Girl in a jacket

Daily Archives: December 2, 2021

ಸಿದ್ದರಾಮಯ್ಯ ಅವರನ್ನು ಕೇಳಿ ಮೋದಿ ಅವರನ್ನು ಭೇಟಿಯಾಗಬೇಕಿತ್ತಾ ಸಿದ್ದು ವಿರುದ್ಧ ದೇವೇಗೌಡ ಕಿಡಿ

ಚಿಕ್ಕಬಳ್ಳಾಪುರ,ಡಿ,02: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಿದ್ದರಾಮಯ್ಯ ಅವರ ಅನುಮತಿ ಬೇಕೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷ ಎಚ್​.ಡಿ.ದೇವೇಗೌಡ ಪ್ರಶ್ನಿಸಿದರು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಿಡ್ಲಘಟ್ಟದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಏಳೆಂಟು ಬಾರಿ ಭೇಟಿಯಾಗಿದ್ದೇನೆ. ಈ ಹಿಂದೆ ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 10 ಬಾರಿ ಭೇಟಿಯಾಗಿದ್ದೆ. ಮೋದಿ ಅವರನ್ನು ಭೇಟಿಯಾದ ತಕ್ಷಣ ಜೆಡಿಎಸ್​​ ಅವರಿಗೆ ಒಪ್ಪಿಸಿದಂತೆ ಆಗುತ್ತದೆಯೇ? ಎಂಥ…

ಕರ್ನಾಟಕದಲ್ಲಿ ಮೊದಲ ಒಮೈಕ್ರಾನ್ ಪತ್ತೆ

ಬೆಂಗಳೂರು,ಡಿ,02: ಬೆಂಗಳೂರಿನ ಇಬ್ಬರಿಗೆ ಒಮೈಕ್ರಾನ್ ವೈರಸ್​  ತಗುಲಿದೆ. ಭಾರತದಲ್ಲಿ ಮೊದಲ ಒಮೈಕ್ರಾನ್ ಕೇಸ್ ಕರ್ನಾಟಕದಲ್ಲೇ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಸುಧಾಕರ್​ ತಿಳಿಸಿದ್ದಾರೆ. ಒಮೈಕ್ರಾನ್ ಬಂದಿರುವ ಇಬ್ಬರಿಗೂ 2 ಡೋಸ್ ಕೊರೊನಾ ಲಸಿಕೆ ಆಗಿದೆ. ಮೂರು ದಿನದಿಂದ ಅವರಿಬ್ಬರ ರಿಪೋರ್ಟ್ ಗೆ ಕಾಯುತ್ತಿದ್ದೆವು. ಕೇಂದ್ರ ಸರ್ಕಾರ ಎರಡೂ ಸ್ಯಾಂಪಲ್ ಗಳಲ್ಲಿ ಒಮಿಕ್ರಾನ್ ಪ್ರಬೇಧ ಇದೆ ಎಂದು ದೃಢಪಟ್ಟಿದೆ. ಕರ್ನಾಟಕದಲ್ಲಿ ವಿದೇಶದಿಂದ ಬಂದವರಿಗೆ ಬಹಳ ತುರ್ತಾಗಿ ಪರೀಕ್ಷೆಗಳನ್ನು ನಡೆಸುತ್ತಿರುವುದರಿಂದ ಒಮಿಕ್ರಾನ್ ಸೋಂಕನ್ನು ನಾವು ಬೇಗ ಕಂಡು…

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಕುರಿತು ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ : ಸಿಎಂ

ನವದೆಹಲಿ, ಡಿ,೨ :ಇದೇ ೬ ರಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಕುರಿತು ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ , ಆರೋಗ್ಯ , ಕಾನೂನು ಸಚಿವರನ್ನು ಭೇಟಿಯಾದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಕೃಷ್ಣಾ ಮೇಲ್ದಂಡೆ ಯೋಜನೆಯ ೨ ನೇ ನ್ಯಾಯಾಧಿಕರಣದ ಅಧಿಸೂಚನೆಯಲ್ಲಿ ನ್ಯಾಯಾಲಯದ ಆದೇಶದಂತೆ ಕೇಂದ್ರ ಸರ್ಕಾರ…

ಓಮೈಕ್ರಾನ್ ಆತಂಕ: ಸದ್ಯಕ್ಕೆ ಸಿನಿಮಾ, ಹೋಟೆಲ್, ಮಾಲ್ ಬಂದ್ ಇಲ್ಲ

ಬೆಂಗಳೂರು,ಡಿ,02: ಕೋವಿಡ್ ವೈರಾಣುವಿನ ಹೊಸ ರೂಪಾಂತರಿ ತಳಿ ಓಮೈಕ್ರಾನ್ ಆತಂಕ ಸೃಷ್ಟಿಸಿರುವುದು ನಿಜವಾದರೂ ಸದ್ಯಕ್ಕೆ ರಾಜ್ಯದಲ್ಲಿ ಚಿತ್ರ ಮಂದಿರ, ಹೋಟೆಲ್ ಮತ್ತು ಮಾಲ್ ಗಳನ್ನು ಮುಚ್ಚುವುದಿಲ್ಲ. ಆದರೆ, ಇಂತಹ ಸ್ಥಳಗಳಿಗೆ ಹೋಗುವವರಿಗೆ ಸದ್ಯದಲ್ಲೇ ಲಸಿಕೆ ಕಡ್ಡಾಯ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಇತ್ತೀಚೆಗೆ ವೈದ್ಯರನ್ನು ಕುರಿತು ನಿರ್ಮಿಸಿ, ಬಿಡುಗಡೆ ಮಾಡಿರುವ `ಪ್ರೇಮಂ ಪೂಜ್ಯಂ’ ಚಿತ್ರದ ನಾಯಕ ನಟ ಪ್ರೇಮ್ ಅವರು ಗುರುವಾರ ತಮ್ಮನ್ನು ಇಲ್ಲಿ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ…

ಸಿದ್ದು ವಿರುದ್ಧ ಎಚ್ ಡಿಕೆ ವಾಗ್ದಾಳಿ

ಬೆಂಗಳೂರು (ನೆಲಮಂಗಲ): ಮಾಜಿ ಪ್ರಧಾನಿ ದೇವೇಗೌಡರು ಅವಕಾಶವಾದಿ ರಾಜಕಾರಣಿ ಹಾಗೂ ಜೆಡಿಎಸ್ ಪಕ್ಷ ಬಿಜೆಪಿ ಬಿ ಟೀಮ್ ಎಂದು ಹೇಳಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಹಾಗೆ ಹೇಳಿಕೊಳ್ಳುವ ಬದಲು ಒಂದು ಸ್ಲೇಟಿನಲ್ಲಿ ” ಜೆಡಿಎಸ್ ಪಕ್ಷ ಬಿಜೆಪಿ ಟೀಮ್ ” ಅಂತ ಬರೆದುಕೊಂಡು ಕಟ್ಟು ಹಾಕಿಸಿ ಕುತ್ತಿಗೆಗೆ ಹಾಕಿಕೊಂಡು ತಿರುಗಾಡಲಿ. ಹಾಗೆಯೇ ಪ್ರಚಾರ ಮಾಡಿಕೊಂಡು ದಿನವೂ ಓಡಾಡಲಿ ಎಂದು ಟೀಕಿಸಿದರು. ನೆಲಮಂಗಲದಲ್ಲಿ ಇಂದು ವಿಧಾನ…

Girl in a jacket