Girl in a jacket

Daily Archives: June 27, 2025

ಹುಲಿಸಾವು ಪ್ರಕರಣ- ನಾಲ್ವರು ದನಗಾಹಿಗಳ ವಶಕ್ಕೆ ಪಡೆದ ಅರಣ್ಯ ಸಿಬ್ಬಂದಿ

ಚಾಮರಾಜನಗರ, ಜೂ,27-ಮಲೇಮಹಾದೇಶ್ವರ ಬೆಟ್ಟದ ಅರಣ್ಯಪ್ರದೇಶದಲ್ಲಿ ಐದು ಹುಲಿಗಳ ಸಾವಿಗೆ ಸಂಬಂಧಿಸಿದಂತೆ ನಾಲ್ವರು ದನಗಾಹಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಹನೂರು ತಾಲೂಕಿನ ಗಾಜನೂರಿನ ನಾಲ್ವರನ್ನ ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಹುಲಿಗಳ ಕಳೇಬರ ಸಿಕ್ಕ ಸ್ಥಳದಲ್ಲಿ ಹಸುವಿನ ದೇಹ ಪತ್ತೆಯಾಗಿದ್ದು, ಬೇಟೆಯಾಡಿದ್ದ ಹಸುವಿಗೆ ಕೀಟನಾಶಕ ಸಿಂಪಡಣೆ ಮಾಡಿರುವ ಶಂಕೆ ಹಿನ್ನೆಲೆ ದನಗಾಹಿಗಳನ್ನ ವಶಕ್ಕೆ ಪಡೆಯಲಾಗಿದೆ. ಮೃತಪಟ್ಟಿರುವ ಹಸು ಯಾರದ್ದು ಎಂಬುದನ್ನು ಅರಣ್ಯ ಇಲಾಖೆ ಸಿಬ್ಬಂದಿ ಪತ್ತೆ ಹಚ್ಚುತ್ತಿದ್ದು, ಹಸು ಕೊಂದ ಕೋಪಕ್ಕೆ ದನಗಾಹಿಗಳು ವಿಷ…

ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ: ಡಿ.ಕೆ. ಶಿ

ಬೆಂಗಳೂರು, ಜೂ.27-“ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ನಾಡಪ್ರಭು ಕೆಂಪೇಗೌಡ ಪ್ರತಿಮೆ, ಬಿಬಿಎಂಪಿ ಕಚೇರಿ ಮುಂಭಾಗದ ಪ್ರತಿಮೆ ಹಾಗೂ ವಿಧಾನಸೌಧ ಆವರಣದಲ್ಲಿರುವ ಪ್ರತಿಮೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪುಷ್ಪನಮನ ಸಲ್ಲಿಸಿ ಮಾತನಾಡಿದರು.…

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ-ಸಿಎಂ ಸಿದ್ದರಾಮಯ್ಯ

ಬೆಂಗಳೂರು ,ಜೂ,27-ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿ ಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ…

ಚಿಲುಮೆ ಪ್ರತಿಷ್ಠಾನದಿಂದ ನಾಡಪ್ರಭು ಜಯಂತ್ಯುತ್ಸವ- ಅದ್ದೂರಿ ಸ್ಮರಣೆ ಸಂಪನ್ಮ

ಬೆಂಗಳೂರು,ಜೂ,27- ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವದ ಅಂಗವಾಗಿ ಚಿಲುಮೆ ರವಿಕುಮಾರ್ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಮೂರು ದಿನಗಳ ಕಾರ್ಯಕ್ರಮ ಗುರುವಾರ ಸಂಪನ್ನಗೊಂಡಿತು. ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರು ಬುನಾದಿ ಹಾಕಿದ ಸ್ಥಳವಾದ ಅವಿನ್ಯೂ ರಸ್ತೆಯ ದೊಡ್ಡಪೇಟೆ ವೃತ್ತದಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ, ಕೆಂಪೇಗೌಡರ ವೇಷಭೂಷಣ ಧರಿಸಿ ಕುದುರೆ ಏರಿ ಸೇನೆಯೊಂದಿಗೆ ಆಗಮಿಸುವ ದೃಶ್ಯವನ್ನು ಮರುಸೃಷ್ಟಿಸಲಾಗಿತ್ತು. ನಗರದ ನಿರ್ಮಾಣದ ಬಗ್ಗೆ ಕೆಂಪೇಗೌಡರು ಹೊಂದಿದ್ದ ಪರಿಕಲ್ಪನೆ ಆಧರಿಸಿ ಅಭಿನಯ ಪ್ರಸ್ತುತ ಪಡಿಸಲಾಯಿತು.. ಡೊಳ್ಳು ಕುಣಿತ, ನಗಾರಿ ವಿದ್ಯಾ, ತಾಳ ಅರೇವಾದ್ಯ,…

Girl in a jacket