ಭಿನ್ನರ ವಿರುದ್ಧ ತಕ್ಷಣ ಕ್ರಮಕೈಗೊಳ್ಳಲು ವಿಜಯೇಂದ್ರ ಬೆಂಬಲಿಗರ ಆಗ್ರಹ

Share

ಭಿನ್ನರ ವಿರುದ್ಧ ತಕ್ಷಣ ಕ್ರಮಕೈಗೊಳ್ಳಲು ವಿಜಯೇಂದ್ರ ಬೆಂಬಲಿಗರ ಆಗ್ರಹ

  by-ಕೆಂಧೂಳಿ

ಬೆಂಗಳೂರು, ಫೆ,06-ಪಕ್ಷ ವಿರೋಧಿ ಚಟುವಟಿಕೆಗಳ ನಡೆಸುತ್ತಿರುವ ಮತ್ತು ಹಾದಿ ಬೀದಿಯಲ್ಲಿ ಮಾತನಾಡಿ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿರುವವರ ವಿರುದ್ಧ ವರಿಷ್ಠರು ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಜಯೇಂದ್ರ ಬೆಂಬಲಿಗರು ಆಗ್ರಹಿಸಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ವಿಜಯೇದ್ರ ಬೆಂಬಲಿತರು ಸಭೆ ನಡೆಸಿ ಈ ಆಗ್ರಹ ಮಾಡಿದ್ದಾರೆ. ಈ ಸಭೆಯಲ್ಲಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಸಭೆ ನಡೆಸಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕರಾದ ಸಂಪಂಗಿ, ಎಂ.ಡಿ.ಲಕ್ಷ್ಮೀನಾರಾಯಣ ಮತ್ತಿತರರು ಭಾಗವದಿಸಿದ್ದರು.

ಪಕ್ಷ ವಿರೋಧಿ ಚಟುವಟಿಕೆ ನಡೆಸಿ ಕಾರ್ಯಕರ್ತರಲ್ಲಿ ಗೊಂದಲ ಉಂಟುಮಾಡುತ್ತಿರುವ ಭಿನ್ನಮತೀಯರನ್ನು ತಕ್ಷಣವೇ ಉಚ್ಚಾಟಿಸಬೇಕು ಎಂಬ ನಿರ್ಣಯ ಈ ಸಭೆಯಲ್ಲಿಕೈಗೊಂಡರು.

Adavategement

ಈ ಹಿಂದೆ ಪಕ್ಷದಿಂದ ಅಮಾನತಾಗಿ ಯಡಿಯೂರಪ್ಪ ಅವರ ಕಾಲು ಹಿಡಿದವರು ಯಾರು? ಮಿಸ್ಟರ್‌ ಯತ್ನಾಳ್‌ ಇದು ಸರಿಯಲ್ಲ. ನಾಲಿಗೆ ಬಿಗಿ ಹಿಡಿದು ಮಾತಾಡು, ಆಗ ನಾವು ಗೌರವ ಕೊಡುತ್ತೇವೆ ಎಂದರು. ಇವರು ಯಾರೂ ಮೂಲ ಬಿಜೆಪಿಯವರಲ್ಲ. ಸಿದ್ದೇಶ್ವರ್‌ ಸಂಸ್ಥೆ ನೀನು ಕಟ್ಟಿದ್ದಲ್ಲ. ಅಲ್ಲಿ ಬಂದು ಸಂಸ್ಥೆ ಕಬ್ಜಾ ಮಾಡಿದಿಯಲ್ಲ, ಮಗನನ್ನು ಅಲ್ಲಿ ನಿರ್ದೇಶಕನನ್ನಾಗಿ ಮಾಡಿದ್ದೀಯಲ್ಲ. ಇದು ಕುಟುಂಬ ರಾಜಕಾರಣ ಅಲ್ಲವೇ? ಎಂದು ಏಕವಚನದಲ್ಲೇ ಹರಿಹಾಯ್ದರು

ಮಾತೆತ್ತಿದರೆ ನಾನೊಬ್ಬ ಹಿಂದೂ ಹುಲಿ ಎನ್ನುತ್ತೀರಿ. ಜೆಡಿಎಸ್‌ ಸೇರಿಕೊಂಡು ಟಿಪ್ಪೂ ಸುಲ್ತಾನ್‌ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಬಿರಿಯಾನಿ, ಕಬಾಬ್‌ ತಿಂದಿದ್ದನ್ನು ಮರೆತುಬಿಟ್ಟಿದ್ದೀರಾ? ಆಗ ನಿಮ್ಮ ನಿಜವಾದ ಹಿಂದುತ್ವ ಎಲ್ಲಿ ಹೋಗಿತ್ತು? ಇಫ್ತಾರ್‌ ಕೂಟದಲ್ಲಿ ಭಾಗಿಯಾದಾಗ ಬಿಜೆಪಿ ಸಿದ್ಧಾಂತ ನೆನಪಿರಲಿಲ್ಲವೇ? ಹಿಂದೂ ಹುಲಿ ಜೆಡಿಎಸ್‌ಗೆ ಹೋಗಿದ್ದು ಏಕೆ? ಮೊದಲು ಜನತೆಗೆ ಉತ್ತರ ಕೊಡಿ ಎಂದು ತೀಕ್ಷ್ಣವಾಗಿ ಹೇಳಿದರು.

ಮಾಜಿ ಸಚಿವ ಕುಮಾರ ಬಂಗಾರಪ್ಪ ವಿರುದ್ಧವೂ ಕೆಂಡ ಕಾರಿದ ರೇಣುಕಾಚಾರ್ಯ, ಮೊದಲು ಈತನನ್ನು ಪಕ್ಷದಿಂದ ಕಿತ್ತು ಹಾಕಿದರೆ ಎಲ್ಲವೂ ಸರಿ ಹೋಗುತ್ತದೆ ಎಂದು ಏಕವಚನದಲ್ಲಿಯೇ ಹರಿಹಾಯ್ದರು. ಮಿಸ್ಟರ್‌ ಕುಮಾರ್‌ ಬಂಗಾರಪ್ಪ, ನೀನು ಮೊದಲು ಎಲ್ಲಿದ್ದೆ? ಬಿಜೆಪಿಗೆ ಬರಲು ಎಷ್ಟು ಬಾರಿ ಯಡಿಯೂರಪ್ಪ, ವಿಜಯೇಂದ್ರ, ರಾಘವೇಂದ್ರ ಅವರ ಬಳಿ ಗೋಗರೆದೆ ಎಂಬುದು ಗೊತ್ತಿದೆ. ನೀನೊಬ್ಬ ಕ್ರಿಮಿಕೀಟ. ನಿನ್ನಂಥವನು ಎಲ್ಲೇ ಇದ್ದರೂ ಯಾವ ಪಕ್ಷಕ್ಕೂ ಒಳ್ಳೆಯದಲ್ಲ.
ಯಡಿಯೂರಪ್ಪ ಅವರ ಕುಟುಂಬದ ಋಣದದಿಂದ ಸೊರಬದಲ್ಲಿ ಗೆದ್ದು ಅಧಿಕಾರ ಅನುಭವಿಸಿದ್ದ ನೀನು ಅವರ ವಿರುದ್ಧವೇ ಷಡ್ಯಂತ್ರ ಮಾಡುತ್ತಿದ್ದಿಯ ಎಂದು ವಾಗ್ದಾಳಿ ನಡೆಸಿದರು. ಮೂರ್ನಾಲ್ಕು ಜನ ಸೇರಿಕೊಂಡು ದೆಹಲಿಗೆ ಹೋಗಿ ನಿಮ್ಮ ಜೊತೆಗೆ ಎಲ್ಲರೂ ಇದ್ದಾರೆ ಎಂದು ಬಿಂಬಿಸಲು ಹೊರಟಿದ್ದೀರಿ. ರಾಷ್ಟ್ರೀಯ ನಾಯಕರನ್ನು ಎಷ್ಟು ಬಾರಿ ಭೇಟಿಯಾಗಿ ದೂರು ಕೊಡುತ್ತೀರಿ. ನಿಮ್ಮನ್ನು ಜನ ನೋಡಿ ಕಾಮಿಡಿ ಪೀಸ್‌ ಎಂದು ನಗುತ್ತಿದ್ದಾರೆ. ನಿಮ್ಮ ಹಣೆಬರಹಕ್ಕೆ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್‌ ಶಾ ಸೇರಿ ಮತ್ತಿತರ ನಾಯಕರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

Girl in a jacket
error: Content is protected !!