Girl in a jacket

Daily Archives: January 28, 2022

ರಾಮನಗರದಲ್ಲಿ 3 ವರ್ಷದಿಂದ ಮಲಗಿದ್ದವರು ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ;ಎಚ್ ಡಿ ಕೆ

ರಾಮನಗರ,ಜ,28: ಈ ಜಿಲ್ಲೆಯಲ್ಲಿ ಇಷ್ಟು ದಿನ ಮಲಗಿದ್ದ ನಾಯಕರೆಲ್ಲ ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಚನ್ನಪಟ್ಟಣ ಶಾಸಕರೂ ಆದ ಹೆಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರಿಗೆ ತೀವ್ರ ಟಾಂಗ್ ನೀಡಿದರು. ಚನ್ನಪಟ್ಟದಲ್ಲಿ ಇಂದು ಎಲೆಕ್ಟ್ರಿಕ್ ಯುಜಿ ಕೇಬಲ್ ಕಾಮಗಾರಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಚನ್ನಪಟ್ಟಣದ ಅಭಿವೃದ್ಧಿ ಬಗ್ಗೆ ಏನನ್ನೂ ಮಾಡದ ಕಾಂಗ್ರೆಸ್ ನಾಯಕರು, ಮುಖ್ಯವಾಗಿ ಡಿಕೆ ಸಹೋದರರ ವಿರುದ್ಧ ವಾಗ್ದಾಳಿ ನಡೆಸಿದ ಅವರು; ನಾನು ಅವರನ್ನಾಗಲಿ…

ಯಾರಿಂದ ಯಾರೂ ತಬ್ಬಲಿಯಾಗಲ್ಲ : ಸಿದ್ದರಾಮಯ್ಯ

ಬೆಂಗಳೂರು, ಜ,28; ಜನರ ಆಶೀರ್ವಾದ ಇರುವ ವರೆಗೆ ಯಾರೂ ತಬ್ಬಲಿಯಾಗಲ್ಲ, ಅದು ಇಬ್ರಾಹಿಂ ಆದರೂ ಅಷ್ಟೇ, ನಾನೇ ಆದರೂ ಅಷ್ಟೆ. ಜನರ ಪ್ರೀತಿ ವಿಶ್ವಾಸ ಮಾತ್ರ ಮುಖ್ಯ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರತಿಕ್ರಯಿಸಿದ್ದಾರೆ. ಶುಕ್ರವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನ್ನ ಪ್ರಕಾರ ಸಿ.ಎಂ ಇಬ್ರಾಹಿಂ ಅವರು ಪಕ್ಷ ತೊರೆಯಲ್ಲ, ಜೆಡಿಎಸ್ ಗೆ ಹೋಗಲ್ಲ. ಈ ಹಿಂದೆ ಅವರಿಗೆ ರಾಜ್ಯ ಸಭಾ ಸ್ಥಾನವನ್ನು ತಪ್ಪಿಸಿದ್ದೇ ದೇವೇಗೌಡರು ಹಾಗಾಗಿ ಅವರು ಮತ್ತೆ ಜೆಡಿಎಸ್…

ಮಾಜಿ ಸಿಎಂ ಬಿಎಸ್ ವೈ ಮೊಮ್ಮಗಳು ಆತ್ಮಹತ್ಯೆ

ಬೆಂಗಳೂರು, ಜ. 28: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ಅವರು ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ. ಸೌಂದರ್ಯ ಸಾವಿನ ಸುದ್ದಿ ಕೇಳಿ ಬಿ.ಎಸ್.ಯಡಿಯೂರಪ್ಪ ಕುಟುಂಬ ಆತಂಕಕ್ಕೆ ಒಳಗಾಗಿದೆ. ಕೌಟುಂಬಿಕ ಕಲಹದಿಂದ ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದ್ದು, ಪೊಲೀಸ್ ತನಿಖೆಯಲ್ಲಿ ಸಂಗತಿ ಬೆಳಕಿಗೆ ಬರಬೇಕಿದೆ. 2018 ರಲ್ಲಿ ಡಾ. ಅಬ್ಬಿಗೆರೆ ನಿವಾಸಿ ಡಾ. ನೀರಜ್ ಎಂಬುವರನ್ನು ಸೌಂದರ್ಯ ಮದುವೆಯಾಗಿದ್ದರು. ನೀರಜ್ ಕೂಡ ವೈದ್ಯರಾಗಿದ್ದು ಎಂ.ಎಸ್. ರಾಮಯ್ಯ…

6 ತಿಂಗಳ ಸಾಧನೆ ಕುರಿತ ಪುಸ್ತಕ ಬಿಡುಗಡೆ

ಬೆಂಗಳೂರು,ಜ,28:  ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇಂದು 6 ತಿಂಗಳ ಸಂಭ್ರಮವಾಗಿದ್ದು ಸಿಎಂ ಬಸವರಾಜ ಬೊಮ್ಮಾಯಿ 6 ತಿಂಗಳ ಸಾಧನೆ ಪುಸ್ತಕ ಬಿಡುಗಡೆಗೊಳಿಸಿದರು. ವಿಧಾನ ಸೌಧದಲ್ಲಿ ಬಸವಕಲ್ಯಾಣಸಮಾರಂಭಕ್ಕೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ  ಸರ್ಕಾರ 6 ತಿಂಗಳ ಸಾಧನೆ ಪುಸ್ತಕ  ಭವ್ಯಭವಿಷ್ಯದ  ಭರವಸೆಯ ಹೆಜ್ಜೆಗಳು ಎಂಬ ಪುಸ್ತಕ ಬಿಡುಗಡೆ ಮಾಡಿದರು. ಸಚಿವರಾದ ಗೋವಿಂದ ಕಾರಜೋಳ, ವಿ. ಸೋಮಣ್ಣ ಭೈರತಿ ಬಸವರಾಜ್, ಉಮೇಶ್  ಕತ್ತಿ, ಡಾ.ಕೆ. ಸುಧಾಕರ್ ಗೋಪಾಲಯ್ಯ,ಕೆಎಸ್ ಈಶ್ವರಪ್ಪ ಎಂಟಿಬಿ ನಾಗರಾಜ್ ಎಸ್.…

ಅಕಾಶವಾಣಿಯನ್ನು ಕೇಂದ್ರ ಮುಚ್ಚುವ ಕೆಲಸ ಮಾಡುತ್ತಿದೆ; ಕೇಂದ್ರದ ವಿರುದ್ಧ ಎಚ್ ಡಿ ಕೆ ಆಕ್ರೋಶ

ಬೆಂಗಳೂರು, ಜ,28:ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಕನ್ನಡದ ಕಾರ್ಯಕ್ರಮಗಳನ್ನು ಮೊಟಕುಗೊಳಿಸುತ್ತಿರುವ ಕೇಂದ್ರ ಸರ್ಕಾರ ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸೂರ್ಯೋದಯಕ್ಕೆ ಮುನ್ನವೇ ಪ್ರಸಾರ ಆರಂಭಿಸಿ ರಾತ್ರಿ 11ರ ತನಕ ಸತತ 18 ಗಂಟೆ ಕಾಲ ನಿರಂತರವಾಗಿ ಕನ್ನಡ…

ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ;ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಜ, 28:ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲವಾದರೂ ಎಲ್ಲರ ಹಾರೈಕೆಗಳು ಇನ್ನಷ್ಟು ಸ್ಪೂರ್ತಿಯಿಂದ ಮತ್ತು ಗಟ್ಟಿಯಾಗಿ ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮಾಡಿರುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ,ಕರ್ನಾಟಕದ ಸಾಮಾನ್ಯ ಜನರಿಂದ ಹಿಡಿದು ಪಕ್ಷದ ಹಿರಿಯರು ಪದಾಧಿಕಾರಿಗಳು, ರಾಷ್ಟ್ರಪತಿಗಳು, ಪ್ರಧಾನಿ ನರೇಂದ್ರ ಮೋದಿಯವರು ಶುಭ ಕೋರಿ ಟ್ವೀಟ್ ಮಾಡಿದ್ದಾರೆ. ಕ್ಷೇತ್ರದ ಜನ ಶುಭಾಶಯಗಳನ್ನು ಕೋರಿದ್ದಾರೆ. ಅಮಿತ್ ಷಾ ಅವರು ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಅವರೆಲ್ಲರಿಗೂ ಹೃದಯ ಪೂರ್ವಕ…

ಭೂದಾನಚಿತ್ರದಲ್ಲಿರಾಜಕುಮಾರ್‌ತಂದೆ, ಉದಯಕುಮಾರ್ ಮತ್ತುಕಲ್ಯಾಣಕುಮಾರ್ ಮಕ್ಕಳು

ಭೂದಾನಚಿತ್ರದಲ್ಲಿರಾಜಕುಮಾರ್‌ತಂದೆ, ಉದಯಕುಮಾರ್ ಮತ್ತುಕಲ್ಯಾಣಕುಮಾರ್ ಮಕ್ಕಳು ರಾಜಕುಮಾರ್, ಕಲ್ಯಾಣಕುಮಾರ್ ಹಾಗೂ ಉದಯಕುಮಾರ್ ಮೂರೂ ಮಂದಿ ನಾಯಕ ನಟರು ಪೂರ್ಣ ಪ್ರಮಾಣದಲ್ಲಿಒಂದೇಚಿತ್ರದಲ್ಲಿಅಭಿನಯಿಸಿದ ಭೂದಾನ ಕಪ್ಪುಬಿಳುಪು ಸಾಮಾಜಿಕಕಥಾ ಹಂದರದಚಿತ್ರಅನಂತಲಕ್ಷ್ಮೀ ಪಿಕ್ಚರ್ ಲಾಂಛನದಲ್ಲಿ೧೯೬೨ರಲ್ಲಿತೆರೆಕಂಡಿತು. ಪಿ.ಎನ್.ಗೋಪಾಲಕೃಷ್ಣ ಹಾಗೂ ಜಿ.ವಿ.ಅಯ್ಯರ್‌ಜಂಟಿಯಾಗಿ ನಿರ್ಮಾಣ ಮಾಡಿದ ಈ ಚಿತ್ರವನ್ನು ಮೊದಲ ಬಾರಿಗೆ ಜಿ.ವಿ.ಅಯ್ಯರ್ ನಿರ್ದೇಶಿಸಿದರಲ್ಲದೆ, ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಗೀತೆಗಳನ್ನು ರಚಿಸಿದರು. ಎಸ್.ಕೆ.ಭಗವಾನ್ ಹಾಗೂ ರಾಮಚಂದ್ರ ಸಹಾಯಕ ನಿರ್ದೇಶಕರಾಗಿಕಾರ್ಯನಿರ್ವಹಿಸಿದರು. ಉಳಿದಂತೆ ಅಶ್ವತ್, ನರಸಿಂಹರಾಜು, ಬಾಲಕೃಷ್ಣ, ಹೆಚ್.ರಾಮಚಂದ್ರಶಾಸ್ತ್ರಿ, ಲೀಲಾವತಿ, ಆದವಾನಿ ಲಕ್ಷ್ಮಿದೇವಿ ಮುಂತಾದವರುಅಭಿನಯಿಸಿದರು.ಜಿ.ಕೆ.ವೆಂಕಟೇಶ್ ಸಂಗೀತ ನೀಡಿದಚಿತ್ರದಲ್ಲಿ ಪುರಂದರದಾಸರಭಾಗ್ಯಾದ…

 ಕರ್ನಾಟಕದ ಏಕೈಕ ಪ್ರಾಚೀನ ದೇವಾಲಯ ಕುಕನೂರು ನವಲಿಂಗೇಶ್ವರ

 ಕರ್ನಾಟಕದ ಏಕೈಕ ಪ್ರಾಚೀನ ದೇವಾಲಯ ಕುಕನೂರು ನವಲಿಂಗೇಶ್ವರ ಕುಕನೂರು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಪ್ರಾಚೀನ ಗ್ರಾಮಗಳಲ್ಲೊಂದು. ಈ ಗ್ರಾಮವು ರಾಷ್ಟ್ರಕೂಟ ಅರಸರ ಕಾಲದಿಂದಲೂ ಧಾರ್ಮಿಕ, ಕಲೆ ಮತ್ತು ವಾಸ್ತುಶಿಲ್ಪ ಹಾಗೂ ಸಾಂಸ್ಕೃತಿಕವಾಗಿ ಪ್ರಸಿದ್ಧಿಯನ್ನು ಪಡೆದ ಸ್ಥಳ. ದಾಖಲೆಗಳನ್ವಯ ಇದೊಂದು ಪ್ರಾಚೀನ ಪಟ್ಟಣವೇ ಆಗಿದ್ದಿತು. ಕ್ರಿ.ಶ. ೧೧-೧೨ನೆಯ ಶತಮಾನದ ಹೊತ್ತಿಗೇ ನಲವತ್ತೆಂಟು ಕೇರಿಗಳನ್ನು ಒಳಗೊಂಡ ಪಟ್ಟಣವಾಗಿದ್ದಿತು. ಅಲ್ಲದೆ ಕುಕನೂರು ಒಂದು ಸಾವಿರ ಮಹಾಜನರನ್ನು ಒಳಗೊಂಡಿದ್ದ ಮಹಾಗ್ರಹಾರವೂ, ಪ್ರಾಚೀನ ಕಾಲದ ವಿದ್ಯಾಕೇಂದ್ರವೂ ಆಗಿದ್ದುದು ಶಾಸನಗಳಿಂದ ತಿಳಿಯುವುದು. ಇಲ್ಲಿರುವ ದೇವಾಲಯಗಳೋ…

ಸಚಿವರ ಕೈತಪ್ಪಿದ ಜಹಗೀರು

ಜಿಲ್ಲೆಯವರಲ್ಲದ ಸಚಿವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಮದ ಹಿಂದ ಬಹಳ ದೊಡ್ಡ ಧೈರ್ಯ ಕೆಲಸ ಮಾಡಿದೆ. ಇದು ಸಚಿವರಲ್ಲಿ ಏಕರೂಪದ ಅಸಮಾಧಾನಕ್ಕೆ ಕಾರಣವೂ ಆಗಿದೆ. ಮೂವರಿಗೆ ಎರಡೆರಡು ಜಿಲ್ಲಾ ಉಸ್ತುವಾರಿ ಕೊಟ್ಟಿರುವುದು ಇಕ್ಕಟ್ಟಿಗೆ ಕಾರಣವಾಗಬಹುದು. ಸ್ವಾತಂತ್ರ್ಯ ದಿನ, ರಾಜ್ಯೋತ್ಸವದ ದಿನ ರಾಷ್ಟ್ರಧ್ವಜ, ಕನ್ನಡ ಬಾವುಟವನ್ನು ಜಿಲ್ಲಾ ಸಚಿವರು ಜಿಲ್ಲಾ ಕೇಂದ್ರದಲ್ಲಿ ಹಾರಿಸುವ ಪರಿಪಾಠವಿದೆ. ಈ ಮೂವರು ಸಚಿವರು ಆ ಕೆಲಸವನ್ನು ಎರಡೆರಡು ಕಡೆ ಮಾಡುವುದಾದರೂ ಹೇಗೆ…? ಇತರರ ಅಸಮಾಧಾನದಲ್ಲೂ ಸಂತೋಷಕೂಟಕ್ಕೆ ಶ್ರೀರಾಮುಲು…

ಬೆಂಗಳೂರು ಹೊರವಲಯದಲ್ಲಿ ಶುರುವಾಯಿತು ಭೂಮಾಫಿಯಾ-ಮರ್ಡರ್ !!

ಬೆಂಗಳೂರು ಹೊರವಲಯದಲ್ಲಿ ಶುರುವಾಯಿತು ಭೂಮಾಫಿಯಾ-ಮರ್ಡರ್ !! Writing;ಪರಶಿವ ದನಗೂರು ಆನೇಕಲ್ ನಾಗರೀಕರನ್ನು ಬೆಚ್ಚಿ ಬೀಳಿಸಿದ್ದ ರಾಜಶೇಖರ್ ರೆಡ್ಡಿ ಎಂಬ ಆಂಧ್ರಪ್ರದೇಶದ ಚಿತ್ತೂರು ಮೂಲದ ರಿಯಲ್ ಎಸ್ಟೇಟ್ ಬ್ರೋಕರ್ ಮರ್ಡರ್ ಮಿಸ್ಟರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಯುವಕರನ್ನು ಬಂಧಿಸಿರುವ ಆನೇಕಲ್ ಪೊಲೀಸರು ಭೂಮಾಫಿಯಾ ಕೈವಾಡವನ್ನು ಬಯಲಿಗೆಳೆದಿದ್ದಾರೆ! ಆನೇಕಲ್ ತಾಲ್ಲೂಕಿನ ತಮ್ಮನಾಯಕನಹಳ್ಳಿಯ ಮೀಸೆ ಜಯರಾಂ ಮತ್ತು ಆತನ ಮಗ ಶಶಿಕುಮಾರ್ ಒಂದೂ ಕಾಲೂ ಕೋಟಿಗೆ ಸುಫಾರಿ ನೀಡಿ ಕೊಲೆ ಮಾಡಿಸಿರುವುದು ತನಿಖೆಯಿಂದ ಬಯಲಾಗಿದೆ! ಬೆಂಗಳೂರಿನ ಬಿ.ಟಿ.ಎಂ ಲೇಔಟಿನ ಸುಧಾಕರ್…

ಆತ್ಮ ಗೌರವ ಎಂಬ ಅನಿವಾರ್ಯತೆಗಾಗಿ..

ಆತ್ಮ ಗೌರವ ಎಂಬ ಅನಿವಾರ್ಯತೆಗಾಗಿ.. ಅಂಬೇಡ್ಕರ್ ಭಾರತೀಯ ಚರಿತ್ರೆಯ ಯುಗ ನಿರ್ಮಾಪಕ. ಅಪೂರ್ವ ಸಾಧಕ.ಅವರ ಕಾಡುವ ಕದಡುವ ಚಿಂತನೆಗಳು ಹೇಗೆ ನಮ್ಮೊಳಗೆ ಸುತ್ತುತ್ತವೆ?ಎಂಬುದನ್ನ ನಮಗೆ ನಾವೇ ವಿವರಿಸಿಕೊಳ್ಳುವ ಅಗತ್ಯವಿದೆ.ಈ ವಿವರವನ್ನ 1)ಬಯಲರೂಪ 2) ಪಠ್ಯ ರೂಪ 3) ಮನೋರೂಪ ಎಂದು ಬಿಡಿ ಬಿಡಿಯಾಗಿ ವಿವರಿಸಿಕೊಳ್ಳಬಹುದು. 1)ಬಯಲುರೂಪ: ಅಂಬೇಡ್ಕರರ ಬದುಕು ಮತ್ತು ಚಿಂತನೆಗಳು ಈ ಹೊತ್ತಿಗೆ ಎಚ್ಚರಿಕೆಯಂತೆಯೂ ಭವಿಷ್ಯಕ್ಕೆ ಮಾರ್ಗ ಸೂಚಿಯಂತೆಯೂ ಕಾಣಬಲ್ಲವು.ಅಂಬೇಡ್ಕರ ಎಂಬ ಬಯಲು ಪಠ್ಯದ ಶಿಲ್ಪ ಒಂದು ಕೈಯಲ್ಲಿ ಪುಸ್ತಕ ಹಿಡಿದು ಮತ್ತೊಂದು ಕೈಯ ತೋರು…

Girl in a jacket