ಬೆಂಗಳೂರು,ನ,08-ಚೈನಾದಲ್ಲಿ ನಡೆದ 15 ವರ್ಷದೊಳಗಿನ ಬಾಲಕಿಯರ ಏಷ್ಯಾ ಕಪ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯದ ಶೈನಾ ಮಣಿಮುತ್ತು ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಹಾರೈಸಿದರು.
ವಿಧಾನಸೌಧದ ಕಚೇರಿಯಲ್ಲಿ ತಮ್ಮನ್ನು ಭೇಟಿಯಾಗಿ ಪದಕ ತೋರಿಸಿದ ಶೈನಾ ಅವರಿಗೆ ಇನ್ನಷ್ಟು ಸಾಧನೆ ಮಾಡಿ ಇದೇ ರೀತಿ ರಾಜ್ಯಕ್ಕೆ ಮತ್ತು ದೇಶಕ್ಕೆ ಕೀರ್ತಿ ತರುವಂತೆ ಹಾರೈಸಿದರು.
