Girl in a jacket

Author kendhooli_editor

ಸಕಲ ಸರ್ಕಾರಿ ಗೌರವಗಳೊಂದಿಗೆ ಸಿದ್ದಲಿಂಗಯ್ಯ ಅಂತ್ಯಕ್ರಿಯೆ

ಬೆಂಗಳೂರು,ಜೂ,೧೨: ನಿನ್ನೆ ನಿಧನರಾದ ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು. ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದ ಕಲಾ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.ಇದಕ್ಕೂ ಮುನ್ನ ಸಾರ್ವಜಿನಕರ ದರ್ಶನಕ್ಕೆ ಕೆಲ ಕಾಲ ಅವಕಾಶ ಮಾಡಿಕೊಡಲಾಗಿತ್ತು.ಅಂತ್ಯಕ್ರಿಯೆ ವೇಳೆ ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ, ಚೀಫ್ ಕಮಿಷನರ್ ಗೌರವ್ ಗುಪ್ತಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಮತ್ತಿತರ ಗಣ್ಯರು ಭಾಗಿಯಾಗಿದ್ದರು. ಕೊರೊನಾ ಸೋಂಕಿಗೆ ತುತ್ತಾಗಿ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಲಿಂಗಯ್ಯ ಅವರು ಶುಕ್ರವಾರ…

ಶಿಕಾರಿಪುರ:ತೈಲಬೆಲೆ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರ,ಜೂ,೧೨: ತೈಲಬೆಲೆ ಏರಿಕೆ ಖಂಡಿಸಿ ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು. ಕೇಂದ್ರ ಸರ್ಕಾರದ ಬೆಲೆ ಏರಿಕೆ ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆಯನ್ನು ಖಂಡಿಸಿ ನಡೆಸಿದ ಈ ಬೃಹತ್ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿ ಮಾಲತೇಶ್,ಉಪಾಧ್ಯಕ್ಷ ಎಂ.ಅರುಣ್ ಕುಮಾರ್,ಜಿಲ್ಲಾ ಕಾರ್ಯದರ್ಶಿ ಬಂಡಾರಿ ಮಾಲತೇಶ್ ಪುರಸಭೆ ಸದಸ್ಯ ಗೋಣಿ ಪ್ರಕಾಶ್ ಖಚಾಂಜಿ ಮಂಜುನಾಥ್ ರಆವ್ ಸೇರಿದಂತೆ ವಿವಿಧ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿಜೆಪಿ ಸರ್ಕಾರ ನಿರಂತರವಾಗಿ…

ಜೂನ್ 1 ರಿಂದ ಶೈಕ್ಷಣಿಕ ವರ್ಷ ಆರಂಭ; ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು,ಜೂ,12: ಈ ಬಾರಿಯ ಶೈಕ್ಷಣಿಕ ವರ್ಷ ಜುಲೈ 1 ರಿಂದ ಆರಂಭವಾಗಲಿದ್ದು,ಹೊಸ ಶೈಕ್ಷಣಿಕ ವರ್ಷದ ಮಾರ್ಗಸೂಚಿಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಕಳೆದ ವರ್ಷದಂತೆ ಈ ವರ್ಷವೂ ದೂರದರ್ಶನ ಚಂದನ ವಾಹಿನಿಯಲ್ಲಿ ಸಂವೇದನಾ ಕಾರ್ಯಕ್ರಮದ ಮೂಲಕ 1662 ವಿಡಿಯೋ ಪಾಠ ಬೋಧನಾ ನಡೆಯಲಿದೆ. ಎಫ್ಎಂ ರೇಡಿಯೋದಲ್ಲಿ ಆಡಿಯೋ ಪಾಠಗಳ ಪ್ರಸಾರ ನಡೆಯಲಿದೆ. ಕೇಂದ್ರ ಸರ್ಕಾರದ ದೀಕ್ಷಾ ಆ್ಯಪ್ ನಲ್ಲಿ 1 ರಿಂದ 10ನೇ ತರಗತಿ ಮಕ್ಕಳ ಪಠ್ಯಕ್ಕೆ ಸಂಬಂಧಿಸಿದ 22 ಸಾವಿರಕ್ಕೂ ಹೆಚ್ಚು ಕಂಟೆಂಟ್ ಗಳನ್ನು…

ಅರಿವೇ ಗುರು

ಶ್ರೀ ಡಾ.ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಅರಿವೇ ಗುರು. ಅರಿವು ತಿಳಿವು ದೊಡ್ಡದು ಗುರು ದೊಡ್ಡವ. ಅಜ್ಞಾನ ಕಳೆ ಕೊಳೆ ಕತ್ತಲೆ ಕಳೆದು, ಸುಜ್ಞಾನ ಬೆಳಕ ಬೀಜ ಬಿತ್ತಿ ಬೆಳಗುವನು ಸದ್ಗುರು. ಹಾಲಿನಂತೆ ವಿಷ ಕುಡಿಯಲಾಗದು. ಬೆಣ್ಣೆಯಂತೆ ಬೆಂಕಿ ನುಂಗಲಾಗದು. ಒಳಿತು ಕೆಡುಕುಗಳ ಅರಿವು ಇದರ ಮೂಲ. ಅರಿವಿಲ್ಲದ ಬಾಳು ಗೋಳು, ಯಾತನೆಯ ಗೂಡು!ಅರಿವಿರಬೇಕು ಸಕಲಕೂ ಅದು ದಾರಿ ತೋರುವುದು. ತಲೆ ಬಾಗಬೇಕು ಅರಿವಿಗೆ ಅರಿವು ತೋರುವ ಗುರುವಿಗೆ. ಶಂಕರ ಬಸವ ಸಿದ್ಧ ವಿವೇಕ ಸತ್ಪುರುಷರೂ…

ಶಶಿಕಲಾಗೆ ಜೈಲಿನಲ್ಲಿ ವಿಶೇಷ ಅತಿಥ್ಯ: ೨ತಿಂಗಳಲ್ಲಿ ವರದಿ ಸಲ್ಲಿಸಲು ಹೈ ಗಡವು

ಬೆಂಗಳೂರು,ಜೂ,೧೧: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತ ಆಪ್ತೆ ಶಶಿಕಲಾಗೆ ಜೈಲಲ್ಲಿ ನೀಡಲಾಗುತ್ತಿದ್ದ ವಿಶೇಷ ಆತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ಎಸಿಬಿ ದಾಖಲಿಸಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಇನ್ನೂ ಎರಡು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ವಿಕೆ ಶಶಿಕಲಾಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿತ್ತು. ಜೈಲು ವರಿಷ್ಠಾಧಿಕಾರಿಗಳು ಲಂಚ ಪಡೆದು ಜೈಲಿನಲ್ಲಿ ಆಕೆಗೆ ವಿಶೇಷ ಸೌಲಭ್ಯಗಳನ್ನು ಒದಗಿಸಿದ್ದರು ಎಂಬ ಗಂಭೀರ ಆರೋಪ ವ್ಯಾಪಕ ಸದ್ದು ಮಾಡಿತ್ತು.…

ಎರಡು ವರ್ಷ ಸಾಧನೆ;ಸಚಿವರ ಜೊತೆ ಮೋದಿ ವೈಯಕ್ತಿಕ ಸಭೆ?

ನವದೆಹಲಿ,ಜೂ,೧೧:ಕೇಂದ್ರ ಸರ್ಕಾರದ ಎರಡು ವರ್ಷದಲ್ಲಿ ಆಗಿರುವ ಕೆಲಸ ಕುರಿತಂತೆ ಪ್ರಗತಿ ಪರಿಶೀಲನೆ ಮಾಡುತ್ತಿರುವ ಪ್ರಧಾನಿ ಮೋದಿ ಅವರು ಕೇಂದ್ರ ಸಚಿವರ ಜೊತೆ ವೈಯಕ್ತಿಕವಾಗಿ ಸಭೆ ನಡೆಸಿ ಅವರ ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ ಈ ವೇಳೆ ತಮ್ಮ ವೈಯಕ್ತಿಕ ವರ್ಚಸ್ಸು ಮತ್ತು ಮುಂದಿನ ದಿನಗಳ ಸರ್ಕಾರದ ಯೋಜನೆಗಳ ಕುರಿತಂತೆಯೂ ಈ ಸಭೆಯಲ್ಲಿ ಚರ್ಚಿಸಲಾಗುತ್ತಿದೆ ಎನ್ನಲಾಗಿದೆ. ದೆಹಲಿಯ ೭ ಲೋಕ ಕಲ್ಯಾಣ ಮಾರ್ಗ್‌ನಲ್ಲಿರುವ ಪ್ರಧಾನಮಂತ್ರಿಗಳ ಅಧಿಕೃತ ನಿವಾಸದಲ್ಲಿ ಈ ಸಭೆ ನಡೆಯುತ್ತಿದ್ದು, ಈಗಾಗಲೇ ಇಂತಹ ಅಂತಹ ಮೂರು…

ದಲಿತ ಕವಿ ಸಿದ್ದಲಿಂಗಯ್ಯ ಇನ್ನಿಲ್ಲ

ಬೆಂಗಳೂರು,ಜೂ,11:ಕಳೆದ ಹಲವು ದಿನಗಳಿಂದ ಕೊರೊನಾ ಸೋಂಕಿನಿಂದ ನರಳುತ್ತಿದ್ದ ಡಾ.ಸಿದ್ದಲಿಂಗಯ್ಯ ಕೊನೆಯಿಸಿರೆಳದಿದ್ದಾರೆ. ಕೊರೊನಾ ಸೋಂಕು ದೃಡ ಪಟ್ಟ ನಂತರ ಅವರಿಗೆ ಬೆಡ್ ಸಿಗದೆ ಆಸ್ಪತ್ರೆ ಗಳಿಗೆ ಅಲೆದಾಡಿದ್ದರು.ಕಳೆದ ಹಲವು ದಿನಗಳಿಂದ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿದ್ದು ಅವರು ಸಾವಿರಾರು ಸಾಹಿತ್ಯಾಭಿಮಾನಿಗಳನ್ನು ಹೊಂದಿದ್ದರು. ಕವಿ ಸಿದ್ಧಲಿಂಗಯ್ಯನವರು ಬಡ ಕುಟುಂಬವೊಂದರಲ್ಲಿ  ದೇವಯ್ಯ ಮತ್ತು ವೆಂಕಟಮ್ಮನವರ ಪುತ್ರರಾಗಿ 1954 ರ ಫೆಬ್ರವರಿ 3 ರಂದು ರಾಮನಗರ…

ಕನ್ನಡದ ನಿಲುವಿನಲ್ಲಿ ಸರ್ಕಾರದ ದೋರಣೆ

ತುರುವನೂರು ಮಂಜುನಾಥ ಮೊನ್ನೆ ಅಮೆಜಾನ್ ಮತ್ತು ಗೂಗಲ್ ಗಳು ಕನ್ನಡಭಾಷೆಗೆ ಅವಮಾನ ಮಾಡಿದ ವಿಷಯವನ್ನು ಸರ್ಕಾರ ಅಷ್ಟೊಂದು ಗಂಭೀರವಾಗಿ ಪರಿಗಣಿಸಲಿಲ್ಲ, ಒಂದು ಹೇಳಿಕೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಕೊಟ್ಟು ಸುಮ್ಮನಾಗಿ ಬಿಟ್ಟರು. ಆದರೆ ಅದರ ಹಿಂದೆ ಅಡಗಿರುವ ಉದ್ದೇಶವೇನು ಎನ್ನುವುದನ್ನು ಕೆದಕಲಿಲ್ಲ. ಕನ್ನಡ ಅಭಿವೃದ್ಧಿ ಪ್ರಾಧಿಕಾರವಾಗಲಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಾಗಲಿ ಅದರ ಹಿಂದೆ ಬೀಳಲಿಲ್ಲ ಆದ ಒಂದು ಘಟನೆಗೆ ಹೇಳಿಕೆಗಳನ್ನು ಬಿಡುಗಡೆ ಮಾಡಿ ತೆಪ್ಪಗಾಗಿಬಿಟ್ಟವು. ಇದು ಅಷ್ಟೊಂದು ಬೇಕಾಬಿಟ್ಟಿ ಕೆಲಸವೇ? ಒಂದು…

ವಿರೂಪಾಕ್ಷ ಬೀದಿಯ ಮಂಟಪಗಳಲ್ಲಿ ಕೈಗೊಂಡ ಬಜಾರುಗಳ ಅಧ್ಯಯನ

ವಿರೂಪಾಕ್ಷ ಬೀದಿಯ ಮಂಟಪಗಳಲ್ಲಿ ಕೈಗೊಂಡ ಬಜಾರುಗಳ ಅಧ್ಯಯನ ಮುಂದುವರಿದ ಭಾಗ. . . . . ಅದೇ ರೀತಿ ಸರಕುಗಳನ್ನು ಕುರಿತು ಹೇಳುವ ಡೊಮಿಂಗೋ ಪಾಯೇಸ್, ದವಸ-ಧಾನ್ಯಗಳನ್ನು ಹೇರಿಕೊಂಡು ಬಂದ ಲೆಕ್ಕವಿಲ್ಲದಷ್ಟು ಎತ್ತಿನಗಾಡಿಗಳು ಬೀದಿಯಲ್ಲಿ ಕಿಕ್ಕಿರಿದು ಹೋಗಿರುತ್ತವೆ ಎಂದರೆ; ನ್ಯೂನಿಜ್, ಪ್ರತಿದಿನ ಎರಡು ಸಾವಿರ ಹೇರೆತ್ತುಗಳು ವಿಜಯನಗರಕ್ಕೆ ಪ್ರವೇಶಿಸುತ್ತವೆ. ಪ್ರತಿಯೊಂದು ಎತ್ತಿಗೂ ಮೂರು ವಿಂತೆಂ ಸುಂಕ ಎಂದಿದ್ದಾನೆ. ಬಾರ್ಬೊಸಾ, ಮೆಣಸನ್ನು ಎತ್ತು ಮತ್ತು ಕತ್ತೆಗಳ ಮೇಲೆ ಹೇರಿಕೊಂಡು ವಿಜಯನಗರಕ್ಕೆ ಬರುತ್ತಾರೆ ಎಂದಿದ್ದರೆ; ನ್ಯೂನಿಜ್, ಹೇರುಗಳ ಸಾಗಾಟಕ್ಕೆ ಎತ್ತು-ಕತ್ತೆಗಳಲ್ಲದೆ,…

ಇನ್ನೊ 3-4 ದಿನ ಸಹಕರಿಸಿ ,ಜನತೆಗೆ ಬೊಮ್ಮಾಯಿ ಮನವಿ

ಬೆಂಗಳೂರು,ಜೂ,11:ಕೋವಿಡ್ ನಿಯಂತ್ರಣಕ್ಕೆ ಬರುತ್ತಿರುವ ಈ ಸಂದರ್ಭದಲ್ಲಿ ಇನ್ನೊಂದು 3-4 ದಿನ ಮನೆಯಲ್ಲಿಯೇ ಇದ್ದು ಸಹಕಾರ ನೀಡಿ. ಲಾಕ್ಡೌನ್ ಗೆ ವಿನಾಯಿತಿ ನೀಡಿರುವುದು ಜೂನ್14 ರ ನಂತರ ಎಂಬುದನ್ನು ಅರ್ಥಮಾಡಿಕೊಳ್ಳಿ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ರಾಜ್ಯದ ಜನತೆಗೆ ಮಾಡಿಕೊಂಡ ಮನವಿ. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಘೋಷಣೆ ಆಗಿರುವ ಲಾಕ್ಡೌನ್ ವಿನಾಯತಿ ಇಂದಿನಿಂದಲೇ ಜಾರಿಗೆ ಎಂಬಂತೆ ಜನ ವರ್ತಿಸುತ್ತಿದ್ದಾರೆ. ಮನೆಯಿಂದ ಹೊರ ಬರುತ್ತಿದ್ದಾರೆ. ಇದು ಸರಿಯಲ್ಲ…

ಹಲವು ಪ್ರಥಮಗಳ ರಾಜಕುಮಾರ್‌ಎರಡನೇ ಚಿತ್ರ ಸೋದರಿ

ಬೇಡರಕಣ್ಣಪ್ಪ ಯಶಸ್ಸಿನ ನಂತರರಾಜಕುಮಾರ್‌ಅಭಿನಯದಕಪ್ಪು-ಬಿಳುಪು ಜಾನಪದಕಥಾ ಹಂದರದಚಿತ್ರಸೋದರಿವಿಶ್ವಕಲಾಚಿತ್ರ ಲಾಂಛನದಲ್ಲಿ೧೯೫೫ರಲ್ಲಿ ತೆರೆಗೆ ಬಂದಿತು.ಟಿ.ವಿ.ಸಿಂಗ್ ಠಾಕೂರ್ ಮತ್ತುಜಿ.ಎನ್.ವಿಶ್ವನಾಥಶೆಟ್ಟಿಚಿತ್ರವನ್ನು ನಿರ್ಮಾಣ ಮಾಡಿದರೆ, ನಿರ್ಮಾಪರಲ್ಲಿಒಬ್ಬರಾಗಿದ್ದಟಿ.ವಿ.ಸಿಂಗ್ ಠಾಕೂರ್‌ಚಿತ್ರವನ್ನು ನಿರ್ದೇಶಿಸಿದರು. ಜಿ.ವಿ.ಅಯ್ಯರ್ ಸಹಾಯಕ ನಿರ್ದೇಶಕರಾಗಿಕಾರ್ಯನಿರ್ವಹಿಸುವುದರೊಂದಿಗೆ ಸಂಭಾಷಣೆ, ಗೀತೆಗಳನ್ನು ರಚಿಸುವ ಮೂಲಕ ಕನ್ನಡಚಿತ್ರರಂಗ ಪ್ರವೇಶಿಸಿದರು. ತಮಿಳಿನ ಜನಪದರಲ್ಲಿ ಇಂದಿಗೂ ಮನಮಿಡಿಯುವಕಥಾನಕವಾಗಿ ಉಳಿದಿರುವ ‘ನಲ್ಲ ತಂಗಾಳ್’ ಎಂಬ ಸಾದ್ವಿಯ ಕಥೆಯನ್ನಾಧರಿಸಿ ’ಸೋದರಿ’ ಚಿತ್ರಕಥೆಯನ್ನುಅಯ್ಯರ್ ರಚಿಸಿದರು. ರಾಜಕುಮಾರ್, ಪಂಢರಿಬಾಯಿ, ರಾಘವೇಂದ್ರರಾವ್, ಜಯಶ್ರೀ, ನರಸಿಂಹರಾಜು, ಎಂ.ಎನ್.ಲಕ್ಷ್ಮೀದೇವಿ,ಜಿ.ವಿ.ಅಯ್ಯರ್,ಇಂದಿರಾಆಚಾರ್ಯಬೇಬಿ ಪ್ರಮೀಳಾ, ಉಜ್ವಲ ಅಭಿನಯಿಸಿದರು. ಮೈನಾವತಿ ಭರತನಾಟ್ಯ ಪ್ರದರ್ಶನ ನೀಡಿದದೃಶ್ಯ ಅಳವಡಿಸಲಾಗಿತ್ತು. ಸಾಹಿತ್ಯರಚನೆಯಲ್ಲಿ ಜಿ.ವಿ.ಅಯ್ಯರ್‌ಅವರೊಂದಿಗೆ ಹುಣಸೂರುಕೃಷ್ಣಮೂರ್ತಿಅವರೂತೊಡಗಿಕೊಂಡಿದ್ದರು. ಪದ್ಮನಾಭಶಾಸ್ತ್ರಿಅವರೊಂದಿಗೆ…

ದಕ್ಷಿಣ ಆಫ್ರಿಕ ಮತ್ತು ಗಾಂಧೀಜಿಯ ಧಾರ್ಮಿಕತೆ

ಗಾಂಧಿ ಎನ್ನುವ ಮಹಾತ್ಮನನ್ನು ನಾವು ನೆನಸಿಕೊಳ್ಳುವುದು ಕೇವಲ ಅವರ ಜಯಂತಿ ಮತ್ತು ಹುತ್ಮಾತದಿನ ಬಿಟ್ಟರೆ ಮತ್ತೇ ಅವರ ಬಗ್ಗೆ ಎಲ್ಲಿಯೂ ಪ್ರಸ್ತಾಪ ಮಾಡುವುದಿಲ್ಲ ಮಾಡಿದರೆ ಅದು ವಿಚಾರದಾರೆಗಳು ಅವರ ಸೈದ್ದಾಂತಿಕ ವಿಷಯಗಳ ಬಗ್ಗೆ ಪ್ರಸ್ತಾಪಗಳು ನಡೆಯುತ್ತಿರುತ್ತವೆ ಆದರೆ ದಕ್ಷಿಣ ಆಫ್ರಿಕಾದಲ್ಲಿ ಪ್ರತಿವರ್ಷ ಈ ಸಮಯದಲ್ಲಿ ನೆನಪು ಮಾಡಿಕೊಳ್ಳುತ್ತಾರೆ ಇನ್ನೊಂದು ವಿಶೇಷ ಎಂದರೆ ೧೮೯೩ ರಲ್ಲಿ ಅಲ್ಲಿನ ಪೀಟರ‍್ಮಾರ್ಟಿಸ್‌ಬರ್ಗನಲ್ಲಿ ರೈಲಿನಿಂದ ಹೊರತಳ್ಳಿದ ವಿಚಾರ ಇದೆಯಲ್ಲ ಇದರ ಬಗ್ಗೆ ಒಂದು ಗಂಭೀರ ಚರ್ಚೆಗಳು ನಡೆಯುತ್ತವೆ. ಯಾಕೆಂದರೆ ಆ ಘಟನೆಯಿಂದಲೇ ಗಾಂಧಿ…

ಕೆ.ಆರ್.ಎಸ್ ನಲ್ಲಿ ಬಿರುಕು..!! ಕಲ್ಲು ಗಣಿಗಾರಿಕೆಗಳು ತಂದಿಟ್ಟ ಆತಂಕ

writing-ಪರಶಿವ ಧನಗೂರು ಕೆಆರ್‌ಎಸ್ ಮೂರು ಪ್ರಮುಖ ನಾಲೆಗಳ ಮೂಲಕ ೧ಕೋಟಿ ಐವತ್ತು ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುತ್ತಿರುವ ರೈತರ ಜೀವನಾಡಿ. ಕರ್ನಾಟಕ ರಾಜ್ಯದ ರಾಜಧಾನಿ ಬೆಂಗಳೂರಿನ ಕೋಟ್ಯಂತರ ಜನರ ದಾಹ ತಣಿಸುತ್ತಿರುವ ಜೀವಜಲನಿಧಿ.. ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರಿನ ಕೋಟ್ಯಂತರ ಜನರು ಬೆಚ್ಚಿ ಬೀಳುವಂತೆ ಮಾಡಿರುವ ಈ ಸುದ್ಧಿ ನಿಜಕ್ಕೂ ಆಘಾತಕಾರಿಯಾಗಿಯೇ ಇದೆ. ಹಲವು ವರ್ಷಗಳಿಂದಲೂ ಗಾಳಿಸುದ್ಧಿಯಂತೆಯೇ ಅಂತೆ-ಕಂತೆ, ಕತೆಗಳಲ್ಲಿಯೇ ಅನುಮಾನಾಸ್ಪದವಾಗಿ ಜನರ ಬಾಯಿಂದ ಬಾಯಿಗೆ ಹರಿದಾಡುತ್ತಿತ್ತು. ಈಗ ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಹೇಳಿಕೆಯೊಂದಿಗೆ…

ಭಾರತ ಮಾತೆಗೆ ಕೇಳಿಸದು ಆದಿವಾಸಿಗಳ ಆಕ್ರಂದನ

ಭಾರತ ಮಾತೆಗೆ ಕೇಳಿಸದು ಆದಿವಾಸಿಗಳ ಆಕ್ರಂದನ ಭ್ರಮೆಯಲ್ಲಿ ಬದುಕುವ ಬಹುತೇಕ ಭಾರತವು ಬಸ್ತರ್ ಎಂಬ ಸೀಮೆಯ ಹೆಸರನ್ನು ಕೇಳಿರುವುದು ಅನುಮಾನ. ಮಧ್ಯಭಾರತದ ಕಾಡು ಕಣಿವೆ ಗುಡ್ಡಗಳಲ್ಲಿ ಹಲವು ಆದಿವಾಸಿ ನೆಲೆಗಳು ಹರಡಿ ಹಬ್ಬಿವೆ. ಈ ಸೀಮೆಗಳ ಹೆಸರಾಂತ ತವರು ಛತ್ತೀಸಗಢದ ಬಸ್ತರ್. ಅಲ್ಲಿನ ಸುಕ್ಮಾ ಜಿಲ್ಲೆಯಲ್ಲಿ ಸಿಲ್ಗೆರ್ ಎಂಬುದೊಂದು ಗ್ರಾಮ. ತಿಂಗಳೊಪ್ಪತ್ತಿನಿಂದ ಅಲ್ಲಿನ ಆದಿವಾಸಿಗಳ ಬದುಕು ಸರ್ಕಾರಿ ಪ್ರಾಯೋಜಿತ ಧಗೆಯಲ್ಲಿ ಕುದಿಯತೊಡಗಿದೆ. ರಾಜ್ಯ ಸರ್ಕಾರ ರಾತ್ರೋರಾತ್ರಿ ತಮ್ಮ ನೆಲದಲ್ಲಿ ಸುರಕ್ಷಾಬಲದ ಶಿಬಿರವೊಂದನ್ನು ಎಬ್ಬಿಸಿರುವ ಬೆಳವಣಿಗೆ ಈ ಬಡಪಾಯಿಗಳ…

ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಬಡವರ ಅನುಕೂಲಕ್ಕೆ ಪ್ಯಾಕೇಜ್ ಘೋಷಣೆ-ಸಿಎಂ

ಹಾಸನ,ಜೂ,೧೧:ಕೊರೊನಾ ಸಂಕಷ್ಟ ಹಿನ್ನೆಲೆಯಲ್ಲಿ ಆರ್ಥಿಕ ಸ್ಥಿತಿ ಶೋಚನೀಯವಾಗಿದೆ ಆದರೂ ಬಡವರಿಗೆ ಅನಕೂಲವಾಗಬೇಕು ಎಂಬ ಕಾಣರಕ್ಕೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಶುಕ್ರವಾರ ಬೂವನಹಳ್ಳಿ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಅಪೇಕ್ಷೆಯಂತೆ ಸದ್ಯದಲ್ಲೇ ಹಾಸನ ಏರ್‌ಪೋರ್ಟ್ ಕೆಲಸ ಆರಂಭಿಸಲಾಗುವುದು.ಹಾಸನ ಜಿಲ್ಲೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಿದೆ. ಸೋಂಕು ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಕೋವಿಡ್‌ನಿಂದ ಜನ ಸಾವಿಗೀಡಾಗುತ್ತಿರುವುದಕ್ಕೆ ಸರ್ಕಾರವೇ ಕಾರಣ ಎಂಬ…

ಕಾಂಗ್ರೆಸ್‌ಗೆ ಮೇಜರ್ ಸರ್ಜರಿ ಅಗತ್ಯವಿದೆ-ಮೊಯ್ಲಿ

ನವದೆಹಲಿ,ಜೂ,೧೧: ಜಿತನ್ ಪ್ರಸಾದ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ಸಂದರ್ಭದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಈ ಕುರಿತು ಪ್ರಸ್ತಾಪಿಸಿದ್ದು ನಾಯಕರಿಗೆ ಜವಾಬ್ದಾರಿ ವಹಿಸುವಾಗ ಉನ್ನತ ನಾಯಕತ್ವ ಸೈದ್ದಾಂತಿಕ ಬದ್ದತೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದ್ದಾರೆ. ಜಿತಿನ್ ಪ್ರಸಾದ್ ಎಲ್ಲಕ್ಕಿಂತ ಹೆಚ್ಚಾಗಿ ವೈಯಕ್ತಿಕ ಮಹತ್ವಾಕಾಂಕ್ಷೆ ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ ಮೊಯ್ಲಿ, ಉತ್ತರ ಪ್ರದೇಶದ ನಾಯಕನ ಸೈದ್ಧಾಂತಿಕ…

ಪೆಟ್ರೋಲ್ ಬೆಲೆಯಲ್ಲಿ ಮತ್ತೇ ಏರಿಕೆ

ನವದೆಹಲಿ,ಜೂ,೧೧: ಪೆಟ್ರೋಲ್ ಬೆಲೆ ಏರಿಕೆಯನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಈ ಸಂದರ್ಭದಲ್ಲೂ ಮತ್ತೇ ಇಮದು ತೈಲ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ದರ ೨೯ ಪೈಸೆ ಮತ್ತು ಡೀಸೆಲ್ ದರ ೨೯ ಪೈಸೆ ಏರಿಕೆ ಮಾಡಿವೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಶುಕ್ರವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ…

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು,ಜೂ,೧೧:ದಿನೇ ದಿನೇ ದೇಶದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ದೇಶಾದದ್ಯಂತ ಪ್ರತಿಭಟನೆ ನಡೆಸಿತು. ಬೆಂಗಳೂರಿನಲ್ಲಿ ಪೆಟ್ರೋಲ್ ಬಂಕ್ ಎದುರು ಕಾಂಗ್ರೆಸ್ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಆರ್ ವಿ ದೇಶಪಾಂಡೆ ಮೊದಲಾದವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಜನಸಾಮಾನ್ಯರು, ಬಡವರ ಪರ ಇರುವ ಸರ್ಕಾರ ಅಲ್ಲ, ಬಡವರ ರಕ್ತ ಹೀರುವ ಸರ್ಕಾರ, ಜನ ಕೊರೋನಾ ಸಂಕಷ್ಟದಿಂದ, ಸಾವು-ನೋವಿನಿಂದ, ಆರ್ಥಿಕ ಸಮಸ್ಯೆಗಳಿಂದ ಸಾಯುತ್ತಿದ್ದಾರೆ,…

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆ

ನವದೆಹಲಿ, ಜೂ, ೧೧: ಕೊರೊನಾ ವೈರಸ್ ಭಾರತದಲ್ಲಿ ದಿನೇ ದಿನೇ ಕಡಿಮೆಗೊಳ್ಳುತ್ತಿದೆ ಕಳೆದ ೨೪ ಗಂಟೆಯಲ್ಲಿ ಅದರ ಸಂಖ್ಯೆ ಮತ್ತಷ್ಟು ಇಳಿಮುಖವಾಗಿದ್ದು ಸದ್ಯ ನಿಟ್ಟುಸಿರು ಬಿಡುವಂತಾಗಿದೆ. ಕಳೆದ ೨೪ ಗಂಟೆಯಲ್ಲಿ ೬,೧೦೦ಕ್ಕೂ ಹೆಚ್ಚಾಗಿದ್ದ ಸಾವಿನ ಸಂಖ್ಯೆ ೩,೪೦೩ಕ್ಕೆ ತಗ್ಗಿದೆ. ಒಂದೇ ದಿನ ೯೧,೭೦೨ ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ ೧,೩೪,೫೮೦ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಭಾರತದಲ್ಲಿ ಒಟ್ಟು ೨,೯೨,೭೪,೮೨೩ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ…

ಡಿಸಿ,ಅಧಿಕಾರಿಗಳಿಂದ ಮಾಹಿತಿ ನೀಡಲು ಸರಕಾರಕ್ಕೆ ಸೂಚಿಸಿ;ಸಿದ್ದು ಪತ್ರ

ಬೆಂಗಳೂರು, ಜೂ. ೧೧:ಕೊರೊನಾ ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಲ್ಲಿ ವಿನಂತಿಸಿಕೊಂಡಿದ್ದಾರೆ. ಈ ಕುರಿತು ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಕೊರೋನಾ ಸಾಂಕ್ರಾಮಿಕವನ್ನು ನಿರ್ವಹಿಸಲು ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತು ಝೂಮ್ ತಂತ್ರಾಂಶದ ಮೂಲಕ ಮಾಹಿತಿ ಪಡೆಯಲು ಉದ್ದೇಶಿಸಿ…

1 105 106 107 108 109 126
Girl in a jacket