Girl in a jacket

Daily Archives: August 2, 2025

ಬೆಂಗಳೂರು ವಿ.ವಿ.ಯಲ್ಲಿ ಆತ್ಮೀಯ ಬಿಳ್ಕೊಡಿಗೆ ಸಮಾರಂಭ

ಬೆಂಗಳೂರು ,ಆ,02- ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಎಸ್.ಹರಿಪ್ರಸಾದ್ ಹಾಗೂ ಆಡಳಿತ ವಿಭಾಗದ ಅಧೀಕ್ಷಕರಾದ ಟಿ.ಪದ್ಮಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ ನೀಡಿ ಅಭಿನಂದಿಸಲಾಯಿತು. ಸೆಂಟ್ರಲ್ ಕಾಲೇಜಿನ ಸರ್ ಸಿ.ವಿ.ರಾಮನ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಪ್ರಭಾರ ಕುಲಪತಿಗಳಾದ ಪ್ರೊ. ಕೆ.ಆರ್.ಜಲಜಾ, ನೂತನ ಕುಲಸಚಿವರಾದ ನವೀನ್ ಜೋಸೆಫ್, ಕುಲಸಚಿವ (ಮೌಲ್ಯಮಾಪನ) ಪ್ರೊ. ಬಿ.ರಮೇಶ್ ಹಾಗೂ ವಿತ್ತಾಧಿಕಾರಿಗಳಾದ ಎಂ.ವಿ. ವಿಜಯಲಕ್ಷ್ಮಿ ಉಭಯತ್ರರನ್ನು ಸನ್ಮಾನಿಸಿ ಅಭಿನಂದಿಸಿದರು. ವಿಶ್ವವಿದ್ಯಾನಿಲಯದ ಪ್ರಗತಿಯ ಹಾದಿಯಲ್ಲಿ ಇದರಿಬ್ಬರ ಅತ್ಯಮೂಲ್ಯ ಕೊಡುಗೆಯನ್ನು ಕೃತಜ್ಞತೆಯಿಂದ…

ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಅದರ ವಿರುದ್ಧ ಧ್ವನಿ ಎತ್ತಬೇಕು: ಆರ್‌.ಅಶೋಕ

ಬೆಂಗಳೂರು, ಆ, 2-ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಕರೆ ನೀಡಿದರು. ರಾಜ್ಯ ಒಕ್ಕಲಿಗರ ಜಾಗೃತಿ ಸಂಘದಿಂದ ಕುವೆಂಪು ಕಲಾಕ್ಷೇತ್ರದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು. ಅಂದರೆ ಮಾತ್ರ ಸಮುದಾಯಕ್ಕೆ ನ್ಯಾಯ ದೊರೆಯುತ್ತದೆ. ನಾಡಪ್ರಭು ಕೆಂಪೇಗೌಡರು ಯಾರ ಮೇಲೂ ದಂಡೆತ್ತಿ ಹೋಗಿ ಸಾಮ್ರಾಜ್ಯ ಸ್ಥಾಪಿಸಲಿಲ್ಲ. ಅವರು ಎಲ್ಲರನ್ನೂ ಸಮಾನತೆಯಿಂದ ಕಂಡು ಬೆಂಗಳೂರನ್ನು ಕಟ್ಟಿದ್ದರು. ಮಾಜಿ ಸಿಎಂ ಎಸ್‌.ಎಂ.ಕೃಷ್ಣ,…

ಅತ್ಯಾಚಾರ ಪ್ರಕರಣ;ಪ್ರಜ್ವಲ್ ರೇವಣ್ಣಗೆ ಜೀವಾವಧಿಶಿಕ್ಷೆ ವಿಧಿಸಿದ ನ್ಯಾಯಾಲಯ

ಬೆಂಗಳೂರು,ಆ,02 -ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪುನೀಡಿದೆ. ಮೈಸೂರಿನ ಕೆ.ಆರ್,ನಗರದಲ್ಲಿ ಮನೆ ಕೆಲಸಕ್ಕೆ ಸೇರಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನೆ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪುನೀಡಿದ್ದು ಶಿಕ್ಷೆಯ ತೀರ್ಪು ಇಂದು ಪ್ರಕಟಿಸಿತು. ಪ್ರಜ್ವಲ್ ರೇವಣ್ಣಗೆ ಜೀವಾಧಿ ಶಿಕ್ಷೆ ಒಟ್ಟು 11ಲಕ್ಷ ರೂ ದಂಡ ವಿಧಿಸಿ ಆದೇಶ ಹೊರಡಿಸಿದೆ, ಐಪಿಸಿ ಸೆಕ್ಷನ್ ೩೭೬(೨)(ಕ) ಅಡಿ ಜೀವಾವಧಿ ಶಿಕ್ಷೆ…

ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ಉಲ್ಲಂಘನೆಗೆ ಕಠಿಣ ಕ್ರಮ

ಬೆಂಗಳೂರು, ಆ, 02-ರಾಜ್ಯ ಕೃಷಿ ಇಲಾಖೆಯು ರಾಜ್ಯದಾದ್ಯಂತ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಡೆಯುತ್ತಿರುವ ಉಲ್ಲಂಘನೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಮಾನ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಮಾರ್ಗದರ್ಶನದಲ್ಲಿ, ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿ, ಫರ್ಟಿಲೈಸರ್ ಕಂಟ್ರೋಲ್ ಆರ್ಡರ್ (FCO) ಉಲ್ಲಂಘನೆ ಮತ್ತು ಅನಧಿಕೃತ ಕೀಟನಾಶಕ ತಯಾರಿಕೆಯನ್ನು ಪತ್ತೆಹಚ್ಚಿದೆ. *ಬನ್ನೂರಿನಲ್ಲಿ ಜಪ್ತಿ ಕಾರ್ಯಾಚರಣೆ* ಚಾಮುಂಡೇಶ್ವರಿ ಟ್ರೇಡರ್ಸ್ ಮತ್ತು ಗ್ರೀನ್‌ವೇ ಎಂಟರ್ಪ್ರೈಸಸ್, ಬನ್ನೂರು ಇಲ್ಲಿ FCO ಉಲ್ಲಂಘನೆ ಮಾಡಿ ಮಾರಾಟ ಮಾಡುತ್ತಿದ್ದ ಅಂದಾಜು ಒಟ್ಟು ₹5,29,900…

ಅರ್ಜುನನ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿ-ಈಶ್ವರ ಖಂಡ್ರೆ

ಬೀದರ್, ಆ.೨- ಹಾಸನದ ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮವಾದ ದಸರಾ ಆನೆ ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸಲಾಗಿದ್ದು, ಆ.೪ರಂದು ಗಜಪಯಣದ ವೇಳೆ ಮಾವುತ,ಸಿಬ್ಬಂದಿಗೆ ಪ್ರಥಮ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ. ಕೋಟೆ ಶಾಸಕ ಅನಿಲ್ ಕುಮಾರ್ ಸಿ. ಅವರು ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸುವ ಸಲಹೆ ನೀಡಿದ್ದರು. ಈ ಸಲಹೆ ಪುರಸ್ಕರಿಸಿ, ಮಾನವ-ವನ್ಯಜೀವಿ…

ನಟಿ ರಮ್ಯಾಗೆ ಅಶ್ಲೀಲ ಸಂದೇಶ ರವಾನಿಸಿದ್ದ ಇಬ್ಬರ ಬಂಧನ

ಬೆಂಗಳೂರು,ಆ,೦೨- ನಟಿ ರಮ್ಯಾ ವಿರುದ್ಧ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳು ಮಾಡಿದ ಸಂಬಂಧ ಇಬ್ಬರನ್ನು ಪೊಲಿಸರು ಬಂಧಿಸಿದ್ದಾರೆ. ರಮ್ಯಾ ಅವರಿಗೆ ಸಮಾಜಿಕ ಜಾಲ ತಾಣಗಳಲ್ಲಿ ಅಶ್ಲೀಲ ಸಂದೇಶಗಳನ್ನರು ರವಾನಿಸದವರೆಲ್ಲರೂ ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು ಸೈಬರ್ ಪೊಲೀಸರು ನಟಿ ರಮ್ಯಾ ನೀಡಿದ ದೂರಿನ ಆಧಾರದ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ರವಾನಿಸಿದ ಇಬ್ಬರನ್ನು ಬಂಧಿಸಿದ್ದಾರೆ. ರಮ್ಯಾ ಅವರು ಇತ್ತೀಚೆಗೆ ರೇಣುಕಾಸ್ವಾಮಿ ಪರ ಮಾತನಾಡಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುವಾಗ ‘ರೇಣುಕಾಸ್ವಾಮಿ…

Girl in a jacket