Girl in a jacket

Daily Archives: April 18, 2022

11,513 ಕೋಟಿ ರೂ.ಗಳ 10 ಯೋಜನೆಗಳಿಗೆ ಅನುಮತಿ

ಬೆಂಗಳೂರು, ಏ,18: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 58 ನೇ ಸಭೆಯಲ್ಲಿ ಒಟ್ಟು 11,513 ಕೋಟಿ ರೂ.ಗಳ 10 ಯೋಜನೆಗಳಿಗೆ ಒಪ್ಪಿಗೆ ನೀಡಲಾಯಿತು. ಇದರಿಂದ 46,984 ಉದ್ಯೋಗ ಸೃಜನೆಯಾಗುವ ನಿರೀಕ್ಷೆ ಇದೆ. ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಪಗುತ್ತಿಗೆ ಮತ್ತು ಗುತ್ತಿಗೆಯ ಅವಧಿಯನ್ನು ಮಿತಿಮೀರಿ ವಿಸ್ತರಿಸಬಾರದು. ಈ ಬಗ್ಗೆ ಸ್ಪಷ್ಟ ನಿಯಮಗಳನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಕೈಗಾರಿಕೆಗಳಿಗೆ ನೀಡಲಾಗಿರುವ…

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ವಂಡರ್‌ಲಾ ದಿಂದ ವಿಶೇಷ ಕೊಡುಗೆ ಘೋಷಣೆ!*

ಬೆಂಗಳೂರು,ಏ,18:ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ವಂಡರ್‌ಲಾ ಹಾಲಿಡೇಸ್‌ ವಿಶೇಷ ರಿಯಾಯಿತಿ ಘೋಷಿಸಿದೆ. ಹೌದು, 2021-22 ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ, ಮೊದಲ ಹಾಗೂ ದ್ವೀತೀಯ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೆಟ್‌ನನ್ನು ತೋರಿಸುವ ಮೂಲಕ ಶೇ.35ರಷ್ಟು ರಿಯಾಯಿಯನ್ನು ಪಡೆಯಬಹುದು. ವಿದ್ಯಾರ್ಥಿಗಳು ಪರೀಕ್ಷೆ ಬರೆದು ತಮ್ಮ ಬೇಸಿಗೆ ರಜೆಯನ್ನು ಆನಂದಿಸಲು ಪ್ರಾರಂಭಿಸಿದ್ದಾರೆ. ಅವರ ಬೇಸಿಗೆ ರಜೆಯ ಮನರಂಜನೆಯನ್ನು ಇನ್ನಷ್ಟು ದ್ವಿಗುಣಗೊಳಿಸಲು ಈ ಆಫರ್‌ ನೀಡಲಾಗಿದೆ. ವಂಡರ್‌ಲಾದಲಿ ಸಾಮಾಜಿಕ ಅಂತರದ ನಿಯಮವನ್ನು ಪಾಲಿಸಲಾಗುತ್ತಿದೆ. ಆಸಕ್ತ ವಿದ್ಯಾರ್ಥಿಗಳು…

21ರಂದು ಬೃಹತ್ ರೈತಸಮಾವೇಶಕ್ಕೆ ಕೇಜ್ರಿವಾಲ್

ಬೆಂಗಳೂರು, ಏ18:ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರು ಏಪ್ರಿಲ್‌ 21ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ ನಡೆಯಲಿರುವ ಬೃಹತ್‌ ರೈತ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿದೆ. ದೆಹಲಿ ಮಾದರಿಯಿಂದ ಪ್ರೇರಣೆ ಹೊಂದಿರುವ ರಾಜ್ಯ ರೈತ ಸಂಘವು ಸಿಎಂ ಕೇಜ್ರಿವಾಲ್‌ರವರಿಗೆ ವಿಶೇಷ ಆಹ್ವಾನ ನೀಡಿದ್ದು, ಅವರು ಆಗಮಿಸಿ ರೈತರನ್ನು…

ದೆಹಲಿ ಸಭೆನಂತರ ಸಚಿವ ಸಂಪುಟ ವಿಸ್ತರಣೆ ನಿರ್ಧಾರ; ಸಿಎಂ ಬೊಮ್ಮಾಯಿ

ಬೆಂಗಳೂರು, ಏ, 18: ಸಂಪುಟ ವಿಸ್ತರಣೆ ಬಗ್ಗೆ ಭಾ.ಜ.ಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನವದೆಹಲಿಯಲ್ಲಿ ಕರ್ನಾಟಕದ ಬಗ್ಗೆ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಸಭೆಯ ನಂತರ ದೆಹಲಿಗೆ ಬರುವಂತೆ ನಡ್ಡಾ ಅವರು ತಮಗೆ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ಅಲ್ಲಿಯೇ ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ತಿಳಿಸಿದರು. ಕರ್ನಾಟಕದ ಬಗ್ಗೆ ದೆಹಲಿಯಲ್ಲಿ ಸಭೆ‌ ನಡೆಸುತ್ತೇವೆ. ಸಭೆಯ ನಂತರ ಮಾಹಿತಿ ನೀಡುತ್ತೇನೆ. ಆ ನಂತರ ದೆಹಲಿಗೆ ಬರುವಂತೆ ನಡ್ಡಾ ಅವರು ತಮಗೆ ಹೇಳಿದ್ದಾಗಿ…

Girl in a jacket