Girl in a jacket

Author kendhooli_editor

ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ದೇಶಿಯ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್‌ ಯೋಜನೆ-ಎಚ್.ಡಿ.ಕೆ

ನವದೆಹಲಿ,ಜೂ,02-ದೇಶದ ಉದ್ದಗಲಕ್ಕೂ ವಿದ್ಯುತ್‌ ಚಾಲಿತ ವಾಹನಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯೊಂದಿಗೆ ರೂಪಿಸಲಾಗಿರುವ ₹4,150 ಕೋಟಿ ಮೊತ್ತದ ಬೃಹತ್‌ ಹೂಡಿಕೆ ಯೋಜನೆಯನ್ನು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದರು. ನವದೆಹಲಿಯ ಬೃಹತ್‌ ಸಚಿವಾಲಯದ ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು; ದೇಶದಲ್ಲಿ ಭೂಸಾರಿಗೆ ಕ್ಷೇತ್ರದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಶೂನ್ಯಕ್ಕೆ ಇಳಿಸಬೇಕು ಎಂಬ ಪ್ರಧಾನಿಗಳ ಸಂಕಲ್ಪವನ್ನು ಈಡೇರಿಸುವ ಗುರಿಯೊಂದಿಗೆ ಈ ಹೂಡಿಕೆ ಯೋಜನೆಯನ್ನು ಘೋಷಣೆ…

ಉನ್ನತ ಶಿಕ್ಷಣ ತ್ರೈಮಾಸಿಕ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ

ಬೆಂಗಳೂರು, ಜೂ,02-ಕರ್ನಾಟಕ ಉನ್ನತ ಶಿಕ್ಷಣ ತ್ರೈಮಾಸಿಕ ಪತ್ರಿಕೆಯನ್ನು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆಗೊಳಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಮುಂಬರುವ ದಿನಗಳಲ್ಲಿ ಈ ಪತ್ರಿಕೆ ಮೂಲಕ ಉನ್ನತ ಶಿಕ್ಷಣ ಇಲಾಖೆಯ ಆದೇಶಗಳು, ಸೂಚನೆಗಳು, ನಿಯಮಾವಳಿಗಳನ್ನು ಕಾಲಕಾಲಕ್ಕೆ ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಮಾಹಿತಿ ನೀಡುವ ಉದ್ದೇಶ ಹೊಂದಲಾಗಿದೆ. ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ಕಾರ್ಯ ಚಟುವಟಿಕೆಗಳು ಹಾಗೂ…

ಎರಡು ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಲು ಅಶೋಕ ಆಗ್ರಹ

ಬೆಂಗಳೂರು, ಜೂ, 2-ಹೇಮಾವತಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರ ಎಲ್ಲ ರೈತರನ್ನು ಹಾಗೂ ಸರ್ವಪಕ್ಷಗಳ ಪ್ರಮುಖರನ್ನು ಕರೆದು ಸಭೆ ಮಾಡಿ ಚರ್ಚಿಸಬೇಕು. ರೈತರ ವಿರುದ್ಧ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿಗೆ ಹೇಮಾವತಿ ನೀರು ನೀಡಲು ತುಮಕೂರಿನ ರೈತರು ಪ್ರತಿಭಟಿಸುತ್ತಿರುವಾಗ, ಎರಡೂ ಜಿಲ್ಲೆಗಳ ಪ್ರತಿನಿಧಿಗಳು ಹಾಗೂ ರೈತರ ಜೊತೆ ಸರ್ಕಾರ ಚರ್ಚಿಸಬೇಕಿತ್ತು. ಈ ಕೆಲಸವನ್ನು ಸರ್ಕಾರ ಮಾಡದೆಯೇ ರೈತರ ನಡುವೆಯೇ ಎತ್ತಿ ಕಟ್ಟುವ ಕೆಲಸ ಮಾಡಿದೆ. ರೈತರಿಗೆ…

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ಸಿಎಂ ತಗಾದೆ: ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಕೆಶಿ ಮನವಿ

ಬೆಂಗಳೂರು, ಜೂ. 02-ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನಂತೆ ನಮ್ಮ ರಾಜ್ಯದ ಪಾಲಿನ ನೀರು ಬಳಸಿಕೊಳ್ಳಲು ಆಲಮಟ್ಟಿ ಅಣೆಕಟ್ಟೆ ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಬೇಕಿದೆ. ನ್ಯಾಯಧೀಕರಣದ ತೀರ್ಪು ಬಂದಾಗ ಸುಮ್ಮನಿದ್ದ ಮಹಾರಾಷ್ಟ್ರ ಸಿಎಂ ಈಗ ಹಠಾತ್ತನೇ ಕರ್ನಾಟಕದ ಸಿಎಂ ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿರುವುದು ತೀವ್ರ ಆಶ್ಚರ್ಯ ತಂದಿದೆ. ಈ ಹಿನ್ನೆಲೆಯಲ್ಲಿ, ಯೋಜನೆ ಜಾರಿ ಮಾಡಿ ರಾಜ್ಯ ಹಾಗೂ ರೈತರ ಹಿತ ಕಾಯಲು ಎಲ್ಲಾ ಸಂಸದರು, ಕೇಂದ್ರ ಸಚಿವರು ಸಹಕರಿಸಬೇಕು ಎಂದು ಕೈಮುಗಿದು ಕೇಳಿಕೊಳ್ಳುತ್ತೇನೆ” ಎಂದು ಡಿಸಿಎಂ…

ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿ.ಎಂ.ಸಿದ್ದರಾಮಯ್ಯ-

ಬಾನು ಮುಷ್ತಾಕ್ ಅವರು ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ: ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ 10 ಲಕ್ಷ ಪುರಸ್ಕಾರ ಘೋಷಿಸಿದ ಸಿಎ ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ಬೆಂಗಳೂರು ಜೂ 2-ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ…

ಐಪಿಎಲ್ ಫೈನಲ್‌ಗೆ ಲಗ್ಗೆ ಇಟ್ಟ ಪಂಜಾಬ್ ಕಿಂಗ್ಸ್

ಅಹಮದಾಬಾದ್,ಜೂ,೦೧-ನಾಯಕ ಶ್ರೇಯಸ್ ಅಯ್ಯರ್ ಉತ್ತಮ ಬ್ಯಾಟಿಂಗ್‌ನಿಂದ ಪಂಜಾಬ್ ಕಿಂಗ್ಸ್ ತಂಡವು ಐಪಿಎಲ್ ಟೂರ್ನಿಯ ಫೈನಲ್‌ಗೆ ಲಗ್ಗೆ ಇಟ್ಟಿತು. ಭಾನುವಾರ ರಾತ್ರಿ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಕ್ವಾಲಿಫಯರ್‌ನಲ್ಲಿ ಕಿಂಗ್ಸ್ ತಂಡವು ಮುಂಬೈ ಇಂಡಿಯನ್ಸ್ ಎದುರು ೫ ವಿಕೆಟ್‌ಗಳಿಂದ ಗೆದ್ದಿತು. ಮಂಗಳವಾರ ಇದೇ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಪಂಜಾಬ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಮೊದಲ ಕ್ವಾಲಿಫಯರ್‌ನಲ್ಲಿ ಪಂಜಾಬ್ ತಂಡವು ಆರ್‌ಸಿಬಿ ಎದುರು ಸೋತಿತ್ತು. ಕಳೆದ ೧೮ ವರ್ಷಗಳಿಂದ ಐಪಿಎಲ್‌ನಲ್ಲಿರುವ ಉಭಯ ತಂಡಗಳು ಇದುವರೆಗೂ…

ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು: ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.01-“ಬೆಂಗಳೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರಗಳ ಕೊಡುಗೆಯೇ ಹೆಚ್ಚು. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ 1 ಲಕ್ಷ ಕೋಟಿ ಮೊತ್ತದ ದೊಡ್ಡ ಯೋಜನೆಗಳನ್ನು ಹಮ್ಮಿಕೊಂಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಕಳೆದ 20 ವರ್ಷಗಳಲ್ಲಿ ಬೆಂಗಳೂರು ಜನತೆ 70 ಲಕ್ಷದಿಂದ 1.50 ಕೋಟಿಗೆ ಏರಿಕೆಯಾಗಿದೆ. ಹೀಗಾಗಿ ಬೆಂಗಳೂರಿನ ಅಭಿವೃದ್ಧಿಗೆ ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ…

ಒಳಮೀಸಲಾತಿ ಸರ್ವೇ ಕಾರ್ಯ ವಿಸ್ತರಣೆ: ಸದುಪಯೋಗಪಡಿಸಿಕೊಳ್ಳಲು ಎಚ್.ಆಂಜನೇಯ ಆಗ್ರಹ

ಚಿತ್ರದುರ್ಗ, ಜೂ.1- ಒಳಮೀಸಲಾತಿ ಜಾರಿಗಾಗಿ ರಾಜ್ಯದಲ್ಲಿ ಕೈಗೊಂಡಿರುವ ಸರ್ವೇ ಕಾರ್ಯ ಅವಧಿಯನ್ನು ಮತ್ತೇ ವಿಸ್ತರಿಸಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ರಾಜ್ಯಾದ್ಯಂತ ನಾನು ಸೇರಿ ಅನೇಕ ಮುಖಂಡರು, ಸಂಘಟನೆಗಳು ಪದಾಧಿಕಾರಿಳು ಸುತ್ತಾಡಿದ್ದು, ಮಾದಿಗ ಸಮುದಾಯದಲ್ಲಿ ಜಾತಿಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಿದ್ದೇವೆ. ಆದರೂ ಬಹಳಷ್ಟು ಮಂದಿ ಹೊರಗುಳಿದಿದ್ದಾರೆ ಎಂದರು. ಈ ಕಾರಣಕ್ಕೆ ಮತ್ತೇ ಸವೇ ಅವಧಿಯನ್ನು ಜೂ.8ರ ವರೆಗೆ ವಿಸ್ತರಿಸಿದ್ದು, ಈ ಅವಧಿಯೊಳಗೆ ಪರಿಶಿಷ್ಟ…

ಸಂವಿಧಾನ ಕಾರ್ಯಾಗಾರದಲ್ಲಿ ನರೇನಹಳ್ಳಿ ಅರುಣ್ ಕುಮಾರ್ ಗೆ ಸನ್ಮಾನ

ಚಿತ್ರದುರ್ಗ, ಜೂ,01-ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ,ಸಮಾಜ ಕಲ್ಯಾಣ ಇಲಾಖವತಿಯಿಂದ ಭಾಯಾಗಡ್,ಸೂರಗೊಂಡನಕೊಪ್ಪದಲ್ಲಿ ಹಮ್ಮಿಕೊಳ್ಳಲಾಗಿದ್ದ.ಕೌಶಲ್ಯ ತರಬೇತಿ ಮತ್ತು ಸಂವಿಧಾನ ಕುರಿತು ತರಬೇತಿ ಕಾರ್ಯಾಗಾರದಲ್ಲಿ ಸಂತ ಸೇವಾಲಾಲ್ ಜನ್ಮ ಸ್ಥಾನ ಮಹಾಮಠ ಸಮಿತಿಯ ಪ್ರಧಾನ ಕಾರ್ಯದರ್ಶಿ ನರೇನಹಳ್ಳಿ ಅರುಣ್ ಕುಮಾರ್ ರವರಿಗೆ ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಲಹೆಗಾರರಾದ ಇ.ವೆಂಕಟಯ್ಯ ನವರು,ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್.ಜಯದೇವ ನಾಯಕ್,ಮಠದ ಧರ್ಮದರ್ಶಿ ಪರಿಷತ್ ಅಧ್ಯಕ್ಷರಾದ ಬಿ.ಹೀರಾನಾಯಕ್,ಭೋಜ್ಯಾನಾಯ್ಕ,ಮಹಾಮಠ ನಿರ್ವಹಣಾ ಸಮಿತಿ ಅಧ್ಯಕ್ಷರಾದ ಹನುಮಂತನಾಯ್ಕ,ಹಿರಿಯ ನಿರ್ದೇಶಕರಾದ ರಾಘವೇಂದ್ರ ನಾಯ್ಕ,ನಿಗಮದ ವ್ಯವಸ್ಥಾಪಕ…

ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು, ಜೂ.1- ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮುಂಗಾರು ಪೂರ್ವ ಮಳೆಗೇ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ, ಆಸ್ತಿಹಾನಿ, ಬೆಳೆ ಹಾನಿ, ಜೀವಿಹಾನಿಯ ಜೊತೆಗೆ ವನ್ಯ…

ವಿಧಾನಸೌಧದ ಸಭಾಂಗಣ ನೋಡಲು ಇಂದಿನಿಂದ ಸಾರ್ವಜನಿಕರಿಗೆ ಪ್ರವೇಶ

ಬೆಂಗಳೂರು,ಜೂ,೦೧-ವಿಧಾನಸಭೆಯ ಸಭಾಂಗಣ ನೋಡಲು ಸಾರ್ವಜನಿಕರಿಗೆಇಂದಿನಿಂದ ಅವಕಾಶ ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆ,ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಯಿಂದ ವಿಧಾನಸೌದ ಗೈಡೆಡ್ ಟೂರ್‌ಗೆ ಚಾಲನೆ ನೀಡಲಾಗಿದೆ ವಿಧಾನಸೌಧ ಗೈಡೆಡ್ ಟೂರ್ ಇಂದು ಬೆಳಗ್ಗೆ ೯ ಗಂಟೆಯಿಂದ ಪ್ರಾರಂಭವಾಗಿದೆ ೧೫ ವರ್ಷ ಕೆಳಗಿನ ಮಕ್ಕಳಿಗೆ ಉಚಿತ ಪ್ರವೇಶ ಇರಲಿದೆ. ಉಳಿದಂತೆ ವಯಸ್ಕರಿಗೆ ೫೦ ರೂಪಾಯಿ, ೧೬ ವರ್ಷ ಮೇಲ್ಪಟ್ಟ ವಯಸ್ಕರಿಗೆ ೫೦ ರೂಪಾಯಿ ಶುಲ್ಕ ಇರುತ್ತದೆ. ಪ್ರತಿ ಭಾನುವಾರ, ೨ ಹಾಗೂ ೪ನೇ ಶನಿವಾರ ವಿಧಾನಸೌಧ ಟೂರ್ ವ್ಯವಸ್ಥೆ ಇರಲಿದ್ದು ಬೆಳಗ್ಗೆ…

ಪಾಕ್-ಭಾರತ ಸಂಘರ್ಷದಲ್ಲಿ ಯುದ್ಧವಿಮಾನಗಳು ನಷ್ಟ ನಿಜ-ಚೌವಾಣ್

ನವದೆಹಲಿ,ಜೂ,೦೧-ಪಾಕ್-ಭಾರತ ಸಂಘರ್ಷದಲ್ಲಿ ಭಾರತೀಯ ಸೇನೆ ನಡೆಸಿದ ದಾಳಿ ಪರಿಣಾಮ ಭಾರತೀಯ ಸೇನೆ ಜೆಟ್‌ಗಳು ನಷ್ಟವಾಗಿದೆ ಎನ್ನುವುದನ್ನು ದೇಶದ ರಕ್ಷಣಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್ ಒಪ್ಪಿಕೊಂಡಿದ್ದಾರೆ. ಆದರೆ ಭಾರತದ ಆರು ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಪಾಕಿಸ್ತಾ ಹೇಳಿರುವುದು ಸುಳ್ಳು ಎಂದು ಅವರು ಸ್ಪಷ್ಟಪಡಿಸಿದ್ದಾರೆ ಬ್ಲೂಮಬರ್ಗ್ ಟಿವಿಗೆ ನೀಡಿರುವ ಸಂದರ್ಶನದಲ್ಲಿ ಅವರು ಲೋಪಗಳನ್ನು ಸರಿಪಡಿಸಿಕೊಂಡು ಭಾರತೀಯ ಮಿಲಟರಿ ಪಡೆ ತಕ್ಕ ಶಾಸ್ತಿ ಮಾಡಿತು ಎಂದು ಅವರು ಹೇಳಿದ್ದಾರೆ, ಈ ವೇಳೆ ಎಷ್ಟು ವಿಮಾನಗಳು ಯುದ್ಧದಲ್ಲಿ ಕಳೆದುಕೊಳ್ಳಲಾಯಿತು ಎನ್ನುವ…

ಥಾಯ್ಲೆಂಡ್ ನ ಸುಚಾತಾ ಚುಂಗ್ ಸಿರಿ ಗೆ ಮಿಸ್ ವರ್ಲ್ಡ್ ಕಿರೀಟ

ಹೈದರಾಬಾದ್,ಮೇ,೩೧ ಹೈದರಾಬಾದ್ ನಲ್ಲಿ ನಡೆದ ೭೨ನೇ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಥಾಯ್ಲೆಂಡ್ ನ ಓಪ್ಲಾ ಸುಚಾತಾ ಚುಂಗ್ ಸಿರಿ ಅವರು ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡರು. ಶನಿವಾರ ಸಂಜೆ ಹೈದರಾಬಾದ್‌ನಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ವಿಶ್ವ ಸುಂದರಿ ಕಿರೀಟವು ಸುಚಾತಾ ಅವರ ಪಾಲಾಯಿತು. ಭಾರತವನ್ನು ಪ್ರತಿನಿಧಿಸಿದ್ದ ನಂದಿನಿ ಗುಪ್ತಾ ಅವರು ಟಾಪ್ ೮ರಲ್ಲಿ ಸ್ಥಾನ ಪಡೆಯಲು ವಿಫಲರಾದರು. ಥಾಯ್ಲೆಂಡ್ ನ ಓಪ್ಲಾ ಸುಚಾತಾ ಚುಂಗ್ ಸಿರಿ ಅವರಿಗೆ ಸುಮಾರು ೮ ಕೋಟಿ ರೂಪಾಯಿಯ ಬೆಲೆ ಬಾಳುವ ವಜ್ರದ…

DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ: ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ

ಬೆಂಗಳೂರು, ಮೇ,31-SSLC ಯಲ್ಲಿ‌ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದರು. ಇಂದೂ ಮುಂದುವರಿದ ಡಿಸಿ ಮತ್ತು ಸಿಇಓ ಸಭೆಯಲ್ಲಿ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿ ಈ ಸಚನೆ ನೀಡಿದರು.ಎಸ್‌ಎಸ್‌ಎಲ್‌ಸಿ ಯಲ್ಲಿ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ ಕೊರತೆ,…

ಕನ್ಮಡ ವಿರೋಧಿ ಹೇಳಿಕೆ ನೀಡಿದ ನಟ ಕಮಲ ಹಾಸನ್ ವಿರುದ್ಧ ಪ್ರತಿಭಟನೆ

ಶಿವಮೊಗ್ಗ, ಮೇ,30-ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ನಟ ಕಮಲಹಾಸನ್ ಹೇಳಿಕೆಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಕಮಲಹಾಸನ್ ಪ್ರತಿ ಕೃತಿ ದಹಿಸಿ ಪ್ರತಿಭಟನೆ ನಗರದ ಬಸ್ ನಿಲ್ದಾಣದ ಅಶೋಕ ವೃತ್ತದ ಬಳಿ ಪ್ರತಭಟನೆ ನಡೆಸಲಾಯಿತು. ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಹೆಚ್ಎಸ್ ಅವರ ನೇತೃತ್ವದಲ್ಲಿ ನಡೆಸ ಈ ಪ್ರತಿಭಟನೆ  ವೇಳೆ ಕಮಲಹಾಸನ್ ರವರ ಫೋಟೋವನ್ನು ಸುಡುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ಮಾತನಾಡಿ…

ಕೆರೆ ಒತ್ತುವರಿ ತೆರವುಗೊಳಿಸದ್ದಕ್ಕೆ ಅಧಿಕಾರಿಗಳ ವಿರುದ್ಧ ಗರಂ ಆದ ಸಿಎಂ

ಬೆಂಗಳೂರು,ಮೇ,30-ಒಂದೂ ಕೆರೆ ಒತ್ತುವರಿ ತೆರವುಗೊಳಿಸಿದ ಜಿಲ್ಲಾಧಿಕಾರಿ, ಸಿಇಓ ಗಳ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಇಂದು ವಿಧಾನಸೌಧದಲ್ಲಿ ನಡೆದ ಡಿಸಿ ಮತ್ತು ಸಿಇಓ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು. ಎರಡು ಮೂರು ಜಿಲ್ಲೆಗಳಲ್ಲಿ ಒಂದೂ ಕೆರೆ ಒತ್ತುವರಿ ತೆರವು ಮಾಡದಿರುವುದನ್ನು ಗಮನಿಸಿ ಗರಂ ಆದ ಮುಖ್ಯಮಂತ್ರಿಗಳು, ಆ ಬಗ್ಗೆ ವರದಿ ತರಿಸಿಕೊಂಡು ಅಗತ್ಯ ಕ್ರಮ…

ಸಿಎಂ ಸಮಯಕ್ಕೆ ಸರಿಯಾಗಿ ಎಂಟ್ರಿಯಿಂದ ಕಕ್ಕಾಬಿಕ್ಕಿಯಾದ ಅಧಿಕಾರಿಗಳು

ಬೆಂಗಳೂರು, ಮೇ30-ರಾಜ್ಯದ ಡಿಸಿ ಮತ್ತು ಸಿಇಓಗಳ ಸಭೆಯ ನಂತರ ಊಟದ ಬಿಡುವಿನ ನಂತರ ಮುಖ್ಯಮಂತ್ರಿಗಳು ಅರ್ಧಟೆಗೆ ಸರಿಯಾಗಿ ಎಂಟ್ರಿ ಕೊಟ್ಟಾಗ ಅಧಿಕಾರಿಗಳು ಕಕ್ಕಾಬಿಕ್ಕಿಯಾದ ಪ್ರಸಂಗ ವಿಧಾನಸೌಧದಲ್ಲಿ ನಡೆಯಿತು. ಅಧಿಕಾರಿ ವರ್ಗಕ್ಕೆ ಮತ್ತು ಸಚಿವರುಗಳಿಗೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಮುಖ್ಯಮಂತ್ರಿಗಳು ಊಟಕ್ಕೆಂದು ಮನೆಗೆ ತೆರಳಿದರು. ಸಿಎಂ ಮನೆಗೆ ಹೋಗಿದ್ದರಿಂದ ಅವರು ಊಟ ಮುಗಿಸಿ ಬರುವುದು ಲೇಟಾಗಬಹುದು ಎಂದು ಅಧಿಕಾರಿಗಳು ರಿಲಾಕ್ಸ್ ಮೂಡ್ ನಲ್ಲಿ ಊಟ ಮಾಡುತ್ತಿದ್ದರು. ಆದರೆ, ಮುಖ್ಯಮಂತ್ರಿಗಳು ಊಟ ಮುಗಿಸಿ ಸರಿಯಾಗಿ 30…

ಸಣ್ಣ, ಮಧ್ಯಮ ಕೈಗಾರಿಕೆಗಳ ಸಮಸ್ಯೆ ಬಗೆಹರಿಸಲು ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು, ಮೇ 30-ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಶಕ್ತಿ. ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ ಅಗತ್ಯ ನೆರವು ನೀಡುವುದು ಸರ್ಕಾರಗಳ ಜವಾಬ್ದಾರಿ. ಹೀಗಾಗಿ ನಿಮ್ಮ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಶುಕ್ರವಾರ ನಡೆದ ಇಂಡಿಯಾ ಎಂಎಸ್ಎಂಇ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. “ನಿಮ್ಮ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದೆ. ನಿಮಗೆ ಅಗತ್ಯವಾಗಿರುವ ವಿದ್ಯುತ್ ಹಾಗೂ ನೀರಿನ…

ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 30-ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ಇದರಿಂದ ನಷ್ಟವಾಗುತ್ತಿರುವುದು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯಕ್ಕೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧ ಆವರಣ ಹಾಗೂ ಅರಮನೆ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು.“ನಾವು ಎಲ್ಲಾ ಸಮಾಜ ರಕ್ಷಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪಕ್ಷದ ವತಿಯಿಂದ ಒಂದು ತಂಡ ಕಳುಹಿಸಿ ವರದಿ ನೀಡಲು ಹೇಳಿದ್ದೇವೆ. ಅಧಿಕಾರಿಗಳು ನೀಡುವ ವರದಿ ಬೇರೆ, ಸಾರ್ವಜನಿಕರ ಜತೆ ಚರ್ಚೆ ಮಾಡಿ…

ರಾಷ್ಟೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು ಮೇ 30-ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಬೇಗ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯವರು ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಮುಕ್ತಾಯ ಗೊಳಿಸುವಂತೆ ತಿಳಿಸಿದರು. ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬೆಳ್ಳೂರು ಕ್ರಾಸ್, ನಾಗಮಂಗಲ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ನಡೆಯಬೇಕಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಚಿವರು…

1 2 3 111
Girl in a jacket