ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್
ಬೆಂಗಳೂರು, ಜೂ,15-: ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ವಾಗಿ ಪ್ರವಾಸ ಆರಂಭ ಮಾಡ್ತೇನೆ. ಎಲ್ಲಾ ಹಿರಿಯ ಮುಖಂಡರು ಸಹಕಾರ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು. ಪಕ್ಷವನ್ನು ಜನರ ಬಳಿಗೆ ಕರೆದೊಯ್ಯುವ ಉದ್ದೇಶದಿಂದ ಹಿರಿಯರು ಸೇರಿ ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರೊಂದಿಗೆ ಜನತಾದಳ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇದರ ಭಗವಾಗಿಯೇ ರಾಜ್ಯ ಪಕ್ಷ ಸಂಘಟನಾ ರಾಜ್ಯ ಪ್ರವಾಸ ಮತ್ತು ಮಿಸ್ ಕಾಲ್ ಅಭಿಯಾನ…