Girl in a jacket

Daily Archives: January 20, 2025

ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆ ಬಿಡುಗಡೆಗೆ ಎಂ.ಬಿ.ಪಾಟೀಲ್ ಸೂಚನೆ

ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆ ಬಿಡುಗಡೆಗೆ ಎಂ.ಬಿ.ಪಾಟೀಲ್ ಸೂಚನೆ By ಕೆಂಧೂಳಿ ಬೆಂಗಳೂರು,ಜ,20-ವಿಜಯಪುರ ಜಿಲ್ಲೆಯ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಮುಗಿದು, ಕಾಲುವೆಗಳಲ್ಲಿ ನೀರು ಹರಿಯುತ್ತಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ 3,048 ಎಕರೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ಈ ಸಂಬಂಧ ಕೂಡಲೇ ಅಗತ್ಯ ಕ್ರಮವಹಿಸಿ, 457 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.…

ಕೋರೆ ಅವರನ್ನು ಪಕ್ಷಕ್ಕೆ ಕರೆದಿಲ್ಲ, ಸೌಹಾರ್ದ ಭೇಟಿ ಅಷ್ಟೇ:ಡಿ.ಕೆ.ಶಿ.

ಕೋರೆ ಅವರನ್ನು ಪಕ್ಷಕ್ಕೆ ಕರೆದಿಲ್ಲ, ಸೌಹಾರ್ದ ಭೇಟಿ ಅಷ್ಟೇ:ಡಿ.ಕೆ.ಶಿ. By ಕೆಂಧೂಳಿ ಬೆಳಗಾವಿ, ಜ.20-ಪ್ರಭಾಕರ್ ಕೋರೆ ಅವರನ್ನು ನಾವು ಕಾಂಗ್ರೆಸ್ ಪಕ್ಷಕ್ಕೆ ಕರೆದೂ ಇಲ್ಲ, ಅವರು ಬರುವುದೂ ಇಲ್ಲ. ಇದೊಂದು ಸೌಹರ್ದಯುತ ಭೇಟಿ ಅಷ್ಟೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್ ಕೋರೆ ಅವರ ಮನೆಗೆ ಸೋಮವಾರ ಭೇಟಿ ನೀಡಿದ ನಂತರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, “ಪ್ರಭಾಕರ್ ಕೋರೆ ಅವರು ನಮಗೆ ಶಾಶ್ವತ ಗೆಳೆಯರು. ಯಾವುದೇ ಸರ್ಕಾರವಿದ್ದರೂ ಅವರ ಸಂಸ್ಥೆಗಳಿಂದ…

ರಾಜ್ಯದ ಪೊಲೀಸ್ ವ್ಯವಸ್ಥೆ ವಿಫಲ: ವಿಜಯೇಂದ್ರ

ರಾಜ್ಯದ ಪೊಲೀಸ್ ವ್ಯವಸ್ಥೆ ವಿಫಲ: ವಿಜಯೇಂದ್ರ ಬೆಂಗಳೂರು: ರಾಜ್ಯದ ಕಾನೂನು- ಸುವ್ಯವಸ್ಥೆ ಕುಸಿತದಿಂದ ಪೊಲೀಸ್ ವ್ಯವಸ್ಥೆ ಬಗ್ಗೆ ಜನತೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ಹೊನ್ನಾವರದಲ್ಲಿ ಗೋವಿನ ರುಂಡ ಕತ್ತರಿಸಿ, ಅಮಾನುಷ- ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಅದರ ಜೊತೆಗೇ ಬಿಜಾಪುರದಲ್ಲಿ ಹಾಡಹಗಲಲ್ಲೇ ವ್ಯಕ್ತಿಯನ್ನು ಥಳಿಸಿದ ಘಟನೆ ನಡೆದಿದೆ ಎಂದು ಕಳವಳ ವ್ಯಕ್ತಪಡಿಸಿದರು. ಈಚೆಗೆ ಚಾಮರಾಜಪೇಟೆಯಲ್ಲೂ ಹಸುವಿನ ಕೆಚ್ಚಲು ಕತ್ತರಿಸಿದ ಘಟನೆ ನಡೆದಿತ್ತು. ಅದು…

ನಾಳೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ: ವಿಜಯೇಂದ್ರ

ನಾಳೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ: ವಿಜಯೇಂದ್ರ By ಕೆಂಧೂಳಿ ಬೆಂಗಳೂರು,ಜ,20-ನಾಳೆ (ಜ.21) ಸಂಜೆ 7 ಗಂಟೆಗೆ ಬಿಜೆಪಿ ರಾಜ್ಯದ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರವಾಲ್, ತಮಿಳುನಾಡಿನಿಂದ ಪೊನ್ನು ರಾಧಾಕೃಷ್ಣನ್, ರಾಜ್ಯದ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ನಾಳೆ ಬೆಂಗಳೂರಿಗೆ ಬರಲಿದ್ದಾರೆ.…

ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಅಂಡ್ ಮರ್ಡರ್ ಅರೋಪಿಗೆ ಜೀವಾಧಿ ಶಿಕ್ಷೆ

ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಅಂಡ್ ಮರ್ಡರ್ ಅರೋಪಿಗೆ ಜೀವಾಧಿ ಶಿಕ್ಷೆ by ಕೆಂಧೂಳಿ ಕೋಲ್ಕತ್ತಾ,ಜ.೨೦- ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಉತ್ತರ ಪ್ರದೇಶದ ಕೋಲ್ಕತ್ತಾದ ಆಸ್ಪತ್ರೆಯ ಟ್ರೈನಿ ವೈದ್ಯ ಮೇಲೆ ರೇಪ್ ಅಂಡ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್ ರಾಯ್‌ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ೫೦ ಸಾವಿರ ರೂ ದಂಢ ವಿದಿಸಿ ತೀರ್ಪು ನೀಡಿದೆ. ಕೋಲ್ಕತ್ತಾದ ಸೀಲ್ಡಾ ಸಿಬಿಐ ಕೋರ್ಟ್ ಸೋಮವಾರ ತನ್ನ ತೀರ್ಪು ಪ್ರಕಟ ಮಾಡಿದೆ. ೨೦೨೪ ರ ಆಗಸ್ಟ್‌ನಲ್ಲಿ ಕೋಲ್ಕತ್ತಾದ ಆರ್‌ಜಿ…

ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ- ಡಿಕೆಶಿ

ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ- ಡಿಕೆಶಿ ಬೆಳಗಾವಿ, ಜ.20-“ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಕಾರ್ಯಕರ್ತರ ರಕ್ಷಣೆ ಮಾಡುವುದು ನನ್ನ ಮೊದಲ ಕರ್ತವ್ಯ. ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ.…

ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ-ಸಿಎಂ

ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ-ಸಿಎಂ ಬೆಂಗಳೂರು, ಜ,20 -ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು. ಹಣ ದುರುಪಯೋಗದ ಪ್ರಶ್ನೆ ಇಲ್ಲ ಮುಡಾ…

ಕೋಲಾರ- ಪಂಪ್ ಹೌಸ್ ಗೆ ಬೈರತಿ ಬಸವರಾಜ್ ಚಾಲನೆ

ಕೋಲಾರ- ಪಂಪ್ ಹೌಸ್ ಗೆ ಬೈರತಿ ಬಸವರಾಜ್ ಚಾಲನೆ ಕೋಲಾರ,ಜ20-ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟಮಕ ಬಳಿ ನಿರ್ಮಾಣ ಮಾಡಿರುವ ಡಿ.ದೇವರಾಜ್ ಅರಸ್ ಬಡಾವಣೆಯಲ್ಲಿ ರೂ.98 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ .ಎಸ್. ಸುರೇಶ(ಬೈರತಿ) ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು ಬಡಾವಣೆಯಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ನೂತನವಾಗಿ ನಿರ್ಮಿಸಿದ ಪಂಪ್ ಹೌಸ್ ಗೆ ಚಾಲನೆ ನೀಡಿದರು ಕೋಲಾರ…

ಮಹಾಕುಂಬಮೇಳದಲ್ಲಿ ಗ್ಯಾಸ್‌ಸಿಲಿಂಡರ್‌ಗಳ ಸ್ಪೋಟದಿಂದ ಹೊತ್ತಿ ಉರಿದ ಟೆಂಟ್‌ಗಳು

ಮಹಾಕುಂಬಮೇಳದಲ್ಲಿ ಗ್ಯಾಸ್‌ಸಿಲಿಂಡರ್‌ಗಳ ಸ್ಪೋಟದಿಂದ ಹೊತ್ತಿ ಉರಿದ ಟೆಂಟ್‌ಗಳು by ಕೆಂಧೂಳಿ ಉತ್ತರಪ್ರದೇಶ,ಜ,೨೦-ಮಹಾಕುಂಬ ಮೇಳದ ಪ್ರದೇಶವೊಮದರಲ್ಲಿ ೧೯ ಕ್ಯಾಂಪ್‌ಸೈಟ್‌ನಲ್ಲಿ ಗ್ಯಾಸ್‌ಸಿಲಿಂಡರ್‌ಗಳು ಸ್ಪೋಟಗೊಂಡ ಕಾರಣ ಬಾರಿ ಬೆಂಕಿಹೊತ್ತಿಕೊಂಡು ಸುಟ್ಟು ಬಸ್ಮವಾಗಿವೆ ಆದರೆ ಯಾರಿಗೂ ಪ್ರಾಣಾಪಾಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ವರದಿಯಾದ ತಕ್ಷಣ ಸುರಕ್ಷತಾ ವ್ಯವಸ್ಥೆಗಳ ಭಾಗವಾಗಿ ಸ್ಥಳದಲ್ಲಿ ನಿಂತಿದ್ದ ಹಲವಾರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದವು. ಸ್ಥಳೀಯ ಅಧಿಕಾರಿಗಳು, ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗಳ ಸಮನ್ವಯದೊಂದಿಗೆ ಬೆಂಕಿ ನಂದಿಸುವ ಕಾರ್ಯವನ್ನು ಪ್ರಾರಂಭಿಸಲಾಗಿತ್ತು ಮತ್ತು ಶೀಘ್ರದಲ್ಲೇ…

ಖೋ ಖೋ ದೇಸಿ ಆಟಕ್ಕೆ ಈಗ ವಿಶ್ವಕಿರೀಟದ ಮೆರಗು!

ಖೋ ಖೋ ದೇಸಿ ಆಟಕ್ಕೆ ಈಗ ವಿಶ್ವಕಿರೀಟದ ಮೆರಗು! ನವದೆಹಲಿ,ಜ,೨೦-ದೇಸಿಯ ಆಟದ ಮೊದಲ ವಿಶ್ವಕಪ್‌ನಲ್ಲೇ ಭಾರತದ ಮಹಿಳೆಯರು ಜಯಸುವ ಮೂಲಕ ವಿಶ್ವದಾಖಲೆ ಬರೆದು ಭಾರತೀಯ ಆಟದ ಸೊಬಗನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಅಜೇಯವಾಗಿ ಫೈನಲ್ ಪ್ರವೇಶಿಸಿದ್ದ ಭಾರತದ ಮಹಿಳಾ ತಂಡ ಫೈನಲ್ ಪಂದ್ಯದಲ್ಲಿ ನೇಪಾಳ ವಿರುದ್ಧ ೭೮-೪೦ ಅಂಕಗಳ ಭರ್ಜರಿ ಗೆಲುವು ಕಂಡಿದೆ. ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಖೋ ಖೋ ವಿಶ್ವಕಪ್ ಉದ್ಘಾಟನಾ ಟೂರ್ನಿಯಲ್ಲಿ ಆತಿಥೇಯ ಭಾರತ ಪ್ರಶಸ್ತಿ ಗೆಲ್ಲುವ ಮೂಲಕ ಇತಿಹಾಸ ರಚಿಸಿದೆ. ವೇಗ,…

Girl in a jacket