ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಅಂಡ್ ಮರ್ಡರ್ ಅರೋಪಿಗೆ ಜೀವಾಧಿ ಶಿಕ್ಷೆ
by ಕೆಂಧೂಳಿ
ಕೋಲ್ಕತ್ತಾ,ಜ.೨೦- ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಉತ್ತರ ಪ್ರದೇಶದ ಕೋಲ್ಕತ್ತಾದ ಆಸ್ಪತ್ರೆಯ ಟ್ರೈನಿ ವೈದ್ಯ ಮೇಲೆ ರೇಪ್ ಅಂಡ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್ ರಾಯ್ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ೫೦ ಸಾವಿರ ರೂ ದಂಢ ವಿದಿಸಿ ತೀರ್ಪು ನೀಡಿದೆ.
ಕೋಲ್ಕತ್ತಾದ ಸೀಲ್ಡಾ ಸಿಬಿಐ ಕೋರ್ಟ್ ಸೋಮವಾರ ತನ್ನ ತೀರ್ಪು ಪ್ರಕಟ ಮಾಡಿದೆ. ೨೦೨೪ ರ ಆಗಸ್ಟ್ನಲ್ಲಿ ಕೋಲ್ಕತ್ತಾದ ಆರ್ಜಿ ಖಾರ್ ಆಸ್ಪತ್ರೆಯಲ್ಲಿ ಟ್ರೇನಿ ವೈದ್ಯೆಯ ರೇಪ್ & ಮರ್ಡರ್ ನಡೆದಿತ್ತು. ಅದರ ಮರುದಿನ ಪೊಲೀಸರು ಆರೋಪಿ ಸಂಜಯ್ ರಾಯ್ರನ್ನು ಬಂಧಿಸಿತ್ತು. ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸಂಜಯ್ ರಾಯ್ ಕೆಲಸ ಮಾಡುತ್ತಿದ್ದ.ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್, ಕಳೆದ ಶನಿವಾರ ಈತನನ್ನು ದೋಷಿ ಎಂದು ತೀರ್ಪು ನೀಡಿತ್ತು. ಸೀಲ್ಡಾ ನ್ಯಾಯಾಲಯದ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು ಈ ತೀರ್ಪನ್ನು ಪ್ರಕಟಿಸಿದರು.
“ಇದು ಅಪರೂಪದ ಪ್ರಕರಣಗಳಲ್ಲಿ ಅಪರೂಪದ ಪ್ರಕರಣವಲ್ಲ ಎಂದು ನಾನು ಭಾವಿಸುತ್ತೇನೆ. ಅದಕ್ಕಾಗಿಯೇ ನಾನು ನಿಮಗೆ ಸಾಯುವವರೆಗೂ ಜೈಲು ಶಿಕ್ಷೆಯನ್ನು ವಿಧಿಸುತ್ತಿದ್ದೇನೆ” ಎಂದು ನ್ಯಾಯಾಧೀಶರು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುತ್ತಾ ಹೇಳಿದರು. ಶನಿವಾರದ ವಿಚಾರಣೆಯ ಸಮಯದಲ್ಲಿ ಶಿಕ್ಷೆಯ ಪ್ರಮಾಣದ ಬಗ್ಗೆ ಏನಾದರೂ ಹೇಳಲು ಇದೆಯೇ ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದ್ದಾಗ, ಸಂಜಯ್ ರಾಯ್ ತಾವು ನಿರಪರಾಧಿ ಎಂದು ಹೇಳಿಕೊಂಡಿದ್ದರು.
“ಯಾವುದೇ ಕಾರಣವಿಲ್ಲದೆ ನನ್ನನ್ನು ಆರೋಪಿಸಲಾಗಿದೆ. ನಾನು ಯಾವಾಗಲೂ ರುದ್ರಾಕ್ಷ ಸರಪಳಿಯನ್ನು ಧರಿಸುತ್ತೇನೆ ಎಂದು ನಾನು ನಿಮಗೆ ಮೊದಲೇ ಹೇಳಿದ್ದೆ. ನಾನು ಅಪರಾಧ ಮಾಡಿದ್ದರೆ, ಅದು ಅಪರಾಧದ ಸ್ಥಳದಲ್ಲಿ ಮುರಿಯುತ್ತಿತ್ತು. ನನಗೆ ಮಾತನಾಡಲು ಅವಕಾಶವಿರಲಿಲ್ಲ. ಅವರು ನನ್ನನ್ನು ಅನೇಕ ದಾಖಲೆಗಳಿಗೆ ಸಹಿ ಹಾಕುವಂತೆ ಒತ್ತಾಯಿಸಿದರು. ನನಗೆ ಮಾತನಾಡಲು ಅವಕಾಶ ನೀಡಲಿಲ್ಲ. ನೀವು ಇದನ್ನೆಲ್ಲಾ ನೋಡಿದ್ದೀರಿ ಸರ್. ನಾನು ನಿಮಗೆ ಮೊದಲೇ ಹೇಳಿದ್ದೆ, ”ಎಂದು ರಾಯ್ ನ್ಯಾಯಾಲಯದಲ್ಲಿ ಹೇಳಿದರು.