Girl in a jacket

Daily Archives: June 14, 2025

ಬದುಕನ್ನು ಆದರ್ಶವಾಗಿಟ್ಟುಕೊಂಡು ಸಾಹಿತ್ಯ ಬರೆಯುವುದು ದೊಡ್ಡ ಸವಾಲು: ಬಸವರಾಜ ಬೊಮ್ಮಾಯಿ

ಬೆಂಗಳೂರು,ಜೂ,14- ಸಾಹಿತಿ ಎಸ್. ಎಲ್. ಭೈರಪ್ಪ ಅವರ ಜೀವನ ಮತ್ತು ಸಾಹಿತ್ಯಕ್ಕೆ ಎರಡು ವಿಶ್ಲೇಷಣೆ ಅಗತ್ಯವಿಲ್ಲ. ಅವರ ಜೀವನ ಮತ್ತು ಬದುಕು ಎರಡೂ ಒಂದೇ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ನಗರದ ಬಿಎಂಎಸ್ ಎಂಜನೀಯರಿಂಗ್ ಕಾಲೇಜಿನಲ್ಲಿ ನಡೆದ ಸಾಹಿತಿ ಎಸ್. ಎಲ್ ಭೈರಪ್ಪ ಪ್ರತಿಷ್ಠಾನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಎಸ್. ಎಲ್. ಭೈರಪ್ಪನವರ ಕೃತಿಗಳನ್ನು ಅರ್ಥ ಮಾಡಿಕೊಳ್ಳುವುದೇ ಕಷ್ಟ. ನಾನು ಪರ್ವ ಕಾದಂಬರಿಯನ್ನು ಕಾಲೇಜು ಜೀವನದಲ್ಲಿಯೇ ಓದಲು ಪ್ರಯತ್ನ…

ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿಯವರ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ – ದಿನೇಶ್ ಗುಂಡೂರಾವ್

ಯಾದಗಿರಿ,ಜೂ,14- ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಆಸ್ಪತ್ರೆಗಳನ್ನ ಮೇಲ್ದರ್ಜೆಗೇರಿಸುವ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಒಂದು ಮಹತ್ವದ ಹೆಜ್ಜೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಯಾದಗಿರಿಯಲ್ಲಿ ಇಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಹಾಗೂ ಆರೋಗ್ಯ ಇಲಾಖೆ ಆಯೋಜಿಸಿದ್ದ “ಆರೋಗ್ಯ ಆವಿಷ್ಕಾರ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು. ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ. ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಾಗ ಕಲ್ಯಾಣ ಕರ್ನಾಟಕ ಭಾಗದಲ್ಲಿಯ ಆರೋಗ್ಯ…

ಸಮರ್ಥ ಆಡಳಿತದಿಂದ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತನೆ: ಬಿ.ವೈ.ವಿಜಯೇಂದ್ರ

ಕಲಬುರ್ಗಿ,ಜೂ,14-ಯುಪಿಎ ಸರಕಾರದ ಅವಧಿಯಲ್ಲಿ ಭಾರಿ ಹಗರಣಗಳು ನಡೆದಿದ್ದವು. ಬಳಿಕ ಎನ್.ಡಿ.ಎ. ಅವಧಿಯಲ್ಲಿ ಈ ದೇಶಕ್ಕೆ ಉಜ್ವಲ ಭವಿಷ್ಯವಿದೆ; ಭಾರತದಲ್ಲಿ ಭ್ರಷ್ಟಾಚಾರರಹಿತ ಆಡಳಿತ ನೀಡಲು ಸಾಧ್ಯವಿದೆ ಎಂಬುದನ್ನು ನರೇಂದ್ರ ಮೋದಿಜೀ ಅವರ ಸರಕಾರ ಸಾಬೀತುಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತವು ಇತರ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ತಲುಪಬಹುದು ಎಂಬ ವಿಶ್ವಾಸವನ್ನು ನರೇಂದ್ರ ಮೋದಿಜೀ ಅವರ ಸರಕಾರ ನೀಡಿದೆ ಎಂದು ತಿಳಿಸಿದರು. 11…

ಲಕ್ಷ ವೃಕ್ಷ’ ಅಭಿಯಾನಕ್ಕೆ ಚಾಲನೆ..

ಕಲಬುರ್ಗಿ ,ಜೂ,14- ವಿಶ್ವ ಪರಿಸರ ದಿನಾಚರಣೆ ಸಂಬಂಧ ದೇಶಾದ್ಯಾಂತ ಆಯೋಜಿಸಿರುವ ‘ಲಕ್ಷ ವೃಕ್ಷ’ ಅಭಿಯಾನದ ಅಂಗವಾಗಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಮಾಳವಿಕಾ ಅವಿನಾಶ್, ಶಾಸಕರಾದ ಬಸವರಾಜ್ ಮತ್ತಿಮೂಡ, ಡಾ. ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ, ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ್, ಮಾಜಿ ಶಾಸಕ ಅಪ್ಪು ಪಾಟೀಲ್, ಜಿಲ್ಲಾಧ್ಯಕ್ಷ…

371ಜೆ ಜಾರಿ ಹಿಂದೆ ಖರ್ಗೆ,ದರ್ಮಸಿಂಗ್ ಹೋರಾಟದ ಶ್ರಮ ಇದೆ; ಸಿ.ಎಂ

ಯಾದಗಿರಿ ಜೂ 14-ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ವರ್ಷಕ್ಕೆ 5000 ಕೋಟಿ KKRDB ಗೆ ಕೊಡುವುದಾಗಿ ನಾವು ಚುನಾವಣೆ ವೇಳೆ ಭರವಸೆ ನೀಡಿದ್ದೆವು. ಕಾಂಗ್ರೆಸ್ ಕೊಟ್ಟ ನಮ್ಮ ಭರವಸೆಯಂತೆ ಇಲ್ಲಿಯವರೆಗೂ 13000 ಕೋಟಿ ರೂಪಾಯಿ…

ಹಗಲು ಇರುಳಿನ ಬಲೆಯೊಳಗೆ ಕಾಣಿಸುವ ದಲಿತ ಕಾವ್ಯ

   ಭಾರತದಲ್ಲಿ ವ್ಯಕ್ತಿಗತ ಕಥನವಾಗಿರುವ ಚರಿತ್ರೆ ಸಮಷ್ಟಿ ಸಂಕಥನವಾಗಿರುವ ಇತಿಹಾಸಗಳು ಪ್ರಭುತ್ವದ  ಪಡಿಯಚ್ಚುಗಳಾಗಿವೆ. ಆರಂಭದಿಂದಲೂ ಅಗ್ರಹಾರ ಸಂಸ್ಕೃತಿಯ ವಶದಲ್ಲಿರುವ ಅಕ್ಷರಗಳು ಕೆಲವು ಶೂದ್ರ ಸಮುದಾಯಗಳನ್ನು ಚರಿತ್ರೆಯಿಂದ ದೂರವೇ ಉಳಿಸಿದವು. ಇದರಲ್ಲಿ ದಲಿತರದೇ ಸಿಂಹಪಾಲು ಎನ್ನಬಹುದು. ಹೀಗಾಗಿ ಪಾರಂಪರಿಕ ಚರಿತ್ರೆಯಲ್ಲಿ ದಲಿತ ಚರಿತ್ರೆಯು ಮೊದಲಿನಿಂದಲೂ ಮೌನ ಚರಿತ್ರೆ. ಇದು ಮಾತನಾಡಿದ್ದೇ ಅಪರೂಪ. ಹೌದು ಈ ನಾಡಿನ ಮೇಲೆ ನೂರಾರು ಪ್ರಭುತ್ವಗಳಿಗೆ ಹೆಗಲಾದ ದಲಿತರಿಗೆ ತಮ್ಮದೇ ಆದ ಒಂದು ಚರಿತ್ರೆಯು ಇರಲಿಲ್ಲವೆಂದರೆ ಅಚ್ಚರಿಯೂ ಆಗುತ್ತದಲ್ಲವೇ?    ದಲಿತರದು ಮೂಲತಃ ಮೌಖಿಕ ಚರಿತ್ರೆ ಮಾತು…

ಪತ್ರಿಕೋದ್ಯಮ ಜನಪರ ಕೆಲಸ ಮಾಡುವುದು ಮುಖ್ಯ: ಬಸವರಾಜ ಬೊಮ್ಮಾಯಿ

ಬೆಂಗಳೂರು,ಜೂ,14-ಪತ್ರಿಕೋದ್ಯಮ ಬಹಳ ಪ್ರಭಾವಶಾಲಿ ಉದ್ಯಮ, ಪ್ರಜಾಪ್ರಭುತ್ವದಲ್ಲಿ ಜಾಗೃತವಾಗಿ ಇರುವುದು ಎಷ್ಟು ಮುಖ್ಯವೋ ಜನ ಸಮುದಾಯದ ಪರ ಕೆಲಸ ಮಾಡುವುದು ಅಷ್ಟೇ ಮುಖ್ಯ. ಅದನ್ನು ಪತ್ರಿಕೋದ್ಯಮ ಮಾಡುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಶೇಷಾದ್ರಿಪುರಂ ಕಾಲೇಜಿನಲ್ಲಿ ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್ ಏರ್ಪಡಿಸಿದ್ದ ಡಾ. ಕೂಡ್ಲಿ ಗುರುರಾಜ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ನನ್ನ ಆತ್ಮೀಯ ಸ್ನೇಹಿತನಿಗೆ ಈ ಪ್ರಶಸ್ತಿ…

Girl in a jacket