Girl in a jacket

Daily Archives: April 20, 2025

ಪಂಜಾಬ್ ತಂಡವನ್ನು ಬಗ್ಗು ಬಡೆದ ರಾಯಲ್ ಚಾಲೆಂಜರ್ಸ್ ತಂಡ

ಮುಲ್ಲಾನ್‌ಪುರ,ಏ,೨೦- ತವರಿನ ಅಂಗಳ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಲು ಕಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗ ಪಂಜಾಪ್ ತಂಡದ ವಿರುದ್ಧ ಗೆಲುವು ಸಾಧಿಸುವ ಮೂಲಕ ಐದನೇ ಗೆಲುವು ಪಡೆದಿದ್ದಾರೆ. ತವರಿನಲ್ಲಿ ಅನುಭವಿಸಿದ್ದ ಸೋಲಿಗೆ ಬೆಂಗಳೂರು ಬಾಯ್ಸ್, ಪಂಜಾಬ್‌ಗೆ ನುಗ್ಗಿ ಅಯ್ಯರ್ ಪಡೆಯನ್ನು ಬಗ್ಗುಬಡಿದಿದೆ. ಈ ಮೂಲಕ ಸೋಲಿನ ಲೆಕ್ಕಾಚಾರ ಚುಕ್ತ ಮಾಡುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಯಶಸ್ವಿಯಾಗಿದೆ. ೧೫೮ ರನ್‌ಗಳ ಗುರಿಯನ್ನು ೭ ವಿಕೆಟ್ ಅಂತರದಲ್ಲಿ ಆರ್‌ಸಿಬಿ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ…

ಕರ್ನಾಟಕ ನಿವೃತ್ತ ಡಿಜಿಪಿ ಓಂ  ಪ್ರಕಾಶ್ ಹತ್ಯೆ

ಬೆಂಗಳೂರು,ಏ.೨೦-ಆಸ್ತಿಯ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಚ್ ಎಸ್ ಆರ್ ಲೇಔಟ್‌ನಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದೆ. ಕರ್ನಾಟಕದ ಕೇಡರ್ ೧೯೮೧ರ ಬ್ಯಾಚ್ ಐಪಿಎಸ್ ಅಧಿಕಾರಿ ಆಗಿದ್ದ ಓಂ ಪ್ರಕಾಶ್ ಅವರು ೨೦೧೫ರಲ್ಲಿ ರಾಜ್ಯದ ಡಿಜಿ, ಐಜಿಪಿ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಇವರು ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಾಗಿದ್ದರು. ಇನ್ನು ಭಾನುವಾರ ಮಧ್ಯಾಹ್ನದ ವೇಳೆ ಓಂ ಪ್ರಕಾಶ್ ಅವರು…

ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿ.ಎಂ ಪುನರುಚ್ಚಾರ

ಬೆಳಗಾವಿ ಏ 20- ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು. ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ…

ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ: ಸಿ.ಎಂ ಸಿದ್ದರಾಮಯ್ಯ

ಬೆಳಗಾವಿ ಏ 20-ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150…

ಜಾತಿವಾರು ಜನಗಣತಿ ದತ್ತಾಂಶ ನೀಡಲು ಸನ್ನಧರಾಗಿ – ಇಮ್ಮಡಿ ಶ್ರೀ

ಚಿತ್ರದುರ್ಗ, ಏ,20-ಸುಪ್ರೀಂ ಕೋರ್ಟ್ ಆಗಸ್ಟ್-೦೫, ೨೦೨೪ ರಂದು ಆದೇಶವೊಂದನ್ನು ನೀಡಿ ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಗೆ ನಿಖರ ದತ್ತಾಂಶ ಆಧಾರದ ಮೇಲೆ ಮೀಸಲಾತಿ ಜಾರಿ ಮಾಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂಬ ಆದೇಶವೊಂದನ್ನು ನೀಡಿತ್ತು.  ಅದರನ್ವಯ ರಾಜ್ಯ ಸರ್ಕಾರದ ಮೇಲೆ ತೀವ್ರ ಒತ್ತಡ ತರುವಂತಹ ಪ್ರಯತ್ನಗಳು ನಡೆಯುತ್ತಲೇ ಇದೆ.  ಈ ಮಧ್ಯೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ರವರ ನೇತೃತ್ವದಲ್ಲಿ ಆಯೋಗವೊಂದನ್ನು ರಚನೆ ಮಾಡಿರುವ ರಾಜ್ಯ ಸರ್ಕಾರ ಜಾತಿವಾರು ಅಂಕಿ-ಅಂಶಗಳನ್ನು ಸಂಗ್ರಹಿಸಿ (ದತ್ತಾಂಶ) ಒಳ ಮೀಸಲಾತಿಗೆ ಶಿಫಾರಸ್ಸು ಮಾಡಿದ ಆಧಾರದ…

ಬೀದರ್ ಜನಿವಾರ ಪ್ರಕರಣ: ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್ : ಈಶ್ವರ ಖಂಡ್ರೆ

ಬೀದರ್, ಏ.20-ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ. ಇಂದು ಬೆಳಗ್ಗೆ ಸಚಿವ ರಹೀಂಖಾನ್ ಅವರ ಜೊತೆಯಲ್ಲಿ ಸುಚಿವ್ರತ್ ಕುಲಕರ್ಣಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದ ಈಶ್ವರ ಖಂಡ್ರೆ, ಖಾಸಗಿ ಕಾಲೇಜಿನ ಸಿಬ್ಬಂದಿಯಿಂದ…

ಸಾಮಾಜಿಕ ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇರಲು ಹೇಗೆ ಸಾಧ್ಯ:ಅಶೋಕ್ ಆರೋಪಕ್ಕೆ ಸಿಎಂ ತಿರುಗೇಟು

ಬೆಳಗಾವಿ, ಏ, 22-:ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಅವರು ಇಂದು ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಆಶೋಕ್ ಅವರು…

ಕಾಲು, ಬಾಯಿ ರೋಗದ ವಿರುದ್ಧ ಲಸಿಕೆ ಅಭಿಯಾನಕ್ಕೆ ಮಧು ಬಂಗಾರಪ್ಪ ಚಾಲನೆ

ಕುಬಟೂರು,ಏ,20- ಶಿವಮೊಗ್ಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕಾಲು ಮತ್ತು ಬಾಯಿ ಹಾಗೂ ಚರ್ಮ ಗಂಟು ರೋಗದ ವಿರುದ್ಧ ಲಸಿಕೆ ಅಭಿಯಾನಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಚಾಲನೆ ನೀಡಿದರು. ಏಪ್ರಿಲ್ 21 ರಿಂದ ಜೂನ್ 4 ರವರೆಗೆ ರಾಜ್ಯಾದ್ಯಂತ 45 ದಿನಗಳ ಕಾಲ ಲಸಿಕೆ ಅಭಿಯಾನ ನಡೆಯಲಿದೆ.ಜಿಲ್ಲಾ ಪಂಚಾಯತ್ ಶಿವಮೊಗ್ಗ ಮತ್ತು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಸಹಯೋಗದೊಂದಿಗೆ ನಡೆಸಲಾಗುವ ರಾಷ್ಟ್ರೀಯ ಪ್ರಾಣಿ ರೋಗ ನಿಯಂತ್ರಣ…

ವಿದ್ಯಾರ್ಥಿಗೆ ಜನಿವಾರ ತಗೆಸಿದ ಮತ್ತೊಂದು ಪ್ರಕರಣ ಬಯಲಿಗೆ

ಶಿವಮೊಗ್ಗ, ಏಪ್ರಿಲ್ ೨೦ – ಬೀದರ್ ಸಿಇಟಿ ಪರಿಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬನಿಗೆ ಜನಿವಾರ ತಗೆಸಿದ ಪ್ರಕರಣ ವ್ಯಾಪಕ ವಿರೋಧವಾಗುತ್ತಿರುವ ಬೆನ್ನಲ್ಲೆ ಇನ್ನೊಂದು ಪ್ರಕರಣ ಬಯಲಾಗಿದೆ. ಶಿವಮೊಗ್ಗ ಜಿಲ್ಲೆಸಾಗರ ತಾಲೂಕಿನ ಹಳೆ ಇಕ್ಕೇರಿ ಗ್ರಾಮದ ಪಾರ್ಥ ಎಸ್. ರಾವ್ ಎಂಬ ವಿದ್ಯಾರ್ಥಿ ತನ್ನ ಶಿಕ್ಷಣ ಭವಿಷ್ಯಕ್ಕಾಗಿ ಏಪ್ರಿಲ್ ೧೬ರಂದು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಹಾಜರಾದರು. ಆದರೆ, ಪಾರ್ಥನು ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪಡೆಯುವಾಗ, ಭದ್ರತೆಗಾಗಿ ನಿಯೋಜಿತ ಪೊಲೀಸ್ ಸಿಬ್ಬಂದಿ ಹಾಗೂ ಪರೀಕ್ಷಾ ಮೇಲ್ವಿಚಾರಕರು ಅವನ…

ರಾಜಸ್ಥಾನ ತಂಡದ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ರೋಚಕ ಜಯ

ರಾಜಸ್ಥಾನ,ಏ,೧೯- ಸವಾಯಿ ಮಾನ್ಸಿಂಗ್ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸಾಧಾರಣ ಮೊತ್ತದ ರನ್‌ಗಳನ್ನು ಚೇಜ್ ಮಾಡಲು ಸಾಧ್ಯವಾಗದೆ ರಾಜಾಸ್ಥಾನ್ ರಾಯಲ್ಸ್ ತಂಡ ಕೇವಲ ಎರಡು ರನ್‌ಗಳಿಂದ ಸೋತಿತು. ಲಕ್ನೋ ಕ್ಯಾಪ್ಟನ್ ರಿಷಭ್ ಪಂತ್ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಆರಂಭದಲ್ಲೇ ಆಘಾತಕ್ಕೆ ಒಳಗಾದರು. ಏಕೆಂದರೆ ತಂಡದ ಪರ ಆರಂಭಿಕರಾದ ಮಿಚೆಲ್ ಮಾರ್ಷ್ ಕೇವಲ ೪ ರನ್‌ಗೆ ಕ್ಯಾಚ್ ನೀಡಿದರು. ಆದರೆ ಮಾರ್ಕ್ರಾಮ್ ಉತ್ತಮ ಬ್ಯಾಟಿಂಗ್‌ನಿಂದ ೪೫ ಎಸೆತದಲ್ಲಿ ೬೬ ರನ್…

Girl in a jacket