ವಿಜಯಪುರ ,ಡಿ,29. ಧರ್ಮಗುರು ಬಸವಣ್ಣನವರ ವಚನಾಂಕಿತ ಕೂಡಲಸಂಗಮದೇವ ಎಂದೇ ಬಳಸಬೇಕು ಎಂದು ಬಸವಧರ್ಮ ಪೀಠದ ಜಗದ್ಗುರು ಡಾ.ಗಂಗಾಮಾತಾಜಿಯವರು ಹೇಳಿರುವುದು ಸಮಸ್ತ ಲಿಂಗಾಯತ ಸಮಾಜಕ್ಕೆ ಸಂತಸ ತಂದಿದೆ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು ಲಿಂಗಾಯತರ ಅಸ್ಮಿತೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವ ಈ ಸಮಯದಲ್ಲಿ ಗಂಗಾಮಾತಾಜಿ ಅವರ ಈ ಸಂದೇಶ ಲಿಂಗಾಯತರಿಗೆ ನೈತಿಕ ಬೆಂಬಲವನ್ನು ಹೆಚ್ಚಿಸಿದೆ. ಕೂಡಲಸಂಗಮದೇವ ಅಂಕಿತನಾಮ ಬಳಕೆಯಿಂದ ಬಸವಪರ ಸಂಘಟನೆಗಳಲ್ಲಿ ಉಂಟಾಗಿದ್ದ ಗೊಂದಲಕ್ಕೆ ಸ್ಪಷ್ಟತೆ ದೊರಕಿದಂತಾಗಿದೆ ಎಂದರು.
ಈ ಹಿಂದೆ ಕಲಬುರಗಿಯಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ ಪೂಜ್ಯಶ್ರೀ ಮಾತೆ ಮಹಾದೇವಿಯವರಿಗೆ ನಾನು ಈ ಕುರಿತು ವಿನಂತಿ ಮಾಡಿಕೊಂಡಿದ್ದೆ. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದರು. ಇಂದು ಅಧಿಕೃತವಾಗಿ ಅವರ ಪೀಠದಿಂದ ಡಾ.ಗಂಗಾಮಾತಾಜಿ ಹೇಳಿಕೆ ನೀಡಿರುವುದು ಸಂತಸದ ತಂದಿದೆ.
ಸಮಸ್ತ ಲಿಂಗಾಯತ ಸಮುದಾಯದ ಪರವಾಗಿ ಹೃದಯಪೂರ್ವಕವಾಗಿ ಡಾ.ಗಂಗಾಮಾತಾಜಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಎಂ.ಬಿ.ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.