Girl in a jacket

Daily Archives: July 20, 2025

ಸಿದ್ದರಾಮಯ್ಯ ಅವರು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಮೊದಲು ಉತ್ತರ ನೀಡಲಿ- ವಿಜಯೇಂದ್ರ ಸವಾಲು

ಕೊಪ್ಪಳ,ಜು,20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಮೊದಲು ಉತ್ತರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕರ ಪ್ರಶ್ನೆಗೆ ಉತ್ತರಿಸಿ ನಂತರ ವಿರೋಧ ಪಕ್ಷದವರ ವಿರುದ್ಧ ಸವಾಲು ಹಾಕಲಿ. ಇಡೀ ರಾಜ್ಯದ ಜನ ಮೈಸೂರಿನ ಸಮಾವೇಶದಲ್ಲಿ ಏನು ನಡೆದಿದೆ ಎನ್ನುವುದನ್ನು ನೋಡಿದ್ದಾರೆ ಎಂದು ವ್ಯಂಗ್ಯವಾಗಿ ನುಡಿದರು. ಎಲ್ಲಾ ಕ್ಷೇತ್ರಗಳಲ್ಲಿ ಅನುದಾನವಿಲ್ಲದೆ ಶಾಸಕರು…

ಅಣೆಕಟ್ಟುಗಳ ಸುರಕ್ಷತೆ ತಾಂತ್ರಿಕ ಸಮಿತಿ ವರದಿ ಬಂದ ಬಳಿಕ ಅಗತ್ಯ ಕಾಮಗಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕಬಿನಿ, ಜು.20-“ರಾಜ್ಯದ ಅಣೆಕಟ್ಟುಗಳ ಸುರಕ್ಷತೆ ಕುರಿತು ಸರ್ಕಾರ ತಾಂತ್ರಿಕ ಸಮಿತಿ ರಚಿಸಿದ್ದು, ಈ ಸಮಿತಿ ವರದಿ ಬಂದ ನಂತರ ಅಗತ್ಯ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಬಿನಿ ಅಣೆಕಟ್ಟಿನ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. “ಕೆಆರ್ ಎಸ್ ಅಣೆಕಟ್ಟಿನ ನಂತರ ಇಂದು ಕಬಿನಿಯಲ್ಲಿ ಬಾಗಿನ ಅರ್ಪಣೆ ಮಾಡಿದ್ದೇವೆ. ಈ ಮಧ್ಯೆ ಎರಡು ವರ್ಷ ಅಣೆಕಟ್ಟು ಭರ್ತಿ ಆಗಿರಲಿಲ್ಲ. ಈ…

ಪ್ರತಿಯೊಬ್ಬರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಚಿವ ರಾಮಲಿಂಗಾರೆಡ್ಡಿ ಸಲಹೆ

ಬೆಂಗಳೂರು,ಜು,20-ಆರೋಗ್ಯವಂತ ಸಮಾಜವಿದ್ದಾಗ, ಸಮಾಜದ ಅಭವೃದ್ದಿ ಸಾಧ್ಯ ಈನಿಟ್ಟಿನಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಬಡವರಿಗೆ ಹೈಟೆಕ್ ವೈದ್ಯಕೀಯ ಸೌಲಭ್ಯಗಳು ಕಾಂಗ್ರೆಸ್ ಪಕ್ಷದ ಸರ್ಕಾರ ನೀಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕುರುಬರಹಳ್ಳಿ ಬಯಲು ರಂಗ ಮಂದಿರದಲ್ಲಿ   ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ಕಣ್ಣಿನ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರು ದೇಹದಲ್ಲಿ ಸಮಸ್ಯೆ ಇರಲಿ ಅಥವಾ ಇಲ್ಲದಿರಲಿ ವೈದ್ಯರ ಬಳಿ ಹೋಗಿ ತಪಾಸಣೆ ಮಾಡಿಸಿಕೊಳ್ಳಿ…

ಸುಳ್ಳು ಹೇಳುವ ಬಿಜೆಪಿ ಬಹಿರಂಗ ಚರ್ಚೆಗೆ ಬರುವುದಿಲ್ಲ-ಸಿಎಂ ಸಿದ್ದರಾಮಯ್ಯ

ಮೈಸೂರು, ಜು,20: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಿನ್ನೆ ನಡೆದ ಮೈಸೂರಿನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಡಿಸಿಎಂ ಗೆ ಅವಮಾನ ಮಾಡಿದೆ ಎಂದು ಬಿಜೆಪಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು ಪರಿಪಾಠ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್…

Girl in a jacket