Girl in a jacket

Daily Archives: July 2, 2025

ಸಿದ್ದರಾಮಯ್ಯರ ರಾಜೀನಾಮೆ ಪಡೆಯಲು ಭೂಮಿಕೆ ಸಿದ್ಧತೆಗೆ ಸುರ್ಜೇವಾಲಾ ಭೇಟಿ: ಬಿ.ವೈ.ವಿಜಯೇಂದ್ರ ವ್ಯಂಗ್ಯ

ಬೆಂಗಳೂರು,ಜು,02- ಸಿದ್ದರಾಮಯ್ಯನವರ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯದ ಭ್ರಷ್ಟ ಸರಕಾರ ನೆಲಕಚ್ಚಿದ ಬಗ್ಗೆ ಅವರು ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು. ಸುರ್ಜೇವಾಲಾ ಅವರು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ.…

ಬೆಂಗಳೂರು ಗ್ರಾಮಾಂತರ ಜಿಲ್ಲೆ ಇನ್ನೂ ಉತ್ತರ ಜಿಲ್ಲೆ;ಸಚಿವಸಂಪುಟದ ನಿರ್ಣಯ

ಬೆಂಗಳೂರು, ಜು,02-ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ “ಬೆಂಗಳೂರು ಉತ್ತರ ತಾಲ್ಲೂಕು” ಎಂದು ಬಾಗೇಪಲ್ಲಿಗೆ “ಭಾಗ್ಯನಗರ” ಎಂದು ಹೆಸರಿಡಲು ಇಂದು ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ. ಈ ಕುರಿತು ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ವಿವರ ನೀಡಿದರು. ಆಡಳಿತವನ್ನು ಬೆಂಗಳೂರು ಕೇಂದ್ರಿತ ಎಂಬುದನ್ನು ತಪ್ಪಿಸಿ ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು ರಾಜ್ಯದ ಬೇರೆ…

ಕರ್ನಾಟಕದಾದ್ಯಂತ ಡಿಜಿಟಲ್ ಬೆಳವಣಿಗೆಯನ್ನು ವಿಕೇಂದ್ರೀಕರಿಸುವ ಹೊಣೆ ಹೊತ್ತ ಎಫ್. ಕೆ. ಸಿ. ಸಿ. ಐ: ಎಂ ಜಿ ಬಾಲಕೃಷ್ಣ,

ಬೆಂಗಳೂರು, ಜು,02- ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಯ ನಿಟ್ಟಿನಲ್ಲಿ, ಕರ್ನಾಟಕ ವಾಣಿಜ್ಯ ಕೈಗಾರಿಕಾ ಮಹಾ ಸಂಸ್ಥೆ ಬೆಂಗಳೂರಿನ ಕ್ಯಾಬಿನೆಟ್ ಹಾಲ್ನಲ್ಲಿ “ಬೆಂಗಳೂರಿನ ಹೊರಗೆ -ಶ್ರೇಣಿ 2 ಮತ್ತು ಶ್ರೇಣಿ 3 ನಗರಗಳ ಡಿಜಿಟಲ್ ಸಾಮರ್ಥ್ಯವನ್ನು ಅನ್ಲಾಕ್ ಮಾಡುವುದು” ಎಂಬ ಶೀರ್ಷಿಕೆಯ ಪವರ್-ಪ್ಯಾಕ್ಡ್ ಅಧಿವೇಶನವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವು ಕರ್ನಾಟಕದ ಡಿಜಿಟಲ್ ಆರ್ಥಿಕತೆಯನ್ನು ರಾಜಧಾನಿಯನ್ನು ಮೀರಿ ವಿಸ್ತರಿಸುವ ಮತ್ತು ಉದಯೋನ್ಮುಖ ನಗರಗಳಲ್ಲಿ ಬೆಳವಣಿಗೆಯನ್ನು ಉತ್ತೇಜಿಸುವ ತುರ್ತು ಅಗತ್ಯವನ್ನು ಎತ್ತಿ ತೋರಿಸಿತು. ಮುಖ್ಯ ಭಾಷಣ ಮಾಡಿದ ಎಫ್. ಕೆ. ಸಿ. ಸಿ.…

ರವಿಚಂದ್ರನ್ ಬಹುನಿರೀಕ್ಷಿತ “ತಪಸ್ವಿ” ನಾಳೆ ತೆರೆಮೇಲೆ

ಬೆಂಗಳೂರು ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ , ಸ್ಪೆನ್ಸರ್ ಮ್ಯಾಥ್ಯೂ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ ವಿಶೇಷಪಾತ್ರದಲ್ಲಿ ನಟಿಸಿರುವ ವಿಭಿನ್ನ ಕಥಾಹಂದರ ಹೊಂದಿರುವ “ತಪಸ್ಸಿ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. “ತಪಸ್ಸಿ” ಮಹಿಳಾ ಪ್ರಧಾನ ಚಿತ್ರವಾಗಿದ್ದು, ಅಮೆಯ್ರಾ ಗೋಸ್ವಾಮಿ ನಾಯಕಿಯಾಗಿ ನಟಿಸಿದ್ದಾರೆ. ಭಾಸ್ಕರ್, ಅನುಶಾ ಕಿಣಿ, ರಥರ್ವ, ಸಚ್ಚಿನ್, ಗುಬ್ಬಿ ನಟರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಿರ್ದೇಶಕ ಸ್ಪೆನ್ಸರ್ ಮ್ಯಾಥ್ಯೂ ಅವರೆ ಛಾಯಾಗ್ರಹಣ ಹಾಗೂ ಕಲಾ ನಿರ್ದೇಶನವನ್ನೂ ಮಾಡಿರುವ ಬಹು ನಿರೀಕ್ಷಿತ…

ನೈಜ ಘಟನೆ ಮತ್ತು ವ್ಯಕ್ತಿತ್ವಗಳ ಕಾಲ್ಪನಿಕ ಗುಚ್ಛ; “ಜಂಗಲ್‌ ಮಂಗಲ್‌

ಸ್ಯಾಂಡಲ್‌ವುಡ್‌ನಲ್ಲಿ ಭಿನ್ನ ವಿಭಿನ್ನ ಕಂಟೆಂಟಿಗೆ ಬೆಂಬಲ ಸಿಕ್ಕೇ ಸಿಗುತ್ತೆ. ಹಾಗೆ ಖ್ಯಾತನಾಮ ನಿರ್ದೇಶಕರಿಂದ ಮೆಚ್ಚುಗೆ ಪಡೆದ ಚಿತ್ರವೇ “ಜಂಗಲ್‌ ಮಂಗಲ್‌”. ಇನ್ನೇನು ಇದೇ ಜುಲೈ 4ರಂದು ರಾಜ್ಯಾದ್ಯಂತ ಈ ಸಿನಿಮಾ ತೆರೆಗೆ ಬರಲಿದೆ. ಲೈಟ್‌ ಹಾರ್ಟೆಡ್‌ ಥ್ರಿಲ್ಲರ್‌ ಶೈಲಿಯಲ್ಲಿ ಈ “ಜಂಗಲ್‌ ಮಂಗಲ್‌” ಸಿನಿಮಾವನ್ನು ನಿರ್ದೇಶಕ ರಕ್ಷಿತ್‌ ಕುಮಾರ್‌ ಕಟ್ಟಿಕೊಟ್ಟಿದ್ದಾರೆ. ಕಳೆದ ಎಂಟತ್ತು ವರ್ಷಗಳಿಂದ ಸಿನಿಮಾ, ಸೀರಿಯಲ್‌ ಹೀಗೆ ಬಣ್ಣದ ಲೋಕದಲ್ಲಿ ಸಕ್ರಿಯರಾಗಿ ಇದೀಗ ಸ್ವತಂತ್ರ ನಿರ್ದೇಶಕರಾಗಿ ಆಗಮಿಸುತ್ತಿದ್ದಾರೆ. ಹಾಗಾದರೆ ಏನಿದು ʻಜಂಗಲ್‌ ಮಂಗಲ್‌ʼ? ಯುವ ಜೋಡಿಯ…

ಮಹೇಶ್ ಜೋಶಿ ವಿರುದ್ದ ಆರ್ಥಿಕ ಅಶಿಸ್ತು ಕುರಿತು ತನಿಖೆ ನಡೆಸಲು ಆಗ್ರಹ

ಬೆಂಗಳೂರು, ಜು,02-ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಆರ್ಥಿಕ ಅಶಿಸ್ತು ಹಾಗೂ ಲೆಕ್ಕ ಪತ್ರ ಲೋಪ ಆಡಿಟ್ ಆಕ್ಷೇಪಣೆ ವಿಚಸರಗಳ ಬಗ್ಗೆ ತನಿಖೆ ನಡೆಸುವಂತೆ ಸಾಹಿತಿಗಳ ನಿಯೋಗಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಮನವಿ ಸಲ್ಲಿಸಿದರು. ಬಳ್ಳಾರಿ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಸಾಹಿತಿಗಳ ನಿಯೋಗ ಸಚಿವ ಜಮೀರ್ ಅಹಮದ್ ಖಾನ್ ಅವರ ನಿವಾಸಕ್ಕೆ ಭೇಟಿ ಮಾಡಿ  ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ದ ಆರ್ಥಿಕ ಅಶಿಸ್ತು ಹಾಗೂ ಲೆಕ್ಕ…

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಲು ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಜು,02-ಸಾಮಾನ್ಯ ಜನರ ಸಾರಿಗೆಯಾಗಿಯೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತೇನೆ. ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಹಾಲು, ಮೊಸರು, ಚಹಾ ಪುಡಿಯಿಂದ ಹಿಡಿದು ಪಾಪ್ ಕಾರ್ನ್ ವರೆಗೆ ಎಲ್ಲದರ…

Girl in a jacket