Girl in a jacket

Author kendhooli_editor

ಪ್ರತಿಯೊಬ್ಬರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಚಿವ ರಾಮಲಿಂಗಾರೆಡ್ಡಿ ಸಲಹೆ

ಬೆಂಗಳೂರು,ಜು,20-ಆರೋಗ್ಯವಂತ ಸಮಾಜವಿದ್ದಾಗ, ಸಮಾಜದ ಅಭವೃದ್ದಿ ಸಾಧ್ಯ ಈನಿಟ್ಟಿನಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಬಡವರಿಗೆ ಹೈಟೆಕ್ ವೈದ್ಯಕೀಯ ಸೌಲಭ್ಯಗಳು ಕಾಂಗ್ರೆಸ್ ಪಕ್ಷದ ಸರ್ಕಾರ ನೀಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕುರುಬರಹಳ್ಳಿ ಬಯಲು ರಂಗ ಮಂದಿರದಲ್ಲಿ   ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ಕಣ್ಣಿನ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರು ದೇಹದಲ್ಲಿ ಸಮಸ್ಯೆ ಇರಲಿ ಅಥವಾ ಇಲ್ಲದಿರಲಿ ವೈದ್ಯರ ಬಳಿ ಹೋಗಿ ತಪಾಸಣೆ ಮಾಡಿಸಿಕೊಳ್ಳಿ…

ಸುಳ್ಳು ಹೇಳುವ ಬಿಜೆಪಿ ಬಹಿರಂಗ ಚರ್ಚೆಗೆ ಬರುವುದಿಲ್ಲ-ಸಿಎಂ ಸಿದ್ದರಾಮಯ್ಯ

ಮೈಸೂರು, ಜು,20: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಿನ್ನೆ ನಡೆದ ಮೈಸೂರಿನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಡಿಸಿಎಂ ಗೆ ಅವಮಾನ ಮಾಡಿದೆ ಎಂದು ಬಿಜೆಪಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು ಪರಿಪಾಠ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್…

ರೌಡಿಶೀಟರ್ ಹತ್ಯೆ ಪ್ರಕರಣ; ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಪ್ ಐ ಆರ್ ದಾಖಲು

ಬೆಂಗಳೂರು, ಜು,16- ರೌಡಿಶೀಟರ್ ಬಿಕ್ಲು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಭೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ದು ಎಫ್ ಐಆರ್ ದಾಖಲಾಗಿದೆ. ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಬಿಕ್ಲು ಶಿವು ತಾಯಿ ವಿಜಯಲಕ್ಷ್ಮೀ ನೀಡಿದ ದೂರು ಆಧರಿಸಿ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಎಫ್ ಐಆರ್…

ನಿಕ್ಕಂ, ಸೇರಿ ನಾಲ್ವರು ರಾಜ್ಯ ಸಭೆಗೆ ನಾಮ ನಿರ್ದೇಶನ

ನವದೆಹಲಿ,ಜು.೧೩- ಸಾರ್ವಜನಿಕ ಸೇವೆ,ಕಾನೂನು,ರಾಜತಾಂತ್ರಿಕತೆ ಮತ್ತು ವಿದ್ವಾಂಸರ ಕೊಡಿಗೆಗಳನ್ನು ಪರಿಗಣಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಲ್ಕು ಗಣ್ಯ ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಿದ್ದಾರೆ. ನಾಮನಿರ್ದೇಶಿತರಾದ ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಅನುಭವಿ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕ್ಕಿಂ, ಕೇರಳ ಮೂಲದ ಶಿಕ್ಷಣ ತಜ್ಞ ಮತ್ತು ಸಮಾಜಿಕ ಕಾರ್ಯಕರ್ತ ಸಿ.ಸದಾನಂದನ್ ಮಾಸ್ಟರ್ ಮತ್ತು ಖ್ಯಾತ ಇತಿಹಾಸಕಾರ ಡಾ.ಮೀನಾಕ್ಷಿ ಜೈನ್ ಅವರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ ಈ ನಾಮ ನಿರ್ದೇಶನಗಳು,ಸಾಹಿತ್ಯ,ವಿಜ್ಞಾನ,ಕಲೆ ಮತ್ತು ಸಾಮಾಜಿಕ ಸೇವೆಯಂತಹ ಕ್ಷೇತ್ರಗಳಲ್ಲಿ ಶ್ರೇಷ್ಠತೆ…

ಚಾಕಲೇಟ್ ಕೊಡುವುದಾಗಿ ನಂಬಿಸಿ ಮಗುಮೇಲೆ ಅತ್ಯಾಚಾರ

ಮಂಡ್ಯ,ಜು.೧೩- ಚಾಕಲೇಟ್ ಕೊಡಿಸುವುದಾಗಿ ಪುಸಲಾಯಿಸಿ ನಾಲ್ಕು ವರ್ಷದ ಮಗುವನ್ನು ಕರೆದೊಯ್ದು ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಬಂಧಿತನನ್ನು ಉತ್ತರಪ್ರದೇಶ ಮೂಲದ ಪ್ರವೀಣ್(೨೧) ಎಂದು ಗುರುತಿಸಲಾಗಿದೆ. ಸಂತ್ರಸ್ತ ಮಗುವಿನ ಪೋಷಕರು ಬಿಹಾರ ಮೂಲದವರಾಗಿದ್ದು, ಕಳೆದ ಒಂದೂವರೆ ವರ್ಷದಿಂದ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೇ ಫ್ಯಾಕ್ಟರಿಯಲ್ಲಿ ಬಂಧಿತ ಪ್ರವೀಣ್ ಕೂಡ ಕೆಲಸ ಮಾಡುತ್ತಿದ್ದ. ನಿನ್ನೆ ಮಧ್ಯಾಹ್ನ ಚಾಕಲೇಟ್ ಕೊಡಿಸುತ್ತೇನೆಂದು ಮಗುವನ್ನು ಪುಸಲಾಯಿಸಿ ತನ್ನೊಂದಿಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಮಾಜಿ ಸಭಾಪತಿ ಎನ್.ತಿಪ್ಪಣ್ಣ ನಿಧನ

ಬೆಂಗಳೂರು, ಜು 11-ಸರಳ ಸಜ್ಜನ ಹಾಗೂ ನಿಷ್ಕಂಳಕ ವ್ಯಕ್ತಿತ್ವದ ರಾಜಕೀಯ ಮುತ್ಸದ್ದಿ, ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿಗಳಾಗಿದ್ದ ಎನ್. ತಿಪ್ಪಣ್ಣ  ಇಂದು ಬಳ್ಳಾರಿಯ ಅವರ ನಿವಾಸದಲ್ಲಿ ನಿಧನರಾದರು. 97 ವರ್ಷ ವಯಸ್ಸಾಗಿತ್ತು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ 5 ಗಂಟೆಗೆ ಕೊನೆಯಿಸಿರೆಳದರು. 1928 ನವೆಂಬರ್ ತಿಂಗಳಲ್ಲಿ ಚಿತ್ರದುರ್ಗ ಜಿಲ್ಲೆ ತುರುವನೂರಿನಲ್ಲಿ ಜನಿಸಿದ ಅವರು ತುರುವನೂರಿನಲ್ಲಿ ಜರುಗಿದ ಸ್ವಾತಂತ್ರ್ಯ ಚಳುವಳಿಯಲ್ಲಿ ಪಾಲ್ಗೊಂಡಿದ್ದರು. ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರ ರಾಜಕೀಯ ಗರಡಿಯಲ್ಲಿ ಪಳಗಿ, ಮೂರು…

ಆಡಳಿತ ನಡೆಸಲು ಆಗದೆ ಇದ್ದರೆ ಅಧಿಕಾರ ಬಿಟ್ಟು ತೊಲಗಿ: ಸಿ.ಟಿ.ರವಿ ಆಗ್ರಹ

ಬೆಂಗಳೂರುಜು,10- ರಾಜ್ಯದ ಬೇಹುಗಾರಿಕಾ ದಳ ಕೋಮಾ ಸ್ಥಿತಿಗೆ ತಲುಪಿದೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನದ’ಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ್ಳೆಯ ಕಾರಣಕ್ಕೆ ಕರ್ನಾಟಕ ಸುದ್ದಿ ಆಗುತ್ತಿಲ್ಲ. ಗ್ಯಾಂಗ್ ರೇಪ್, ಕಾಲ್ತುಳಿತ, ಆತ್ಮಹತ್ಯೆ, ಕೊಲೆಯಂಥ ಕಾರಣಕ್ಕೆ ಕರ್ನಾಟಕ ಸುದ್ದಿ ಆಗುವುದು ಒಳ್ಳೆಯ ಸಂಗತಿಯಲ್ಲ. ಈ ಸರಕಾರ, ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಆಡಳಿತ ನಡೆಸಲು ಆಗದೆ ಇದ್ದರೆ…

ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಕುಮಾರಸ್ವಾಮಿಯನ್ನು ಛೇಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ನವದೆಹಲಿ, ಜು.09-ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಛೇಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.ಟನಲ್ ರಸ್ತೆ ವಿಚಾರವಾಗಿ ನಿತಿನ್ ಗಡ್ಕರಿ ಅವರನ್ನು ಕುಮಾರಸ್ವಾಮಿ ಅವರು ಭೇಟಿಯಾಗಿ ಚರ್ಚೆ ನಡೆಸಿರೋದು ಕ್ರೆಡಿಟ್ ವಾರ್ ಆಗುತ್ತಿದೆಯೇ ಎಂದು ಮಾಧ್ಯಮದವರು ಕೇಳಿದಾಗ ಅವರು ಹೀಗೆ ಪ್ರತಿಕ್ರಿಯಿಸಿದರು. “ಕುಮಾರಸ್ವಾಮಿ ಅವರ ಸಲಹೆ ಮತ್ತು ನಿಮ್ಮ ಸಲಹೆಯನ್ನೂ ನಾನು ಸ್ವೀಕಾರ ಮಾಡುತ್ತೇನೆ” ಎಂದರು. ಸಂಪುಟ…

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ನವದೆಹಲಿ,ಜು,09- ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ನಿಯೋಗವು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಬುಧವಾರ ಇಲ್ಲಿ ಮನವಿ ಸಲ್ಲಿಸಿದೆ. ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಇಂಧನ ಸಚಿವ ಕೆ ಜೆ ಜಾರ್ಜ್‌, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌, ದೆಹಲಿ…

ಸುಳ್ಳು ಸುದ್ದಿ ತಡೆಗಟ್ಟಲು ಸರ್ಕಾರ ಹೊಸಕಾನೂನು ತರಲು ಚಿಂತನೆ- ಕೆ.ವಿ.ಪ್ರಭಾಕರ್

ಬೆಂಗಳೂರು, ಜು.೮-ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿಮೀರುತ್ತಿದ್ದು,ಇದನ್ನು ತಡೆಗಟ್ಟಲು ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು. ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ‘ಕೆಂಧೂಳಿ ಪತ್ರಿಕಾ ಬಳಗ’ದ ವತಿಯಿಂದ ಪತ್ರಿಕಾ ದಿನಾಚರಣೆ ಪ್ರಯುಕ್ತ ‘ವಾರಪತ್ರಿಕೆ ಅಂದು-ಇಂದು, ಲಂಕೇಶ್ ಕಂಡ ವಾರಪತ್ರಿಕೆ ಮತ್ತು ಸೈದ್ಧಾಂತಿಕ ನಿಲುವುಗಳು’ ಕುರಿತು ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾನತಾಡಿದ ಅವರು,ಮುಂದಿನ ಅಧಿವೇಶನದಲ್ಲಿ ಈ ಕುರಿತು ವಿದೇಯಕ ಮಂಡಿಸಲು ಸರ್ಕಾರ ಸಿದ್ದತೆ ನಡೆಸಿದೆ…

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ: ಎಂ ಬಿ ಪಾಟೀಲ

ಬೆಂಗಳೂರು,ಜು,08-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು ಜಿ.ಐ. ಟ್ಯಾಗ್ ಹೊಂದಿರುವ 28 ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನ ವ್ಯವಸ್ಥೆ ಇರುವ ಆಕರ್ಷಕ *ಕಲಾಲೋಕ* ಮಳಿಗೆ ಸಿದ್ಧವಾಗುತ್ತಿದೆ. ಇದನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಅವರು ಮಂಗಳವಾರ ಇಲ್ಲಿ ಸರಕಾರಿ ಸ್ವಾಮ್ಯದ ವಿಶ್ವೇಶ್ವರಯ್ಯ ಟ್ರೇಡ್ ಪ್ರೊಮೋಶನ್ ಸೆಂಟರ್ (ವಿಟಿಪಿಸಿ) ಸೇರಿದಂತೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ…

ವೈಚಾರಿಕತೆ ಮತ್ತು ವೈಜ್ಞಾನಿಕತೆ ಬೆಳೆಸಿಕೊಂಡು ಸ್ವಾಭಿಮಾನಿಗಳಾಗಿ ಬದುಕಿ-ಜನರಿಗೆ ಸಿಎಂ ಕರೆ

ಬೆಂಗಳೂರು, ಜು 6- ಶಿಕ್ಷಣದಿಂದ ವಂಚಿತರಾಗದೇ, ವೈಚಾರಿಕತೆ ಮತ್ತು ವೈಜ್ಞಾನಿಕತೆ ಬೆಳೆಸಿಕೊಂಡು ಸ್ವಾಭಿಮಾನಿಗಳಾಗಿ ಬದುಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಸಮಾಜದ ಬಂಧುಗಳಿಗೆ ಕರೆ ನೀಡಿದರು. ಅವರು ಇಂದು ತಾವರೆಕೆರೆ ಬಳಿಯ ಕೆತೋಹಳ್ಳಿ ಯಲ್ಲಿರುವ ಬ್ರಹ್ಮಲೀನ ಜಗದ್ಗುರು ಶ್ರೀ ಬಿರೇಂದ್ರ ಕೇಶದ ತಾರಕಾನಂದಪುರಿ ಮಹಾಸ್ವಾಮಿಗಳ 19ನೇ ವರ್ಷದ ಪುಣ್ಯರಾಧನೆಯ ಸ್ಮರಣಾರ್ಥವಾಗಿ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಹಾಗೂ ಶಾಖಾಮಠ ಮತ್ತು ಬೆಂಗಳೂರು ಭಕ್ತರ ಭಂಡಾರದ ಕುಟೀರವನ್ನು ಲೋಕಾರ್ಪಣೆ ಮಾಡಿದ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು ಕಾಗಿನೆಲೆ…

ಶಿವಕುಮಾರ್ ಅವರಿಗೆ ಉನ್ನತ ಸ್ಥಾನ ಸಿಗಲಿ: ರಂಭಾಪುರಿ ಶ್ರೀಗಳು

ಕನಕಪುರ, ಜು.06-“ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ಅವರು ಹೆಚ್ಚಿನ ಶಕ್ತಿ ತುಂಬಿದ್ದು, ಚುನಾವಣೆ ನಂತರ ಅವರಿಗೆ ಉನ್ನತ ಸ್ಥಾನ ಸಿಗಬೇಕಾಗಿತ್ತು. ಮುಂದಿನ ದಿನಗಳಲ್ಲಿ ಆ ಸ್ಥಾನ ಸಿಗಲಿ” ಎಂದು ಬಾಳೆಹೊನ್ನೂರು ಶ್ರೀಮದ್‌ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ತಿಳಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಸಿದ್ದೇಶ್ವರಸ್ವಾಮಿ ಬೆಟ್ಟದಲ್ಲಿ ಮೆಟ್ಟಿಲುಗಳ ಉದ್ಘಾಟನೆ ಹಾಗೂ ಧರ್ಮಜಾಗೃತಿ ಸಮಾರಂಭದಲ್ಲಿ ಶ್ರೀಮದ್ ರಂಬಾಪುರಿ ಶ್ರೀಗಳು ಮಾತನಾಡಿದರು. “ಕರ್ನಾಟಕದಲ್ಲಿ ಕಾಂಗ್ರೆಸ್ ‌ಪ್ರಚಂಡ ಬಹುಮತ…

ತುಮಕೂರಿನಲ್ಲಿ ದಾವಣಗೆರೆ ಪಿಎಸ್‌ಐ ಆತ್ಮಹತ್ಯೆ

ತುಮಕೂರು,ಜು,೦೬-ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಬಿ ಆರ್.ನಾಗರಾಜಪ್ಪ(೫೮) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಖಾಸಗಿ ಹೊಟೇಲ್‌ನಲ್ಲ ಜರುಗಿದೆ, ಜುಲೈ ೧ರಂದು ಹೋಟೆಲ್‌ನಲ್ಲಿ ಕೊಠಡಿ ಪಡೆದಿದ್ದರು. ಇಂದು ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹೋಟೆಲ್ ಕೋಣೆಯಿಂದ ವಾಸನೆ ಹೆಚ್ಚಿದ್ದು, ಸಿಬ್ಬಂದಿ ಹೋಗಿ ನೋಡಿದಾಗ ಆತ್ಮಹತ್ಯೆ ವಿಚಾರ ಗೊತ್ತಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಠಡಿಯಲ್ಲಿ ಡೆತ್‌ನೋಟ್ ಸಿಕ್ಕಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು…

ವೃತ್ತಿ ಧರ್ಮ ನೆಲಕಚ್ಚಿದರೆ ರಾಜ ಧರ್ಮವನ್ನು ಟೀಕಿಸುವ ಅರ್ಹತೆ ಉಳಿಯುವುದಿಲ್ಲ: ಕೆ.ವಿ.ಪ್ರಭಾಕರ್

ತುಮಕೂರು ಜು 6-ಮಾಧ್ಯಮ ಕ್ಷೇತ್ರ ವೃತ್ತಿ ಧರ್ಮ ಪಾಲಿಸದಿದ್ದರೆ, ರಾಜ ಧರ್ಮ ಪಾಲಿಸಿ ಎಂದು ಅಧಿಕಾರಸ್ಥರಿಗೆ ಹೇಳುವ ನೈತಿಕ ಸ್ಥೈರ್ಯವನ್ನು ಕಳೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆತಂಕ ವ್ಯಕ್ತಪಡಿಸಿದರು. ರಾಜ್ಯ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ವಾರ್ಷಿಕ ದತ್ತಿ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನಿಸಿ ಮಾತನಾಡಿದರು. ನಾವು ಇಂದು ಪತ್ರಿಕಾ ದಿನಾಚರಣೆ ಆಚರಿಸುತ್ತಿರುವ ಸಂದರ್ಭದಲ್ಲಿ ಸಂಭ್ರಮದ ಬದಲಿಗೆ ಒಂದು ರೀತಿಯ ಅಳುಕು ಕಾಡುತ್ತಿದೆ. “ವೃತ್ತಿ ಧರ್ಮ” ಎನ್ನುವುದು…

ವಿಜೇತ ನೀರಜ್ ಚೋಪ್ರಾಗೆ ಸಿಎಂ ಸಿದ್ದರಾಮಯ್ಯರಿಂದ ಪದಕ ಪ್ರದಾನ

ಬೆಂಗಳೂರು, ಜು,05-ಭಾರತದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ನಡೆದ “ನೀರಜ್ ಚೋಪ್ರಾ ಕ್ಲಾಸಿಕ್- 2025” ಜಾವೆಲಿನ್ ಎಸೆತ ಕ್ರೀಡಾಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರ ಜೊತೆಯಾಗಿ ಪಾಲ್ಗೊಂಡು, ವಿಶ್ವಶ್ರೇಷ್ಠ ಜಾವೆಲಿನ್ ಎಸೆತಗಾರರ ಕ್ರೀಡಾ ಪ್ರದರ್ಶನವನ್ನು ವೀಕ್ಷಿಸಿ, ವಿಜೇತರಿಗೆ ಪದಕ ಪ್ರದಾನ ಮಾಡಿ ಗೌರವಿಸಿದರು. 2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ. 1 ಜಾವಲಿನ್ ಪಟು ನೀರಜ್ ಚೋಪ್ರ ತಮ್ಮ ಹೆಸರಿನಲ್ಲಿ ಆರಂಭಿಸಿರುವ ಅಂತಾರಾಷ್ಟ್ರೀಯ…

ಆರಂಭದ ಪಂದ್ಯೆದಲ್ಲೇ ಎನ್‌ಸಿಕ್ಲಾಸಿಕ್ ಗೆದ್ದ ಚೋಪ್ರಾ

ಬೆಂಗಳೂರು,ಜು,೦೫-ಇಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಉದ್ಟಾಟನಾ ಟೂರ್ನಿಯಲ್ಲೇ ವಿಶ್ವಚಾಂಪಿಯನ್ ನೀರಜ್ ಚೋಪ್ರಾ ಎನ್‌ಸಿ ಕ್ಲಾಸಿಕ್ ಅನ್ನು ಗೆಲ್ಲುವ ಮೂಲಕ ತಮ್ಮ ವಿಶ್ವದರ್ಜೆಯ ಈವೆಂಟ್ ಅನ್ನು ಆಯೋಜಿಸುವ ಕನಸನ್ನು ನನಸಾಗಿಸಿದರು. ೨೭ ವರ್ಷದ ಡಬಲ್ ಒಲಿಂಪಿಕ್ ಪದಕ ವಿಜೇತರು ತಮ್ಮ ಪೋಷಕರ ಸಮ್ಮುಖದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ೮೬.೧೮ ಮೀಟರ್ ದೂರ ಎಸೆಯುವ ಮೂಲಕ ವಿಜೇತರಾಗಿದ್ದಾರೆ. ಪ್ಯಾರಿಸ್ ಡೈಮಂಡ್ ಲೀಗ್ (ಜೂನ್ ೨೦) ಮತ್ತು ಪೋಲೆಂಡ್‌ನ ಒಸ್ಟ್ರಾವಾದಲ್ಲಿ (ಜೂನ್ ೨೪) ಗೋಲ್ಡನ್ ಸ್ಪೈಕ್ ನ್ನು ಗೆದ್ದ ನಂತರ ಇದು ಅವರ…

ಸಿಎಂ ಸಿದ್ದರಾಮಯ್ಯ ಅವಹೇಳನಕಾರಿಯಾಗಿ ಮಾತಾಡಿದರೆ, ಏಕವಚನದಲ್ಲಿ ಮಾತಾಡಿದರೆ ಕ್ರಮವಿಲ್ಲ: ಆರ್‌.ಅಶೋಕ

ಬೆಂಗಳೂರು, ಜು,5-ಸಿಎಂ ಸಿದ್ದರಾಮಯ್ಯ ಹಲವಾರು ಬಾರಿ ಅಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್‌ ಸದಸ್ಯರಾದ ಎನ್‌.ರವಿಕುಮಾರ್‌ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ. ಐಎಎಸ್‌ ಅಧಿಕಾರಿಯಾದ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವಹೇಳನಕಾರಿಯಾಗಿ ಮಾತನಾಡಿದ್ದರು. ಆದರೂ ಕ್ರಮ ಕೈಗೊಳ್ಳಲಿಲ್ಲ. ರಾಜ್ಯದಲ್ಲಿ ಎಲ್ಲೂ ಅಭಿವೃದ್ಧಿ ಕಾರ್ಯ ನಡೆಯದೆ, ಶಾಸಕರು ದಂಗೆ ಏಳುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ…

ಹುಚ್ಚುತನದ ಹೇಳಿಕೆಗೆ ಜನರ ಕ್ಷಮೆ ಕೇಳಿ: ಯಡಿಯೂರಪ್ಪ ಆಗ್ರಹ

ಬೆಂಗಳೂರುಜು,05- ಆರೆಸ್ಸೆಸ್ ನಿಷೇಧ ಕುರಿತ ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆಯವರ ಹೇಳಿಕೆ ಹುಚ್ಚುತನದ್ದು ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟೀಕಿಸಿದ್ದು, ಅವರು ತಮ್ಮ ಹೇಳಿಕೆ ಸಂಬಂಧ ದೇಶದ ಜನರ ಕ್ಷಮಾಪಣೆ ಕೇಳಬೇಕೆಂದು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸುವುದಾಗಿ ಹೇಳಿದ್ದಾರೆ ಎಂದರಲ್ಲದೆ, ಇಡೀ ದೇಶದ…

ಗೃಹಲಕ್ಷ್ಮಿ ಸಂಘಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಬಲ ತುಂಬಲು ಯೋಜನೆ: ಲಕ್ಷ್ಮೀ ಹೆಬ್ಬಾಳಕರ್

ಬೀದರ್,ಜು,05- ರಾಜ್ಯದಲ್ಲಿ 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಕಲಬುರಗಿ ವಿಭಾಗ ಮಟ್ಟದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎರಡನೇ ದಿನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು. ‌ಈ ವರ್ಷ ಅಂಗನವಾಡಿ ಆರಂಭವಾಗಿ 50 ವರ್ಷ ತುಂಬುತ್ತಿದ್ದು,…

Girl in a jacket