Girl in a jacket

Daily Archives: October 18, 2021

ಆಲಮಟ್ಟಿ ಡ್ಯಾಂ ಅಂತರಜಲಾಶಯದ ನೀರು ಮರುಹಂಚಿಕೆಗೆ ಒತ್ತಾಯ

ಆಲಮಟ್ಟಿ,ಅ,18: ಕೃಷ್ಣಾಮೇಲ್ದಂಡೆ ಯೋಜನೆ ವ್ಯಾಪ್ತಿಯ ಆಲಮಟ್ಟಿ ಜಲಾಶಯವನ್ನು ಎತ್ತರಿಸುವದು, ಅಂತರಜಲಾಶಯದ ನೀರನ್ನು ಮರುಹಂಚಿಕೆ ಹಾಗೂ ಜನ-ಜಾನುವಾರುಗಳಿಗಾಗಿ ಕಾಲುವೆಗಳ ಮೂಲಕ ನೀರು ಹರಿಸಲು ಒತ್ತಾಯಿಸಿ ಅಖಂಡ ಕರ್ನಾಟಕ ರೈತಸಂಘದವತಿಯಿಂದ ಮುಖ್ಯ ಅಭಿಯಂತರರಿಗೆ ಎರಡು ಪ್ರತ್ಯೇಕ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಪ್ರಧಾನಕಾರ್ಯದರ್ಶಿ ಅರವಿಂದ ಕುಲಕರ್ಣಿ, ಬರಗಾಲ ಪೀಡಿತ ಜಿಲ್ಲೆಯ ನೀರಾವರಿಗಾಗಿ ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಜಲಾಶಯ ನಿರ್ಮಿಸಿದ್ದರೂ ಜಿಲ್ಲೆಯ ಭೂಮಿಗೆ ನೀರುಣಿಸಲು ಸ್ಕೀಂ.ಗಳ ಹೆಸರಿನಲ್ಲಿ ವಂಚನೆ ಮಾಡಲಾಗುತ್ತದೆ. ಅವಳಿ ಜಲಾಶಯ ನಿರ್ಮಾಣಕ್ಕಾಗಿ ಅಖಂಡ ವಿಜಯಪುರ ಜಿಲ್ಲೆಯ…

ಮೈಶುಗರ್ ಸಕ್ಕರೆ ಕಾರ್ಖಾನೆ ಲೀಸ್ ಗೆ ನೀಡುವ ಕ್ರಮಕ್ಕೆ ತಾತ್ಕಾಲಿಕ ತಡೆ;ಸಿಎಂ

ಬೆಂಗಳೂರು, ಅ, 18:ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಲೀಸ್ ಗೆ ನೀಡುವ ಸಚಿವ ಸಂಪುಟದ ನಿರ್ಣಯವನ್ನು ತಾತ್ಕಾಲಿಕವಾಗಿ ತಡೆ ಹಿಡಿದು, ಸರ್ಕಾರವೇ ನಡೆಸುವ ಪ್ರಯತ್ನ ಮಾಡಲಾಗುವುದು. ಕಾರ್ಖಾನೆಯ ಪುನರುಜ್ಜೀವನಕ್ಕಾಗಿ ತಜ್ಞರ ಸಮಿತಿ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು. ಅವರು ಇಂದು ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಮಂಡ್ಯದ ರೈತ ಪ್ರತಿನಿಧಿಗಳು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದ ನಂತರ ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು.…

ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ಮಾಸ್ಟರ್ ಪ್ಲಾನ್ : ಸಿಎಂ

ಬೆಂಗಳೂರು, ಅ, 18:ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ವಿಶೇಷ ಸಭೆ ಕರೆದು ಮಾಸ್ಟರ್ ಪ್ಲಾನ್ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಳೆಯಿಂದ ಹಾನಿಗೊಳಗಾದ ಎಚ್.ಎಸ್.ಆರ್ ಬಡಾವಣೆ, ಮಡಿವಾಳ, ಹೊಸೂರು ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕೆರೆಗಳ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿಗಳು ಅಗರ ಪಕ್ಕದಲ್ಲಿರುವ ಬಡಾವಣೆಗಳಿಗೆ ನೀರು ಮನೆಗಳಿಗೆ ನುಗ್ಗಿ ಅನಾಹುತಗಳಾಗಿವೆ. 15-20 ಕೆರೆಗಳ…

ಕೌಶಲ್ಯ ಅಭಿವೃದ್ಧಿಗೆ ಹೂಡಿಕೆ ಮಾಡಿ: ಉದ್ಯಮಿಗಳಿಗೆ ಸಚಿವ ಎಂಟಿಬಿ ನಾಗರಾಜ್ ಕರೆ

ಬೆಂಗಳೂರು,ಅ,18: ಕೌಶಲ್ಯ ಅಭಿವೃದ್ಧಿ ಗಾಗಿ ಹೂಡಿಕೆ ಮಾಡುವುದು ಉದ್ಯಮಗಳಿಗೆ ಎಷ್ಟು ಲಾಭದಾಯಕವೋ ಹಾಗೆಯೇ ಅದು ಉದ್ಯೋಗಿಗಳಿಗೂ ಪ್ರಯೋಜನಕಾರಿ.ಹಾಗಾಗಿ,ಉದ್ಯಮಿಗಳು ಕೌಶಲ್ಯಾಭಿವೃದ್ಧಿ ಕ್ಷೇತ್ರದಲ್ಲಿ ಹೆಚ್ಚು ಹೂಡಿಕೆಗೆ ಆದ್ಯತೆ ನೀಡಬೇಕು ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ಕರೆ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದಾಬಸ್ ಪೇಟೆಯ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ-ಎಫ್ ಕೆಸಿಸಿಐ ನಿರ್ಮಿಸಲು ಉದ್ದೇಶಿಸಿರುವ ‘ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಸ್ಕಿಲ್ ಡೆವಲಪ್‌ಮೆಂಟ್’…

ವಿದ್ಯಾ ದದಾತಿ ವಿನಯಮ್

ಸಿದ್ಧಸೂಕ್ತಿ :               ವಿದ್ಯಾ ದದಾತಿ ವಿನಯಮ್ ವಿದ್ಯೆಯು ವಿನಯವನ್ನು ನೀಡುತ್ತದೆ. ವಿದ್ಯೆ ಹೆಚ್ಚಿದಂತೆ ವಿನಯ ಹೆಚ್ಚಬೇಕು. ಅಹಂಕಾರ ಹೆಚ್ಚಿದರೆ ಅದು ವಿದ್ಯಾಗರ್ವ! ವಿದ್ಯೆ ಸಂಗ್ರಹವಾಗಿದೆ, ಆಹಾರಪದಾರ್ಥಗಳಂತೆ! ಇನ್ನೂ ಪರಿಮಳ ರಸಪಾಕವಾಗಬೇಕಿದೆ! ಕಾಯಿ ಹುಳಿಯಾಗಿರುವಂತೆ ಅಪಕ್ವವಿದ್ಯೆ. ನಾಯಿಯ ಹಾಲು ಪೂಜೆಗೆ ಯೋಗ್ಯವಲ್ಲ, ಮರಿಗಂತೂ ಉಪಯೋಗ! ಅಪಕ್ವವಿದ್ಯೆ ನಿರರ್ಥಕವಲ್ಲ, ಕಣ್ಣಿಗೆ ಮಣ್ಣೆರಚಿ ಬದುಕಲನುಕೂಲ! ಸ್ವಪರಹಿತನೀಡುವಂತೆ ಸಫಲ ಸಾರ್ಥಕವಾಗುವಂತೆ ಅದರ ದಿಕ್ಕನ್ನು ಬದಲಿಸಬೇಕಷ್ಟೇ! ವಿದ್ಯಾವಿನಯಶೀಲನು ಗೌರವಗಳಿಸುತ್ತಾನೆ. ಜನಮನ್ನಣೆಯಿಂದ ಶ್ರೀಮಂತಿಕೆ ಹರಿದು…

Girl in a jacket