕ್ಷಿಣ ಕಮಾಂಡರ್ ಸೇನಾ ಗುಪ್ತದಳದ ಅಧಿಕಾರಿಗಳು ಮತ್ತು ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಏಜೆಂಟ್ ನಂತೆ ಕೆಲಸಮಾಡುತ್ತಿದ್ದ ನಕಲಿ ಸೇನಾಧಿಕಾರಿ ಜಿತೇಂದರ್ ಸಿಂಗ್ ಎಂಬಾತನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕಾಟನ್ ಪೇಟೆಯ ಜಾಲಿಮೊಹಲ್ಲಾದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ರಾಜಸ್ಥಾನ ಮೂಲದ ಈ ಜಿತೇಂದರ್ ಸಿಂಗ್ ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿ ಹಂಚಿಕೊಂಡಿರುವ ಬಾಡ್ಮೇರ್ ಜಿಲ್ಲೆಯವನು. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ…

ಕಲ್ಯಾಣ ಕರ್ನಾಟಕ ಭಾಗದ 20 ಸಾವಿರ ನೇರನೇಮಕಾತಿಗೆ ಬದ್ದ; ಸಿಎಂ

ಬೆಂಗಳೂರು,ಸೆ,24: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯನ್ನು 10 ದಿನದೊಳಗೆ ರಚಿಸಿ , 20 ಸಾವಿರ ನೇರ ನೇಮಕಾತಿ ಹುದ್ದೆ ಭರ್ತಿಗೆ ಒಪ್ಪಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ವಿಧಾನಸಭೆಯಲ್ಲಿ ನಿಯಮ 69ರ ಅಡಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಾರ್ಚ್ ಒಳಗೆ 2000 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಅಲ್ಲದೆ ಕಾಯಂ ಕಾರ್ಯದರ್ಶಿ ಯನ್ನು ನಿಯೋಜಿಸುವ ಮೂಲಕ ಎಲ್ಲಾ ಕಾರ್ಯಗಳನ್ನು ಕಾರ್ಯಗತ ಮಾಡಲಾಗುವುದು ಎಂದು ತಿಳಿಸಿದ್ದಾರೆ…

ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ ಬ್ರಿಟಿಷರ  ನೇಣುಗಂಬಕ್ಕೆ ನಗು ನಗುತ್ತಲೇ ಕೊರಳೊಡ್ಡಿದ್ದ ಆ ಸ್ವಾತಂತ್ರ್ಯ ಕ್ರಾಂತಿಯ ಕಿಡಿ ಉಸಿರಾಡಿದ್ದು ಇಪ್ಪತ್ಮೂರೇ ವರ್ಷ. ಉಕ್ಕು ಹರೆಯದ ಈ ಬಿಸಿ ಗುಂಡಿಗೆ ದಾಸ್ಯದ ವಿರುದ್ಧ ಮಾತ್ರವೇ ಅಲ್ಲ, ಸಮ ಸಮಾಜ, ಸಹಬಾಳುವೆಗಾಗಿ ಮಿಡಿದ ಪರಿ ಅಭೂತಪೂರ್ವ. ಭಗತ್ ಸಿಂಗ್ ದೇಹ ಬಹು ಹಿಂದೆಯೇ ಮಣ್ಣು ಸೇರಿರಬಹುದು. ಆದರೆ ಕೋಮುವಾದ, ಅಮಾನವೀಯ ಅಸ್ಪೃಶ್ಯತೆ, ಧರ್ಮ-ಜಾತಿಗಳ, ಮೇಲು- ಕೀಳುಗಳ ನೆವದಲಿ ನಡೆವ ಕ್ರೌರ್ಯ-ಶೋಷಣೆ- ವಿರುದ್ಧ ಆತ ಎತ್ತಿದ…

ದಲಿತರಿಗೆ ಅಧಿಕಾರ: ಪೈಪೋಟಿ ವ್ಯವಹಾರ

ಪಂಜಾಬಿನಲ್ಲಿ ದಲಿತ ಮುಖಂಡ ಚರಣಜಿತ್ ಸಿಂಗ್ ಚೆನ್ನಿಯವರನ್ನು ಮುಖ್ಯಮಂತ್ರಿ ಮಾಡಿರುವ ಕಾಂಗ್ರೆಸ್ ಇಷ್ಟರಲ್ಲೇ ನಡೆಯಲಿರುವ ಚುನಾವಣೆ ನಂತರ ಬೇರೆ ರಾಗ ಹಾಡುವ ಲಕ್ಷಣ ಸ್ಪುಟವಾಗುತ್ತಿದೆ. ಕಾಂಗ್ರೆಸ್ ಮಾತ್ರವೇ ಅಲ್ಲ, ಬಿಜೆಪಿ, ಆಪ್, ಶಿರೋಮಣಿ ಅಕಾಲಿ ದಳ ಪಕ್ಷಗಳೂ ದಲಿತ ಕಾರ್ಡ್‌ನೊಂದಿಗೆ ಚುನಾವಣಾ ಆಟ ಆಡುವುದಕ್ಕೆ ಸಿದ್ಧತೆ ನಡೆಸಿವೆ. ದಲಿತರಿಗೆ ಅಧಿಕಾರ: ಪೈಪೋಟಿ ವ್ಯವಹಾರ ಇಷ್ಟು ವರ್ಷದ ಜನತಂತ್ರವನ್ನು ಅನುಭವಿಸಿರುವ ದೇಶ ಇದೀಗ ಮತ್ತೊಂದು ಹೊಸ ಆಯಾಮಕ್ಕೆ ಹೊರಳುವ ಸನ್ನಾಹದಲ್ಲಿರುವುದು ಪಂಜಾಬ್‌ನಲ್ಲಿ ಆಗಿರುವ ರಾಜಕೀಯ ಬೆಳವಣಿಗೆಗಳಿಂದ ಸ್ಪಷ್ಟವಾಗುತ್ತಿದೆ. ಕಾಂಗ್ರೆಸ್…

ಪಕ್ಕಾ ಲವ್ ಮನೋರಂಜನಾ ಚಿತ್ರ ‘ ಸುಕನ್ಯ ದ್ವೀಪ’

ಸುಕನ್ಯ ದ್ವೀಪ ಎನ್ನುವ ಟೈಟಲ್ ಕೇಳಿದೊಡನೆ ಇದೊಂದು ಸಸ್ಪೆನ್ಸ್ ಚಿತ್ರವಿರಬಹುದು ಎಂದುಕೊಳ್ಳುತ್ತಾರೆ. ಆದರೆ ಅಂಥಾ ಯಾವುದೇ ಸಸ್ಪೆನ್ಸ್ , ಥ್ರಿಲ್ಲರ್ ಇರದೆ ಪಕ್ಕಾ ಫ್ಯಾಮಿಲಿ ಲವ್ ಎಂಟರ್‌ಟೈನರ್ ಕಥಾಹಂದರಕ್ಕೆ ಹಾಸ್ಯದ ಟಚ್ ಕೊಟ್ಟು ನಿರೂಪಿಸುವ ಪ್ರಯತ್ನವನ್ನು ನಿರ್ದೇಶಕ ಎಂ.ಡಿ. ಅಫ್ಜಲ್ ಮಾಡಿದ್ದಾರೆ. ಸೂಪರ್ ಸ್ಟಾರ್ ಪತ್ರಿಕೆಯ ಸಂಪಾದಕರೂ ಆದ ಇವರು ಈಗಾಗಲೇ ಮೊಬೈಲ್ ರಾಜ ಎನ್ನುವ ಚಿತ್ರ ನಿರ್ದೇಶಿಸಿದ್ದು, ಅದಿನ್ನೂ ಬಿಡುಗಡೆಯಾಗಿಲ್ಲ, ಈಗಾಗಲೇ ಒಂದು ಹಂತದ ಶೂಟಿಂಗ್ ಮುಗಿಸಿರುವ ಚಿತ್ರತಂಡ ಎರಡನೇ ಹಂತಕ್ಕೆ ಅಣಿಯಾಗಿದ್ದು, ಅದಕ್ಕೂ ಮುನ್ನ…

ಎಲ್ಲೋ ಇರಬೇಕಿತ್ತು!

ಸಿದ್ದಸೂಕ್ತಿ ಎಲ್ಲೋ ಇರಬೇಕಿತ್ತು! ಆಗಾಗ ವರು ನನಗೆ ಹೇಳುವರು, “ನೀವು ಎಲ್ಲೋ ಇರಬೇಕಿತ್ತು. ವಿದ್ಯೆ, ಕಾನೂನು ಆಡಳಿತ ಲೋಕಾನುಭವ ಅರಿವು, ಮಾತು ಬರಹ ಜಾತಿ ಏನೆಲ್ಲ ಉಂಟು! ಕುಲಪತಿ ಅಧಿಕಾರಿ ಮಂತ್ರಿ ಜಗದ್ಗುರುವಾಗಬೇಕಿತ್ತು. ಏನಿಲ್ಲದಂತೆ ಇರುವಿಕೆ! ಕಸ, ಅಡುಗೆ, ಜನ-ಹಸು ಸೇವೆ, ಗಾರೆ ಸಹಾಯ, ವಾಹನ ಚಾಲನೆ, ಬರಹ ಓದು ಪಾಠ ಪ್ರವಚನ ಸಂಘಟನೆ ಎಲ್ಲಕ್ಕೂ ನೀವೇ!” ಕಾಲಿಗೊಬ್ಬ ಕೈಗೊಬ್ಬ, ಬೆಳ್ಳಿ ಬಂಗಾರದ ಎತ್ತರದ ಪೀಠ ಸಿಂಹಾಸನ, ಝಗ ಝಗಿಸುವ ವೇಷ ಭೂಷಣ, ಮುಗಿಬಿದ್ದ ಜನ…

Girl in a jacket