Girl in a jacket

Daily Archives: May 28, 2025

ಮಾಜಿ ಯೋಧರಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 28,-“ರಾಜ್ಯದಲ್ಲಿರುವ ಎಲ್ಲಾ ಮಾಜಿ ಯೋಧರಿಗೆ ನೆರವಾಗಲು ಪ್ರತ್ಯೇಕ ನಿಗಮ (ಕಾರ್ಪೊರೇಷನ್) ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನಗರದ ಟೌನ್ ಹಾಲ್ ನಲ್ಲಿ ಬುಧವಾರ ನಡೆದ ಜೈ ಹಿಂದ್ ಸಭಾ ಕಾರ್ಯಕ್ರಮದಲ್ಲಿ ದೇಶಕ್ಕೆ ಸೇವೆ ಸಲ್ಲಿಸಿದ ಹಿರಿಯ ಸೇನಾಧಿಕಾರಿಗಳು ಹಾಗೂ ಮಾಜಿ ಯೋಧರು, ಹುತಾತ್ಮರಾದ ಯೋಧರ ಕುಟುಂಬ ಸದಸ್ಯರನ್ನು ಸನ್ಮಾನಿಸಿದ ನಂತರ ಶಿವಕುಮಾರ್…

ಕೆಎಸ್ಐಐಡಿಸಿ ಲಾಭಾಂಶ 68 ಕೋಟಿ ರೂ. ಸರಕಾರಕ್ಕೆ ಹಸ್ತಾಂತರ

ಬೆಂಗಳೂರು,ಮೇ28-ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಸಾಮಾನ್ಯ ಲಾಭಾಂಶ 68.69 ಕೋಟಿ ರೂ. ಮತ್ತು ವಿಶೇಷ ಲಾಭಾಂಶ 17,21,56,839 ಕೋಟಿ ರೂ. ಮೊತ್ತದ ಚೆಕ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 3 ಕೋಟಿ ರೂಪಾಯಿ ಮೊತ್ತದ ಚೆಕ್ ಸಹ ನೀಡಲಾಯಿತು. ಚೆಕ್ ಸ್ವೀಕರಿಸಿದ ಸಿದ್ದರಾಮಯ್ಯ ಮಾತನಾಡಿ, ಸಾರ್ವಜನಿಕ ವಲಯದ ಉದ್ಯಮಗಳು…

ಪುಟ್ಟಣ್ಣನ ಕತ್ತೆ” ಮೊದಲನೋಟ ಬಿಡುಗಡೆ

“ದಾರಿ ಯಾವುದಯ್ಯ ವೈಕುಂಠಕೆ” ಎಂಬ ಉತ್ತಮ ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ “ಸಿದ್ದು ಪೂರ್ಣಚಂದ್ರ” ರವರು ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಹಲವು ವಿಭಿನ್ನ ಚಿತ್ರಗಳನ್ನು ಈಗಾಗಲೇ ನಿರ್ದೇಶನ ಮಾಡಿದ್ದಾರೆ. ಬ್ರಹ್ಮಕಮಲ, ತಾರಿಣಿ, ಈ ಪಾದ ಪುಣ್ಯ ಪಾದ, ಇವುಗಳ ಸಾಲಿಗೆ ಮತ್ತೊಂದು ಹೊಸ ಚಿತ್ರ “ಪುಟ್ಟಣ್ಣನ ಕತ್ತೆ” ಎಂಬ ಚಿತ್ರವೂ ಸೇರಿಕೊಳ್ಳುತ್ತದೆ. ನಿರ್ದೇಶಕರ ಜನುಮದಿನದಂದು ಚಿತ್ರ ತಂಡ “ಪುಟ್ಟಣ್ಣನ ಕತ್ತೆ” ಪೋಸ್ಟರ್ ಬಿಡುಗಡೆ ಮಾಡಿದೆ. ಮೊದಲ ಪೋಸ್ಟರ್ನಲ್ಲಿ ಕತ್ತೆಯನ್ನು ತೋರಿಸಿರುವುದು ಚಿತ್ರದ ಶುಭ ಸೂಚನೆ…

ಕಾನ್ಸ್ ಚಿತ್ರೋತ್ಸವದಲ್ಲಿ ಸೀರೆಯಲ್ಲಿ ಗಮನಸೆಳೆದ ಚಾಂದಿನಿ

ಫ್ರಾನ್ಸ್ ದೇಶದ ಕಾನ್ಸ್ ನಗರದಲ್ಲಿ ಇತ್ತೀಚೆಗಷ್ಟೇ ಪ್ರತಿಷ್ಠಿತ ಕಾನ್ಸ್ ಚಿತ್ರೋತ್ಸವವು ಮುಕ್ತಾಯಗೊಂಡಿದೆ. ಈ ಚಿತ್ರೋತ್ಸವದಲ್ಲಿ ಭಾರತದ ಹಲವು ನಟಿಯರು ಭಾಗವಹಿಸಿದ್ದು, ಕನ್ನಡದ ‘ಎ’ ಚಿತ್ರದಲ್ಲಿ ನಟಿಸಿದ್ದ ಚಾಂದಿನಿ ಸಹ ರೆಡ್‍ ಕಾರ್ಪೆಟ್‍ ಮೇಲೆ ಕ್ಯಾಟ್‍ ವಾಕ್‍ ಮಾಡಿದ್ದು ವಿಶೇಷವಾಗಿತ್ತು. ಈ ಚಿತ್ರೋತ್ಸವದ ರೆಡ್‍ ಕಾರ್ಪೆಟ್ ವಿಭಾಗದಲ್ಲಿ ಭಾರತದ ಹಲವು ನಟಿಯರು ಭಾಗವಹಿಸಿದ್ದರೂ, ಅವರೆಲ್ಲರೂ ಆಧುನಿಕ ಉಡುಗೆಗಳಲ್ಲಿ ಕಾಣಿಸಿಕೊಂಡಿದ್ದರು. ನಟಿ ಚಾಂದಿನಿ ರೆಡ್‍ ಕಾರ್ಪೆಟ್‍ ಮೇಲೆ ನೀಲಿ ಬಣ್ಣದ ಸೀರೆಯಲ್ಲಿ ಕಾಣಿಸಿಕೊಳ್ಳುವುದರ ಮೂಲಕ ಭಾರತದ ಸಂಪ್ರದಾಯ ಮತ್ತು ಪರಂಪರೆಯ…

ಜೂನ್ 6 ರಿಂದ ‘ಮಾದೇವ ‘ತೆರೆಮೇಲೆ

ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” ಚಿತ್ರ ಜೂನ್ 6 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಕುರಿತು ಆಯೋಜಿಸಲಾಗಿದ್ದ ಮಾಧ್ಯಮಗೋಷ್ಠಯಿಲ್ಲಿ ನಿರ್ದೇಶಕ ನವೀನ್ ರೆಡ್ಡಿ”ಮಾದೇವ” ಚಿತ್ರ 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಚಿತ್ರ. ವಿನೋದ್ ಪ್ರಭಾಕರ್ ಅವರು ಈ ಚಿತ್ರದಲ್ಲಿ “ಹ್ಯಾಂಗ್ ಮ್ಯಾನ್” ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಆ ಕಾಲಘಟ್ಟಕ್ಕೆ ಸರಿ ಹೊಂದುವ ಸ್ಥಳಗಳಲ್ಲೇ ಈ ಚಿತ್ರದ…

ಭಾನು ಮುಷ್ತಾಕ್‌ ಮಾನವೀಯತೆ ಮತ್ತು ಭಾರತೀಯತೆಯನ್ನು ಬೆಸೆಯುವ ನೇಕಾರರು- ಕೆ.ವಿ.ಪ್ರಭಾಕರ್

ಬೆಂಗಳೂರು ಮೇ 28-ಭಾನು ಮುಷ್ತಾಕ್‌ ಮಾನವೀಯತೆ ಮತ್ತು ಭಾರತೀಯತೆಯನ್ನು ಬೆಸೆಯುವ ನೇಕಾರರು. ಇವರಿಗೆ ಲಭಿಸಿರುವ ಬೂಕರ್‌ ಇಂಟರ್‌ ನ್ಯಾಷನಲ್‌ ಪ್ರಶಸ್ತಿ ನಾಗರಿಕತೆಯ ಬಯಕೆ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ತಿಳಿಸಿದರು. ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬಹುರೂಪಿ ಮತ್ತು ಗಾಂಧಿ ಪ್ರತಿಷ್ಠಾನ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ “ಬೂಕರ್ ಇಂಟರ್ ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ವಿಚ್ಛಿದ್ರಕಾರಿ ಶಕ್ತಿಗಳು, ಮತಾಂದತೆ ಹಾಗೂ ಮೂಲಭೂತವಾದ ಒಟ್ಟಾಗಿ…

ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ವಿಧಿಸುವ ನಿರ್ಧಾರವನ್ನು ಹಿಂಪಡೆಯ ಲುಅಶೋಕ ಆಗ್ರಹ*

ಬೆಂಗಳೂರು, ಮೇ 28-ಬೆಂಗಳೂರಿನ ಜನರ ಮೇಲೆ ಕಸದ ಸೆಸ್‌ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಬಿಬಿಎಂಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್‌ ಸರಕಾರ ಟನ್ನುಗಟ್ಟಲೆ ತೆರಿಗೆಯ ಭಾರವನ್ನು ಹೇರಿದೆ. ಈಗ ಕಸದಿಂದ ರಸ ತೆಗೆಯುವ ಸ್ಕೀಮ್‌ ಮಾಡಿದ್ದಾರೆ. ಇಡೀ ದೇಶದಲ್ಲಿ ಅತಿ ಹೆಚ್ಚು ಕಸದ ತೆರಿಗೆಯನ್ನು ಕಾಂಗ್ರೆಸ್‌ ವಿಧಿಸಿದೆ. ಕೆಂಪೇಗೌಡರು ನಾಡು…

Girl in a jacket