Girl in a jacket

Daily Archives: December 3, 2021

ಸರ್ಕಾರ ಗಾಂಜಾಗೆ ಜೈ ಎಂದಿದ್ದೇಕೇ..?

Writing- ಪರಶಿವ ಧನಗೂರು ಸರ್ಕಾರ ಗಾಂಜಾಗೆ ಜೈ ಎಂದಿದ್ದೇಕೇ? ಮಾದಕ ವಸ್ತುಗಳ ಸಾಗಾಣಿಕೆ-ಮಾರಾಟ-ಸೇವನೆ ವಿರುದ್ಧ ಜಗತ್ತಿನ ಎಲ್ಲಾ ದೇಶಗಳ ಜೊತೆ ಸೇರಿಕೊಂಡು 1960ರಲ್ಲೇ ಸಮರ ಸಾರಿದ್ದ ನಮ್ಮ ಭಾರತ ದೇಶ, ಯುದ್ಧ ಘೋಷಿಸಿ ಗೆಲ್ಲುವ ಮೊದಲೇ ಸೋಲೊಪ್ಪಿಕೊಳ್ಳುತ್ತಿರುವ ಕಾರಣವೇನೆಂದು ತಿಳಿಯುತ್ತಿಲ್ಲ. ಕೇಂದ್ರ ಸರ್ಕಾರ ಈಗ ಕಳೆದ ಅಕ್ಟೋಬರ್ ತಿಂಗಳಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಮೂಲಕ “ಸಣ್ಣ ‌ಪ್ರಮಾಣದ ಮಾದಕ ವಸ್ತು ಸೇವಿಸುವ, ಇಟ್ಟುಕೊಳ್ಳುವ ವ್ಯಕ್ತಿಗಳಿಗೆ ಶಿಕ್ಷೆ ಬೇಡ!” ಎಂಬ ಆದೇಶ ಹೊರಡಿಸಿ ತಮ್ಮ ಕೆಳಹಂತದ…

ಶಿವಾಜಿ ಗಣೇಶನ್ ಅಭಿನಯದ ಪಂತುಲು ನಿರ್ಮಾಣದ ಮಕ್ಕಳ ರಾಜ್ಯ

ಶಿವಾಜಿ ಗಣೇಶನ್ ಅಭಿನಯದ  ಪಂತುಲು ನಿರ್ಮಾಣದ ಮಕ್ಕಳ ರಾಜ್ಯ ಬಿ.ಆರ್.ಪಂತುಲು ನಿರ್ಮಿಸಿ ನಿರ್ದೇಶಿಸಿದ ಕಪ್ಪು-ಬಿಳುಪು ಜಾನಪದ ಕಥಾ ಹಂದರದ ‘ಮಕ್ಕಳ ರಾಜ್ಯ‘ ಚಲನಚಿತ್ರ ೧೯೬೦ರಲ್ಲಿ ತೆರೆಗೆ ಬಂದಿತು. ಬಿ.ಆರ್.ಪಂತುಲು ಅವರ ಪದ್ಮಿನಿ ಪಿಕ್ಚರ್ಸ್ ಜೊತೆಯಲ್ಲಿ ಎಂ.ವಿ.ರಾಜಮ್ಮನವರ ಎಂ.ವಿ.ಆರ್ ಪ್ರೊಡಕ್ಷನ್ಸ್ ಜೊತೆಯಾಗಿ ಈ ಚಿತ್ರವನ್ನು ನಿರ್ಮಿಸಿದರು, ಮಕ್ಕಳ ಪಾತ್ರಗಳನ್ನೇ ಪ್ರಧಾನವಾಗಿಟ್ಟುಕೊಂಡು ತಯಾರಾದ ಮೊದಲ ಚಿತ್ರ ಇದು. ಈ ಚಿತ್ರದಲ್ಲಿ ಹಿರಿಯ ನಟರ ಅಭಿನಯಕ್ಕಿಂತಲೂ ಮಕ್ಕಳ ಅಭಿನಯವೇ ಪ್ರಮುಖವಾಗಿತ್ತು. ಆ ಕಾಲಕ್ಕೆ ಇದೊಂದು ಪ್ರಯೋಗಾತ್ಮಕ ಚಿತ್ರವೆಂದೇ ಹೇಳಬಹುದಿತ್ತು. ಎಸ್.ಆರ್.ಪುಟ್ಟಣ್ಣ ಕಣಗಾಲ್…

ಎದೆಯ ಕದಗಳು ಮುಚ್ಚಿದಾಗ…

ಎದೆಯ ಕದಗಳು ಮುಚ್ಚಿದಾಗ… ಕಾವ್ಯವು ಆನಂದದ ಅಭಿವ್ಯಕ್ತಿಯಾಗಿರುವಂತೆಯೇ ನೋವಿನ ನಿರೂಪಣೆಯೂ ಆಗಿದೆ.ಕಾವ್ಯದ ಅಭಿವ್ಯಕ್ತಿಯಲ್ಲಿ ?ತ್ಪ್ರೇಕ್ಷೆಯ ಗುಣವಿರುವಂತೆಯೇ ವರ್ತಮಾನದ ವಾಸ್ತವವೂ ಅಡಗಿದೆ.ಕನ್ನಡಿಗರನ್ನ ಕವಿರಾಜಮಾರ್ಗಕಾರ ರಿತೋದದೆಯುಂ ಕಾವ್ಯ ಪ್ರಯೋಗ ಪರಿಣತಮತಿಗಳ್ ಎಂದ ಮಾತು ಅರ್ಥಪೂರ್ಣವಾದುದು.ವೈಭವೀಕರಣ ಮತ್ತು ಹೊಗಳಿಕೆಗಳಲ್ಲಿ ಹೆಚ್ಚು ಮುಳುಗದ ಜನಪದ ಕಾವ್ಯ ತನ್ನ ಸಾಮಾಜಿಕ ಅನುಭವಗಳನ್ನೇ ಹಾಡು ಮಾಡಿದೆ.ಹೆಣ್ಣು ಮತ್ತು ಹೆಣ್ಣಿನ ಶ್ರಮ ಇಲ್ಲಿ ಹಾಡಾಗಿ ಮೂಡಿದೆ.ಜನಪದರಂತೆ ಕಾವ್ಯಗಳಲ್ಲಿ ಈ ಬಗೆಯ ಶ್ರಮಿಕರ ನುಡಿಯನ್ನ ದಾಖಲಿಸಲು ಕನ್ನಡ ಕಾವ್ಯ ಬಂಡಾಯ ಮತ್ತು ದಲಿತ ಕಾವ್ಯದ ತನಕ ಕಾಯಬೇಕಾದ್ದು ವಿಪರ್ಯಾಸವೇ…

ಕರ್ನಾಟಕ ಇತಿಹಾಸದ ಕಿರೀಟ ಬೀದರ್

ಕರ್ನಾಟಕ ಇತಿಹಾಸದ ಕಿರೀಟ ಬೀದರ್ ಬೀದರ್ ಜಿಲ್ಲೆಯು ಭೌಗೋಳಿಕ ಮತ್ತು ಚಾರಿತ್ರಿಕವಾಗಿ ಕರ್ನಾಟಕಕ್ಕೆ ಶಿಖರಪ್ರಾಯವೇ ಆಗಿದೆ. ಈ ಜಿಲ್ಲೆಯು ಬಾದಾಮಿ ಚಾಲುಕ್ಯ, ರಾಷ್ಟ್ರಕೂಟ ಚಾಲುಕ್ಯರ ಕಾಲದಿಂದಲೂ ಪ್ರಸಿದ್ಧವಾಗಿದ್ದಿತು. ಬಸವಕಲ್ಯಾಣವು ಕಲ್ಯಾಣ ಚಾಲುಕ್ಯರು ಮತ್ತು ಕಲಚುರಿಗಳ ರಾಜಧಾನಿ ಪಟ್ಟಣ. ೧೨ನೇ ಶತಮಾನದಲ್ಲಿ ಬಸವಾದಿ ಶರಣರ ಧಾರ್ಮಿಕ ಕ್ರಾಂತಿಯ ಭೂಮಿಕೆಯಾಗಿ, ಸಮಸಮಾಜದ ಕನಸನ್ನು ಹೊತ್ತ ಜನತಾ ಚಳವಳಿಯಿಂದ ಸಾಮಾಜಿಕ ಸಂಚಲನವನ್ನು ಮೂಡಿಸಿದ ಸುಧಾರಣೆಯ ನೆಲೆವೀಡು. ವಚನಗಳ ಮೂಲಕ ಕನ್ನಡಕ್ಕೆ ವಿಶಿಷ್ಟ ಸ್ಥಾನವನ್ನು ನೀಡಿದ ಶ್ರೇಯ ಈ ಜಿಲ್ಲೆಯದು. ಸಮಾಜದ ಎಲ್ಲ…

ಎಸ್ಸಾರ್.ಪಾಟೀಲರ ಮೂಗಿಗೆ ಮತ್ತಷ್ಟು ತುಪ್ಪ

ಸರಳ, ಸಜ್ಜನಿಕೆಯ ರಾಜಕಾರಣಿಗಳು ಅಪರೂಪ. ಅಂಥವರಲ್ಲಿ ಕಾಂಗ್ರೆಸ್ ನಾಯಕ ಎಸ್.ಆರ್.ಪಾಟೀಲರು ಒಬ್ಬರು. ಅವರನ್ನು ವಿಧಾನ ಪರಿಷತ್‌ನಿಂದ ಹೊರಗಿಡುವ ತಂತ್ರದಲ್ಲಿ ಪಕ್ಷ ಯಶಸ್ಸು ಕಂಡಿದೆ. ಯಾವುದನ್ನೂ ಬಯಸದ ಕಾಡಿಬೇಡದ ರಾಜಕಾರಣ ಪಾಟೀಲರದು. ಯಾರ್ಯಾರದೋ ಮಹತ್ವಾಕಾಂಕ್ಷೆಯ, ಡಿಕೆಶಿ-ಸಿದ್ದರಾಮಯ್ಯ ಜಂಗೀ ಕುಸ್ತಿಯ ರಾಜಕಾರಣದಲ್ಲಿ ಪಾಟೀಲರು ಹರಕೆಯ ಕುರಿ ಆದರೇ…? ಎಸ್ಸಾರ್.ಪಾಟೀಲರ ಮೂಗಿಗೆ ಮತ್ತಷ್ಟು ತುಪ್ಪ ಹೀಗೊಂದು ಕಥೆ. ಕೋತಿಯ ಮನಃಸ್ಥಿತಿಯನ್ನು ಹೇಳುವ ಕಥೆ. ಆಳೆತ್ತರದ ಡಬ್ಬದಲ್ಲಿ ಕೋತಿಯನ್ನು ಅದರ ಮರಿಯೊಂದಿಗೆ ಹಾಕಿ. ಡಬ್ಬದೊಳಕ್ಕೆ ನೀರನ್ನು ಹಾಯಿಸುತ್ತ ಬನ್ನಿ. ಕಾಲಬುಡದಲ್ಲಿ ನೀರಿರುವಾಗ ಮರಿಯೊಂದಿಗೆ…

Girl in a jacket