47 ಕುಟುಂಬಗಳಿಗೆ ಸಚಿವರಿಂದ ಹಕ್ಕುಪತ್ರ ವಿತರಣೆ

Share

 

ವಿಜಯಪುರ,ಆ,09: ನಿರಂತರವಾಗಿ ಭೀಮಾ ನದಿ ಪ್ರವಾಹಕ್ಕೆ ಸಿಲುಕಿ ಬದಕು ಕಳೆದುಕೊಂಡಿದ್ದ ತಾರಾಪುರ ಗ್ರಾಮದ ನಿರಾಶ್ರಿತರಿಗೆ ಹೊಸ ನಿವೇಶನಗಳ ಹಕ್ಕು ಪತ್ರಗಳನ್ನು ವಿತರಿಸುವ ಮೂಲಕ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ವಿಜಯಪುರ ಕೊವಿಡ್ ಮತ್ತು ಪ್ರವಾಹ ಉಸ್ತುವಾರಿ ಸಚಿವರಾಗಿರುವ ಶಶಿಕಲಾ ಜೊಲ್ಲೆ ದಶಕಗಳ ಜನರ ಬೇಡಿಕೆಯನ್ನು ಈಡೇರಿಸಿದ್ದಾರೆ.
ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ತಾರಾಪುರ ಗ್ರಾಮದಲ್ಲಿ ಸೋಮವಾರ 47 ಜನರಿಗೆ ಹಕ್ಕು ಪತ್ರ ವಿತರಣೆಯನ್ನು ಸಚಿವರಾದ ಶಶಿಕಲಾ ಜೊಲ್ಲೆಯವರು ಮಾಡಿದರು.
2010 ರಿಂದ ಬಗೆ ಹರಿಯದ ಪ್ರಕರಣವನ್ನು ಬಗೆ ಹರಿಸಿ ನಿಜವಾದ ಫಲಾನುಭವಿಗಳಿಗೆ ಸಚಿವರಾದ ಶಶಿಕಲಾ ಜೊಲ್ಲೆಯವರು ನಿರಾಶ್ರೀತರಿಗೆ ಹಕ್ಕು ಪತ್ರ ವಿತರಣೆ ಮಾಡಿದರು.
ಭಿಮಾ ಏತನೀರಾವರಿ ಯೋಜನೆಯಲ್ಲಿ ಮನೆಗಳನ್ನು ಕಳೆದುಕೊಂಡಿದ್ದ ತಾರಾಪರು ಗ್ರಾಮದ ಜನರು ಪುನರ್ವಸತಿಗಾಗಿ ಬದಲಿ ನಿವೇಶನದ ಹಕ್ಕು ಪತ್ರ ನೀಡುವಂತೆ ನಿರಂತರ ಹೋರಾಟ ನಡೆಸುತ್ತಿದ್ದರು. ಆದರೆ, ಸುಮಾರು 11 ವರ್ಷಗಳಿಂದ ಈ ಗ್ರಾಮದ ಜನರ ಸಮಸ್ಯೆಗೆ ಯಾರೂ ಪರಿಹಾರ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿರಲಿಲ್ಲ.
2016 ರಲ್ಲಿ ಅಂದಿನ ಸಿಂಧಗಿ ಕ್ಷೇತ್ರದ ಶಾಸಕರಾಗಿದ್ದ ರಮೇಶ್ ಬೂಸನೂರು ಅವರ ಅಧ್ಯಕ್ಷತೆಯಲ್ಲಿ ಸುಮಾರು 18 ಎಕರೆ ಜಾಗದಲ್ಲಿ 199 ನಿವೇಶನಗಳ ಹಂಚಿಕೆ ಮಾಡಿದ್ದರು. ಈ ನಿವೇಶನಗಳ. ಹಂಚಿಕೆಯಲ್ಲಿ ತಾರತಮ್ಯವಾಗಿದೆ ಎಂದು ಗ್ರಾಮದ ಜನರು ಆಕ್ಷೇಪ ವ್ಯಕ್ತಪಡಿಸಿ ನಿವೇಶನ ಹಕ್ಕು ಪತ್ರ ಹಂಚಿಕೆ ಪ್ರಕ್ರಿಯೆ ತಡೆಯೊಡ್ಡಿದ್ದರು.
ಇದರ ನಡುವೆ 2020 ರಲ್ಲಿ ಭಿಮಾನದಿಯಲ್ಲಿ ಪ್ರವಾಹ ಉಂಟಾಗಿ ತಾರಾಪುರ ಗ್ರಾಮ ಸಂಪೂರ್ಣ ಜಲಾವೃತವಾಗಿತ್ತು. ಆ ಸಂದರ್ಭದಲ್ಲಿ ಗ್ರಾಮಸ್ಥರನ್ನು ಸ್ಥಳೀಯ ಸರ್ಕಾರಿ ಗಂಡು ಮಕ್ಕಳ ಶಾಲೆಯಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿತ್ತು. 2020 ರಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲಿ ಆಗ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆಯವರು, ತಾರಾಪುರ ಗ್ರಾಮಕ್ಕೆ ಭೇಟಿ ನೀಡಿ, ಮನೆ ಮಠ ಕಳೆದುಕೊಂಡಿದ್ದ ಜನರಿಗೆ ಪುನರ್ವಸತಿ ಕಲ್ಪಿಸಿ ಹಕ್ಕು ಪತ್ರ ವಿರತಿಸುವ ಭರವಸೆ ನೀಡಿದ್ದರು.
ಅಲ್ಲದೇ 2016 ರಲ್ಲಿ ಹಂಚಿಕೆಯಾದ ಹಕ್ಕುಪತ್ರಗಳ ತಾರತಮ್ಯ ಸರಿಪಡಿಸಲು ಸಿಂಧಗಿ ತಹಸೀಲ್ದಾರ್, ಸಿಂಧಗಿ ತಾಲೂಕು ಪಂಚಾಯತಿ ಕಾರ್ಯ ನಿರ್ಹವಣಾಧಿಕಾರಿ ಹಾಗೂ ಕೆ ಎನ್ ಎನ್ ಎಲ್ ಅಫಜಲಪುರ್ ಸಹಾಯಕ ಕಾರ್ಯ ನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಜಂಟಿ ಸಮಿತಿ ರಚನೆ ಮಾಡಿ, ತಕ್ಷಣ ವರದಿ ನೀಡುವಂತೆ ಸೂಚಿಸಿದ್ದರು.
ಸಚಿವರಾದ ಶಶಿಕಲಾ ಜೊಲ್ಲೆಯವರ ಸೂಚನೆಯಂತೆ 2021 ರ ಫೆಬ್ರವರಿಯಲ್ಲಿ ಫಲಾನುಭವಿಗಳ ಆಯ್ಕೆಯ ತಾತ್ಕಾಲಿಕ ಪಟ್ಟಿ ಪ್ರಕಟಿಸಿ, ಸರ್ವಾಜನಿಕರಿಂದ ಆಕ್ಷೇಪಣೆಗೆ ಅವಕಾಶ ಕಲ್ಪಿಸಿ ಅಂತಿಮವಾಗಿ 2021 ರ ಏಪ್ರಿಲ್ ಫಲಾನುಭವಿಗಳ ಅಂತಿಮ ಮಟ್ಟಿ ಸಿದ್ದಪಡಿಸಿ 19 ನಿವೇಶನಗಳನ್ನು ವಾಪಸ್ ಪಡೆದು,47 ಜನರಿಗೆ ಹಕ್ಕು ಪತ್ರ ವಿತರಿಸಲು ತೀರ್ಮಾನಿಸಲಾಯಿತು.
ಆ ಹಿನ್ನೆಲೆಯಲ್ಲಿ ಕಳೆದ 2020 ರ ಅಕ್ಟೋಬರ್ ತಿಂಗಳಿನಲ್ಲಿ ತಾರಾಪುರ ಗ್ರಾಮದ ಜನತೆಗೆ ಮಾತು ಕೊಟ್ಟಂತೆ ಸಚಿವರಾದ ಶಶಿಕಲಾ ಜೊಲ್ಲೆಯವರು ಇಂದು 47 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ್ದಾರೆ. ಕೊಟ್ಟ ಮಾತಿನಂತೆ ತಾರಾಪುರ ಗ್ರಾಮದ ಜನರ ಬೇಡಿಕೆ ಈಡೇರಿಸಿ ಗ್ರಾಮದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Girl in a jacket
error: Content is protected !!