Girl in a jacket

Daily Archives: March 7, 2025

ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲುಹೊರಟ ಮುಖ್ಯಮಂತ್ರಿ- ವಿಜಯೇಂದ್ರ ಟೀಕೆ

ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲುಹೊರಟ ಮುಖ್ಯಮಂತ್ರಿ- ವಿಜಯೇಂದ್ರ ಟೀಕೆ by-ಕೆಂಧೂಳಿ ಬೆಂಗಳೂರು,ಮಾ,09-ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸಿ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಜಟ್ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.…

ಜನಕಲ್ಯಾಣ ಗ್ಯಾರೆಂಟಿ ಬಜೆಟ್: ಎಚ್.ಆಂಜನೇಯ

ಜನಕಲ್ಯಾಣ ಗ್ಯಾರೆಂಟಿ ಬಜೆಟ್: ಎಚ್.ಆಂಜನೇಯ by-ಕೆಂಧೂಳಿ ಚಿತ್ರದುರ್ಗ: ಮಾ.7-ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲಿದೆ ಎಂಬ ಸುಳ್ಳು ಆರೋಪಗಳಿಗೆ ಸಿದ್ದರಾಮಯ್ಯ ಬಜೆಟ್‍ನಲ್ಲಿ ತಕ್ಕ, ಯೋಜನಾತ್ಮಕ ಉತ್ತರ ನೀಡಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ತಮ್ಮ ಧೀರ್ಘ ರಾಜಕೀಯ ಅನುಭವ, ಬಡಜನರ ನೋವು ಕಣ್ಣಾರೆ ಕಂಡಿರುವ ಸಿದ್ದರಾಮಯ್ಯ ರಾಜ್ಯದ 6 ಕೋಟಿಗೂ ಹೆಚ್ಚು ಜನರ ಪ್ರಗತಿಗೆ ಬಜೆಟ್‍ನಲ್ಲಿ ಅನೇಕ ಯೋಜನೆಗಳನ್ನು ರೂಪಿಸುವ ಮೂಲಕ ಸಮೃದ್ಧ ನಾಡು ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದ್ದಾರೆ. ಪಂಚ ಗ್ಯಾರೆಂಟಿ ಯೋಜನೆಗಳಿಗೆ…

ಸಾಮಾಜಿಕ ಕಳಕಳಿ, ಉದ್ಯಮಸ್ನೇಹಿ ಬಜೆಟ್: ಎಂ ಬಿ ಪಾಟೀಲ

ಸಾಮಾಜಿಕ ಕಳಕಳಿ, ಉದ್ಯಮಸ್ನೇಹಿ ಬಜೆಟ್: ಎಂ ಬಿ ಪಾಟೀಲ by-ಕೆಂಧೂಳಿ ಬೆಂಗಳೂರು,ಮಾ,09-: ಮುಖ್ಯಮಂತ್ರಿ ಸಿದ್ದರಾಮಯ್ಯನವರು 16ನೇ ಬಾರಿಗೆ ಮಂಡಿಸಿರುವ ಬಜೆಟ್ ಸಾಮಾಜಿಕ ಕಳಕಳಿ ಹೊಂದಿರುವ ಕಲ್ಯಾಣ ಕಾರ್ಯಕ್ರಮಗಳು ಮತ್ತು ಆರ್ಥಿಕ ಬೆಳವಣಿಗೆಗೆ ಇಂಬು ನೀಡುವ ಕೈಗಾರಿಕಾ ಬೆಳವಣಿಗೆ ಎರಡಕ್ಕೂ ಸಮಾನ ಪ್ರಾತಿನಿಧ್ಯ ನೀಡಿರುವ ಸಮಗ್ರ ದೃಷ್ಟಿಕೋನದ ಬಜೆಟ್ ಆಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಸಿದ್ದರಾಮಯ್ಯನವರು 1995ರಲ್ಲಿ ಮೊದಲ ಬಾರಿ ಬಜೆಟ್ ಮಂಡಿಸಿದಾಗ ಅದರ ಗಾತ್ರ 12 ಸಾವಿರ…

ಜನವಿರೋಧಿ ಹಾಗೂ ಮುಸ್ಲಿಮರ ಬಜೆಟ್‌, ಅಭಿವೃದ್ಧಿಯ ಯೋಜನೆಗಳೇ ಇಲ್ಲ- ಅಶೋಕ್

ಜನವಿರೋಧಿ ಹಾಗೂ ಮುಸ್ಲಿಮರ ಬಜೆಟ್‌, ಅಭಿವೃದ್ಧಿಯ ಯೋಜನೆಗಳೇ ಇಲ್ಲ- ಅಶೋಕ್ by-ಕೆಂಧೂಳಿ ಬೆಂಗಳೂರು, ಮಾ, 7-ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್‌ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಜೆಟ್‌ ಮಂಡನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊನೆಯ ಬಜೆಟ್‌ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ. ಆದರೆ…

ಪೊಲೀಸ್ ವಿಭಾಗಗಳ ಸಂಖ್ಯೆ 11ಕ್ಕೆ ಏರಿಕೆ,ನಕ್ಸಲ್ ನಿಗ್ರಹ ದಳ ವಿಸರ್ಜನೆ ಫೋಷಿಸಿದ ಸಿಎಂ

ಪೊಲೀಸ್ ವಿಭಾಗಗಳ ಸಂಖ್ಯೆ 11ಕ್ಕೆ ಏರಿಕೆ,ನಕ್ಸಲ್ ನಿಗ್ರಹ ದಳ ವಿಸರ್ಜನೆ ಫೋಷಿಸಿದ ಸಿಎಂ by- ಕೆಂಧೂಳಿ ಬೆಂಗಳೂರು,ಮಾ,09-ಪೊಲೀಸ್ ಇಲಾಖೆಯನ್ನು ಪರಿಣಾಮ ಕಾರಿಗೊಳಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ 8 ರಿಂದ 11 ಪೂಲೀಸ್ ವಿಭಾಗಗಳನ್ನು ಹೆಚ್ಚಿಸಲಾಗುವುದು ಮತ್ತು ನಕ್ಸಲ್ ನಿಗ್ರಹದಳವನ್ನು ವಿಸರ್ಜಿಸುವುದಾಗಿ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ. 2025-26ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ ಇನ್ನೂ ಮೂರು ಪೊಲೀಸ್ ವಿಭಾಗಗಳೊಂದಿಗೆ, ಪೊಲೀಸ್ ಠಾಣೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ನಗರದಲ್ಲಿ ಇನ್ನೂ ಮೂವರು ಐಪಿಎಸ್ ಅಧಿಕಾರಿಗಳನ್ನು ಡಿಸಿಪಿಗಳಾಗಿ…

ಕೃಷಿ,ಮೂಲಸೌಕರ್ಯ, ಉದ್ಯೋಗ ಸೃಷ್ಟಿಯ ಮಹತ್ವದ ಜಬೆಟ್ ಮಂಡಿಸಿ ಸಿದ್ದರಾಮಯ್ಯ

ಕೃಷಿ,ಮೂಲಸೌಕರ್ಯ, ಉದ್ಯೋಗ ಸೃಷ್ಟಿಯ ಮಹತ್ವದ ಜಬೆಟ್ ಮಂಡಿಸಿ ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು, ಮಾ,09-ಮುಖ್ಯಮಂತ್ರಿ ಸಿದ್ದರಾಮಯ್ಯ  ಶುಕ್ರವಾರ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿದ್ದಾರೆ.₹4.09 ಲಕ್ಷ ಕೋಟಿ ಮೌಲ್ಯದ ಬಜೆಟ್ ಮಂಡಿಸಿದ್ದು ಇದು ಬಜೆಟ್ ಅಭಿವೃದ್ಧಿ, ಕಲ್ಯಾಣ, ಮೂಲಸೌಕರ್ಯ, ಕೃಷಿ ಮತ್ತು ಉದ್ಯೋಗವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ. 3 ಗಂಟೆ 30 ನಿಮಿಷಗಳ ಕಾಲ ಸುದೀರ್ಘ ಬಜೆಟ್ ಮಂಡನೆ ಮಾಡಲಾಗಿದೆ. ಇದೊಂದು ದಾಖಲೆಯ ಬಜೆಟ್‌ ಮಂಡನೆಯಾಗಿದೆ. ಈ ಬಜೆಟ್ ರಾಜ್ಯದ ಆರ್ಥಿಕ ಪ್ರಗತಿಗೆ ಮಹತ್ವದ ಹೆಜ್ಜೆಯಾಗಿ ಹೊರ ಹೊಮ್ಮಿದೆ.…

Girl in a jacket